Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಬೀದರ್: ನಾವು ಸೋಲ್ತಿವೋ, ಗೆಲ್ತಿವೋ ಏನಾದರೂ ಕೂಡ ನಾವು ಜನಗಳ ಜೊತೆಗೆ ನಿಲ್ಲಬೇಕು. ನಿರಂತರವಾಗಿ ಜನರೊಂದಿಗೆ ಬೆರತು ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಹೇಳಿದರು.

    ಬೀದರ್ ನಗರದ ಲಾವಣ್ಯ ಕನ್ವೆನ್ಷನ್ ಹಾಲ್ ನಲ್ಲಿ ಗುರುವಾರ ನಡೆದ, ‘ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ’ಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಮುಖಂಡರು, ಕಾರ್ಯಕರ್ತರು ಜನರೊಂದಿಗೆ ಬೆರೆತು, ಜನರೊಂದಿಗೆ ಇದ್ದು ಕೆಲಸ ಮಾಡಬೇಕು ಎಂದರು.

    ಮುಂದಿನ ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆಗಳಲ್ಲಿ ಕೂಡ ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮ ಅಗತ್ಯವಾಗಿರುತ್ತದೆ. ಜನರೊಂದಿಗೆ ಜನತಾದಳ ಎಂಬ ಗುರಿಯೊಂದಿಗೆ ಸಾಗುತ್ತಿರುವ ನಾವು ನಿರಂತರವಾಗಿ ಜನರೊಂದಿಗೆ ಇರುವುದು ಅಗತ್ಯವಾಗಿರುತ್ತದೆ.

    ಸದಸ್ಯತ್ವ ನೋಂದಣಿ ಅಭಿಯಾನವನ್ನು ನಾವು ತುಮಕೂರು ಜಿಲ್ಲೆಯಿಂದ ಆರಂಭಿಸಿದ್ದೇವೆ. ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಈಗ ಐದನೇ ಜಿಲ್ಲೆಯಾಗಿ ಬೀದರ್ ನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಮಾಡ್ತಿದ್ದೇವೆ. ಇನ್ನೂ ಎರಡು ದಿನಗಳ ಕಾಲ ಕಲ್ಯಾಣ ಕರ್ನಾಟಕ ಭಾಗದಲ್ಲೇ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿರುತ್ತೇವೆ.

    ನಾವು ಜನತಾದಳ ಪಕ್ಷವನ್ನು ಬೇರು ಮಟ್ಟದಿಂದ ಕಟ್ಟಬೇಕಾಗಿದೆ. ನಿಮ್ಮ ಚುನಾವಣೆಗಳಲ್ಲಿ ನೀವು ಗೆಲುವು ಸಾಧಿಸುವುದು ಅಗತ್ಯವಾಗಿರುತ್ತದೆ. ಆಗಾಗಿ ತಾ.ಪಂ, ಜಿ.ಪಂ ಚುನಾವಣೆಗಳ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾವು ಹೆಚ್ಚೆಚ್ಚು ಸ್ಥಾನ ಪಡೆದುಕೊಳ್ಳಬೇಕು ಎಂದರೇ ನಾವೆಲ್ಲರೂ ಶ್ರಮವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿರವರು ಮನವಿ ಮಾಡಿದರು.

    ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಪಕ್ಷ ಸಂಘಟನೆಯ ಕೆಲಸವನ್ನು ನಿಖಿಲ್ ಕುಮಾರಸ್ವಾಮಿರವರು ಮಾಡ್ತಿದ್ದಾರೆ. ನಮ್ಮ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡ್ತಿದ್ದಾರೆ. ನಾವು ಅವರೊಂದಿಗೆ ಕೈಜೋಡಿಸೋಣ ಎಂದರು.

    ನಾವು ರಾಜಕೀಯದಲ್ಲಿ ಜನರ ಹತ್ತಿರ ಇದ್ದು ಸೇವೆ ಮಾಡಿದಾಗ ಜನರೇ ನಮಗೆ ಅಧಿಕಾರ ಕೊಡ್ತಾರೆ. ನಾವು ಜನರೊಂದಿಗೆ ಇರೋಣ. ಗ್ಯಾರಂಟಿ ಮುಖ ತೋರಿಸಿ ಕಾಂಗ್ರೆಸ್ ಸರ್ಕಾರ ಏನ್ ಮಾಡ್ತಿದೆ ಎಂಬುದನ್ನು ಜನ ನೋಡ್ತಿದ್ದಾರೆ. ಅವರ ಗ್ಯಾರಂಟಿಗಳು ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಸಾಗ್ತಿವೆ ಎಂಬುದನ್ನು ಕೂಡ ರಾಜ್ಯದ ಜನರು ನೋಡ್ತಿದ್ದಾರೆ.

    ಗ್ಯಾರಂಟಿ ಹೆಸರಲ್ಲಿ ರಾಜ್ಯ ಸರ್ಕಾರ ದೋಖಾ ಮಾಡ್ತಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಿದ್ದಾರೆ. ಸರ್ಕಾರ ಬಂದು ಎರಡು ವರ್ಷವಾದ್ರು ಜಿ.ಪಂ, ತಾ.ಪಂ ಚುನಾವಣೆ ಮಾಡುವ ಧೈರ್ಯ ಅವರಿಗೆ ಇಲ್ಲದಾಗಿದೆ ಎಂದು ಬಂಡೆಪ್ಪ ಖಾಶೆಂಪುರ್ ರವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು‌‌. ಮಾಜಿ ಶಾಸಕರಾದ ಸುರೇಶ್ ಗೌಡ, ಮಲ್ಲಿಕಾರ್ಜುನ ಖೂಬಾರವರು ಸೇರಿದಂತೆ ಅನೇಕರು ಮಾತನಾಡಿ, ಜೆಡಿಎಸ್ ಸದಸ್ಯತ್ವ ನೋಂದಣಿ ಬಗ್ಗೆ ಮಾಹಿತಿ ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ಕಿಮ್ಸ್ ಆಸ್ಪತ್ರೆಗೆ ನೂತನ ಡೈರೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಡಾ. ಈಶ್ವರ ಹೊಸಮನಿ

    July 4, 2025

    ವಿವಾಹಿತ ಮಹಿಳೆಯೊಂದಿಗೆ ಸಹಜೀವನ, ಕಲಹ : ವಿಡಿಯೋ ಮಾಡಿಟ್ಟು ಆತ್ಮಹತ್ಯೆ

    July 4, 2025

    ಎರಡು ಬಸ್‌ಗಳ ಮಧ್ಯೆ ಅಪಘಾತ; ಚಾಲಕರಿಗೆ ಸನ್ಮಾನ ಮಾಡಿದ ಅಧಿಕಾರಿಗಳು

    July 4, 2025

    ಕೊಡಗಿನಲ್ಲಿ ಮತ್ತೆ ರೆಟ್ ಅಲರ್ಟ್ ಘೋಷಣೆ

    July 3, 2025

    ಆನ್ ಲೈನ್ ಗೇಮ್ ಗೆ ಯುವಕ ಬಲಿ;ಡೆತ್ ನೋಟ್‌ನಲ್ಲಿ ಹೇಳಿದ್ದೇನು..?

    July 3, 2025

    ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ

    July 3, 2025

    ಬಾಗಲಕೋಟೆಯಲ್ಲಿನ ಕುಟುಂಬದಲ್ಲಿ ಏಳು ಮಂದಿಗೆ ಹೃದಯಾಘಾತ

    July 3, 2025

    ಸಿದ್ದರಾಮಯ್ಯರಿಂದ ಅವಮಾನಿತರಾಗಿ ಮನನೊಂದು ರಾಜೀನಾಮೆ ಸಲ್ಲಿಸಿದ ASP ಪತ್ರ ವೈರಲ್!

    July 3, 2025

    ಜಿಲ್ಲಾಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನೌಕರ

    July 3, 2025

    ಪಾಠ ಕೇಳುತ್ತಿದ್ದಾಗಲೇ ಫಿಟ್ಸ್ ಬಂದು ವಿದ್ಯಾರ್ಥಿ ಸಾವು; ವಿದ್ಯಾರ್ಥಿಗಳಲ್ಲಿ ಭಯ

    July 3, 2025

    ಎನ್ ಓಸಿ ಕೊಡುವಂತೆ ಕೇಳಿದ್ದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಓ; ವಿಡಿಯೋ ವೈರಲ್

    July 3, 2025

    ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸಾವಿನ ಸರಣಿ; ಮೃತರ ಮನೆಗೆ ಅಧ್ಯಯನ ತಂಡ ಭೇಟಿ

    July 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.