ಕೊಡಗು:- ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ಸೊಂದು ತೋಟಕ್ಕೆ ನುಗ್ಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕಾವೇರಿ ಕಾಲೇಜು ಸಮೀಪದ ತಿರುವಿನಲ್ಲಿ ಜರುಗಿದೆ.
ಅದೃಷ್ಟವಶಾತ್ ಬಸ್ ನಲ್ಲಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಜರುಗಿದೆ. ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.