ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಒಂದೇ ದಿನ 4 ಮಂದಿ ಹೃದಯಾಘಾತಗೊಂಡಿದ್ದಾರೆ. ಕಳೆದ 40 ದಿನದಲ್ಲಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿದೆ. ಇದರ ಬೆನ್ನಲ್ಲೇ ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತಕ್ಕೆ ಮೃತಪಟ್ಟಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ಮೂಲತಃ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುಮಸಗಿ ಗ್ರಾಮದವರಾದ ವೈಭವ ಕುಲಕರ್ಣಿ ಮೃತ ದುರ್ಧೈವಿಯಾಗಿದ್ದು, ತಮಿಳುನಾಡಿನ ಪ್ರವಾಸ ಮುಗಿಸಿ ಬರ್ತಿದ್ದ ವೇಳೆಯೇ ವೈಭವ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.
ತಕ್ಷಣ ಅವರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ವೈಭವ್ ಸಾವನ್ನಪ್ಪಿದ್ದಾರೆ.ಸದ್ಯ ಸಂಬಂಧಿಕರು ಮೃತದೇಹವನ್ನು ಆಲಮೇಲ ತಾಲೂಕಿನ ಸ್ವಗ್ರಾಮ ಕುಮಸಗಿಗೆ ಕೊಂಡೊಯ್ಯುತ್ತಿದ್ದಾರೆ.