Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಸ್ಟಾರ್ ಸುವರ್ಣದಲ್ಲಿ ಹೊಚ್ಚ ಹೊಸ ಧಾರಾವಾಹಿ..ಸೀರಿಯಲ್‌ನತ್ತ ಬಹುಭಾಷಾ ನಟ ಸುಮನ್

    By Author AINMay 10, 2025
    Share
    Facebook Twitter LinkedIn Pinterest Email
    Demo

    ಕನ್ನಡಿಗರಿಗೆ ಮನೋರಂಜನೆಯ ರಸದೌತಣ ನೀಡುತ್ತಿರುವ ಮನೋರಂಜನಾ ವಾಹಿನಿ‌ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ” ಆರಂಭವಾಗಲಿದೆ. ಮೇ12 ರ ಸೋಮವಾರದಿಂದ ಪ್ರತಿದಿನ ರಾತ್ರಿ 8.30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧಾರಾವಾಹಿ ತಂಡದ ಸದಸ್ಯರು ಮಾತನಾಡಿದರು.

    ನಾನು 2003 ರಲ್ಲಿ ನನ್ನ ಜರ್ನಿ ಶುರು ಮಾಡಿದ್ದು ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಎಂದು ಮಾತನಾಡಿದ ನಿರ್ದೇಶಕ ಪ್ರೀತಂ ಶೆಟ್ಟಿ, ಈಗ ಸ್ಟಾರ್ ಸುವರ್ಣ ವಾಹಿನಿಗಾಗಿ “ಸ್ನೇಹದ ಕಡಲಲ್ಲಿ” ಎಂಬ ಧಾರಾವಾಹಿ ನಿರ್ದೇಶಿಸುತ್ತಿದ್ದೇನೆ. ಅವಕಾಶ ನೀಡಿದ ಸ್ಟಾರ್ ಸುವರ್ಣ ವಾಹಿನಿಗೆ ಧನ್ಯವಾದ. ಇನ್ನೂ, ಈ ಧಾರಾವಾಹಿಯಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟ ಸುಮನ್ ತಲ್ವಾರ್ ಅವರು ಅಭಿನಯಿಸುತ್ತಿದ್ದಾರೆ. ಇದು ಸುಮನ್ ಅವರು ಅಭಿನಯಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ ಕೂಡ. ಚಂದು ಗೌಡ ನಾಯಕನಾಗಿ ಕಾವ್ಯ ಮಹದೇವ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಧಾರಾವಾಹಿಗಳಲ್ಲಿ ಒಂದು ಮದುವೆಯನ್ನು ಒಂದು ವಾರ ತೋರಿಸುತ್ತೀರಾ ಎಂಬ ಮಾತು‌ ಕೇಳಿ ಬರುತ್ತದೆ. ಆದರೆ ನಮ್ಮ ಧಾರಾವಾಹಿಯಲ್ಲಿ ಕೇವಲ ನಾಲ್ಕು ನಿಮಿಷಗಳಲ್ಲಿ ಮದುವೆ ಸನ್ನಿವೇಶ ಮುಕ್ತಾಯವಾಗುತ್ತದೆ. ಸಾಮಾನ್ಯವಾಗಿ ಧಾರಾವಾಹಿಗಳ ಹಿನ್ನೆಲೆ ಸಂಗೀತದಲ್ಲಿ ಸಿನಿಮಾ ಹಾಡುಗಳನ್ನು ಬಳಸಿಕೊಳ್ಳುವುದು ವಾಡಿಕೆ. ಆದರೆ ನಾವು ಹೊಸ ಹಾಡನ್ನು ಸಿದ್ದ ಮಾಡಿದ್ದೇವೆ‌. ಹೀಗೆ ಹಲವು ವಿಶೇಷಗಳಿರುವ ಈ ಧಾರಾವಾಹಿ ಇದೇ ಸೋಮವಾರದಿಂದ ರಾತ್ರಿ 8.30 ಕ್ಕೆ ಪ್ರಸಾರವಾಗಲಿದೆ. ನಮ್ಮ ಪಿಂಗಾರ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿದೆ ಎಂದರು.

    ನಾನು ಚಿತ್ರರಂಗಕ್ಕೆ ಬಂದು 47 ವರ್ಷಗಳಾಯಿತು. ಕನ್ನಡ, ತಮಿಳು, ‌ತೆಲುಗು ಸೇರಿದಂತೆ 11 ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದೇನೆ. ಈ ಧಾರಾವಾಹಿ ನಿರ್ದೇಶಕ ಪ್ರೀತಂ ಶೆಟ್ಟಿ ಅವರ ನಿರ್ದೇಶನದ ಚಿತ್ರದಲ್ಲೂ ನಟಿಸಿದ್ದೇನೆ. “ಸ್ನೇಹದ ಕಡಲಲ್ಲಿ” ನಾನು ನಟಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ. ಈ ಧಾರಾವಾಹಿಯನ್ನು ಪ್ರೀತಂ ಶೆಟ್ಟಿ ಅವರೆ ನಿರ್ದೇಶಿಸುತ್ತಿದ್ದಾರೆ. ಕಥೆ ಇಷ್ಟವಾಯಿತು ಹಾಗೂ ಸ್ಟಾರ್ ಸುವರ್ಣ ವಾಹಿನಿ ಅವರು ಆಯ್ಕೆ ಮಾಡುವ ಕಂಟೆಂಟ್ ಉತ್ತಮವಾಗಿರುತ್ತದೆ. ಹಾಗಾಗಿ ನಾನು ಈ ಧಾರಾವಾಹಿಯಲ್ಲಿ ಅಭಿನಯಿಸಲು ಒಪ್ಪಿಕೊಂಡೆ ಎಂದು ನಟ ಸುಮನ್ ತಲ್ವಾರ್ ತಿಳಿಸಿದರು.

    ನಾನು ಕಿರುತೆರೆಗೆ ಬಂದು ಸುಮಾರು ಹನ್ನೊಂದು ವರ್ಷಗಳಾಯಿತು. ಆನಂತರ ಕೆಲವು ಚಿತ್ರಗಳಲ್ಲೂ ನಟಿಸಿದ್ದೇನೆ. ನನಗೆ ಸಿನಿಮಾದಲ್ಲಿ ಹಾಗೂ ಧಾರಾವಾಹಿಯಲ್ಲಿ ನಟಿಸುವುದು ಎರಡೂ ಒಂದೇ. ಇನ್ನೂ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಪ್ರೀತಂ ಶೆಟ್ಟಿ ನಿರ್ದೇಶನದ “ಸ್ನೇಹದ ಕಡಲಲ್ಲಿ” ಧಾರವಾಹಿಯ ಕಥೆ ತುಂಬಾ ಚೆನ್ನಾಗಿದೆ. ಸ್ಟಾರ್ ಸುವರ್ಣ ವಾಹಿನಿ ಅವರು ಒಳ್ಳೆಯ ಕಂಟೆಂಟ್ ಮೇಲೆ ಹೆಚ್ಚು ಗಮನ ಕೊಡುತ್ತಾರೆ. ನಿಮಗೆ 30 ನಿಮಿಷದ ಸಂಚಿಕೆ ನೋಡಿದರೂ, ಒಂದು ಸಿನಿಮಾ ನೋಡಿದ ಅನುಭವ ಆಗುತ್ತದೆ. ಶಿವರಾಜ್ ಅರಸ್ ನನ್ನ ಪಾತ್ರದ ಹೆಸರು. ದಕ್ಷಿಣ ಭಾರತದ ಖ್ಯಾತ ನಟ ಸುಮನ್ ಅವರು ಈ ಧಾರಾವಾಹಿಯಲ್ಲಿ ನನ್ನ ತಂದೆ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸವಾಗಿದೆ ಎನ್ನುತ್ತಾರೆ ನಟ ಚಂದು ಗೌಡ.

     

    Demo
    Share. Facebook Twitter LinkedIn Email WhatsApp

    Related Posts

    ಹೊಸ ಮನೆ ಗೃಹಪ್ರವೇಶದ ಸಂಭ್ರಮದಲ್ಲಿ ಅಣ್ಣಯ್ಯ ಸೀರಿಯಲ್‌ ನಟಿ ನಿಶಾ!

    May 10, 2025

    ರಜನಿ ಜೈಲರ್-2ಗಾಗಿ ಬಾಲಯ್ಯ ಜೇಬಿಗಿಳಿಸಿಕೊಂಡಿದ್ದು ಎಷ್ಟು ಕೋಟಿ ಗೊತ್ತಾ?

    May 10, 2025

    India Pakistan War: ಪಾಕಿಸ್ತಾನವನ್ನು ವಿಶ್ವದ ಮ್ಯಾಪ್ʼನಿಂದಲೇ ತೆಗೆದು ಹಾಕಬೇಕು: ಕಂಗನಾ ರಣಾವತ್

    May 10, 2025

    ದೇಶಕ್ಕಾಗಿ ʼಆʼ ಧೃಡನಿರ್ಧಾರ ತೆಗೆದುಕೊಂಡ ನಟ ಕಮಲ್‌ ಹಾಸನ್!‌

    May 9, 2025

    Chaithra Kundapura: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಫೈರ್‌ಬ್ರ್ಯಾಂಡ್ ಚೈತ್ರಾ ಕುಂದಾಪುರ..!

    May 9, 2025

    ಉಗ್ರರ ಮೇಲಿನ ಭಾರತದ ದಾಳಿ ಖುಷಿ ಪಡುವ ವಿಚಾರ: ಡಾಲಿ ಧನಂಜಯ್!

    May 8, 2025

    ‘ಜವಾ’ ಸವಾರಿಗಿಳಿದ ರಾಜವರ್ಧನ್..ಡಿಂಗ್ರಿ ನಾಗರಾಜ್‌ ಪುತ್ರ ಈಗ ಪ್ರೊಡ್ಯೂಸರ್

    May 8, 2025

    ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ರಾಗಿಣಿ…ಮತ್ತೆ ಬಣ್ಣ ಹಚ್ಚಿದ ಕುಮಾರ್‌ ಬಂಗಾರಪ್ಪ!

    May 8, 2025

    ಕನ್ನಡದ ಹೃತಿಕ್‌ ರೋಷನ್‌ ಸ್ಟೈಲೀಶ್‌ ಪೋಸ್..ಮದುಮಗನಂತೆ ಮಿಂಚಿದ ಇಂದ್ರಜಿತ್‌ ಲಂಕೇಶ್‌ ಪುತ್ರ!

    May 8, 2025

    ʼಆಪರೇಷನ್‌ ಸಿಂಧೂರʼ ಸಿನಿಮಾ ಮಾಡಲು ಮುಗಿಬಿದ್ದ ನಿರ್ಮಾಪಕರು..ಯಾರ ಪಾಲಾಗಲಿದೆ ಟೈಟಲ್?‌

    May 8, 2025

    ಚೈತ್ರಾ ಕುಂದಾಪುರ ಕೈಯಲ್ಲಿ ಗೋರಂಟಿ ರಂಗು..ಹಸೆಮಣೆ ಏರಲು ರೆಡಿನಾ?

    May 8, 2025

    ರಾಜಪುತ್ತಿರನ್: ಸೆನ್ಸೇಷನ್ ಸ್ಟಾರ್ ಕೋಮಲ್ ಕುಮಾರ್ ಕಾಲಿವುಡ್ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.