ಬೆಂಗಳೂರು: ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ಯಶೋಧ( 33) ತಿಮ್ಮಕ್ಕ.( 60) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳಾಗಿದ್ದು,
ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!
ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ರಸ್ತೆ ಎಡ ಭಾಗದದಲ್ಲಿ ನಡೆಯುತ್ತಿದ್ದ ವೇಳೆ ವೇಗವಾಗಿ ಹಿಂಬದಿಯಿಂದ ಕಾರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಅದಲ್ಲದೆ ಡಿಕ್ಕಿ ಹೊಡೆದು ಮುಂದಿದ್ದ ಕಾಂಪೌಂಡ್ ಗೆ ಕಾರ್ ಡಿಕ್ಕಿ ಯಾಗಿದ್ದು,
ಮೃತ ಪಟ್ಟ ಮಹಿಳೆಯರಿಗೆ ಪರಿಹಾರಕ್ಕಾಗಿ ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ. ಮೃತ ಪಟ್ಟವರನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಸ್ಥರು ಬೀದಿ ಪಾಲಾಗಿದ್ದು, ಇನ್ನೂ ಅಪಘಾತ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.