ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೌದು ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಕ ಮಾಡಿದ್ದಕ್ಕೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ತೊರೆಸಿ ಬೇರೆ ಶಾಲೆಗೆ ದಾಖಲಿಸುತ್ತಿದ್ದಾರೆ ಎಂಬ ಆರೋಪವು ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೇಳಿಬಂದಿದೆ.
2024-25ನೇ ಸಾಲಿನಲ್ಲಿ 22 ವಿದ್ಯಾರ್ಥಿಗಳಿದ್ದ ಈ ಶಾಲೆಯಲ್ಲಿ ಈಗಿರುವುದು ಓರ್ವ ವಿದ್ಯಾರ್ಥಿ ಮಾತ್ರ. ಈಗಾಗಲೇ 12 ಮಕ್ಕಳು ಟಿಸಿ ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳು ಟಿಸಿ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ
ಹೀಗಾಗಿ, ಶಾಲೆ ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿದೆ. ಇಬ್ಬರು ಶಿಕ್ಷಕರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಕ ಮಾಡಿದ್ದಕ್ಕೆ ಪೋಷಕರು ಮಕ್ಕಳನ್ನು ಶಾಲೆ ಬಿಡಿಸುತ್ತಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಇತ್ತ ಕಡೆ ಗಮನ ಹರಿಸಬೇಕೆಂದು ಆಗ್ರಹ ವ್ಯಕ್ತವಾಗುತ್ತಿದೆ.