ಬೆಂಗಳೂರು: ತನ್ನ ಪತ್ನಿ ಜೊತೆ ಏರ್ ಪೋಟ್೯ ಗೆ ತೆರಳುತ್ತಿದ್ದಾಗ ದೇಶ ಕಾಯೋ ಯೋಧನ ಮೇಲೆ ಮಾಡಿರುವ ಘಟನೆ ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಾಗದ ಅಧಿಕಾರಿಯ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ರಕ್ತ ಹರಿದಿದೆ. ತಮ್ಮ ಮೇಲೆ ಆದ ಹಲ್ಲೆ ಕುರಿತು ವಿವರಿಸಿ ಅಧಿಕಾರಿ ವಿಡಿಯೋ ಮಾಡಿದ್ದಾರೆ.
ಈ ವಿಡಿಯೋವನ್ನು ಅಮಿತಾಬ್ ಚೌದರಿ ಎಂಬುವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, “ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷ ಅಥವಾ ಗುಂಪುಗಳು ಭಾಷೆ, ಜಾತಿ ಮತ್ತು ರಾಜಕಾರಣದ ಹೆಸರಿನಲ್ಲಿ ಒಡೆದು ಆಳುವುದು ಕರ್ನಾಟಕ ಮತ್ತು ಭಾರತಕ್ಕೆ ಹಾನಿಕಾರಕ” ಎಂದು ಟ್ವೀಟ್ ಮಾಡಿದ್ದಾರೆ.
ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?
ನಾವು ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿರುವ ಡಿಆರ್ಡಿಒ ಕಾಲೋನಿಯಲ್ಲಿ ವಾಸವಾಗಿದ್ದು, ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದೇವು. ಈ ವೇಳೆ ನಮ್ಮ ಕಾರನ್ನು ಹಿಂಬಾಲಿಸಿಕೊಂಡು ಬಂದ ಓರ್ವ ಬೈಕ್ ಸಾವರ, ನಮಗೆ ಅಡ್ಡ ಹಾಕಿದ್ದಾನೆ. ಆಗ ನಾನು ಕಾರು ನಿಲ್ಲಿಸಿದೆ.
ನಂತರ ಆ ವ್ಯಕ್ತಿ ಏಕಾಏಕಿ ಕನ್ನಡದಲ್ಲಿ ನನ್ನನ್ನು ನಿಂದಿಸಲು ಪ್ರಾರಂಭಿಸಿದನು. ನನ್ನ ಕಾರಿನ ಮೇಲೆ ಡಿಆರ್ಡಿಒ ಸ್ಟಿಕ್ಕರ್ ನೋಡಿ ‘ನೀವು ಡಿಆರ್ಡಿಒ ಜನರು’ ಎಂದು ಹೇಳಿ, ನನ್ನ ಹೆಂಡತಿಯನ್ನೂ ಅವಾಚ್ಯ ಶಬ್ಧಗಳಿಂದ ನಿಂದಿಸಿದನು. ಮತ್ತು ನನಗೆ ಅದು ಸಹಿಸಲಾಗಲಿಲ್ಲ. ನಾನು ಕಾರಿನಿಂದ ಇಳಿದ ಕ್ಷಣ, ಆ ವ್ಯಕ್ತಿ ಕೀಲಿಯಿಂದ ನನ್ನ ಹಣೆಗೆ ಹೊಡೆದನು” ಎಂದು ಹೇಳಿದರು.