ಬೆಂಗಳೂರು: KSRTC ಬಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರು ಪಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ನಡೆದಿದೆ. ಹನುಮಂತರಾಯಪ್ಪ (71) ಮೃತ ದುರ್ಧೈವಿಯಾಗಿದ್ದು,
ಬಗಲಗುಂಟೆಯಲ್ಲಿ ವಾಸ ಇದ್ದು ಕೆಲಸದ ನಿಮಿತ್ತ ರಾಜಾಜಿನಗರ ಬಂದಿದ್ರು.. ನಿನ್ನೆ ಸಂಜೆ 4ಗಂಟೆ ಸುಮಾರಿಗೆ ದ್ವಿಚಕ್ರವಾಹನದಲ್ಲಿ ಮನೆಗೆ ಹೋಗ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಗೆ ಸಿಲುಕಿ ಬಿದ್ದಿದ್ರು.. ಗಂಭೀರ ಗಾಯಗೊಂಡಿದ್ದ ಹನುಮಂತರಾಯಪ್ಪನನ್ನ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು..
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರ ಪೊಲೀಸ್ರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಎಸ್ಆರ್ಟಿಸಿ ಬಸ್ ಚಾಲಕ ಹಾಗೂ ಕಂಡಕ್ಟರ್ ನನ್ನು ವಶಪಡಿಸಿಕೊಂಡಿದ್ದಾರೆ.