ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗರೆ ಸಮೀಪ ಗುಂಡಾಲ್ ಜಲಾಶಯದಲ್ಲಿ ಯುವಕನೋರ್ವ ನೀರಿನಲ್ಲಿ ಈಜಲು ಹೋಗಿ ಮುಳುಗಿ ಸಾವನಪ್ಪಿರುವ ಘಟನೆ ಜರುಗಿದೆ.
ಹನೂರು ತಾಲೂಕಿನ ಬಿ. ಗುಂಡಾಪುರ ಗ್ರಾಮದ ಶಿವಯ್ಯ ಎಂಬುವರ ಪುತ್ರ ಮಲ್ಲೇಶ್ (19) ಗುಂಡಾಲ್ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಜಲಾಶಯದಲ್ಲಿ ಯುವಕನೋರ್ವ ಮುಳುಗಿರುವ ಬಗ್ಗೆ ಗಮನಿಸಿದ ಸ್ಥಳೀಯರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ದಡದಲ್ಲಿದ್ದ ಬಟ್ಟೆ ಫೋನ್ ಮುಖಾಂತರ ಆತನ ವಿಳಾಸ ಪತ್ತೆ ಮಾಡಿ ಆತನ ಪೋಷಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಅಗ್ನಿಶಾಮಕದಳದವರು ಶುಕ್ರವಾರ ಸಂಜೆ ತನಕವೂ ಹುಡುಕಾಟ ನಡೆಸಿದರು ಶವ ಪತ್ತೆಯಾಗಿರಲಿಲ್ಲ. ಶನಿವಾರ ಬೆಳ್ಳಗ್ಗೆ 7ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ.