ಕೋಲಾರ: ಕಲ್ಲು ಕ್ರಷರ್ ನಲ್ಲಿ ಅವಘಡ ಸಂಭವಿಸಿ ಯಂತ್ರಕ್ಕೆ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಐಶ್ವರ್ಯ ಕ್ರಷರ್ ನಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ 35 ವರ್ಷದ ನಂದಾ ಲಾಲ್ ಮೃತ ಪಟ್ಟ ಕಾರ್ಮಿಕನಾಗಿದ್ದು, ವೆಂಕಟೇಶ್ ಎಂಬುವರಿಗೆ ಸೇರಿದ ಐಶ್ವರ್ಯ ಕ್ರಷರ್ ನಲ್ಲಿ ಈ ದುರಂತ ಜರುಗಿದೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಹೊಸಕೋಟೆ ಯ ಎಂ ವಿ ಜೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಲಾಗಿದೆ. ಕೂಡಲೇ ಸ್ಥಳಕ್ಕೆ ಮಾಸ್ತಿ ಠಾಣೆಯ ಪೊಲೀಸರು ಭೇಟಿ, ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ