ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಟ ದರ್ಶನ್ ವಿದೇಶಕ್ಕೆ ತೆರಳಲು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಡೆವಿಲ್ ಸಿನಿಮಾದ ಚಿತ್ರೀಕರಣಕ್ಕಾಗಿ ಜೂನ್ 1 ರಿಂದ 25ರ ವರೆಗೆ ದುಬೈ ಮತ್ತು ಯೋರೋಪ್ಗೆ ತೆರಳಲು ಅನುಮತಿ ಕೋರಿದ್ದರು. ಇಂದು 64ನೇ ಸಿಸಿಹೆಚ್ ಕೋರ್ಟ್ ವಿಚಾರಣೆ ನಡೆಸಿದೆ.
ದರ್ಶನ್ ಪರವಾಗಿ ವಕೀಲ ಲಕ್ಷ್ಮೀಕಾಂತ್ ವಾದ ನಡೆಸಿದರು. ದರ್ಶನ್ ಚಿತ್ರನಟ ಆಗಿದ್ದು, ನಟನೆ ಅಷ್ಟೇ ಅವರ ದುಡಿಮೆ. ಹೀಗಾಗಿ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಅವಕಾಶ ನೀಡುವಂತೆ ದರ್ಶನ್ ಪರ ವಕೀಲರ ಮನವಿ ಮಾಡಿದ್ದಾರೆ. ದರ್ಶನ್ ಎಲ್ಲಿಗೆ ಹೋಗ್ತಾರೆ ಎಂಬ ಸಂಪೂರ್ಣ ವಿವರಗಳಿಲ್ಲ. ವಿದೇಶದಲ್ಲಿ ಎಲ್ಲಿ ಉಳಿಯುತ್ತಾರೆ ಎಂಬ ಮಾಹಿತಿ ಇಲ್ಲ. ಹೀಗಾಗಿ ಅವರಿಗೆ ಅವಕಾಶ ನೀಡದಂತೆ ಎಸ್ಪಿಪಿ ಪ್ರತಿವಾದ ನಡೆಸಿದರು. ವಾದ ಪ್ರತಿವಾದ ಆಲಿಸಿ ಆದೇಶದ ಕೋರ್ಟ್ ಮೇ30ಕ್ಕೆ ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದೆ.
ಈ ವರ್ಷವೇ ರಿಲೀಸ್ ಡೆವಿಲ್?
ಆರಂಭದಿಂದಲೂ ಡೆವಿಲ್ ಸಿನಿಮಾಗೆ ಒಂದಲ್ಲ ಒಂದು ಕಂಟಕ ಎದುರಾಗಿದೆ. ಮೈಸೂರಿನಲ್ಲಿ ಶೂಟಿಂಗ್ ನಡೆಯುವಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದಾಸನ್ನು ಅರೆಸ್ಟ್ ಮಾಡಲಾಗಿತ್ತು. ನಾಲ್ಕೈದು ತಿಂಗಳ ಕಾಲ ಜೈಲಿನಲ್ಲಿದ್ದು, ಜಾಮೀನು ಮೂಲಕ ದರ್ಶನ ಹೊರಬಂದಿದ್ದರು. ಜೈಲಿನಿಂದ ಹೊರಬಂದ ಬಳಿಕ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಸದ್ಯ ಭರದಿಂದ ಚಿತ್ರೀಕರಣ ಸಾಗುತ್ತಿದ್ದು, ಈ ವರ್ಷವೇ ಡೆವಿಲ್ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಪ್ರಕಶಶ್ ವೀರ್ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುತ್ತಿದೆ.