ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾಯಿ ಇಂದು ನಂಜನಗೂಡಿನ ನಂಜುಡೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ಬೇಲ್ ಅರ್ಜಿ ವಿಚಾರಣೆ ಇತ್ತು. ಹೀಗಾಗಿ ದರ್ಶನ್ ಗಾಗಿ ತಾಯಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ಗೆ ರಾಜ್ಯ ಹೈಕೋರ್ಟ್ ಕೆಲ ತಿಂಗಳ ಹಿಂದೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿಕೊಂಡು ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಕಳೆದ ಎರಡು ಬಾರಿಯಿಂದ ವಿಚಾರಣೆಯನ್ನು ಮುಂದೂಡಿದ್ದ ನ್ಯಾಯಾಲಯ ಇಂದು ಮತ್ತೆ ವಿಚಾರಣೆಯನ್ನು ಏಪ್ರೀಲ್ 22ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೆ ನಟ ದರ್ಶನ್ ತಾಯಿ ನಂಜುಂಡೇಶ್ವರ ದರ್ಶನ ಪಡೆದಿದ್ದಾರೆ.