ವಿವಾದ ಅಂದ್ರೆ ಕಮಲ್ ಹಾಸನ್, ಕಮಲ್ ಹಾಸನ್ ಅಂದ್ರೆ ವಿವಾದ ಅನ್ನೋ ಹಾಗೇ ಆಗಿದೆ. ತಮಿಳಿ ನಟ, ರಾಜಕಾರಣಿ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ನಾಲೊಗೆ ಹರಿಬಿಟ್ಟು ಈಗ ಸುದ್ದಿಯಲ್ಲಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ಹೇಳಿರುವ ಮಾತಿಗೆ ಕೆಚ್ಚೆದೆಯ ಕನ್ನಡಿಗರು ಕೆಂಡವಾಗಿದ್ದಾರೆ. ಕಮಲ್ ಈ ಮಾತಿಗೆ ರಾಜ್ಯಾದ್ಯಂತ ಆಕ್ರೋಶ ಶುರುವಾಗಿದೆ. ತಕ್ಷಣ ಕ್ಷಮೆ ಕೇಳಬೇಕು. ಇಲ್ಲ ಅವರ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಇದೀಗ ನಟ, ರಾಜ್ಯಸಭಾ ಸದಸ್ಯೆ ಜಗ್ಗೇಶ್ ಕೂಡ ಕಮಲ್ ಹಾಸನ್ ಗೆ ತಿವಿದಿದ್ದಾರೆ.
ಜಗ್ಗೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಕಮಲ್ ಹಾಸನ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಲೆಗೆ ಜಾತಿ ಇಲ್ಲಾ.ಎಲ್ಲಾಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ,ಆ ನಿಟ್ಟಿನಲ್ಲಿ ಕಮಲ್ ಹಾಸನ್ ರವರ ಮೆಚ್ಚಿದ್ದೇವೆ. ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪೋಲ್ಲಾ!
ಕನ್ನಡಕ್ಕೆ 2.5ಸಾವಿರ ವರ್ಷದ ಇತಿಹಾಸವಿದೆ,ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್ ಎಂದು ಟ್ವೀಟ್ ಮಾಡಿದ್ದಾರೆ.
ಕಲೆಗೆ ಜಾತಿ ಇಲ್ಲಾ.ಎಲ್ಲಾಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ,ಆ ನಿಟ್ಟಿನಲ್ಲಿ ಕಮಲ್ ಹಾಸನ್ ರವರ ಮೆಚ್ಚಿದ್ದೇವೆ.
ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪೋಲ್ಲಾ!
ಕನ್ನಡಕ್ಕೆ 2.5ಸಾವಿರ ವರ್ಷದ ಇತಿಹಾಸವಿದೆ,ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್..! pic.twitter.com/Bj8f59lAiK— ನವರಸನಾಯಕ ಜಗ್ಗೇಶ್ (@Jaggesh2) May 28, 2025
ಘಟನೆ ಏನು?
ಚೆನ್ನೈನಲ್ಲಿ ಇತ್ತೀಚೆಗೆ ನಡೆದ ‘ಥಗ್ ಲೈಫ್’ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಮೆಲುಕು ಹಾಕುತ್ತಾ, ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.