Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯಶ್‌ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತೇ: ಅದಕ್ಕೆ ತಕ್ಕ ರೀತಿ ಮಾಡ್ಬೇಕು..ಹೊಸ ನಿರ್ದೇಶಕನಿಗೆ ಅಡ್ವೈಸ್ ಕೊಟ್ಟಿದ್ದ ಯಶ್‌ ತಾಯಿ!

    By Author AINMay 21, 2025
    Share
    Facebook Twitter LinkedIn Pinterest Email
    Demo

    ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ತಮ್ಮದೇ PA Productions ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ ಟೀಸರ್‌ ಬಿಡುಗಡೆ ಕಾರ್ಯಕ್ರಮ ಇಂದು ಬೆಂಗಳೂರಿನ ಒರೆಯನ್‌ ಮಾಲ್‌ ನಲ್ಲಿ ನಡೆಯಿತು. ಟೀಸರ್‌ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌, ಯಶ್‌ ತಂದೆ ಅರುಣ್‌ ಕುಮಾರ್‌, ನಟ ಪೃಥ್ವಿ ಅಂಬರ್‌, ನಟಿ ಕಾವ್ಯ, ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ, ನಿರ್ದೇಶಕ ಶ್ರೀರಾಜ್ ಭಾಗಿಯಾಗಿದ್ದರು. ನಟ ಶರಣ್‌ ಟೀಸರ್‌ ರಿಲೀಸ್‌ ಕಾರ್ಯಕ್ರಮ ವಿಶೇಷ ಅತಿಥಿಯಾಗಿ ಆಗಮಿಸಿ ಟೀಸರ್‌ ಅನಾವರಣ ಮಾಡಿ ಶುಭಾಶಯ ತಿಳಿಸಿದರು.

    ಟೀಸರ್‌ ರಿಲೀಸ್‌ ಮಾಡಿದ ಶರಣ್‌ ಮಾತನಾಡಿ, ಒಂದು ಹೊಸ ಶುರುವಾತಿನ ವೈಬ್‌ ಇಲ್ಲಿ ಕಾಣಿಸುತ್ತಿದೆ. ನಮ್ಮ ಯಶಸ್ಸಿನ ಗುಟ್ಟು ಈ ಒಗ್ಗಟ್ಟಿನ ಸಾಕ್ಷಿ, ಈ ಚಿತ್ರಕ್ಕೆ ಕೆಲಸ ಮಾಡಿರುವ ಮುಖದಲ್ಲಿ ಕುತೂಹಲ, ಪಾಸಿಟಿವ್‌ ಎನರ್ಜಿ, ಭಕ್ತಿ, ಆತ್ಮೀಯತೆ, ಪ್ರೀತಿ ಇದೆ. ಇಷ್ಟು ಸಾಕು ಒಂದು ಯಶಸ್ವಿಗೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಕೊಟ್ಟಿದ್ದಕ್ಕೆ ಅಮ್ಮನಿಗೆ ಧನ್ಯವಾದ. ಇಷ್ಟು ವರ್ಷದ ಕನಸ್ಸು ಲೋಕಾರ್ಪಣೆ ಮಾಡುತ್ತಿರುವ ಖುಷಿ ಚಿತ್ರತಂಡದ ಮುಖದಲ್ಲಿ ಕಾಣಿಸುತ್ತದೆ. ಇಡೀ ತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.


    ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌ ಮಾತನಾಡಿ, ಸಿನಿಮಾ ಅವಕಾಶ ಕೊಡುತ್ತೇನೆ ಸುತ್ತಿಕೊಂಡು ಬರಬಾರದು. ಕೆಲಸ ಮಾತನಾಡಬೇಕು. ನಾವು ಮಾತನಾಡಬಾರದು. ಈ ಸಿನಿಮಾನಾ ನಾವು ನೋಡಲ್ಲ.‌ ಯಶ್‌ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತದೆ. ಅದಕ್ಕೆ ತಕ್ಕ ರೀತಿ ಮಾಡಿ. ಇಲ್ಲ ಅಂದರೆ ಮಾಡಬೇಡಿ. ಎಲ್ಲ ನಿಮಗೆ ಕೊಡುತ್ತೇವೆ. ಆರ್ಟಿಸ್ಟ್‌ ಯಾರು ಬೇಕು. ಎಲ್ಲಾ ಸೆಲೆಕ್ಷನ್‌ ಅವರೇ ಮಾಡಿದ್ದಾರೆ. ನಮ್ಮ ಬ್ಯಾನರ್‌ ಯಾವುದು? ಎಲ್ಲವನ್ನೂ ಯಶ್‌ ಗೆ ಉತ್ತರ ಕೊಡಬೇಕು. ಯಶ್‌ ನಿಂದ ನಾವು ಏನು ಕಲಿತಿದ್ದೇವೆ ಎಂದರೆ ಸಿನಿಮಾ ಏನು ಕೇಳುತ್ತದೆಯೋ ಅದು ಕೊಡಬೇಕು.ಸಿನಿಮಾಗೆ ಮೋಸ ಮಾಡಬಾರದು ಎನ್ನುವುದು. 10ರೂಪಾಯಿ ಜಾಸ್ತಿಯಾಗಲಿ. ಕ್ವಾಲಿಟಿ ಕೊಡಬೇಕು. ಕಥೆ ಮಾತನಾಡಬೇಕು. ಅದೇ ರೀತಿ ನೀವು ಮಾಡುತ್ತೇವೆ ಎಂದರೆ ನಿಮಗೆ ಕೊಡುತ್ತೇವೆ ಎಂದು ಹೇಳಿದ್ದೆ. ಆಡಿಯನ್ಸ್‌ ರಿಸಲ್ಟ್‌ ಗೆ ನಾವು ಕಾಯುತ್ತೇವೆ ಎಂದು ಹೇಳಿದರು.

    ಅರುಣ್‌ ಕುಮಾರ್‌ ಮಾತನಾಡಿ, ನಿನಗೆ ಖುಷಿಯಾದರೆ ಮಾಡಮ್ಮ. ನಾನು ರೈತ. ನೀನು ಏನ್‌ ಬೇಕಾದರೂ ಮಾಡು ಎಂದು ಪತ್ನಿಗೆ ಬೆಂಬಲವಾಗಿ ನಿಂತಿರುವುದಾಗಿ ತಿಳಿಸಿದರು.

    ನಟ ಪೃಥ್ವಿ ಅಂಬರ್‌ ಮಾತನಾಡಿ, ರಾಜು ಸರ್‌ ನನಗೆ ಮೊದಲಿನಿಂದ ಪರಿಚಯ. ನನಗೆ ಅವರು ಹೇಳಿರುವ ಎರಡನೇ ಕಥೆ. ಹಳ್ಳಿಯ ಸೊಡಗಿರುವ, ಹಳ್ಳಿಯ ಮುಗ್ದ, ಪವರ್‌ ಫುಲ್‌ ಸ್ಟ್ರಾಂಗ್‌ ಕ್ಯಾರೆಕ್ಟರ್‌ ಪ್ಲೇ ಮಾಡಬೇಕು ಎಂಬ ಮನಸ್ಸು ಇತ್ತು. ಎಲ್ಲರೂ ಚೆನ್ನಾಗಿ ಪಾತ್ರ ಮಾಡಿದ್ದಾರೆ. ಸಿನಿಮಾ ಮುಗಿದ್ರು ಪ್ರೊಡ್ಯೂಸರ್‌ ಯಾರು ಎಂದು ಗೊತ್ತಿರಲಿಲ್ಲ. ಪ್ರೊಡಕ್ಷನ್‌ ಹೌಸ್‌ ಮೀಟ್‌ ಮಾಡೋಣಾ ಎಂದು ರಾಜು ಸರ್‌ ಹೇಳುತ್ತಿದ್ದರು. ಮ್ಯಾಮ್‌ ಹಾಸನ್‌ ಮನೆಗೆ ಹೋದೆವು. ಮೀಟಿಂಗ್‌ ಮುಗಿಸಿ ಹೊರಟ ಬಳಿಕ ಮ್ಯಾಮ್‌ ಕಾಲಿಗೆ ಬಿದ್ದಾಗ ನನ್ನ ಮಗನಿಗಿಂತ ಚೆನ್ನಾಗಿ ಬೆಳೆಯಪ್ಪ ಎಂದರು. ಮ್ಯಾಮ್‌ ಬ್ರ್ಯಾಗ್ರೌಂಡ್‌ ಇಲ್ಲದವರ ಜೊತೆ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ. ಸಿನಿಮಾ ಕಥೆಗೆ ಏನೋ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ. ಬಹಳ ಪ್ರೀತಿಯಿಂದ ಎಲ್ಲರೂ ಈ ಸಿನಿಮಾಗೆ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

    ನಿರ್ದೇಶಕ ಶ್ರೀರಾಜ್‌ ಮಾತನಾಡಿ, ನನಗೆ ಮೊದಲ ಬಾರಿಗೆ ಅವಕಾಶ ಕೊಟ್ಟಿರುವುದಕ್ಕೆ ಅಪ್ಪಾಜಿ-ಅಮ್ಮನಿಗೆ ಧನ್ಯವಾದ. ಅಮ್ಮನಿಗೆ ಕಥೆ ಜಡ್ಟ್‌ ಮೆಂಟ್‌ ಚೆನ್ನಾಗಿ ಮಾತನಾಡುತ್ತಾರೆ. ಆಗ ನಾನು ಕಥೆ ಹೇಳಿದೆ ಅವರು ಇದು ವರ್ಕ್‌ ಆಗಲ್ಲ ಎಂದರು. ನಾನು ಸಿನಿಮಾ ಮಾಡುವುದು ನನಗೆ ನಿನಗೆ ಮಾತ್ರ ಗೊತ್ತಿರಬೇಕು. ಯಾರಿಗೂ ಗೊತ್ತಾಗಬಾರದು ಎಂದು ಹೇಳಿದರು. ಕೊತ್ತಲವಾಡಿ ಒನ್‌ ಲೈನ್‌ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅದಕ್ಕೆ ಓಂಕಾರ ಹಾಕಿದರು. ಕಥೆ ಬರೆಯೋದಿಕ್ಕೆ ಎಂಟು ತಿಂಗಳು ಟೈಮ್‌ ತೆಗೆದುಕೊಂಡೆ. ಕಥೆ ಪೂರ್ತಿಯಾದಾಗ ಬಾ ಎಂದಿದ್ದರು. ಅಮ್ಮನಿಗೆ ಪೂರ್ತಿಯಾಗಿ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅಲ್ಲಿಂದ ಈ ಜರ್ನಿ ಶುರುವಾಯ್ತು ಎಂದರು.

    ಅದ್ಭುತವಾಗಿದೆ ಟೀಸರ್
    ಕೊತ್ತಲವಾಡಿ ಟೀಸರ್‌ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್‌ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್‌ ರಗಡ್‌ ಹಾಗೂ ಮಾಸ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ ಕ್ವಾಲಿಟಿ ಚೆನ್ನಾಗಿದೆ. ಕೊತ್ತಲವಾಡಿ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್‌ ಹೇಳೋದಿಕ್ಕೆ ಹೊರಟಿದ್ದಾರೆ. ವಿಕಾಸ್‌ ವಸಿಷ್ಠ ಸಂಗೀತ, ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ಟೀಸರ್‌ ಹೈಲೆಟ್.

    ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.

    ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯಲ್ಲಿ ಪೃಥ್ವಿ ಅಂಬರ್ ಆಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಾರೆ. ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಕೊತ್ತಲವಾಡಿ ಸಿನಿಮಾಗೆ ಇದೆ.

    Demo
    Share. Facebook Twitter LinkedIn Email WhatsApp

    Related Posts

    ಕೊಟ್ಟ ಸಾಲ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ.! ಸಂಬಂಧಿಕರಿಂದಲೇ ಕೊಲೆಗೆ ಸ್ಕೆಚ್

    July 4, 2025

    ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ʼಮಾಫಿಯಾʼ ಪೋಸ್ಟರ್‌ ಅನಾವರಣ

    July 4, 2025

    Bengaluru: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೈತ ಹೋರಾಟಗಾರರು..!

    July 4, 2025

    ಕನ್ನಡವೇ ನಮ್ಮಮ್ಮ..ಸಲಾಂ ಎಂದ ಅಣ್ತಮ್ಮಾ..ರಾಕಿಭಾಯ್ ಕನ್ನಡಾಭಿಮಾನ ಎಂಥದ್ದು ಗೊತ್ತಾ?

    July 4, 2025

    ರವಿಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ: ಬಿ. ವೈ ವಿಜಯೇಂದ್ರ ಹೇಳಿದ್ದೇನು..?

    July 4, 2025

    ಮದುವೆಯಾಗದೇ ತಾಯಿಯಾದ್ರು ಕನ್ನಡದ ಖ್ಯಾತ ನಟಿ..ಯಾರವರು?

    July 4, 2025

    200 ಕೋಟಿ ವಂಚನೆ ಕೇಸ್: ದೆಹಲಿ ಹೈಕೋರ್ಟ್’ನಿಂದ ಜಾಕ್ವಲಿನ್ ಅರ್ಜಿ ವಜಾ!

    July 4, 2025

    ಬೆಳ್ಳಂಬೆಳಗ್ಗೆ ಕುಟುಂಬಸ್ಥರೊಟ್ಟಿಗೆ ನಾಡದೇವತೆ ಚಾಮುಂಡಿ ʼದರ್ಶನʼ ಪಡೆದ ಡಿಬಾಸ್!‌

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: MLC ರವಿಕುಮಾರ್ ವಿರುದ್ಧ FIR ದಾಖಲು!

    July 4, 2025

    ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 101 ಕೋಟಿ ಬಿಡುಗಡೆ..!

    July 4, 2025

    “ಆಶಾಕಿರಣ ದೃಷ್ಟಿ ಕೇಂದ್ರ” ಉದ್ಘಾಟಿಸಿದ ಡಿಸಿಎಂ ಡಿಕೆಶಿವಕುಮಾರ್

    July 3, 2025

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಾಗ್ದಾಳಿ

    July 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.