Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಳೆ ವಿಮೆ ಯೋಜನೆ ಸಲ್ಲಿಸಲು ರೈತರಿಗೆ ಸಲಹೆ: ಡಿಸಿ ಡಾ.ಎನ್ ಶಿವಶಂಕರ್

    By AIN AuthorJuly 6, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು ಗ್ರಾಮಾಂತರ: ತೋಟಗಾರಿಕಾ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

    ಹಣ್ಣುಗಳ ರಾಜ ಮಾವಿನಹಣ್ಣಿನ ಬೆಳೆ ಬಗ್ಗೆ ನಿಮಗೆಷ್ಟು ಗೊತ್ತು: ರೈತರು ಹೇಗೆ ರಫ್ತು ಮಾಡ್ತಾರೆ?

    ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
    ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನ ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000, ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000 ಮಾವು ಮತ್ತು ದ್ರಾಕ್ಷಿ ಬೆಳೆಯುವ ರೈತ ಬಾಂಧವರು ಈ ಯೋಜನೆಯಡಿ ನೋಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.

    ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗಧಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ / ಕಂದಾಯ ರಶೀದಿ / ಖಾತೆ ಪುಸ್ತಕ / ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು / ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸುವುದು. ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

    ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೋಂದಾಯಿಸಲಿದ್ದು, ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ. ವಿಮೆ ನೋಂದಣಿಗೆ ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ.

    ಹೆಚ್ಚಿನ ಮಾಹಿತಿಗೆ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9480461234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880210892, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 8217210320, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880461607, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯ ದೂ.ಸಂ-8884141262 ಸಹಾಯವಾಣಿ ಸಂಖ್ಯೆ- 080 26564537 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಬಿಎಂಟಿಸಿ ಬಸ್ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು!

    June 8, 2025

    ಸೂಟ್​ಕೇಸ್​ನಲ್ಲಿ ಬಾಲಕಿ ಶವ ಪತ್ತೆ ಕೇಸ್: ಪ್ರಕರಣ ಬೇಧಿಸಿದ ಪೊಲೀಸರಿಗೆ ಅಚ್ಚರಿ ಮಾಹಿತಿ ರಿವೀಲ್!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!

    June 8, 2025

    ಬೆಂಗಳೂರಿನಲ್ಲಿ ನಕಲಿ ಸಿಗರೇಟ್ ಮಾರಾಟ: ಕೇರಳ ಮೂಲದ ಇಬ್ಬರು ಅರೆಸ್ಟ್!

    June 8, 2025

    ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.