ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ ಪೊಲೀಸರು, ಎಂಟು ಮಂದಿಯ ಹೆಡೆಮುರಿ ಕಟ್ಟಿದ್ದಾರೆ.
ಇದರ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಹಿಂದೂ ಮುಖಂಡ ಭರತ್ ಕುಮ್ಡೇಲ್ಗೆ ಜೀವ ಬೆದರಿಕೆ ಹಾಕಲಾಗಿದೆ. ‘5/5/2025 ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ’ ಮಾಡುವುದಾಗಿ ಪೋಸ್ಟ್ ಹರಿಬಿಡಲಾಗಿದೆ. ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ಹಂತಕರು ವಿಕೃತಿ ಮೆರೆದಿದ್ದರು.
ಎಸ್ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲು. 2017ರ ಜೂನ್ 21 ರಂದು ಅಶ್ರಫ್ ಹತ್ಯೆಯಾಗಿತ್ತು. ಬಂಟ್ವಾಳದ ಬೆಂಜನಪದವು ಎಂಬಲ್ಲಿ ಅಶ್ರಫ್ ಬರ್ಬರವಾಗಿ ಹತ್ಯೆಗೀಡಾಗಿದ್ದ. ಎಸ್ಡಿಪಿಐನಲ್ಲಿ ಅಶ್ರಫ್ ಮುಂಚೂಣಿಯಲ್ಲಿದ್ದ. ಆತನ ಹತ್ಯೆ ಬಳಿಕ ಪ್ರತೀಕಾರವಾಗಿ ಬಂಟ್ವಾಳದ ಶರತ್ ಮಡಿವಾಳ ಹತ್ಯೆಯಾಗಿತ್ತು.
ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್ಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಎಂದು ಪೋಸ್ಟ್ ಹರಿಬಿಡಲಾಗಿದೆ. ಪೊಲೀಸ್ ಇಲಾಖೆಯ ಕ್ರಮದ ನಡುವೆ ದ್ವೇಷ ಕಾರುವ ಪೋಸ್ಟ್ ಹಾಕಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಮುಖಂಡರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಹಾಗೂ ಭಜರಂಗದಳ ಮುಖಂಡ ಭರತ್ ಕುಮ್ಡೇಲ್ಗೆ ಜೀವಬೆದರಿಕೆ ಬಂದಿದೆ.