ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರೇ ಈ ಸರ್ಕಾರ ಬೀಳಿಸುತ್ತಾರೆ ಎಂದು ಮಾಜಿ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರಗಿಯಲ್ಲಿ ನಡೆದ ಜನಾಕ್ರೋಶ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕಯಮಾರ್ ಮಧ್ಯೆ ಸಿಎಂ ಖುರ್ಚಿಗೋಸ್ಕರ ಗುದ್ದಾಟ ನಡೆತಿದೆ. ಇದರ ತಮ್ಮ ಪುತ್ರನನ್ನು ಸಿಎಂ ಮಾಡಲು ಮಲ್ಲಿಕಾರ್ಜುನ್ ಖರ್ಗೆ ಅವರೇ ಸರ್ಕಾರ ಬೀಳಿಸುತ್ತಾರೆ ಎಂದಿದ್ದು, ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಹಿಂದೂ ಹೆಣ್ಣು ಮಕ್ಕಳೇ ಒಂದು ಡಜನ್ ಮಕ್ಕಳನ್ನ ಹೆರಿ; ಪ್ರಮೋದ್ ಮುತಾಲಿಕ್
ಮೊನ್ನೆ ಖರ್ಗೆ ಅವರು ಸರ್ಕಾರ ಬೀಳುವ ಬಗ್ಗೆ ಮಾತನಾಡಿದ್ದಾರೆ. ಮೋದಿಯವರು ಈ ಸರ್ಕಾರ ಬಿಳಿಸುತ್ತಾರೆ ಎಂದು ಹೇಳಿದ್ದಾರೆ. ಮೋದಿಯವರಿಗೆ ಏನು ಕರ್ಮ ಈ ಸರ್ಕಾರ ಬೀಳಿಸೋಕೆ. ಇಬ್ಬರ ಕಾದಾಟದಲ್ಲಿ ತಮ್ಮ ಮಗನನ್ನ ಸಿಎಂ ಮಾಡಲು ಖರ್ಗೆಯವರೇ ಪ್ಲ್ಯಾನ್ ಮಾಡಿದ್ದಾರೆ ಎಂದು ಗುಡುಗಿದರು.