ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ನಿನ್ನೆ ಪದ್ಮ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಕಲಾ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆ ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ವಿತರಿಸಿದರು. ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ಪಡೆದು ಫ್ಯಾಮಿಲಿ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಅಮರಾವತಿ ಸಿನಿಮಾ ಮೂಲಕ ತಮಿಳು ಸಿನಿಮಾ ರಂಗಕ್ಕೆ ಕಾಲಿಟ್ಟ ಅಜಿತ್ ಕುಮಾರ್ ಅವರು ಸಿನಿ ಕ್ಷೇತ್ರದಲ್ಲೇ ಅತ್ಯುನ್ನತ ಸ್ಥಾನದಲ್ಲಿ ತಮ್ಮನ್ನು ಇಂದು ಗುರುತಿಸಿಕೊಂಡಿದ್ದಾರೆ. ಕಲಾ ಕ್ಷೇತ್ರದಲ್ಲಿ ಅವರ ಮಹಾನ್ ಸಾಧನೆಗಳಿಗಾಗಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಜಿತ್ ತಮಿಳು ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರಿಗೆ ಮಾಸ್ ಅಭಿಮಾನಿ ಬಳಗವಿದೆ. ಸಿನಿಮಾ ಹೊರತಾಗಿ ದೇಶ ಸುತ್ತುವುದು. ಕಾರ್ ರೇಸಿಂಗ್ ಕ್ರೇಜ್ ಅಜಿತ್ ಅವರಿಗಿದೆ.