ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಜನಪ್ರಿಯ ಡೈರಿ ಕಂಪನಿ ಅಮುಲ್ ಮಳಿಗೆ ತೆರೆಯಲು ಬಿಎಂಆರ್ಸಿಎಲ್ ಒಪ್ಪಂದ ಮಾಡಿಕೊಂಡಿದೆ. ನಗರದ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ತೆರೆಯಲು ಒಪ್ಪಂದ ನಡೆದಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೇ ನೀಡಿದ್ದಾರೆ.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ನಗರದಲ್ಲಿ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಉತ್ತಮ ಗುಣಮಟ್ಟದ ಪದಾರ್ಥಗಳು ಇವೆ. ಅಮುಲ್ಗೆ ಅವಕಾಶ ಕೊಟ್ಟಿದ್ದಾರೆ. ಇದು ಸರಿಯಲ್ಲ. ಮೊದಲು ನಂದಿನಿಗೆ ಕೊಡಬೇಕಿತ್ತು ಎಂದು ತಿಳಿಸಿದರು.
ಇನ್ನುಮುಂದೆ ರೈಲ್ವೆ, ಮೆಟ್ರೋ, ಎಲ್ಲೇ ಆದರೂ ಪ್ರಥಮ ಆದ್ಯತೆ ನಂದಿನಿಗೆ ಕೊಡಬೇಕು. ನಾವು ಕೆಎಸ್ಆರ್ಟಿಸಿ ಸೇರಿ ಎಲ್ಲಾ ಕಡೆ ನಂದಿನಿಗೆ ಆದ್ಯತೆ ಕೊಟ್ಟಿದ್ದೇವೆ. ಅಮುಲ್ ಹೆಚ್ಚು ಹಣ ಕೊಟ್ಟಿದ್ದಾರೆ ಅಂತ ಅವರಿಗೆ ಕೊಡಬೇಡಿ. ನಂದಿನಿಗೆ ಮೊದಲ ಆದ್ಯತೆ ಕೊಡಬೇಕು. ಸಿಎಂ, ಡಿಸಿಎಂ ಗಮನಕ್ಕೂ ಇದು ಬಂದಿದೆ ಎಂದು ತಿಳಿಸಿದರು.