ತುಮಕೂರು:- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ ಜರುಗಿದೆ. ಶಂಕರಮೂರ್ತಿ(50) ಕೊಲೆಯಾದ ವ್ಯಕ್ತಿ.
ಪತ್ನಿ ಸುಮಂಗಳ, ಪ್ರಿಯಕರ ನಾಗರಾಜು ಎಂಬುವವನಿಂದ ಕೃತ್ಯ ನಡೆದಿದೆ. ಕಳೆದ 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಪತ್ನಿ ಕೊಲೆಗೈದಿದ್ದಾಳೆ. ತಿಪಟೂರು ನಗರದ ಕಲ್ಪತರು ಕಾಲೇಜಿನ ಗರ್ಲ್ಸ್ ಹಾಸ್ಟೆಲ್ ನಲ್ಲಿ ಸುಮಂಗಳ ಅಡುಗೆ ಕೆಲಸ ಮಾಡಿಕೊಂಡಿದ್ದಳು. ಪಕ್ಕದ ಹಳ್ಳಿ ಕರಡಾಳುಸಂತೆ ಗ್ರಾಮದ ನಾಗರಾಜು ಜೊತೆ ಲವ್ವಿ ಡವ್ವಿ ಶುರು ಮಾಡಿದ್ದಳು. ಕೊಲೆ ಮಾಡಿದ ಬಳಿಕ ಮೃತದೇಹವನ್ನ ಗೋಣಿಚೀಲದಲ್ಲಿ ತುಂಬಿ 30 ಕಿಲೋಮೀಟರ್ ದುಷ್ಕರ್ಮಿಗಳು ದೂರ ಸಾಗಿಸಿದ್ದಾರೆ. ತುರುವೇಕೆರೆ ತಾಲೂಕಿನ ದಂಡನಿಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದರು ಎಂದು ತಿಳಿದು ಬಂದಿದೆ.
ಪ್ರಕರಣ ಬೆಳಕಿಗೆ ಬಂದಿದ್ದೇಗೆ:-
ನೊಣವಿನಕೆರೆ ಪೊಲೀಸರು ಮೊದಲು ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡಿದ್ದರು. ಬಳಿಕ ಶಂಕರಮೂರ್ತಿಯ ತೋಟದ ಬಳಿ ತೆರಳಿ ಪರಿಶೀಲಿಸಿದ್ದರು. ಶಂಕರಮೂರ್ತಿ ಮಲಗಿದ್ದ ಹಾಸಿಗೆ ಮೇಲೆ ಖಾರದ ಪುಡಿ ಹಾಗೂ ವ್ಯಕ್ತಿಯೊಬ್ಬರನ್ನ ಎಳೆದಾಡಿದ್ದ ಗುರುತು ಪತ್ತೆಯಾಗಿತ್ತು. ಅನುಮಾನ ಬಂದು ತನಿಖೆಯನ್ನ ಚುರುಕು ಮಾಡಲಾಗಿತ್ತು.
ಪತ್ನಿ ಸುಮಂಗಳನ್ನ ವಿಚಾರಣೆ ನಡೆಸಿ ಸಿಡಿಆರ್ ಪರಿಶೀಲಿಸಿದ್ದ ವೇಳೆ ಕೃತ್ಯ ಬಯಲಿಗೆ ಬಂದಿದೆ. ತೋಟದ ಮನೆಯಲ್ಲಿದ್ದ ಶಂಕರಮೂರ್ತಿ, ಯಾರೊಂದಿಗೋ ಸಂಪರ್ಕ ಇರದೆ ತನ್ನ ಪಾಡಿಗೆ ತಾನಿದ್ದ. ಘಟನೆ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.