ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್ ಆಗಿದೆ. ಸಹನಟಿ ಮೇಎಲ ಅತ್ಯಾಚಾರ ಆರೋಪ ಹೊತ್ತು ಜೈಲಿಗೆ ಹೋಗಿದ್ದ ಮನು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜಾಮೀನಿನ ಮೇಲೆ ಹೊರಬಂದ ಬಳಿಕ ಮನು ಆಡಿಯೋವೊಂದು ವೈರಲ್ ಆಗಿದೆ;. ಆ ಆಡಿಯೋದಲ್ಲಿ ಅವರು ಕ್ಷಮೆ ಕೇಳಿದ್ದಾರೆ.
ಮನು ಕಿರುಕುಳ, ಅತ್ಯಾ*ಚಾರ ಆರೋಪದಡಿ ಅಂದರ್ ಆಗ್ತಿದ್ದಂತೆ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿತ್ತು. ಶಿವಣ್ಣ, ದರ್ಶನ್, ಧ್ರುವ ಸರ್ಜಾ ಅವರ ಬಗ್ಗೆ ಮಡೆನೂರು ಮನು ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಅದಾಗಿತ್ತು. ಈ ಆಡಿಯೋ ಬಳಿಕ ಅವರ ಅಭಿಮಾನಿಗಳು ಕೆಂಡವಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಮಡೆನೂರು ಮನುರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆಡಿಯೋ ವಿಚಾರವಾಗಿ ಮನು ಕ್ಷಮೆ ಕೇಳಿದ್ದಾರೆ.
ಧ್ರುವಾಗೆ ಆಡಿಯೋ ಮೆಸೇಜ್ ಕಳಿಸಿದ ಮನು!
ಮಡೆನೂರು ಮನು ಧ್ರುವ ಸರ್ಜಾ ಅವರ ಬಳಿ ಕ್ಷಮೆಯಾಚಿಸಿದ್ದಾರೆ. ಶಿವಣ್ಣ ಸಾರ್, ದರ್ಶನ್ ಸಾರ್ ನನಗಿಂತ ಸೀನಿಯರ್ಸ್. ಅವರ ಜೊತೆಗೆ ಮಾತನಾಡಿ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಡೋಂಟ್ ವರಿ. ದಯವಿಟ್ಟು ನಿಮ್ಮ ತಾಯಿ, ಹೆಂಡತಿ, ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದು ನಟ ಧ್ರುವ ಸರ್ಜಾ ಸಲಹೆ ನೀಡಿದ್ದಾರೆ.
ಏನಿದೆ ಆಡಿಯೋದಲ್ಲಿ?
ಅಣ್ಣಾ ನಮಸ್ತೆ.. ಮಡೆನೂರು ಮನು ಮಾತನಾಡುತ್ತಾ ಇದ್ದೀನಿ. ನಾನು ನಿಜವಾಗಲೂ ಉದ್ದೇಶಪೂರ್ವಕವಾಗಿ ನಾನು ಮಾತನಾಡಿಲ್ಲ ಅಣ್ಣಾ. ನಾನು ತಪ್ಪು ಮಾಡಿಲ್ಲ. ನನ್ನಿಂದ ತಪ್ಪು ಮಾಡಿಸಿದ್ದಾರೆ.
ಒಂದು ಒಳ್ಳೆಯ ಸಿನಿಮಾವನ್ನು ಎಲ್ಲರೂ ಸೇರಿಕೊಂಡು ಕೊಂದು ಬಿಟ್ಟಿದ್ದಾರೆ. ಮುಂದೆ ಏನಾಗುತ್ತೋ ನನಗೆ ಗೊತ್ತಿಲ್ಲ. ಸಿನಿಮಾದಿಂದ ಬ್ಯಾನ್ ಮಾಡುವ ಬಗ್ಗೆ ಎಲ್ಲರೂ ಹೇಳುತ್ತಿದ್ದಾರೆ. ನೀವೆಲ್ಲಾ ಮನಸು ಮಾಡಿದ್ರೆ ನಾನು ಮತ್ತೆ ನನ್ನ ಜೀವನ ಕಟ್ಟಿಕೊಳ್ತೀನಿ.
ನಾನು ಕಲೆ ನಂಬಿ ಇಲ್ಲಿಗೆ ಬಂದಿದ್ದೇನೆ. ನನಗೆ ಬೇರೆ ಏನು ಗೊತ್ತಿಲ್ಲ. ಸಂಘ, ಸಹವಾಸ ಮಾಡಿ ಸ್ವಲ್ಪ ಕೆಟ್ಟು ಹೋಗಿದ್ದೇನೆ. ಇನ್ನು ಮುಂದಕ್ಕೆ ಯಾರ ಸಹವಾಸವೂ ನನಗೆ ಬೇಡ. ದಯಮಾಡಿ ಒಂದು ಅವಕಾಶ ಕೊಡಿ. ನೀವು ಅವಕಾಶ ಕೊಟ್ರೆ ಎಲ್ಲೋ ಒಂದು ಕಡೆ ಜೀವನ ಮಾಡುತ್ತೇನೆ. 16 ವರ್ಷಗಳಿಂದ ಕಷ್ಟಪಟ್ಟಿದ್ದೀನಿ. ತುಂಬಾ ಬದಲಾಗುತ್ತೀನಿ ಅಣ್ಣಾ. ದಯಮಾಡಿ ಕ್ಷಮಿಸಿ, ಕ್ಷಮಿಸಿ, ಕ್ಷಮಿಸಿ ಅಣ್ಣಾ.