ಬೆಂಗಳೂರು: ರಾಜ್ಯದ ಜನತೆ ಇದೀಗ ಮತ್ತೊಂದು ದರ ಏರಿಕೆಯ ಭಾರ ಹೊರಲು ಸಿದ್ಧವಾಗಬೇಕಿದೆ. ಬೆಲೆ ಏರಿಕೆ ಜಮಾನದಲ್ಲಿ ಇದೀಗ ಮತ್ತೊಂದು ಹೊಡೆತ ಬೀಳಲಿದೆ. ಹೌದು ಹಾಲು, ಕರೆಂಟು, ಮೆಟ್ರೋ, ಸರ್ಕಾರಿ ಬಸ್ ಟಿಕೆಟದ ದರ ಹೀಗೆ ಎಲ್ಲವೂ ಏರಿಕೆಯಾಗಿದ್ದು, ಈ ಬಗ್ಗೆ ಜನ ಬೀದಿಗಿಳಿದು ಹೋರಾಡುತ್ತಿರುವಾಗಲೇ, ಸದ್ದಿಲ್ಲದೆ ಖಾಸಗಿ ಬಸ್ ಮಾಲೀಕರು ಟಿಕೆಟ್ ದರ ಏರಿಸಲು ನಿರ್ಧರಿಸಿದ್ದಾರೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ಖಾಸಗಿ ಬಸ್ಗಳ ಟಿಕೆಟ್ ದರ ಶೇಕಡಾ 15 ರಿಂದ 20 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಡೀಸೆಲ್ ಬೆಲೆ ಏರಿಕೆಯನ್ನು ಕಾರಣವನ್ನಾಗಿ ನೀಡಿ ಖಾಸಗಿ ಬಸ್ ಮಾಲೀಕರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ದರ ಏರಿಕೆಯನ್ನು ಕೂಡ ಕಾರಣವಾಗಿ ನೀಡಿದ್ದಾರೆ. ಒಂದು ವೇಳೆ ದರ ಹೆಚ್ಚಳವಾದರೆ, ಈಗಾಗಲೇ ಹೆಚ್ಚುತ್ತಿರುವ ಪ್ರಯಾಣ ವೆಚ್ಚ ಮತ್ತಷ್ಟು ಹೊರೆಯಾಗಲಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.
ರಾಜ್ಯ ಸರಕಾರ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಕ್ರಮ ಹಿಂಪಡೆಯದಿದ್ದರೆ ನಾವು ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ ಎಂದು ಮಾಲೀಕರು ಹೇಳಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಟರಾಜ್ ಶರ್ಮಾ ತಿಳಿಸಿದ್ದಾರೆ. ದರ ಶೇಕಡಾ 15 ರಿಂದ 20 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ.