ಬೆಂಗಳೂರು: ತಲೆ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನು ಬರ್ಬರವಾಘಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಡಿವಾಳದ ವೆಂಕಟೇಶ್ವರ ಲೇಔಟ್ ನಲ್ಲಿ ನಡೆದಿದೆ. ಮಾರ್ಟಿನ್ ಸೈಮನ್ ( 29) ಕೊಲೆಯಾದ ವ್ಯಕ್ತಿಯಾಗಿದ್ದು, ಇನ್ಫೆಂಟ್ ರಾಜ್ ಎಂಬಾತನಿಂದ ಕೊಲೆ ಶಂಕೆಯಾಗಿದೆ.
ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ಮಾರ್ಟಿನ್ ಸೈಮನ್ ಹಾಗೂ ಶಂಕಿತ ಆರೋಪಿ ಇನ್ಪೆಂಟ್ ರಾಜ್ ಒಂದೇ ಬಿಲ್ಡಿಂಗ್ನಲ್ಲಿ ಬಾಡಿಗೆಗೆ ವಾಸವಾಗಿದ್ದರು. ಬಿಲ್ಡಿಂಗ್ ಟೆರೆಸ್ ಮೇಲೆ ಇಬ್ಬರೂ ಪಾರ್ಟಿ ಮಾಡುತ್ತಿದ್ದರು. ರಾತ್ರಿ ಹತ್ತು ಗಂಟೆ ವೇಳೆ ಇಬ್ಬರ ನಡುವೆ ಜಗಳ ನಡೆದಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಈ ವೇಳೆ ಅಲ್ಲೇ ಇದ್ದ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.