Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನುಡಿದಂತೆ ನಡೆಯುವ ಸರ್ಕಾರದ ಮತ್ತೊಂದು ನಡೆ: ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಶುರುವಾಗಲಿದೆ: CM ಸಿದ್ದರಾಮಯ್ಯ

    By Author AINMay 5, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.”ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025″ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

    ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.

    Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!

    ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ.2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು.

    ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ.

    ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025

    19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡ್ತಾರೆ. ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.

    ಮೊಬೈಲ್ ಆಪ್

    ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

    ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

    ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.