ಹಾಸನ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಜೀವಹಾನಿಯಾಗಿದ್ದು, ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ವರದಿಯಾಗುತ್ತಿರುವ ಸರಣಿ ಹೃದಯಾಘಾತ ಪ್ರಕರಣಗಳು ನಾಗರಿಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಇದೀಗ ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಂದು ಬಲಿಯಾಗಿದೆ.
ಮನೆಯಲ್ಲಿ ಕಪ್ಪು ಹಲ್ಲಿ ಕಾಣಿಸಿಕೊಂಡ್ರೆ ಏನದರ ಸೂಚನೆ: ನಿಮಗೆ ಗೊತ್ತಿಲ್ಲದ ವಿಚಾರ ಇಲ್ಲಿದೆ!
ಹಾಸನ ತಾಲೂಕು,ಕಟ್ಟಾಯ ಹೋಬಳಿ ಹ್ಯಾರಾನೆ ಗ್ರಾಮದ ಗಿರೀಶ್(41), ಮೃತ ವ್ಯಕ್ತಿಯಾಗಿದ್ದು, ಜೋಳದ ಹೊಲಕ್ಕೆ ಗೊಬ್ಬರ ಹಾಕಿ ಮಧ್ಯಾಹ್ನ ಮನೆಗೆ ಬಂದಿದ್ದ ಗಿರೀಶ್ ಮನೆಯಲ್ಲೆ ಕುಸಿದು ಬಿದ್ದಿದ್ದಾರೆ. ತಕ್ಷಣ ಹಾಸನಕ್ಕೆ ಚಿಕಿತ್ಸೆಗಾಗಿ ಕರೆ ತರುವ ವೇಳೆಗೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ ಗೋವಿಂದ್ ಸಾವನ್ನಪ್ಪಿದ್ದರು. ಇಂದು ಒಂದೇ ದಿನ ಹೃದಯಾಘಾತಕ್ಕೆ ಎರಡನೇ ಬಲಿಯಾಗಿದೆ. ಒಂದು ತಿಂಗಳ ಅವಧಿಯಲ್ಲಿ ಹೃದಯಾಘಾತಕ್ಕೆ 18 ಜನ ಸಾವನ್ನಪ್ಪಿರುವುದು ಆತಂಕಕ್ಕೆ ದಾರಿ ಮಾಡಿಕೊಟ್ಟಿದೆ.
ಹೃದಯಾಘಾತಕ್ಕೆ ಕಾರಣವೇನೆಂಬುದು ಯಕ್ಷಪ್ರಶ್ನೆಯಾಗಿದ್ದು, ಜಿಲ್ಲೆಯ ವೈದ್ಯರು ನಿರಂತರ ಅಧ್ಯಯನದಲ್ಲಿ ತೊಡಗಿದ್ದಾರೆ. ಇದು ವೈದ್ಯಲೋಕಕ್ಕೆ ಸವಾಲಾಗಿದ್ದು, ಚಿಕ್ಕವಯಸ್ಕರೇ ದುರಂತ ಅಂತ್ಯ ಕಾಣುತ್ತಿರುವುದರ ಮೂಲ ಏನೆಂದು ಪತ್ತೆ ಹಚ್ಚಬೇಕಾಗಿದೆ.