ಗದಗ: ಮದುವೆಯಾಗು ಅಂದಿದಕ್ಕೆ ಪ್ರೇಯಸಿಯನ್ನು ಕೊಲೆ ಮಾಡಿ ಹೂತುಹಾಕಿ ಆರು ತಿಂಗಳ ನಂತರ ಪ್ರಕರಣ ಬಯಲಾದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದ ಯುವತಿ ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಮಧುಶ್ರಿ ಅಂಗಡಿ. ಇನ್ನು ಕೊಲೆ ಮಾಡಿದ ಪ್ರಿಯಕರ ಅದೇ ಗ್ರಾಮದ ಸತೀಶ್ ಹಿರೇಮಠ. ಇದೊಂದು ಮಣ್ಣಲ್ಲಿ ಮಣ್ಣಾಗಿ ಹೋಗಿದ್ದ ಕೊಲೆ ಪ್ರಕರಣ. ಪೊಲೀಸರ ಚಾಣಾಕ್ಷತನ ತನಿಖೆಯಿಂದ 6 ತಿಂಗಳ ನಂತರ ಕೊಲೆ ರಹಸ್ಯ ಬಯಲಾಗಿದೆ.
ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಕೊಲೆ: ಹಳೇ ದ್ವೇಷಕ್ಕೆ ಹರಿದ ನೆತ್ತರು!
ಸಿನಿಮಾ ಮಾದರಿಯಲ್ಲಿ ಸಾಕ್ಷಿ ನಾಶ ಮಾಡ್ತಾಯಿದ್ದ ಕಿಲಾಡಿ ಆರೋಪಿ ಸತೀಶ್ ಪೊಲೀಸರ ಅತಿಥಿಯಾಗಿದ್ದಾನೆ. ಸತೀಶ್ ಹಾಗೂ ಮಧುಶ್ರೀ 6 ವರ್ಷಗಳಿಂದ ಪರಸ್ಪರ ಪ್ರೀತಿ ಮಾಡ್ತಾಯಿದ್ರು. ಆದ್ರೆ ಮಧುಶ್ರೀ ಕುಟುಂಬಸ್ಥರಿಗೆ ಈ ಪ್ರೀತಿ ಪ್ರೇಮದ ವಿಷಯ ಗೊತ್ತಾಗಿ ಗದಗನಲ್ಲಿ ಅವ್ರ ಸಂಬಂಧಿಕರ ಮನೆಯಲ್ಲಿ ಮಧುಶ್ರೀಯನ್ನು ಬಿಟ್ಟಿರುತ್ತಾರೆ. ಕೆಲವು ತಿಂಗಳು ಕಾಲ ದೂರ ಇದ್ದ ಈ ಜೋಡಿ ಪುನಃ ಒಂದಾಗಿತ್ತು. ಅದು 2024 ಡಿಸೆಂಬರ್ 16 ರ ರಾತ್ರಿ ಮಧುಶ್ರೀ ಗದಗ ನಗರದ ಅವ್ರ ಸಂಬಂಧಿಕರ ಮನೆಯಿಂದ ಹೊರ ಬಂದಿದ್ಲು. ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿ, 2025 ರ ಜನೆವರಿ 12 ರಂದು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಯುವತಿ ನಾಪತ್ತೆ ಪ್ರಕರಣವನ್ನು ದಾಖಲು ಮಾಡ್ತಾರೆ.
2024 ಡಿಸೆಂಬರ್ 16 ರಂದು ಸತೀಶ್ ಹಿರೇಮಠ ಪ್ರೇಯಸಿ ಮಧುಶ್ರೀಯನ್ನು ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ತೋಟದ ಮನೆಗೆ ಕರೆತಂದಿರುತ್ತಾನೆ. ಆಗ ಮಧುಶ್ರೀ ಮದುವೆಯಾಗು ಅಂತಾ ಹಠ ಹಿಡಿಯುತ್ತಾಳೆ. ಆಗ ಇಬ್ಬರ ನಡುವೆ ಜಗಳವಾಗಿದ್ದು, ಮಧುಶ್ರೀಯ ವೇಲ್ ನಿಂದ ಕುತ್ತಿಗೆಗೆ ಬಿಗಿದು, ಕೊಲೆ ಮಾಡುತ್ತಾನೆ. ನಂತರ ಪಕ್ಕದ ಹಳ್ಳದ ದಂಡೆಯಲ್ಲಿ ಅವಳ ಶವವನ್ನು ಹೊತು ಹಾಕಿ, ಏನೂ ನಡೆದೇಯಿಲ್ಲ ಎನ್ನುವ ಹಾಗೇ, ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡ್ತಾಯಿರುತ್ತಾನೆ.
ಆಗಾಗ ಬಂದು ಎಲುಬು ಗಳನ್ನು ಬೇರೆ ಕಡೆ ಹಾಕಿ, ಸಾಕ್ಷಿ ನಾಶ ಮಾಡಲು ಪ್ರಯತ್ನ ಮಾಡ್ತಾಯಿರುತ್ತಾನೆ. ಆದ್ರೆ, ಅಂದು ಸ್ವಿಚ್ ಆಫ್ ಆದ ಮೊಬೈಲ್ ಗೆ ಕಂಪನಿಯ ಒಂದು ಮೆಸೇಜ್ ಬಂದಿರುತ್ತೇ. ಆರೋಪಿ ಸತೀಶ್ ಹೇಳೋ ಲೊಕೇಶನ್ ಬೇರೆ, ಮೊಬೈಲ್ ಗೆ ಬಂದಿರೋ ಮೆಸೇಜ್ ಲೊಕೇಶನ್ ಬೇರೆಯಾಗಿರುತ್ತೇ. ಹೀಗಾಗಿ ಪೊಲೀಸರು ತೀವ್ರವಾಗಿ ವಿಚಾರಣೆ ಮಾಡಿದಾಗ ಕೊಲೆ ಮಾಡಿರೋದಾಗಿ ಒಪ್ಪಿಕೊಂಡು, ಶವವನ್ನು ಹೊತು ಹಾಕಿದ ಜಾಗವನ್ನು ತೋರಿಸಿದ್ದಾನೆ. ಸದ್ಯ ದೇಹದ ಕೆಲವು ಎಲುಬು ಸಿಕ್ಕಿದ್ದು, ಇನ್ನೂ ಅವಳ ರುಂಡ ಸಿಕ್ಕಿಲ್ಲಾ. ಹೀಗಾಗಿ ಪೊಲೀಸರು ಇನ್ನೂ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.