ತುಮಕೂರು : ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂಬ ಆರೋಪದ ಬಳಿಕ ತಮ್ಮ ಮೇಲೆ ಕೊಲೆಯತ್ನ ನಡೆದಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದ ಪರಿಷತ್ ಸದಸ್ಯರ ಎಲ್ಸಿ ರಾಜೇಂದ್ರ ಇದೀಗ ತುಮಕೂರು ಪೊಲೀಸರಿಗೆ ದೂರು ನೀಡಿದ್ದಾರೆ.
ನಿನ್ನೆ ಡಿಐಜಿ ಭೇಟಿ ಮಾಡಿದ್ದ ಎಂಎಲ್ ಸಿ ರಾಜೇಂದ್ರ ಇಂದು ತುಮಕೂರು ಎಸ್ ಪಿ ಅಶೋಕ್ ವೆಂಕಟ್ ಅವರನ್ನು ಖುದ್ದು ಭೇಟಿಯಾಗಿ ತಮ್ಮ ಮೇಲೆ ಕೊಲೆಯತ್ನ ನಡೆದಿದೆ ಎಂಬ ದೂರು ನೀಡಿದ್ದಾರೆ. ತುಮಕೂರಿನ ಕ್ಯಾತ್ಸಂದದ ರಜತಾದ್ರಿ ನಿವಾಸದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ಕೊಲೆಯತ್ನ ನಡೆದಿದೆ ಎಂದು ದೂರು ಸಲ್ಲಿಸಿದ್ದಾರೆ.
Honey trap Case: ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್..!
ಗುರುವಾರ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಕಾನೂನು ಮತ್ತು ಸುವ್ಯವಸ್ತೆಯ ಹೆಚ್ಚುವರಿ ಮಹಾನಿರ್ದೇಶಕ ಹಿತೇಂದ್ರ ಅವರನ್ನು ಭೇಟಿಯಾಗಿ ನನ್ನ ಮೇಲೆ ಕೊಲೆಯತ್ನ ನಡೆದಿದೆ ಎಂದು ದೂರು ನೀಡಿದ್ದರು.