Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Davanagere Benne Dose: ದೋಸೆ ಪ್ರಿಯರೇ ಗಮನಿಸಿ.. ಡಿಸೆಂಬರ್ 23 ರಿಂದ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಹಬ್ಬ.!

    By AIN AuthorDecember 15, 2023
    Share
    Facebook Twitter LinkedIn Pinterest Email
    Demo

    ದಾವಣಗೆರೆ: ದಾವಣಗೆರೆ ಬೆಣ್ಣೆದೋಸೆ ಇತಿಹಾಸ ಪ್ರಸಿದ್ದವಾಗಿದ್ದು ಇದಕ್ಕೊಂದು ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ಡಿಸೆಂಬರ್ 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೆ ಉತ್ಸವ ಆಯೋಜನೆಗೆ ಸಂಬಂಧಿಸಿದಂತೆ ಸಿದ್ದತೆಯ ಕುರಿತು ಏರ್ಪಡಿಸಲಾದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೋಟೆಲ್ ಮಾಲಿಕರೊಂದಿಗೆ ಚರ್ಚಿಸಲಾಗಿದ್ದು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.

    ದಾವಣಗೆರೆ ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ. ಬೆಣ್ಣೆದೋಸೆ ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಎರಡು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ದೋಸೆ ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಲಾಗಿದ್ದು 10 ಕ್ಕಿಂತ ಹೆಚ್ಚು ಹೋಟೆಲ್ ಮಾಲಿಕರು ಭಾಗವಹಿಸಲಿದ್ದಾರೆ.

    Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ

    ದೋಸೆ ಹಬ್ಬವನ್ನು ಏರ್ಪಡಿಸುವ ಮೂಲಕ ದಾವಣಗೆರೆ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟವನ್ನು ಕಾಪಾಡಿಕೊಂಡು ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸುವುದು ಈ ಹಬ್ಬದ ಉದ್ದೇಶವಾಗಿದೆ. ದೋಸೆ ಹೋಟೆಲ್‍ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು ಇದಕ್ಕಾಗಿ ಆಹಾರ ಸುರಕ್ಷತಾ ಕಾಯಿದೆ ನಿಯಮ ಪಾಲನೆ, ಗುಣಮಟ್ಟ, ಕಲಬೆರಕೆ ರಹಿತ ಆಹಾರದ ಮಾನದಂಡಗಳನ್ನು ಅಳವಡಿಸಿಕೊಳ್ಳುವವರಿಗೆ ಈ ಟ್ಯಾಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ .ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

     

    Demo
    Share. Facebook Twitter LinkedIn Email WhatsApp

    Related Posts

    ಐದು ವರ್ಷ ನಾನೇ ಸಿಎಂ;ಡಿಕೆ ಆಪ್ತರಿಗೆ ಸಿದ್ದು ಮಾಸ್ಟರ್ ಸ್ಟ್ರೋಕ್

    July 2, 2025

    ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ; ಜಿಲ್ಲಾಡಳಿತದಿಂದ ಸಕಲ ಸಿದ್ದತೆ

    July 2, 2025

    ಬಳ್ಳಾರಿ ಸೆಂಟ್ರಲ್‌ ಜೈಲ್‌ನಲ್ಲಿ ಖೈದಿಗಳು ಫುಲ್ ದಿಲ್ದಾರ್..

    July 2, 2025

    ಆಷಾಢ ಮಾಸ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ!

    July 2, 2025

    ಆಘಾತಕಾರಿ ಘಟನೆ: ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ!

    July 2, 2025

    ಅಪಘಾತದಲ್ಲಿ 4 ಗೋವುಗಳ ಸಾವು : ಕೊಯನಾಡಿನಲ್ಲಿ ಘಟನೆ

    July 2, 2025

    ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ!

    July 2, 2025

    ನೌಕರಿ ಕೊಡಿಸುವುದಾಗಿ 200 ರುಪಾಯಿ ವಂಚನೆ: 30 ವರ್ಷಗಳ ಬಳಿಕ ಖಾಕಿ ಬಲೆಗೆ ಬಿದ್ದ ಆರೋಪಿ!

    July 2, 2025

    ಕರ್ತವ್ಯಲೋಪ: ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಸಸ್ಪೆಂಡ್!

    July 2, 2025

    ಮರಕ್ಕೆ ಡಿಕ್ಕಿ ಹೊಡೆದ ಕಾರು: ಗರ್ಭಿಣಿ ದುರ್ಮರಣ!

    July 2, 2025

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.