ಬೆಂಗಳೂರು:- ಇದು ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸ್ಟೋರಿ. ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಜುಲೈ 06 ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಲಿದೆ.
ಗ್ರಾನೈಟ್ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!
ಅಂದು ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.
ನೇರಳೆ ಮಾರ್ಗದಲ್ಲಿ ಜುಲೈ 06 ಭಾನುವಾರ ಬೆಳಿಗ್ಗೆ 7 ರಿಂದ 8ರವರೆಗೆ ಅಂದರೆ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಟು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಹೀಗಾಗಿ ಬೆಳಗ್ಗೆ 7 ರಿಂದ 8ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತವಾಗಲಿದ್ದು, ಬೆಳಿಗೆ 8 ರಿಂದ ಸಾಮಾನ್ಯ ರೈಲು ಸಂಚಾರ ಸೇವೆ ಎಂದಿನಂತೆ ಸಾಮಾನ್ಯವಾಗಿ ಪುನರಾರಂಭಿಸುತ್ತದೆ.
ಇತರೆ ಎಲ್ಲಾ ಮಾರ್ಗಗಳಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ಸಂಚಾರವಿರಲಿದೆ ಎಂದು ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸಿರುವ ಬಿಎಂಆರ್ಸಿಎಲ್, ಪ್ರಯಾಣಿಕರು ತಮ್ಮ ದಿನಚರಿ ಪ್ರವಾಸದ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳುವಂತೆ ವಿನಂತಿಸಿದೆ.