Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ!

    By AIN AuthorJune 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಇಂದು ರಾಜ್ಯದೆಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ ಜೋರಾಗಿದೆ. ಮುಸ್ಲಿಂ ಬಾಂಧವರ ಮತ್ತೊಂದು ಪ್ರಮುಖ ಹಬ್ಬವಾದ ಬಕ್ರೀದ್‌ ಹಬ್ಬ ಅದ್ದೂರಿಯಾಗಿ ನಡೆಯಲಿದೆ. ಹೀಗಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಹಿನ್ನೆಲೆ ಇತ್ತ ಚಾಮರಾಜಪೇಟೆ 1ನೇ ಮುಖ್ಯರಸ್ತೆಯ ಬಿಬಿಎಂಪಿ ಆಟದ ಮೈದಾನ ಹಾಗೂ ಬಿಬಿ ಜಂಕ್ಷನ್​ನಲ್ಲಿ ಪ್ರಾರ್ಥನೆ ನಡೆಯುವುದರಿಂದ ಮೈಸೂರು ರಸ್ತೆಯ ಬಿಜಿಎಸ್​ ಪ್ಲೈಓವರ್ ಬೆಳಿಗ್ಗೆ 8:00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ತಾತ್ಕಾಲಿಕವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

    ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!

    ಈ ಬಗ್ಗೆ ಚಾಮರಾಜಪೇಟೆ ಸಂಚಾರ ಪೊಲೀಸ್​​ ಠಾಣೆ ಟ್ವೀಟ್ ಮಾಡಿದ್ದು, ಪ್ರತಿ ವರ್ಷದಂತೆ ಬೆಂಗಳೂರು ನಗರದ ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಮೈಸೂರು ರಸ್ತೆಯ ಬಿ.ಬಿ ಜಂಕ್ಷನ್ ಹತ್ತಿರದ ಮಸೀದಿ ಮತ್ತು ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಶನಿವಾರ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಸೇರುವುದರಿಂದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

    ಇಂದು ಬೆಳಿಗ್ಗೆ 08 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ನಿಷೇಧ:

    ಮೈಸೂರು ರಸ್ತೆಯ ಟೋಲ್​ ಗೇಟ್ ಜಂಕ್ಷನ್​ನಿಂದ ಬಿಬಿ ಜಂಕ್ಷನ್ ಮೂಲಕ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಟೌನ್‌ಹಾಲ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

    ಟೌನ್​​ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್‌ಗೇಟ್ ಜಂಕ್ಷನ್​ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿಷೇಧ.

    ಪರ್ಯಾಯ ಮಾರ್ಗಗಳು
    ಮೈಸೂರು ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ರಾಣಾ ಸರಹದ್ದಿನ ಕಿಮ್ಕೋ ಜಂಕ್ಷನ್​ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದಾಗಿದೆ.

    ಟೌನ್​​ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಪ್ರೈಓವ‌ರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನಗಳು ವೆಟರ್ನರಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಗೂ‌ಡ್​​ಶೆಡ್ ರಸ್ತೆ ಮೂಲಕ ಮತ್ತು ಲಘು ವಾಹನಗಳು ಸಿರಸಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಜಿಜಿ ನಗರ-ಟ್ಯಾಕ್​ಬಂಡ್​ ರಸ್ತೆ ಬಿನ್ನಿಮಿಲ್​ ಜಂಕ್ಷನ್​ ​ಹುಣಸೇಮರ ಮೂಲಕ ಸಾಗುವುದು.

    ಬಸವನಗುಡಿ ಮತ್ತು ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್​​ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1ನೇ ಮುಖ್ಯರಸ್ತೆ, 6ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್​​, ಬಿನ್ನಿಮಿಲ್​​ ರಸ್ತೆಯ ಮೂಲಕ ಸಾಗುವುದು ಇದಕ್ಕೆ ಸಾರ್ವಜನಿಕರು ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!

    June 7, 2025

    ಡಿವೈಡರ್ ಗೆ ಕಾರು ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.