ಮಂಡ್ಯ : ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಜಮಾವಣೆಗೊಂಡ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿ ಉಳಿವು ಹೋರಾಟ ಸಮಿತಿಯ ಸದಸ್ಯರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು. https://ainkannada.com/is-your-laptop-running-out-of-charge-quickly-if-so-do-this/ ಪ್ರತಿಭಟನೆ ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಮದ್ದೂರು ಪುರಸಭೆಯನ್ನು ರಾಜ್ಯ ಸರ್ಕಾರವು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆದರೆ, ಸೋಮನಹಳ್ಳಿ ಗ್ರಾಮ ಪಂಚಾಯಿತಿಯನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದರು. ಗ್ರಾಮ ಪಂಚಾಯಿತಿಯನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೂ ಮುನ್ನ ಜಿಲ್ಲಾಡಳಿತ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಅದಲ್ಲದೇ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ಸರ್ವ ಸದಸ್ಯರು…
Author: Author AIN
ನವದೆಹಲಿ: “ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಬೆಂಗಳೂರಿನಲ್ಲಿ ಈ ಮಾದರಿ ಅಳವಡಿಸುವ ಬಗ್ಗೆ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿ ಮುನಿಸಿಪಲ್ ಕಾರ್ಪೋರೇಷನ್ ನ (MCD) ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೋಮವಾರ ಭೇಟಿ ನೀಡಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಇದುವರೆಗೂ ಪರಿಶೀಲನೆ ಮಾಡಿರುವ ಕಸ ವಿಲೇವಾರಿ ಕೇಂದ್ರಗಳ ಪೈಕಿ ಇದು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ. ಅತಿ ಕಡಿಮೆ ಪ್ರದೇಶದಲ್ಲಿ ಅತ್ಯುತ್ತಮವಾಗಿ ಕಸ ವಿಲೇವಾರಿ ಕೇಂದ್ರವನ್ನು ನಿರ್ವಹಿಸುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಈ ಹಿಂದೆ ಪ್ರಯೋಗಿಸಿದ್ದ 10ರಿಂದ 15 ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಕೇಂದ್ರಗಳು ವಿಫಲವಾಗಿದ್ದವು. ಆದರೆ ಇಲ್ಲಿ 25 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ” ಎಂದು ವಿವರಿಸಿದರು. https://ainkannada.com/is-your-laptop-running-out-of-charge-quickly-if-so-do-this/ “ಇಂತಹ ಅತ್ಯುತ್ತಮ ಕೇಂದ್ರವನ್ನು ಅಳವಡಿಸಿರುವ ಜಿಂದಾಲ್ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ಇಲ್ಲಿ ಅನಿಲ ಉತ್ಪಾದನೆಯನ್ನೂ ಮಾಡಲಾಗುತ್ತಿದೆ. ನಾನು ಈ ವಿಚಾರವಾಗಿ…
ಬೆಂಗಳೂರು: ಆಗಸ್ಟ್ 15 ರ ಮೇಲೆ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸಬಾರದು ಅಂತಾ ಸೂಚನೆ ಕೊಟ್ಟಿದ್ದೀವಿ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ತಿರುಪತಿಯಲ್ಲಿ ಸೆಪ್ಟೆಂಬರ್ ಅಂತ್ಯದ ವೇಳೆಗೆ 400 ರೂಂಗಳ ವಸತಿಗೃಹ ಪೂರ್ಣಗೊಳ್ಳುತ್ತದೆ. ನಮ್ಮ ಎಲ್ಲಾ ದೇವಸ್ಥಾನದ 3 ಸಾವಿರ ರೂಂಗಳಿವೆ ಅವುಗಳನ್ನು ಆನ್ ಲೈನ್ ಮೂಲಕ ಬುಕ್ಕಿಂಗ್ ಮಾಡಲು ಪರ್ಮೀಷನ್ ಕೊಟ್ಟಿದ್ದೀವಿ ಎಂದು ಹೇಳಿದರು. https://ainkannada.com/is-your-laptop-running-out-of-charge-quickly-if-so-do-this/ ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದರು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು. ಇನ್ನೂ ಬೇರೆ ಬೇರೆ ರಾಜ್ಯದಲ್ಲಿ ಇರೋ ಮುಜರಾಯಿ ಇಲಾಖೆ ವಸತಿ…
ದೊಡ್ಡಬಳ್ಳಾಪುರ: ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರ ದೊಡ್ಡರಾಯಪ್ಪನಹಳ್ಳಿ ವತಿಯಿಂದ ಇಂದು ಭೂಮೇನಹಳ್ಳಿ ಗ್ರಾಮದಲ್ಲಿ ಹಾವುಗಳ ಕುರಿತು ಕಾರ್ಯಾಗಾರ ಏರ್ಪಡಿಸಿ ಗ್ರಾಮಸ್ಥರಿಗೆ ಅರಿವು ಮೂಡಿಸಲಾಯಿತು. ಈ ಗ್ರಾಮವು ಅರಣ್ಯ ಪ್ರದೇಶಕ್ಕೆ ಅಂಟಿಕೊಂಡಿರುವ ಗ್ರಾಮವಾಗಿದ್ದು ಮಾನವಸಂಕುಲ ಮತ್ತು ವನ್ಯಜೀವಿ ಮುಖಾ ಮುಖಿ ಆಗುವ ಸಂಭವ ಇರುವುದರಿಂದ ಈ ಗ್ರಾಮದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.. ಇದೇ ಸಂದರ್ಭದಲ್ಲಿ ಪರಿಸರ ತಜ್ಞ ಚಿನ್ಮಯ್ ಸಿ ಮಾತನಾಡಿ ವಿಷಕಾರಿ ಹಾಗೂ ವಿಷರಹಿತ ಹಾವುಗಳ ನಡುವಿನ ವ್ಯತ್ಯಾಸ, ಕೃಷಿ ಚಟುವಟಿಕೆಗಳ ಸಮಯದಲ್ಲಿ ತೆಗೆದು ಕೊಳ್ಳಬಹುದಾದ ಮುಂಜಾಗ್ರತ ಕ್ರಮಗಳು, ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳು, ಹಾವುಗಳಿಗಿರುವ ಕಾನೂನಾತ್ಮಕ ರಕ್ಷಣೆ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಕಾಣುವ ಹಾವುಗಳ ಬಗ್ಗೆ ತಿಳಿಸಿದರು. ನಂತರ ನವೋದಯ ಟ್ರಸ್ಟಿನ ಕಾರ್ಯಕ್ರಮ ಸಂಯೋಜಕರಾದ ಜನಾರ್ದನ್ ಮಾತನಾಡಿ ಯಾವುದೇ ರೀತಿಯ ಹಾವು ಕಚ್ಚಿದಾಗ ಮಂತ್ರ ಹಾಕಿಸುವುದಾಗಲಿ , ಬಾಯಿಯಿಂದ ರಕ್ತ ಹೀರುವುದಾಗಲಿ , ಅಥವಾ ಇನ್ನಾವುದೇ ರೀತಿಯಾಗಿ ಅವೈಜ್ಞಾನಿಕವಾಗಿ ವರ್ತಿಸದೆ ಸೂಕ್ತ ಸಮಯದಲ್ಲಿ ಹತ್ತಿರದ ಸರ್ಕಾರಿ…
ಮೈಸೂರು: ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜನರ ತಲೆ ಮೇಲೆ ಸಾಲ ಹೆಚ್ಚಾಗಿದೆ, ಕೊಲೆ ಸುಲಿಗೆ ಜಾಸ್ತಿಯಾಗಿದೆ, ಯುವನಿಧಿ ಕೊಡ್ತೀವಿ ಅಂತ ಯುವಕರಿಗೆ ಟೋಪಿ ಹಾಕಿದ್ದು, ಅನ್ನಭಾಗ್ಯ, ಗೃಹಲಕ್ಷ್ಮೀ ಕೊಡ್ತೀವಿ ಅಂತ ಟೋಪಿ ಹಾಕಿದ್ರು, ಇದನ್ನು ಬಿಟ್ಟು ಸಿಎಂ ಏನು ಮಾಡಲಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. https://ainkannada.com/is-your-laptop-running-out-of-charge-quickly-if-so-do-this/ ಮೋದಿ ಸಾಧನೆಯನ್ನು, ಕೊಡುಗೆಗಳನ್ನು ಅಳೆಯುವ ಅರ್ಹತೆ ಸಿಎಂ ಸಿದ್ದರಾಮಯ್ಯಗಿಲ್ಲ ಅಂತ ಪ್ರತಾಪ್ ಸಿಂಹ ಹೇಳಿದ್ದಾರೆ. ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರು-ಮೈಸೂರು ಹೈವೇ ಮಾಡಿದ್ದು ಮೋದಿ, ರಿಂಗ್ ರೋಡ್ ಮಾಡಿದ್ದು ಮೋದಿ, ಮೈಸೂರು ಏರ್ ಪೋರ್ಟ್ಗೆ ವಿಮಾನ ಬರಲು ಕಾರಣ ಮೋದಿ, ಪಾಸ್ ಪೋರ್ಟ್ ಸೇವೆ ಕೇಂದ್ರಕ್ಕೆ ಕಾರಣ ಮೋದಿ, ಹಳೇ ಡಿಸಿ ಆಫೀಸ್ ಮ್ಯೂಸಿಯಂ ಮಾಡಲು ಹಣ…
ತಮಿಳು ನಟ ಧನುಷ್ ಐಶ್ವರ್ಯ ರಜನಿಕಾಂತ್ ಜೊತೆಗಿನ ಡಿವೋರ್ಸ್ ನಂತರ ಪ್ರಸ್ತುತ ಸಿನಿಮಾಗಳತ್ತ ಗಮನ ಹರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಅವರು ಎರಡು ಚಿತ್ರಗಳನ್ನು ನಿರ್ದೇಶಿಸಿ ಬಿಡುಗಡೆ ಮಾಡಿದರು ಮತ್ತು ಹಿಟ್ಗಳನ್ನು ಸಹ ಪಡೆದರು. ಅವುಗಳಲ್ಲಿ, ರಾಯನ್ ಚಿತ್ರವೂ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡಿತು. https://ainkannada.com/is-your-laptop-running-out-of-charge-quickly-if-so-do-this/ ಧನುಷ್ ಅವರ ಕುಬೇರ ಚಿತ್ರವು ಈ ತಿಂಗಳು ಜೂನ್ 20 ರಂದು ಬಿಡುಗಡೆಯಾಗಲಿದೆ. ಮತ್ತೊಂದೆಡೆ, ಅವರ ಮುಂಬರುವ ಚಿತ್ರ ಇಡ್ಲಿಕೊಟ್ಟು ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಆದಾಗ್ಯೂ, ಈ ಚಿತ್ರಗಳು ಪೈಪ್ಲೈನ್ನಲ್ಲಿರುವಾಗ, ಧನುಷ್ ಮತ್ತೊಂದು ಬಾಲಿವುಡ್ ಯೋಜನೆಯನ್ನು ಸಹ ಪೂರ್ಣಗೊಳಿಸುತ್ತಿದ್ದಾರೆ. ಧನುಷ್ ಬಾಲಿವುಡ್ನಲ್ಲಿ ರಾಂಝಾನಾದಂತಹ ಸೂಪರ್ ಹಿಟ್ ನೀಡಿದ ನಿರ್ದೇಶಕ ಆನಂದ್ ಎಲ್ ರೈ ಅವರೊಂದಿಗೆ ಒಂದು ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ‘ತೇರೆ ಇಷ್ಕ್ ಮೇ’ ಎಂಬ ಶೀರ್ಷಿಕೆಯ ಈ ಮುಂಬರುವ ಚಿತ್ರದಲ್ಲಿ, ಧನುಷ್ ವಾಯುಪಡೆಯ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಾಗ್ಯೂ, ಈ ಚಿತ್ರಕ್ಕೆ ಸಂಬಂಧಿಸಿದ ಕೆಲವು ಫೋಟೋಗಳು ಈಗ ಆನ್ಲೈನ್ನಲ್ಲಿ ವೈರಲ್ ಆಗಿವೆ.…
ಮಂಡ್ಯ : ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜೀವನದ ಕೊನೆಯುಸಿರಿರೋ ತನಕ ಕ್ಷೇತ್ರದ ಜನರ ಸೇವೆಯನ್ನು ನಿರಂತರವಾಗಿ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಶಾಸಕ ಕೆ.ಎಂ.ಉದಯ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ.ಎಂ.ಉದಯ್ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೈನಿಕರ ಕುಟುಂಬದವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಖ್ಯಾತ ಗಾಯಕರಿಂದ ರಸ ಮಂಜರಿ ಕಾರ್ಯಕ್ರಮದಲ್ಲಿ ತಮ್ಮ ಹುಟ್ಟು ಆಚರಿಸಿಕೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಜಗತ್ತನ್ನೆ ಕಾಡುತ್ತಿದ್ದ ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಬೇಕೆಂಬ ಉದ್ದೇಶದಿಂದ ನಾನು ಸಮಾಜ ಸೇವೆ ಮಾಡಲು ಬಂದವನು. ರಾಜಕೀಯಕ್ಕೆ ಬರಬೇಕೆಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಆದರೆ, ನಾನು ಮಾಡುತ್ತಿದ್ದ ಸಮಾಜ ಸೇವೆಯನ್ನು ಮೆಚ್ಚಿ ಮೊದಲ ಚುನಾವಣೆಯಲ್ಲೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಿರಿ ಹೀಗಾಗಿ ನಿಮಗೆ ಕೃತಜ್ಞನಾಗಿದ್ದಿನಿ ಎಂದರು. https://ainkannada.com/is-your-laptop-running-out-of-charge-quickly-if-so-do-this/ ಕ್ಷೇತ್ರದ ಜನರು ನನಗೆ…
ತಿರುವನಂತಪುರಂ: ಸಿಂಗಾಪುರದ ಕಂಟೇನರ್ ಹಡಗಿನಲ್ಲಿ ಸ್ಫೋಟ ಸಂಭವಿಸಿದೆ. ಹೊಗೆ ಮತ್ತು ಬೆಂಕಿಯ ದಪ್ಪ ಪದರವು ಸ್ಫೋಟಗೊಂಡಿದೆ. ಮಾಹಿತಿ ನೀಡಿದ ನಂತರ ಭಾರತೀಯ ನೌಕಾಪಡೆಯು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಸೋಮವಾರ ಬೆಳಿಗ್ಗೆ ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಕಂಪನಿಯ ಕಂಟೇನರ್ ಹಡಗಿನ MV ವಾನ್ ಹೈ 503 ನಲ್ಲಿ ಸ್ಫೋಟ ಸಂಭವಿಸಿದೆ. https://ainkannada.com/is-your-laptop-running-out-of-charge-quickly-if-so-do-this/ ಕೊಚ್ಚಿಯಲ್ಲಿರುವ ಸಾಗರ ಕಾರ್ಯಾಚರಣೆ ಕೇಂದ್ರವು ಮುಂಬೈನ ಸಾಗರ ಕಾರ್ಯಾಚರಣೆ ಕೇಂದ್ರದಿಂದ ಮಾಹಿತಿಯನ್ನು ಪಡೆದುಕೊಂಡಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಭಾರತೀಯ ನೌಕಾಪಡೆಯು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕೊಚ್ಚಿಯಲ್ಲಿರುವ ಯುದ್ಧನೌಕೆ INS ಸೂರತ್ ಅನ್ನು ಕಂಟೇನರ್ ಹಡಗಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಏತನ್ಮಧ್ಯೆ, 12.5 ಮೀಟರ್ ಅಗಲ ಮತ್ತು 270 ಮೀಟರ್ ಉದ್ದದ ಈ ಕಂಟೇನರ್ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟಿತು. ಇದು ಜೂನ್ 10 ರಂದು ಮುಂಬೈ ತಲುಪಬೇಕಿತ್ತು. ಆದಾಗ್ಯೂ, ಸೋಮವಾರ ಬೆಳಿಗ್ಗೆ 10.30 ಕ್ಕೆ ಹಡಗು ಡೆಕ್ ಕೆಳಗಿನಿಂದ ಸ್ಫೋಟ ಸಂಭವಿಸಿದೆ. ಈ ಸಂದರ್ಭದಲ್ಲಿ,…
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಕಾರ್ಯಕ್ರಮಕ್ಕೂ ಹಾಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಿಎಂ ಹೇಳಿರುವುದು ಸರಿಯಿದೆ. ಅಲ್ಲಿನ ಕಾರ್ಯಕ್ರಮವನ್ನು ಸರ್ಕಾರದ ಜೊತೆ ಕೂಡಿಸುವುದು ಸರಿಯಲ್ಲ ಎಂದರು. https://ainkannada.com/is-your-laptop-running-out-of-charge-quickly-if-so-do-this/ ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹೈಕಮಾಂಡ್ಗೆ ವರದಿ ನೀಡುತ್ತೇವೆ. ತನಿಖೆ ಆದಷ್ಟು ಬೇಗ ಮುಗಿಯಲಿದೆ. ಇನ್ನೂ ವಿಧಾನಸೌಧದ ಡಿಸಿಪಿ ಬರೆದ ಪತ್ರದ ಬಗ್ಗೆ ಈಗ ನಾನು ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ತನಿಖೆ ನಡೆಯುತ್ತಿದೆ. ತನಿಖಾ ಹಂತದಲ್ಲಿ ಮಾತಾಡುವುದು ಸರಿಯಲ್ಲ. ನಾಳೆಯೊಳಗೆ ಕೋರ್ಟ್ಗೆ ವರದಿ ನೀಡುತ್ತೇವೆ. ಕೋರ್ಟ್ ಯಾವ್ಯಾವ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಅವುಗಳನ್ನು ಪರಿಗಣಿಸಲಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆಯಾಗಿದೆ. ಪ್ರಿಯಕರನೇ ಬರೋಬ್ಬರಿ 17 ಬಾರಿ ಇರಿದು ಹರಿಣಿಯನ್ನು ಹತ್ಯೆ ಮಾಡಿದ್ದಾನೆ. ಬೆಂಗಳೂರಿನ ಪೂರ್ಣ ಪ್ರಜ್ಞಾಲೇಔಟ್ ಹೋಟೆಲ್ ಓಯೋ ರೂಮ್ ನಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಯಶಸ್ ಹಾಗೂ ಇಬ್ಬರು ಮಕ್ಕಳ ತಾಯಿ ಹರಿಣಿ ಇಬ್ಬರೂ ಕೆಂಗೇರಿ ನಿವಾಸಿಗಳು. ಆರೋಪಿ ಯಶಸ್ ನಿನ್ನ ಜೊತೆ ಮಾತಾಡಬೇಕು ಬಾ ಎಂದು ಓಯೋ ರೂಂಗೆ ಕರೆದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. https://www.youtube.com/watch?v=IJrfsR8yA6g ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ನಲ್ಲಿ ಓಯೋ ರೂಮಿನಲ್ಲಿ ಹತ್ಯೆಗೀಡಾದ ಗೃಹಿಣಿ ಹರಿಣಿ ವಯಸ್ಸು 35 ಆದ್ರೂ ನೋಡೋಕೆ ರೂಪವತಿ. ಮನೆ ಕಡೆಯೂ ಸಾಕಷ್ಟು ಸ್ಥಿತಿವಂತರಾಗಿದ್ರು. ಕೋಟಿ ಕೋಟಿ ಆಸ್ತಿ ಇರೋ ಈ ಹರಿಣಿಗೆ ಊರ ಜಾತ್ರೆಯಲ್ಲಿ 25 ವರ್ಷದ ಟೆಕ್ಕಿ ಯಶಸ್ ಪರಿಚಯವಾಗಿದ್ದ. ಇದೇ ವೇಳೆ ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿತ್ತು. https://ainkannada.com/is-your-laptop-running-out-of-charge-quickly-if-so-do-this/ ಜಾತ್ರೆಯಲ್ಲೇ ನಂಬರ್ ಎಕ್ಸ್ಚೇಂಜ್ ಮಾಡಿಕೊಂಡು ಚಾಟಿಂಗ್, ಡೇಟಿಂಗ್ ಶುರು ಮಾಡಿದ್ರು. ಇವರಿಬ್ಬರ ಪ್ರೀತಿ…