Author: Author AIN

ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.2 ಓವರ್​ಗಳಲ್ಲಿ 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್​ಗಳಲ್ಲಿ 194 ರನ್​ ಬಾರಿಸಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದರ ನಡುವೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ ದಂಡದ ಶಿಕ್ಷೆ ನೀಡಲಾಗಿದೆ. ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಇಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಈ ಬಾರಿ ರಿಯಾನ್ ಪರಾಗ್ ಹಾಗೂ ಸಂಜು ಸ್ಯಾಮ್ಸನ್ ಮುನ್ನಡೆಸಿದ್ದಾರೆ. ಈ ವೇಳೆ ಇಬ್ಬರು ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಾರೆ. ಅದರಂತೆ ಒಟ್ಟು 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಇಂಡಿಯನ್ ಪ್ರೀಮಿಯರ್…

Read More

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಇದು ಗೊತ್ತಿದ್ರೂ ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ. ಖರ್ಗೆಯವರೇ ಹೇಳಿದ್ದಾರೆ ಇದು ಔಟ್‌ಡೇಟೆಡ್ ವರದಿ ಅಂತಾ. ಈಗಲಾದರೂ ರಾಜ್ಯದ ಜಾತಿ ಜನಗಣತಿಗೆ ಇತಿಶ್ರಿ ಹಾಡಲಿ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಳಿ ಕಾಂತರಾಜು ವರದಿಯ ಪ್ರತಿಯೇ ಇಲ್ಲ. https://ainkannada.com/do-you-leave-the-dishes-unwashed-after-dinner-a-story-you-must-watch/ ಜಯಪ್ರಕಾಶ್ ಹೆಗ್ಡೆ ಯಾವ ಆಧಾರದಲ್ಲಿ ವರದಿ ಕೊಟ್ರು ಹಾಗಾದ್ರೆ? ಸಿದ್ದರಾಮಯ್ಯ ವರದಿಯಲ್ಲಿ ಸದುದ್ದೇಶವಂತೂ ಇಲ್ಲ. ಈಗಲಾದರೂ ಸಿದ್ದರಾಮಯ್ಯಗೆ ಭಗವಂತ ಬುದ್ಧಿ ಕೊಡಲಿ, ಕೇಂದ್ರದ ಪರ ಸಿದ್ದರಾಮಯ್ಯ ನಿಲ್ಲಲಿ ಎಂದು ತಿಳಿಸಿದರು.

Read More

‌ZEE ಕನ್ನಡ ಹೊಸ ಬಗೆಯ ಕಾರ್ಯಕ್ರಮಗಳ ಮೂಲಕ ಕಿರುತೆರೆ ಲೋಕದಲ್ಲಿ ಹೆಸರು ಮಾಡಿದೆ. ಅದರ ಜೊತೆಗೆ ZEE5 ಒಟಿಟಿಯಲ್ಲಿ ಸದಾಭಿರುಚಿ ಸಿನಿಮಾಗಳನ್ನು ನೀಡುತ್ತಿದೆ. ಇದೇ ಮೊದಲ ಬಾರಿಗೆ ZEE ಕನ್ನಡದಲ್ಲೊಂದು ಹೊಸ ಪ್ರಯೋಗ ಮಾಡಿದ್ದು, ಅದಕ್ಕೆ ಭರಪೂರ ರೆಸ್ಪಾನ್ಸ್‌ ಸಿಗುತ್ತಿದೆ. ಕನ್ನಡದಲ್ಲಿ ಮೊದಲ ಬಾರಿಗೆ ಮಿನಿ ವೆಬ್‌ ಸರಣಿ ZEE5 ಪರಿಚಯಿಸಿದೆ. ಕನ್ನಡದ ಮೊದಲ ಮಿನಿ ವೆಬ್‌ ಸರಣಿ ಅಯ್ಯನ ಮನೆಗೆ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಈ ಸರಣಿ ಭಾಷೆ ಅಡೆತಡೆಗಳನ್ನು ಮೀರಿ ದಾಖಲೆಯ ವೀಕ್ಷಣೆಯನ್ನು ಕಂಡಿದೆ. ಏಪ್ರಿಲ್‌ 25ರಂದು ಅಯ್ಯನ ಮನೆ ವೆಬ್‌ ಸರಣಿ ZEE5ನಲ್ಲಿ ಸ್ಟ್ರೀಮಿಂಗ್‌ ಆರಂಭಿಸಿತ್ತು. ಅಲ್ಲಿಂದ ಇಲ್ಲಿವರೆಗೆ 50 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್‌ ಕಾಣುವ ಮೂಲಕ ಹೊಸ ರೆಕಾರ್ಡ್‌ ಕ್ರಿಯೇಟ್‌ ಮಾಡಿದೆ. ಪ್ರಾದೇಶಿಕ ಭಾಷೆಯ ವೆಬ್‌ ಸರಣಿ ಈ ಮಟ್ಟದ ವೀಕ್ಷಣೆ ಕಂಡಿರುವುದು ಇಡೀ ತಂಡಕ್ಕೂ ಖುಷಿ ಕೊಟ್ಟಿದೆ. ಜಾಜಿ ಪಾತ್ರದಲ್ಲಿ ಅಮೋಘವಾಗಿ ನಟಿಸಿರುವ ನಟಿ ಖುಷಿ ರವಿ, “ಅಯ್ಯನ ಮನೆ ಭಾಗವಾಗಿರುವುದು ನಿಜಕ್ಕೂ ಅವಿಸ್ಮರಣೀಯ…

Read More

ಬೆಂಗಳೂರು: ಮಳೆಯ ಆರ್ಭಟ ಕಡಿಮೆಯಾಯಿತು ಎಂದು ನಿಟ್ಟುಸಿರು ಬಿಡುತ್ತಿದ್ದೀರಾ? ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದಿನಿಂದ ನಾಲ್ಕು ದಿನ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಇನ್ನೂ ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ.…

Read More

ಬೆಂಗಳೂರು: ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ಜಮಾ ಆಗುತ್ತಿತ್ತು. ಒಂದೆರೆಡು ದಿನಗಳಲ್ಲಿ 2000 ಹಣ ಮನೆಯ ಯಜಮಾನಿ ಖಾತೆಗೆ ಜಮಾ ಆಗುತ್ತಿತ್ತು. ಆದರೆ ಕಳೆದ ಮೂರು ತಿಂಗಳ ಹಣ ಸರಿಯಾಗಿ ಬರುತ್ತಿರಲಿಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆ ರೋಪಕ್ಕೆ ಬಳ್ಳಾರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಮೇ ತಿಂಗಳಲ್ಲಿ ಮೂರು ಕಂತಿನ ಹಣ ಬಿಡುಗಡೆಗೆ ಮಾಡೋದಾಗಿ ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ. ಬಾಕಿ ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದೆ. ಹಾಗಾಗಿ ಮೇ ತಿಂಗಳಲ್ಲಿ ಮೊದಲು ಮೂರು ವಾರಗಳಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಗೃಹಲಕ್ಷ್ಮಿ…

Read More

ಬೆಂಗಳೂರು: ಇಂದಿನಿಂದ ವಾಹನ ಖರೀದಿಗೆ ಹೊಸ ತೆರಿಗೆ ನೀತಿ ಅನ್ವಯವಾಗಲಿರುವ ಹಿನ್ನೆಲೆ, ಹತ್ತು ಲಕ್ಷದೊಳಗಿನ ಯೆಲ್ಲೋ ಬೋರ್ಡ್ ವಾಹನಗಳು ಸಹ ಜೀವಿತಾವಧಿ ತೆರಿಗೆ ಕಟ್ಟಬೇಕಿದೆ. ಮೆಟ್ರೋ, ಬಸ್‌ ಪ್ರಯಾಣ ದರ ಏರಿಕೆ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ, ಜನರ ಆಕ್ರೋಶಕ್ಕೆ ಮತ್ತೊಮ್ಮೆ ಗುರಿಯಾಗುವಂತಹ ನಿರ್ಧಾರ ಕೈಗೊಂಡಿದೆ. ಹತ್ತು ಲಕ್ಷದೊಳಗಿನ ಯೆಲ್ಲೋ ಬೋರ್ಡ್ ವಾಹನ ಖರೀದಿ ಮಾಡುವ ಮಾಲೀಕರಿಗೆ ಸರ್ಕಾರ ಶಾಕ್‌ವೊದನ್ನು ಕೊಟ್ಟಿದೆ. ಹೌದು ವಾಹನ ತೆರಿಗೆ ಹೆಚ್ಚಳದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದು, ಇಂದಿನಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ. ಕಟ್ಟಡ ಸಾಮಾಗ್ರಿ ಶಿಫ್ಟಿಂಗ್ ವಾಹನಗಳು ಮತ್ತು ವಾಣಿಜ್ಯ ಬಳಕೆ, ಎಲೆಕ್ಟ್ರಿಕ್ ಕಾರುಗಳಿಗೂ ಈ ದುಬಾರಿ ಟ್ಯಾಕ್ಸ್ ಪಾವತಿ ಮಾಡಬೇಕಾಗಿದೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಈ ಹಿಂದೆ 10 ಲಕ್ಷ ರೂ. ಒಳಗಿನ ಯೆಲ್ಲೋ ಬೋರ್ಡ್ ವಾಹನಗಳಿಗೆ ಪ್ರತಿ ಸೀಟ್‌ಗೆ ಮೂರು ತಿಂಗಳಿಗೊಮ್ಮೆ 100 ರೂ.ನಂತೆ 4 ಸೀಟ್ ವಾಹನಕ್ಕೆ 400 ರೂ.ಪಾವತಿ…

Read More

ಬೆಂಗಳೂರು: ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಿದೆ. ದೇಶದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳ ಬಗ್ಗೆ ನಿರ್ಧಾರ ಮಾಡಲು ಮತ್ತು ಭವಿಷ್ಯದ ಅನೇಕ ನಿರ್ಧಾರಕ್ಕೆ ಇದು ಸಹಾಯಕ ಎಂದು ಹೇಳಿದರು. https://ainkannada.com/do-you-leave-the-dishes-unwashed-after-dinner-a-story-you-must-watch/ ಜಾತಿ ಗಣತಿ, ಜನಗಣತಿ ಕುರಿತ ಕೇಂದ್ರದ ನಿರ್ಧಾರವು ಇಡೀ ದೇಶದ ಜನರಿಗೆ ಖುಷಿ ತಂದಿದೆ. ಇದನ್ನು ಸ್ವಾಗತಿಸುತ್ತೇವೆ. ವಿವಿಧ ಜಾತಿಗಳ ಪರಿಸ್ಥಿತಿ ತಿಳಿದುಕೊಳ್ಳಲು ಇದು ಸಹಾಯಕ. ಈ ನಿರ್ಧಾರವನ್ನು ಬಿಜೆಪಿ ಕರ್ನಾಟಕ ಘಟಕ ಸ್ವಾಗತಿಸುತ್ತದೆ ಎಂದರು. ಇವತ್ತು ಕೇಂದ್ರ ಸರ್ಕಾರವು ಜಾತಿಗಣತಿ ಮಾಡಲು ನಿರ್ಧರಿಸಿದ್ದು ಟಿ.ವಿ.ಗಳಲ್ಲಿ ಬರುತ್ತಿದೆ. ಇದು ಕೇಂದ್ರದ ಸಂವಿಧಾನದತ್ತ ಅಧಿಕಾರ. ಹಿಂದೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೆಲವು ಪಕ್ಷಗಳು ಜಾತಿ ಸಮೀಕ್ಷೆ ನಡೆಸಿದ್ದವು ಎಂದು…

Read More

ಕಿಚ್ಚ ಸುದೀಪ್‌ ಹಾಗೂ ಅನೂಪ್‌ ಭಂಡಾರಿ ಕಾಂಬಿನೇಷನ್‌ ಸಿನಿಮಾ ಬಿಲ್ಲ ರಂಗ ಬಾಷಾ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಚಿತ್ರದ ಯಾವುದೇ ಫೋಟೋ ಅಥವಾ ವಿಡಿಯೋ ವೈರಲ್‌ ಆಗದಂತೆ ಚಿತ್ರತಂಡ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅದಕ್ಕಾಗಿ ಟೈಟ್‌ ಸೆಕ್ಯೂರಿಟಿ ವ್ಯವಸ್ಥೆ ಮಾಡಿದೆ. ಶೂಟಿಂಗ್‌ ಪ್ರೊಸೆಸಿಂಗ್‌ ವಿಡಿಯೋವೊಂದನ್ನು ಚಿತ್ರತಂಡ ಶೇರ್‌ ಮಾಡಿದೆ. ಅದ್ರಲ್ಲಿ ಕಿಚ್ಚ ಕನ್ನಡಿ ಮುಂದೆ ಕುಳಿತು ಮೇಕಪ್‌ ಹಾಕಿಕೊಳ್ಳುವಾಗ ಕುತ್ತಿಗೆಯಲ್ಲಿ ಟ್ಯಾಟು ಅಭಿಮಾನಿಗಳನ್ನು ಕಾಡೋದಿಕ್ಕೆ ಶುರು ಮಾಡಿದೆ. ಬಿಲ್ಲ ರಂಗ ಬಾಷಾ ಚಿತ್ರದ ಶೂಟಿಂಗ್‌ ವಿಡಿಯೋವೊಂದನ್ನು ನಿರ್ದೇಶಕ ಅನೂಪ್ ಭಂಡಾರಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್‌ ಪ್ರಕ್ರಿಯೆಯನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಕಿಚ್ಚ ಸುದೀಪ್ ನಿತ್ಯದ ಎಂಟ್ರಿ ಕೂಡ ಇಂಟ್ರಸ್ಟಿಂಗ್ ಆಗಿದೆ. ತಮ್ಮ K ಅಕ್ಷರದ ಕಾರ್ ನಿಂದ ಇಳಿಯೋ ಕಿಚ್ಚ ಸುದೀಪ್ ಕ್ಯಾರವಾನ್‌ಗೆ ಹೋಗುತ್ತಾರೆ. ರೆಡಿ ಆಗುತ್ತಾರೆ. ಆ ಮೇಲೆ ಶೂಟಿಂಗ್ ಸೆಟ್‌ಗೂ ಕಾಲಿಡುತ್ತಾರೆ ನೋಡಿ. https://x.com/anupsbhandari/status/1917798729710723295 ಶೂಟಿಂಗ್‌ ಅಖಾಡಕ್ಕೆ ಇಳಿಯುವ ಮುನ್ನ ಕಿಚ್ಚ ಕನ್ನಡಿ ಮುಂದೆ ಮೇಕಪ್‌ ಹಾಕಿಸಿಕೊಂಡಿರುವ…

Read More

ಬೆಂಗಳೂರು: ಕೇಂದ್ರ ಸರ್ಕಾರ ಸ್ಪಷ್ಟ, ವೈಜ್ಞಾನಿಕ ಹಾಗೂ ಕಾನೂನುಬದ್ಧ, ಅಧಿಕಾರದ ಭಾಗವಾಗಿ ಜಾತಿ ಗಣತಿಯನ್ನು ಮಾಡಲಿದೆ ಎಂದು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡಲು ಅಧಿಕಾರ ಇಲ್ಲದಿದ್ದರೂ ಸಾಮಾಜಿಕ ಮತ್ತು ಶೈಕ್ಷಣಿಕ ಸರ್ವೇ ಅಡಿಯಲ್ಲಿ ಜಾತಿಗಣತಿ ನಡೆಸಿವೆ. ಆದರೆ, ಕರ್ನಾಟಕದಲ್ಲಿ ಈ ವಿಷಯದಲ್ಲಿ ಗೊಂದಲವಾಗಿತ್ತು. ಇದು ಸರಿಯಾಗಿ ಮಾಡಿಲ್ಲ, ಕಾನೂನುಬದ್ಧವಾಗಿ ಇಲ್ಲ. ಪ್ರತಿ ಮನೆಗೆ ಹೋಗಿಲ್ಲ ಹಾಗೂ ಎಲ್ಲ ಜಾತಿಯ ಗಣತಿ ಸರಿಯಾಗಿ ನಡೆದಿಲ್ಲ ಎಂಬ ಕೂಗು ಕೇಳಿಸಿತ್ತು ಎಂದರು. https://ainkannada.com/do-you-leave-the-dishes-unwashed-after-dinner-a-story-you-must-watch/ ಕಾಂಗ್ರೆಸ್ ಸರ್ಕಾರ ಈ ವಿಷಯದಲ್ಲಿ ಗೊಂದಲ ನಿರ್ಮಾಣ ಮಾಡಿತ್ತು. ಸಮಾಜದಲ್ಲಿ ಗೊಂದಲ, ಜಾತಿಗಳ ನಡುವೆ ಗೊಂದಲಕ್ಕೆ ಕಾರಣವಾಗಿತ್ತು. ಇದಕ್ಕೆಲ್ಲ ಅಂತ್ಯ ಕಾಣಿಸಲು ಮತ್ತು ತೆರೆ ಎಳೆಯಲು ಕೇಂದ್ರ ಸರ್ಕಾರ ಸ್ಪಷ್ಟ, ವೈಜ್ಞಾನಿಕ ಹಾಗೂ ಕಾನೂನುಬದ್ಧ, ಅಧಿಕಾರದ ಭಾಗವಾಗಿ ಜಾತಿ ಗಣತಿಯನ್ನು ಮಾಡಲಿದೆ. ವ್ಯವಸ್ಥಿತವಾಗಿ ಇದು ನಡೆಯಲಿದೆ ಎಂದು ಹೇಳಿದರು. ಸಮಾಜದ ಎಲ್ಲರ ಸ್ಥಿತಿಗತಿ ಗೊತ್ತಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ…

Read More

ಬೆಂಗಳೂರು: ಆರ್ಥಿಕ ಸುರಕ್ಷತೆಯ ವಿಷಯದಲ್ಲೂ ಚಿನ್ನದ ಎತ್ತಿದ ಕೈ ಎನ್ನಬಹುದು. ಒಬ್ಬ ವ್ಯಕ್ತಿಯಿಂದ ಹಿಡಿದು ರಾಷ್ಟ್ರದ ಆರ್ಥಿಕ ಸದೃಢತೆಯಲ್ಲೂ ಚಿನ್ನ ಮಹತ್ವದ ಪಾತ್ರವಹಿಸಿದೆ. ಆರ್ಥಿಕವಾಗಿ ತಲೆದೋರುವ ಕಷ್ಟಕಾಲದ ಆಪದ್ಬಾಂಧವನಂತೆ ಚಿನ್ನ ಕಾರ್ಯ ನಿರ್ವಹಿಸುತ್ತದೆ. ಇನ್ನು, ಚಿನ್ನದ ಬೆಲೆ ಯಾವಾಗಲೂ ಒಂದೇ ತೆರನಾಗಿರುವುದಿಲ್ಲ. ಹಲವಾರು ಜಾಗತಿಕ ವಿದ್ಯಮಾನಗಳು ಹಾಗೂ ಸ್ಥಳೀಯ ಕಾರಣಗಳಿಂದಾಗಿ ನಿತ್ಯ ಅದರ ಬೆಲೆ ಪ್ರಭಾವಿಸಲ್ಪಡುತ್ತಲೇ ಇರುತ್ತದೆ. ಹಾಗಾಗಿ ನಿತ್ಯದ ಬೆಲೆಯ ಅಪ್ಡೇಟ್ ಸಾಕಷ್ಟು ಜನರಿಗೆ ಉಪಯುಕ್ತ ಎನ್ನಬಹುದು. ಇಂದು ಗುರುವಾರ ಭರ್ಜರಿ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​​​ಗೆ ಬರೋಬ್ಬರಿ 200 ರೂ ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,975 ರೂ ಇದ್ದದ್ದು 8,775 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,573 ರೂಗೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಸ್ವರ್ಣ ಬೆಲೆ ಇಳಿಕೆಯಾಗಿದೆ. ಇನ್ನು, ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್​​ಗೆ 2 ರೂನಷ್ಟು ಇಳಿಮುಖವಾಗಿದೆ ಬೆಳ್ಳಿ ಬೆಲೆ. ಬೆಂಗಳೂರು, ಮುಂಬೈ ಮೊದಲಾದ ಕಡೆ ಈಗ…

Read More