Author: Author AIN

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪ್ರಸ್ತುತ ಪರಿಸ್ಥಿತಿ ಹೇಗಿದೆ ಎಂದರೆ, ಯಾವುದೇ ಕ್ಷಣದಲ್ಲಿ ಭಾರತೀಯ ಸೇನೆ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಬಹುದು ಅಥವಾ ಎರಡೂ ದೇಶಗಳ ನಡುವೆ ಯುದ್ಧ ನಡೆಯಬಹುದು. ಪ್ರಧಾನಿ ಮೋದಿ ಈಗಾಗಲೇ ಹಲವಾರು ಕಠಿಣ ಎಚ್ಚರಿಕೆಗಳನ್ನು ನೀಡಿದ್ದು, 26 ಭಾರತೀಯ ನಾಗರಿಕರ ಸಾವಿಗೆ ಕಾರಣರಾದ ಭಯೋತ್ಪಾದಕರ ಮೇಲೆ ನಾವು ಸೇಡು ತೀರಿಸಿಕೊಳ್ಳುತ್ತೇವೆ ಮತ್ತು ಅವರ ಹಿಂದಿರುವವರನ್ನು ಸಹ ಬಿಡುತ್ತೇವೆ ಎಂದು ಹೇಳಿದ್ದಾರೆ. ಭಾರತ ಸರ್ಕಾರವು ಈಗಾಗಲೇ ಪಾಕಿಸ್ತಾನದ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದು, ಸಿಂಧೂ ನದಿ ನೀರಿನ ಹರಿವನ್ನು ನಿಲ್ಲಿಸುವುದು, ಪಾಕಿಸ್ತಾನಿ ನಾಗರಿಕರಿಗೆ ವೀಸಾ ರದ್ದುಗೊಳಿಸುವುದು, ಗಡಿಗಳನ್ನು ಮುಚ್ಚುವುದು ಮತ್ತು ಆಮದುಗಳನ್ನು ನಿಲ್ಲಿಸುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಮತ್ತೊಂದೆಡೆ, ಪಾಕಿಸ್ತಾನವು ಭಾರತದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿದೆ. ಎರಡೂ ದೇಶಗಳು ತಮ್ಮ ಗಡಿಗಳಲ್ಲಿ ಭಾರೀ ಸೈನಿಕರನ್ನು ನಿಯೋಜಿಸುವ ಮೂಲಕ ಮತ್ತು ಮಿಲಿಟರಿ…

Read More

ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ ಪೊಲೀಸರು, ಎಂಟು ಮಂದಿಯ ಹೆಡೆಮುರಿ ಕಟ್ಟಿದ್ದಾರೆ. ಇದರ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ‘5/5/2025 ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ’ ಮಾಡುವುದಾಗಿ ಪೋಸ್ಟ್ ಹರಿಬಿಡಲಾಗಿದೆ. ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ಹಂತಕರು ವಿಕೃತಿ ಮೆರೆದಿದ್ದರು. ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲು. 2017ರ ಜೂನ್ 21 ರಂದು ಅಶ್ರಫ್ ಹತ್ಯೆಯಾಗಿತ್ತು. ಬಂಟ್ವಾಳದ ಬೆಂಜನಪದವು ಎಂಬಲ್ಲಿ ಅಶ್ರಫ್ ಬರ್ಬರವಾಗಿ ಹತ್ಯೆಗೀಡಾಗಿದ್ದ. ಎಸ್‌ಡಿಪಿಐನಲ್ಲಿ ಅಶ್ರಫ್ ಮುಂಚೂಣಿಯಲ್ಲಿದ್ದ. ಆತನ ಹತ್ಯೆ ಬಳಿಕ…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದಾಗ ಸೇನಾ ವಾಹನವೊಂದು ಕಣಿವೆಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಯೋಧರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡರು. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚಿನ ಉದ್ವಿಗ್ನತೆ ಇರುವ ನಡುವೆ ಸೇನೆಯು ದಾಳಿಗೆ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ. ಈ ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ.

Read More

‘ಹಿಟ್ಲರ್ ಕಲ್ಯಾಣ’ ಸೀರಿಯಲ್ ಖ್ಯಾತಿಯ ಶೌರ್ಯ ಶಶಾಂಕ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಸಾಂಪ್ರದಾಯಿಕವಾಗಿ ನಟನ ನಿಶ್ಚಿತಾರ್ಥ ಕಾರ್ಯಕ್ರಮ ಜರುಗಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ದಿಶಾ ಜಾದವ್ ಮತ್ತು ಶೌರ್ಯ ಶಶಾಂಕ್ ಉಂಗುರ ಬದಲಿಸಿಕೊಂಡಿದ್ದಾರೆ. ಇದೀಗ ಈ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಬೆಂಗಳೂರಿನ ಹುಡುಗಿ ದಿಶಾ ಜೊತೆ ಎಂಗೇಜ್ ಆಗಿರುವ ಶೌರ್ಯ ಸದ್ಯದಲ್ಲೇ ಮದುವೆ ದಿನಾಂಕದ ಬಗ್ಗೆ ರಿವೀಲ್ ಮಾಡಲಿದ್ದಾರೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಅಂದಹಾಗೆ, ಪ್ರಸ್ತುತ ‘ಭಾಗ್ಯಲಕ್ಷ್ಮಿ’ ಸೀರಿಯಲ್‌ನಲ್ಲಿ ಶೌರ್ಯ ನಟಿಸುತ್ತಿದ್ದಾರೆ. ಈ ಹಿಂದೆ ‘ಹಿಟ್ಲರ್ ಕಲ್ಯಾಣ’ ಸೀರಿಯಲ್‌ನಲ್ಲಿ ನೆಗೆಟಿವ್ ಪೊಲೀಸ್ ದೇವ್ ಪಾತ್ರದಲ್ಲಿ ನಟಿಸಿದ್ದರು.

Read More

ನೀವು ಎಂದಾದರೂ ಆಕಸ್ಮಿಕವಾಗಿ ನಿಮ್ಮ ಮೊಬೈಲ್‌ನಿಂದ ಎಲ್ಲಾ ಸಂಖ್ಯೆಗಳನ್ನು ಅಳಿಸಿದ್ದರೆ ಅಥವಾ ಹೊಸ ಫೋನ್ ಖರೀದಿಸಿದ ನಂತರ ನಿಮ್ಮ ಹಳೆಯ ಡೇಟಾವನ್ನು ಕಳೆದುಕೊಂಡಿದ್ದರೆ, ಭಯಪಡುವ ಅಗತ್ಯವಿಲ್ಲ. ಇಂದಿನ ಕಾಲದಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರೆದಿದೆ. ನಿಮ್ಮ ಹಳೆಯ ಸಂಪರ್ಕಗಳನ್ನು ನೀವು ಕೆಲವೇ ಹಂತಗಳಲ್ಲಿ ಮರುಪಡೆಯಬಹುದು. ಅದೂ ಯಾವುದೇ ಸೈಬರ್ ಕೆಫೆಗೆ ಹೋಗದೆ. ಆಂಡ್ರಾಯ್ಡ್ ಫೋನ್‌ನಲ್ಲಿ ಸಂಪರ್ಕಗಳನ್ನು ಮರುಪಡೆಯುವುದು ಹೇಗೆ ನೀವು ಆಂಡ್ರಾಯ್ಡ್ ಫೋನ್ ಹೊಂದಿದ್ದು, ನಿಮ್ಮ ಸಂಖ್ಯೆಗಳನ್ನು ಕಳೆದುಕೊಂಡಿದ್ದರೆ, ಮೊದಲು ನಿಮ್ಮ ಸಂಪರ್ಕಗಳು ನಿಮ್ಮ Google ಖಾತೆಯೊಂದಿಗೆ ನವೀಕರಿಸಲಾಗಿದೆಯೇ ಎಂದು ಪರಿಶೀಲಿಸಬೇಕು. ಹಾಗಿದ್ದಲ್ಲಿ, ಈ ಹಂತಗಳನ್ನು ಅನುಸರಿಸುವ ಮೂಲಕ ನೀವು ಅವುಗಳನ್ನು ಮರಳಿ ಪಡೆಯಬಹುದು. ನಿಮ್ಮ ಮೊಬೈಲ್ ಸೆಟ್ಟಿಂಗ್‌ಗಳಿಗೆ ಹೋಗಿ. ಅಲ್ಲಿಂದ, Google ವಿಭಾಗಕ್ಕೆ ಹೋಗಿ ಮತ್ತು ನಿಮ್ಮ Google ಖಾತೆಯನ್ನು ನಿರ್ವಹಿಸಿ ಮೇಲೆ ಟ್ಯಾಪ್ ಮಾಡಿ. ಈಗ ಜನರು ಮತ್ತು ಹಂಚಿಕೆ ಆಯ್ಕೆಯನ್ನು ತೆರೆಯಿರಿ ಮತ್ತು ಸಂಪರ್ಕಗಳಿಗೆ ಹೋಗಿ. ಇದಾದ ನಂತರ, ಯಾವುದೇ ಬ್ರೌಸರ್‌ಗೆ ಹೋಗಿ contacts.google.com ತೆರೆಯಿರಿ ಮತ್ತು ನಿಮ್ಮ…

Read More

ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಎನ್ ಡಿ . ಪಿ ಯು ಕಾಲೇಜ್ ಆವರಣ, ಅಕ್ಕಿ ಆಲೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು.ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ನನಗೆ ತಿಳಿದಿಲ್ಲ. ನಿನ್ನೆ ಸಚಿವ ದಿನೇಶ್ ಗುಂಡೂರಾವ್ ಹಾಗು ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ವಿಜಯನಗರ ಜಿಲ್ಲೆಯಲ್ಲಿ…

Read More

ಕಳೆದ ಐದು ದಶಕಗಳಿಂದಲೂ ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ಸೂಪರ್ ಸ್ಟಾರ್‌ ರಜನಿಕಾಂತ್ ಚಿತ್ರರಂಗಕ್ಕೆ ವಿದಾಯ ಹೇಳ್ತಾರಾ? ಹೀಗೊಂದು ಸುದ್ದಿ ಹರಿದಾಡ್ತಿದೆ. 70ರ ಈ ವಯಸ್ಸಿನಲ್ಲೂ ತಲೈವರ್ ಚಾರ್ಮ್‌ ಚೂರು ಹಾಗೇಯೇ ಇದೆ. ಅವರ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತವೆ. ಹೀಗಿರುವಾಗ ರಜನಿ ಚಿತ್ರಕ್ಕೆ ಗುಡ್ ಬಾಯ್‌ ಹೇಳಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ರಜನಿಕಾಂತ್‌ ಪತ್ನಿ ಲತಾ ಅವರಿಗೆ ಮಾಧ್ಯಮಗಳು ಪಡೆಯಪ್ಪನ ವಿದಾಯದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಅವರು, “ನನಗೆ ಉತ್ತರ ತಿಳಿದಿರಬೇಕೆಂದು ನಾನು ಬಯಸುತ್ತೇನೆ. ನನಗೆ ತಿಳಿದಿದ್ದರೆ, ನಾನು ನಿಮಗೆ ಹೇಳುತ್ತಿದ್ದೆ” ಎಂದಿದ್ದಾರೆ. ಲತಾ ರಜನಿಕಾಂತ್‌ ಅವರಿಗೂ ರಜನಿ ಸಿನಿಮಾ ನಿವೃತ್ತಿ ಬಗ್ಗೆ ಗೊತ್ತಿಲ್ಲವಂತೆ. ಗೊತ್ತಿದ್ದರೆ ಅವರು ಹೇಳುತ್ತಿದ್ದರು ಅನ್ನೋದು ಅವರ ಮಾತಿನ ಅರ್ಥ. https://twitter.com/KaranTVDigital/status/1918330321826922913 ರಜನಿಕಾಂತ್‌ ಸದ್ಯ ಜೈಲರ್‌ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲೋಕೇಶ್‌ ಕನಗರಾಜ್‌ ನಿರ್ದೇಶನದ ಕೂಲಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದಾದ ಬಳಿಕ ತಲೈವ ಯಾವುದೇ ಸಿನಿಮಾ ಒಪ್ಪಿಕೊಂಡಂತಿಲ್ಲ. ಹೀಗಾಗಿ ಚಿತ್ರರಂಗದಿಂದ ಸೂಪರ್‌ ಸ್ಟಾರ್‌…

Read More

ದಕ್ಷಿಣ ಭಾರತ ಚಿತ್ರರಂಗದ ಲೇಡಿ ಸೂಪರ್‌ ಸ್ಟಾರ್‌ ನಯನ್‌ತಾರಾ ಬಹುಬೇಡಿಕೆ ನಟಿ. ಶಾರುಖ್‌ ಖಾನ್‌ ಜವಾನ್‌ ಮೂಲಕ ಬಾಲಿವುಡ್‌ಗೂ ಅಡಿ ಇಟ್ಟಿರುವ ಲೇಡಿ ಸೂಪರ್‌ ಸ್ಟಾರ್‌ ಸಂಭಾವನೆ ವಿಚಾರದಲ್ಲಿ ಸುದ್ದಿಯಾಗಿದ್ದಾರೆ.‌ ದಕ್ಷಿಣ ಭಾರತ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಂಬರ್ 1 ನಟಿ ಎಂಬ ಕೀರ್ತಿ ನಯನ್‌ತಾರಾಗೆ ಸಿಕ್ಕಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ. ಆದರೆ ಇದು ನಿರ್ಮಾಪಕರಿಗೆ ಹೊಡೆತವೇ ಸರಿ. ನಯನ್‌ ತಾರಾ ಮಹಿಳಾ ಪ್ರಧಾನ ಸಿನಿಮಾಗಳ ಮೂಲಕವೇ ಖ್ಯಾತಿ ಗಳಿಸಿದವರು. ವಿಭಿನ್ನ ಪಾತ್ರಗಳ ಪೋಷಣೆ ಮಾಡುತ್ತಾ ಬಂದಿರುವ ಸೂಪರ್‌ ಬ್ಯೂಟಿ ಜವಾನ್‌ ಚಿತ್ರಕ್ಕೆ ಬರೋಬ್ಬರಿ 10 ಕೋಟಿ ಹಣ ಪಡೆದಿದ್ದರಂತೆ. ಇದೀಗ ಅದರ ದುಪ್ಪಟ್ಟು ಸಂಭಾವನೆ ಪಡೆಯಲಿದ್ದಾರೆ ಎಂಬ ಸುದ್ದಿ ಕಾಲಿವುಡ್‌ ಅಂಗಳದಲ್ಲಿ ಹರಿದಾಡ್ತಿದೆ. ಚಿರಂಜೀವಿ ಹೊಸ ಸಿನಿಮಾಗಾಗಿ ಲೇಡಿ ಸೂಪರ್‌ ಸ್ಟಾರ್‌ ಬರೋಬ್ಬರಿ 18 ಕೋಟಿ ರೂಪಾಯಿ ಡಿಮ್ಯಾಂಡ್‌ ಮಾಡಿದ್ದರಂತೆ. ಈ ಚಿತ್ರದಲ್ಲಿ ಅವರ ಕಾಲ್ಶೀಟ್ ಹೆಚ್ಚಿನ ದಿನ ಇದೆಯಂತೆ. ಅಲ್ಲದೆ, ಅವರ ಪಾತ್ರ ಕೂಡ ಹೆಚ್ಚು ಪ್ರಾಮುಖ್ಯತೆ…

Read More

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‌‌ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಜೊತೆಗೆ ಈವರೆಗೂ ಮಾಡಿರದ ಪಾತ್ರ ಕೂಡ ಮಾಡಿದ್ದಾರೆ. ವಿನೋದ್ ಪ್ರಭಾಕರ್ ಅವರ ಈ ಲುಕ್ ಗೆ ಫಿದಾ ಆಗಿರುವ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. “ಮಾದೇವ” ಚಿತ್ರದಲ್ಲಿ ಅಪಾರ ತಾರಾಬಳಗವಿದೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ, ಮುನಿರಾಜು, ಚೈತ್ರಾ ಮುಂತಾದ ಅನುಭವಿ ಕಲಾವಿದರ ತಾರಾಬಳಗ…

Read More

ಸಿದ್ದು ಪೂರ್ಣಚಂದ್ರರವರು ಕಥೆ ಬರೆದು ನಿರ್ದೇಶನ ಮಾಡಿರುವ ಈ ಪಾದ ಪುಣ್ಯ ಪಾದ ಚಿತ್ರವು ಒಬ್ಬ ಆನೆ ಕಾಲುರೋಗಿಯ ಕಥಾ ವಸ್ತುವನ್ನು ಒಳಗೊಂಡಿದೆ. ಮನುಷ್ಯನಿಗೆ  ದೈಹಿಕವಾಗಿ ಯಾವುದೇ ಕಾಯಿಲೆಗಳು ಬಂದಾಗ ಮಾನಸಿಕ ಸ್ಥಿತಿಯ ಅರಿವು ಮತ್ತು ಆ ವ್ಯಕ್ತಿಯ ಸಂಬಂಧಗಳ ಮನಸ್ಥಿತಿ ಹೇಗಿರುತ್ತದೆ ಎಂಬ ಅತೀ ಸೂಕ್ಷ್ಮ ವಿಷಯಗಳನ್ನು ಈ ಚಿತ್ರ ಒಳಗೊಂಡಿದೆ. ಈ ಚಿತ್ರವು ಈಗಾಗಲೇ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲೊಂದಾದ “ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ ಬೆಸ್ಟ್ ಜ್ಯೂರಿ ಅವಾರ್ಡ್ ಪಡೆದುಕೊಂಡಿದೆ. ತಮ್ಮ ಪ್ರತೀ ಚಿತ್ರದಲ್ಲೂ ಒಂದೊಂದು ವಿಭಿನ್ನ ವಿಷಯಗಳನ್ನಿಟ್ಟುಕೊಂಡು ಸಿನಿಮಾ ಮಾಡುತ್ತಾ ಬಂದಿದ್ದಾರೆ ಸಿದ್ದು ಪೂರ್ಣಚಂದ್ರ. ‘ದಾರಿ ಯಾವುದಯ್ಯ ವೈಕುಂಠಕ್ಕೆ’ ಮತ್ತು ‘ತಾರಿಣಿ’ ಚಿತ್ರಗಳ ನಂತರ ಅವರು, ಇದೀಗ ‘ಈ ಪಾದ ಪುಣ್ಯಪಾದ’ ಎಂಬ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಬಾರಿ ಅವರು ಈ ಚಿತ್ರದಲ್ಲಿ ಆನೆ ಕಾಲು ರೋಗಿಯ ಕಥೆ ಹೇಳುವುದಕ್ಕೆ ಹೊರಟಿದ್ದಾರೆ. “ಪೂರ್ಣಚಂದ್ರ…

Read More