Author: Author AIN

ಬೆಂಗಳೂರು: ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಎಲ್ಲರೂ ನಿಮ್ಮ ಜೊತೆಗಿದ್ದೀನಿ ಎಂದು ಹೇಳುವಾಗ ಸಿದ್ದರಾಮಯ್ಯ ನಿಮ್ಮ ಜೊತೆಗಿಲ್ಲ ಎನ್ನುತ್ತಾರೆ. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಶಾಂತಿಪ್ರಿಯರೆಂದು ಹೇಳಿಕೊಳ್ಳುವ ಇವರು ಪೊಲೀಸ್‌ ಅಧಿಕಾರಿಗೆ ಹೊಡೆಯಲು ಹೋಗಿದ್ದಾರೆ. ಇದು ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅವಮಾನ. ಪೊಲೀಸರನ್ನು ಯಾರು ಬೇಕಾದರೂ ಹೊಡೆಯಬಹುದು ಎಂದು ಮುಖ್ಯಮಂತ್ರಿಯೇ ಸಂದೇಶ ನೀಡಿದ್ದಾರೆ. ಮತ್ತೊಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ನೀನ್ಯಾಕೆ ಬಂದೆ ಎಂದು ಪ್ರಶ್ನಿಸುತ್ತಾರೆ. ಇಂತಹ ದುರಂಹಕಾರ ಬಹಳ ದಿನ ನಡೆಯುವುದಿಲ್ಲ. ಕುರ್ಚಿ ಬಿಡಬೇಕಿರುವುದರಿಂದಲೇ ಎಲ್ಲರಿಗೂ ಹೀಗೆ ಬೈಯುತ್ತಿದ್ದಾರೆ ಎಂದರು. ಕಾಂಗ್ರೆಸ್‌ ನಾಯಕರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಬೆಂಬಲ…

Read More

ಬೆಂಗಳೂರು: ಪ್ರಧಾನಿ ಮೋದಿಯವರು ನನಗೆ ಕರೆ ಮಾಡಿಲ್ಲ. ಮಾಡುವ ಅಗತ್ಯವೂ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಪಹಲ್ಗಾಮ್ ಘಟನೆಗೆ ಬಗ್ಗೆ ಮೊದಲ ಬಾರಿಗೆ ನಗರದಲ್ಲಿ ಮಾತನಾಡಿದ ಅವರು, ಇನ್ನು ರಾಜಕೀಯ ಪಕ್ಷದ ನಾಯಕನಾಗಿ, ಎನ್‌ಡಿಎ ಮುಖಂಡನಾಗಿ ಹೇಳುತ್ತಿದ್ದೇನೆ. ಕೇಂದ್ರದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಕೇಂದ್ರದ ಜೊತೆಗೆ ನಾವೂ ನಿಲ್ಲುತ್ತೇವೆ. ಪ್ರಧಾನಿ ಮೋದಿಯವರು ನನಗೆ ಕರೆ ಮಾಡಿಲ್ಲ. ಮಾಡುವ ಅಗತ್ಯವೂ ಇಲ್ಲ. ಅನಿವಾರ್ಯ ಎನಿಸಿದರೆ ನಾನೇ ಪತ್ರ ಬರೆಯುತ್ತೇನೆ. ಈ ಹಿಂದೆ ಸಾಕಷ್ಟು ಸಮಯದಲ್ಲಿ ಪತ್ರ ಬರೆದಿದ್ದೇನೆ. ಮುಂದೆಯೂ ಬರೆಯುತ್ತೇನೆ. ನನಗೆ ಅನಿಸಿದ್ದನ್ನ ನೇರವಾಗಿ ಹೇಳುತ್ತೇನೆ ಎಂದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ತಡೆ ಹಿಡಿದಿರುವ ವಿಚಾರ ಮತ್ತು ಯುದ್ಧ ಆಗಬೇಕು ಎಂಬ ಒತ್ತಡಗಳ ವಿಚಾರವಾಗಿ ಪ್ರತಿಕ್ರಿಯಿಸಿದರು. ಯುದ್ದ ಮಾಡಬೇಕು ಅನ್ನುವ ಸನ್ನಿವೇಶದ ಬಗ್ಗೆ ನಮ್ಮ ದೇಶದ ಪ್ರಧಾನಿಗಳು ತೀರ್ಮಾನ ಮಾಡ್ತಾರೆ. ಇಡೀ ರಾಷ್ಟ್ರದ ನಾಯಕತ್ವ ಅಲ್ಲ. ವಿಶ್ವದಲ್ಲಿ ಮೋದಿ ಅವರಿಗೆ ಗೌರವ ಇದೆ. ವಿಶ್ವದ ಅನೇಕ ನಾಯಕರು…

Read More

ಜೈಪುರ: ಐಪಿಎಲ್‌ನಲ್ಲಿ ಅತಿ ವೇಗದ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಇವತ್ತು ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇವನ ಆಕ್ರಮಣಾಕಾರಿ ಬ್ಯಾಟಿಂಗ್, ಬೌಂಡರಿ, ಸಿಕ್ಸರ್‌ ಶೈಲಿಗೆ ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದೀಗ ವೈಭವ್‌ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ ಬಂಪರ್‌ ಬಹುಮಾನ ನೀಡಿ ಘೋಷಿಸಿದೆ. ಶತಕ ಬಾರಿಸಿದ ವೈಭವ್‌ ಸೂರ್ಯವಂಶಿಗೆ ಸಿಎಂ ನಿತೀಶ್‌ ಕುಮಾರ್‌  ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇದೇ ವೇಳೆ ಬಿಹಾರ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ವೈಭವ್‌ ಸೂರ್ಯವಂಶಿಗೆ ಅಭಿನಂದನೆ ತಿಳಿಸಿದರು. ಕಿರಿಯ ವಯಸ್ಸಿನಲ್ಲೇ ಅವರ ಪ್ರತಿಭೆ ಮುಂದೆ ಭಾರತೀಯ ಕ್ರಿಕೆಟ್‌ಗೆ ಹೊಸ ಭರವಸೆಯಾಗಿದೆ. ಇಂದು ಇಡೀ ದೇಶವೇ ಅವನ ಬಗ್ಗೆ ಹೆಮ್ಮೆ ಪಡುತ್ತಿದೆ. 2024ರಲ್ಲಿ ನಾನು ವೈಭವ್‌ ಮತ್ತು ಅವರ ತಂದೆಯನ್ನ ಭೇಟಿಯಾಗಿದ್ದೆ, ಆಗಲೇ ನಾನು ಅವರ ಭವಿಷ್ಯ ಉಜ್ವಲವಾಗಿರಲಿದೆ ಎಂದು ಹಾರೈಸಿದ್ದೆ. ಹಾಗೆಯೇ ಇಂದು ಯಶಸ್ಸು ಕಾಣುತ್ತಿದ್ದಾರೆ. ಐಪಿಎಲ್‌ನಲ್ಲಿ ಅವರ…

Read More

ಕ್ರಿಕೆಟ್‌ಗೂ ಸಿನಿಮಾರಂಗಕ್ಕೂ ಒಂದು ನಂಟಿದೆ. ಆರ್‌ಸಿಬಿ ಸ್ಟಾರ್‌ ಫ್ಲೇಯರ್‌ ವಿರಾಟ್‌ ಕೊಹ್ಲಿ ಕೈ ಹಿಡಿದಿರುವುದು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಅವರನ್ನು. ಹಾಗೇಯೇ ಕನ್ನಡದ ಹುಡ್ಗ ಕೆಎಲ್‌ ರಾಹುಲ್‌ ಕೂಡ ವರಿಸಿರುವುದು ನಟ ಸುನಿಲ್‌ ಶೆಟ್ಟಿ ಪುತ್ರ ಆಥಿಯಾ ಶೆಟ್ಟಿ ಅವರನ್ನು. ಇದೀಗ ಮತ್ತೊಮ್ಮೆ ಆರ್‌ಸಿಬಿ ಫ್ಲೇಯರ್‌ ಹೆಸರು ಕನ್ನಡ ಖ್ಯಾತ ನಟಿ ಜೊತೆ ಕೇಳಿಬಂದಿದೆ. ನಿನ್ನ ಸನಿಹಕೆ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಲಗಾಲಿಟ್ಟ ಧನ್ಯಾ ರಾಮ್‌ ಕುಮಾರ್‌ ಪ್ರೀತಿಯಲ್ಲಿ ಬಿದ್ರಾ? ಅದು ಲೋಕಲ್‌ ಬಾಯ್‌ ದೇವದತ್‌ ಪಡಿಕಲ್‌ ಅವರಿಗೆ ಎಂಬ ಪ್ರಶ್ನೆ ಹುಟ್ಟುಹಾಕಿದೆ. ಧನ್ಯಾ ಅವರಿಗೂ ಕ್ರಿಕೆಟ್‌ ಅಂದ್ರೆ ಇಷ್ಟ. ಐಪಿಎಲ್‌ ನೋಡುವ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಪಂದ್ಯ ನೋಡಲು ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದಾರೆ. ಈ ವೇಳೆ ಧನ್ಯ ದೇವದತ್‌ ಪಡಿಕಲ್‌ ಜರ್ಸಿ ತೊಟ್ಟು ಗೆಳೆಯರ ಜೊತೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಧನ್ಯತಾ ಪಡಿಕ್ಕಲ್‌ ಜೆರ್ಸಿ ತೊಟ್ಟಿರುವುದನ್ನು ನೋಡಿ…

Read More

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಇಡೀ ದೇಶವೇ ಖಂಡನೆ ವ್ಯಕ್ತಪಡಿಸುತ್ತಿದೆ. ಒಂದಲ್ಲಾ ಎರಡಲ್ಲ ಬರೋಬ್ಬರಿ 26 ಅಮಾಯಕರು ದಾಳಿಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಅದರಲ್ಲೂ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ಸೇನೆ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಇದರ ನಡುವೆ ದಾಳಿಯ ನಂತರ  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಕಣಿವೆಯು ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ. ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದ್ದರೂ, ಈ ಪ್ರದೇಶವು ಮತ್ತೊಮ್ಮೆ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಿಗರನ್ನು ಸ್ವಾಗತಿಸಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಮುಂಚೆ ಬೆಂಗಳೂರಿನಿಂದ ಶ್ರೀನಗರಕ್ಕೆ ವಿಮಾನದಲ್ಲಿ ತುರ್ತಾಗಿ ತೆರಳಬೇಕಂದರೆ ಒಬ್ಬರಿಗೆ 30 ರಿಂದ 40 ಸಾವಿರ ರೂ. ತಗಲುತಿತ್ತು. ಆದರೆ, ಉಗ್ರರರ ದಾಳಿ ನಂತರ ಈ ದರ 8ರಿಂದ 9 ಸಾವಿರ ರೂ.ಗೆ ಇಳಿಕೆಯಾಗಿದೆ. ಇದಕ್ಕೆ ಕಾರಣ ಉಗ್ರರ ದಾಳಿ ಬೆನ್ನಲ್ಲೇ ಕಾಶ್ಮೀರಕ್ಕೆ ತೆರಳುವವರ ಸಂಖ್ಯೆ ಕಡಿಮೆಯಾಗಿರುವುದು. ಕಾಶ್ಮೀರದಲ್ಲಿ ಬೆಟ್ಟ, ಗುಡ್ಡ, ಕಣಿವೆ, ಹಿಮ ಇರುವ ಕಾರಣ ಬೇಸಿಗೆಯಲ್ಲಿ ಸಮಯ…

Read More

ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ಅಂಥಾ ಗುಂಡ(ನಾಯಿ) ಮತ್ತು ಹುಡುಗನೊಬ್ಬನ ನಡುವಿನ  ಸಂಬಂಧ ಹಾಗೂ ನಿಷ್ಕಲ್ಮಶ ಪ್ರೇಮದ ಕಥೆಯನ್ನು ಹೇಳುವ ಚಿತ್ರ ‘ನಾನು ಮತ್ತು ಗುಂಡ-,2’  ಪೊಯೆಮ್ ಪಿಕ್ಚರ್ಸ್ ಅಡಿಯಲ್ಲಿ  ರಘುಹಾಸನ್ ಕಥೆ ಚಿತ್ರಕಥೆ ಬರೆದು ನಿರ್ಮಿಸಿ, ನಿರ್ದೇಶನ ಮಾಡಿರುವ ಈ ಚಿತ್ರದ ಟೈಟಲ್ ಸಾಂಗ್ ಲಾಂಚ್  ಕಾರ್ಯಕ್ರಮ ಈಚೆಗೆ ನಡೆಯಿತು. ಜೋಗಿ ಪ್ರೇಮ್ ಅವರು ಈ ಮೆಲೋಡಿ ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಾಡಿನ ಸ್ವರ ಸಂಯೋಜಕ ಆರ್.ಪಿ.ಪಟ್ನಾಯ್ ಕೂಡ ಹಾಜರಿದ್ದರು. ಪ್ರಜಾಕಿರಣ ಸೇವಾ ಕಿರಣ ಟ್ರಸ್ಟ್ ನ ನೂರಾರು ಮಕ್ಕಳು ಅತಿಥಿಗಳನ್ನು ಗುಲಾಬಿ ಹೂ ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು. ಈ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ  ನಾನು ಮತ್ತು ಗುಂಡ ಚಿತ್ರದ ಮುಂದುವರೆದ ಭಾಗವಾದ “ನಾನು ಮತ್ತು ಗುಂಡ -2” ತೆರೆಗೆ ಬರಲು ಸಿದ್ದವಾಗಿದ್ದು  ಇತ್ತೀಚೆಗಷ್ಟೇ ಈ ಚಿತ್ರದ ಟೀಸರನ್ನು ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ರಿಲೀಸ್ ಮಾಡಿದ್ದರು. ಈ…

Read More

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ನಾಗಾ ಸಾಧು ಸೋಗಿನಲ್ಲಿ ಕಾರು ಚಾಲಕನೊಬ್ಬನಿಗೆ ವಂಚನೆ ಮಾಡಿರುವ ಘಟನೆ ಬೆಂಗಳೂರು ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಗ್ರಿಲಾ ಹೋಟೆಲ್ ಬಳಿ ನಡೆದಿದೆ. ವೈಯಾಲಿಕಾವಲ್ ನಿವಾಸಿ ವೆಂಕಟಕೃಷ್ಣಯ್ಯ ಎಂಬುವವರಿಗೆ ವಂಚನೆ ಮಾಡಲಾಗಿದ್ದು, ಕೈಯಲ್ಲಿದ್ದ 10 ಗ್ರಾಂ ಚಿನ್ನದ ಉಂಗುರ ತೆಗೆದುಕೊಂಡು ಪರಾರಿಯಾಗಿದ್ದಾನೆ. ಏ.19ರಂದು ಖಾಸಗಿ ಹೋಟೆಲ್ ಬಳಿ ಮಾಲೀಕರನ್ನ ಡ್ರಾಪ್ ಮಾಡಿ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿಕೊಂಡು ನಿಂತಿದ್ದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಈ ವೇಳೆ ಅಲ್ಲಿಗೆ ಬಂದ ನಕಲಿ ನಾಗಸಾಧು ಚಾಲಕನನ್ನು ಕಂಡು 5 ನಿಮಿಷ ವಿಶ್ರಾಂತಿ ಪಡೆದುಕೊಳ್ಳಬೇಕು ಅಂತ ಹೇಳಿದ್ದಾನೆ. ನಂತ್ರ ತನ್ನ ಅಸಲಿ ವರಸೆ ತೆಗೆದಿದ್ದಾನೆ. ಚಾಲಕನಿಗೆ 5 ರುದ್ರಾಕ್ಷಿ  ಕೊಟ್ಟು ಒಂದು ವಾಪಸ್ಸು ಕೂಡುವಂತೆ ಹೇಳಿದ್ದ. ವಾಪಸ್‌ ಕೊಟ್ಟ ರುದ್ರಾಕ್ಷಿಯನ್ನು ಪೇಪರ್‌ನಲ್ಲಿ ಮಡಚಿ ಓಪನ್ ಮಾಡಿದ್ದ. ಈ ವೇಳೆ ರುದ್ರಾಕ್ಷಿ ಹೂ ಆಗಿ ಬದಲಾಗಿತ್ತು. ನೋಡು ಇದು ಶುಭ ಸೂಚಕ ನಿನಗೆ ಒಳ್ಳೆಯದಾಗುತ್ತೆ ಲಕ್ಷ್ಮಿ ಕೃಪಾಕಟಾಕ್ಷವಾಗುತ್ತೆ ಅಂತ ರೈಲುಬಿಟ್ಟಿದ್ದಾನೆ. ನಂತ್ರ ನಿನ್ನ ಕೈಯಲ್ಲಿರುವ ಚಿನ್ನದ ಉಂಗುರ ಕೊಡು…

Read More

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.…

Read More

ಅಕ್ಷಯ ತೃತೀಯಕ್ಕೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಈ ದಿನ ದಾನ ಧರ್ಮವನ್ನು ಮಾಡುವುದರೊಂದಿಗೆ ಕೆಲವು ವಸ್ತುಗಳನ್ನು ಖರೀದಿಸುವುದು ಬಹಳ ಶುಭ ಎಂದು ಹೇಳಲಾಗುತ್ತದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿದಂದು ಅಕ್ಷಯ ತೃತೀಯವನ್ನು ಆಚರಿಸಲಾಗುವುದು. ಈ ವರ್ಷ ಏಪ್ರಿಲ್ 30ರ ಬುಧವಾರ, ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುವುದು. ಈ ತಿಥಿಯ ಆರಂಭವು ಏಪ್ರಿಲ್ 29ರ ಸಂಜೆ 5.29 ಕ್ಕೆ ಆಗುವುದು. ಆದರೆ ಉದಯ ತಿಥಿಯ ಅನುಸಾರ ಅಕ್ಷಯ ತೃತೀಯವನ್ನು ಏಪ್ರಿಲ್ 30 ರಂದು ಆಚರಿಸಲಾಗುವುದು. ಅಕ್ಷಯ ತೃತೀಯದಂದು ಚಿನ್ನ ಖರೀದಿಸುವುದೇಕೆ? ಹಿಂದೂ ಧರ್ಮದಲ್ಲಿ ಚಿನ್ನವನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಈ ನಂಬಿಕೆಯ ಹಿಂದೆ ಒಂದು ಪೌರಾಣಿಕ ಕಥೆಯಿದೆ, ಅದರ ಪ್ರಕಾರ, ದೇವತೆಗಳು ಮತ್ತು ರಾಕ್ಷಸರು ಒಟ್ಟಾಗಿ ಸಮುದ್ರ ಮಂಥನ ಮಾಡಿದಾಗ, ಲಕ್ಷ್ಮಿ ದೇವಿಯೊಂದಿಗೆ ಅನೇಕ ಬೆಲೆಬಾಳುವ ವಸ್ತುಗಳು ಹೊರಹೊಮ್ಮಿದವು. ಅವುಗಳಲ್ಲಿ ಚಿನ್ನವೂ ಒಂದು. ವಿಷ್ಣು ಈ ಚಿನ್ನವನ್ನು ಧರಿಸಿದ್ದನು. ಈ ಕಾರಣಕ್ಕಾಗಿ, ಇದನ್ನು ಲಕ್ಷ್ಮಿ ದೇವಿಯ…

Read More

ಬೆಂಗಳೂರು: ಭಾರತೀಯ ಯೋಧರಲ್ಲಿ ಸ್ಥೈರ್ಯ ತುಂಬಲು ಶ್ರೀರಾಮಸೇನೆಯಿಂದ ಪರಶುರಾಮ ಜಯಂತಿ ಮಾಡಲಾಗುವುದು ಎಂದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮಡಿದರಿಗೆ ಸಂತಾಪ ಸೂಚಿಸಲು ಮತ್ತು ಈ ಘಟನೆಗೆ ಸಂಬಂಧಿಸಿದಂತೆ ಉಗ್ರರಿಗೆ, ಅವರ ಪೋಷಕರಿಗೆ ತಕ್ಕ ಉತ್ತರ ನೀಡಲು ಹಾಗೂ ನಮ್ಮ ದೇಶದ ಯೋಧರಲ್ಲಿ ಧೈರ್ಯ ಮತ್ತು ಸ್ಥೈರ್ಯ ತುಂಬಲು ಪರಶುರಾಮ್ ಜಯಂತಿ ಆಚರಿಸಲಾಗುತ್ತಿದೆ, ಸಮಾಜಕ್ಕೂ ಧೈರ್ಯ ತುಂಬಲು ಹೋಮ ಯಜ್ಞಗಳನ್ನು ನೆರವೇರಿಸಲಾಗುತ್ತಿದೆ ಎಂದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಇನ್ನೂ ಹಿಂದೂ ಧರ್ಮದ ಬಲವರ್ಧನೆ ಮತ್ತು ಭಾರತದಲ್ಲಿದ್ದುಕೊಂಡು ಪಾಕಿಸ್ತಾನದ ಪರ ಘೋಷಣೆ ಕೂಗುವವರು ನಿರ್ನಾಮವಾಗಬೇಕು ಎಂಬ ಉದ್ದೇಶವೂ ಪರಶುರಾಮ್ ಜಯಂತಿ ಆಚರಣೆಯ ಭಾಗವಾಗಿದೆ ಎಂದು ಮುತಾಲಿಕ್ ಹೇಳಿದರು.

Read More