Author: Author AIN

ಕನ್ನಡ ಚಿತ್ರರಂಗದಲ್ಲಿ ಹಿರಿಯ ನಿರ್ದೇಶಕ ಮುರಳಿ ಮೋಹನ್‌ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅವರು ವಾರಕ್ಕೆ 3 ದಿನಗಳ ಕಾಲ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. 2020 ರಲ್ಲೇ ಕಿಡ್ನಿ ಟ್ರ್ಯಾನ್ಸ್‌ಪ್ಲಾಂಟ್‌ಗೆ ಮುರಳಿ ಮೋಹನ್‌ ಒಳಗಾಗಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. 2018ರಿಂದ ಮುರಳಿ ಮೋಹನ್‌ ಅವರು ಗಂಭೀರ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದಾರೆ. ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಸುಮಾರು ಇಪ್ಪತ್ತೈದು ಲಕ್ಷ ರೂಪಾಯಿಗಳು ಖರ್ಚಾಗಲಿದ್ದು, ಹೀಗಾಗಿ ಸಹಾಯಕ್ಕಾಗಿ ಅವರು ಅಂಗಲಾಚಿದ್ದಾರೆ. ಈಗಾಗಲೇ ಅವರು ಹೃದಯ ಶಸ್ತ್ರ ಚಿಕಿತ್ಸೆ ಹಾಗೂ ಇತರೆ ಚಿಕಿತ್ಸೆಗಳಿಂದಾಗಿ ಆರ್ಥಿಕ ಸಂಕಷ್ಟದಲ್ಲಿದ್ದು, ಈ ನಿಟ್ಟಿನಲ್ಲಿ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.. ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಅವರ ಗರಡಿಯಲ್ಲಿ ಪಳಗಿದ ಮುರಳಿ ಮೋಹನ್‌. ರಿಯಲ್‌ ಸ್ಟಾರ್‌ ಉಪೇಂದ್ರ ಅವರಿಗೆ ಆತ್ಮೀಯರು. ಕನ್ನಡ ಚಿತ್ರರಂಗದಲ್ಲಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿರುವವರು ಮುರಳಿ ಮೋಹನ್, ಹ್ಯಾಟ್ರಿಕ್…

Read More

ಅಂಕಾರಾ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಟರ್ಕಿ ಯುದ್ಧ ಉಪಕರಣಗಳನ್ನು ಕಳುಹಿಸುವ ಮೂಲಕ ಇಸ್ಲಾಮಾಬಾದ್‌ಗೆ ತನ್ನ ಬೆಂಬಲವನ್ನು ತೋರಿಸಿದೆ ಎಂಬ ಸುದ್ದಿ ಹರಡಿತ್ತು. ಇದರ ನಡುವೆ ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ ಇಳಿಯಿತು. ನಂತರ ಅದು ತನ್ನ ಮಾರ್ಗದಲ್ಲಿ ಮುಂದುವರಿಯಿತು. ಅಧಿಕೃತ ಸಂಸ್ಥೆಗಳು ಬಿಟ್ಟು ಬೇರೆ ಯಾರಿಂದಲಾದರೂ ಊಹಾತ್ಮಕ ಹೇಳಿಕೆಗಳು, ಸುದ್ದಿಗಳು ಬಂದರೆ ಅವುಗಳನ್ನು ಪರಿಗಣಿಸಬಾರದು ಎಂದು ಟರ್ಕಿ ರಕ್ಷಣಾ ಸಚಿವಾಲಯ ತಿಳಿಸಿದೆ. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸುತ್ತಿದೆ ಎಂದು ಹಲವಾರು ಸುದ್ದಿವಾಹಿನಿಗಳು ವರದಿ ಮಾಡಿದ್ದವು. ಬಳಿಕ ಟರ್ಕಿ ಸರಕು ವಿಮಾನದ ಚಿತ್ರವನ್ನು ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಅಂಕಾರಾ ಖಂಡಿಸಿತ್ತು. ಈ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು, ಅನೇಕರು ಗಾಯಗೊಂಡಿದ್ದರು.

Read More

ಬೆಂಗಳೂರು: ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಪಕ್ಷ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ.‌ ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ? ಎಂದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಹೆಚ್ಚಿನಂಶ ಯಾರು ಅಧಿಕಾರದಲ್ಲಿರುತ್ತಾರೆ, ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶವಿರುತ್ತದೆ. ನಮಗೆಲ್ಲರಿಗೂ ಕೂಡ ಜವಾಬ್ಧಾರಿ ಇರಬೇಕಾಗುತ್ತದೆ. ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷರು, ನಮ್ಮ ಪಕ್ಷದ ಪ್ರತಿನಿಧಿಗಳು ಕೂಡ ಘಟನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

Read More

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್‌ ಕುಮಾರ್‌ ನಿನ್ನೆ ಪದ್ಮ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಕಲಾ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆ ಗುರುತಿಸಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ವಿತರಿಸಿದರು.  ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ಪಡೆದು ಫ್ಯಾಮಿಲಿ ಜೊತೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಅಮರಾವತಿ ಸಿನಿಮಾ ಮೂಲಕ ತಮಿಳು ಸಿನಿಮಾ ರಂಗಕ್ಕೆ ಕಾಲಿಟ್ಟ ಅಜಿತ್ ಕುಮಾರ್ ಅವರು ಸಿನಿ ಕ್ಷೇತ್ರದಲ್ಲೇ ಅತ್ಯುನ್ನತ ಸ್ಥಾನದಲ್ಲಿ ತಮ್ಮನ್ನು ಇಂದು ಗುರುತಿಸಿಕೊಂಡಿದ್ದಾರೆ. ಕಲಾ ಕ್ಷೇತ್ರದಲ್ಲಿ ಅವರ ಮಹಾನ್ ಸಾಧನೆಗಳಿಗಾಗಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಜಿತ್‌ ತಮಿಳು ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರಿಗೆ ಮಾಸ್‌ ಅಭಿಮಾನಿ ಬಳಗವಿದೆ. ಸಿನಿಮಾ ಹೊರತಾಗಿ ದೇಶ ಸುತ್ತುವುದು. ಕಾರ್‌ ರೇಸಿಂಗ್‌ ಕ್ರೇಜ್‌ ಅಜಿತ್‌ ಅವರಿಗಿದೆ.

Read More

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಎರಡೂ ದೇಶಗಳು ತಮ್ಮ ಗಡಿಗಳಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸುತ್ತಿರುವುದರಿಂದ ಯುದ್ಧದ ಭಯ ಪ್ರಪಂಚದಾದ್ಯಂತ ಹರಡಿದೆ. ಈ ಸಂದರ್ಭದಲ್ಲಿ, ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿ ಪಾಕಿಸ್ತಾನದ ಉಪಪ್ರಧಾನಿ ಇಶಾಕ್ ದಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ಮಾತುಕತೆಗಳು ನಡೆದವು. ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಲ್ಯಾಮಿ ಅವರೊಂದಿಗೆ ನಡೆಸಿದ ಫೋನ್ ಸಂಭಾಷಣೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. “ಇಂದು ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರೊಂದಿಗೆ ಮಾತನಾಡಿದೆ. ಪಹಲ್ಗಾಮ್‌ನಲ್ಲಿ ನಡೆದ ಗಡಿಯಾಚೆಗಿನ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಿದೆ. ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ಮಹತ್ವವನ್ನು ಒತ್ತಿಹೇಳಿದೆ” ಎಂದು ಜೈಶಂಕರ್ ಸಂದರ್ಶನವೊಂದರಲ್ಲಿ ಹೇಳಿದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಏಪ್ರಿಲ್…

Read More

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಇಡೀ ದೇಶವೇ ಖಂಡನೆ ವ್ಯಕ್ತಪಡಿಸುತ್ತಿದೆ. ಒಂದಲ್ಲಾ ಎರಡಲ್ಲ ಬರೋಬ್ಬರಿ 26 ಅಮಾಯಕರು ದಾಳಿಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಅದರಲ್ಲೂ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ಸೇನೆ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಇದರ ನಡುವೆ ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಭರತ್ ಭೂಷಣ್ ಮನೆಯಲ್ಲಿ ಸದ್ಯ ನೀರವ ಮೌನ ಆವರಿಸಿದೆ. ಇದೇ ಹೊತ್ತಿನಲ್ಲಿ ದಾಳಿಯ ತನಿಖೆ ಹೊಣೆ ಹೊತ್ತಿರುವ ಎನ್​ಐಎ ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದಿದ್ದು, ಭರತ್ ಪತ್ನಿ ಬಳಿ ಸಾಕಷ್ಟು ಮಾಹಿತಿ ಸಂಗ್ರಹಿಸಿದೆ. ದಾಳಿ ಸಂದರ್ಭದ ಬಗ್ಗೆ ಹೇಳಿಕೆ ಪಡೆದಿದೆ. ಶಿವಮೊಗ್ಗದ ಮಂಜುನಾಥ್ ಮನೆಗೂ ತೆರಳಲಿರುವ ಎನ್​ಐಎ ತಂಡ, ಮಂಜುನಾಥ್ ಪತ್ನಿ ಪಲ್ಲವಿ ಅವರಿಂದಲೂ ಮಾಹಿತಿ ಕಲೆ ಹಾಕಲಿದೆ. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ನಾಲ್ವರು ಅಧಿಕಾರಿಗಳ ತಂಡ ಭರತ್ ಭೂಷಣ್ ಪತ್ನಿ ಡಾ.ಸುಜಾತಾರನ್ನು ವಿಚಾರಣೆ ನಡೆಸಿದೆ. ಈ ವೇಳೆ ಘಟನೆ ಬಗ್ಗೆ ಕೆಲ ಮಾಹಿತಿ ಕಲೆ ಹಾಕಿದ ತಂಡ, ಶಂಕಿತ ಉಗ್ರರ ರೇಖಾಚಿತ್ರಗಳನ್ನು…

Read More

ರಾಜವರ್ಧನ್ ಉದ್ಯಮದಲ್ಲಿ ದೊಡ್ಡ ಆಶಯದೊಂದಿಗೆ ಸತತ ಪರಿಶ್ರಮ ಪಡ್ತಿರೋ 200% ಹೀರೋ ಮೆಟಿರಿಯಲ್. ಒಂದಷ್ಟು ಏಳು ಬೀಳುಗಳ ಆದ್ಮೇಲೆ ಇದೀಗ ಪಕ್ಕಾ ಈ ಸಲ ಗೆಲುವು ನಮ್ದೇ.. ಅನ್ನೋ ನಂಬಿಕೆ ಹುಟ್ಟಿಸಿರೋ ಕಥೆ ಮತ್ತು ತಂಡ ರಾಜವರ್ಧನ್ ಪಾಲಿಗೆ ಸಿಕ್ಕಿದೆ. ಅದ್ರಂತೆ ಬಹುಮುಖ ಪ್ರತಿಭೆ ಚಕ್ರವರ್ತಿ ಚಂದ್ರಚೂಡ್ ಔಟ್ ಅಂಡ್ ಔಟ್ ನಮ್ಮದೇ ಸೂಗಡಿನ ಮಾಸ್ ಎಂಟರ್ಟೈನ್ಮೆಂಟ್ ಆಗೋ ಕಥೆಯೊಂದನ್ನ ರಾಜವರ್ಧನ್ ಗಾಗಿಯೇ ಹೊತ್ತು ತಂದಿದ್ದಾರೆ. ಹಲವು ತಿಂಗಳು ಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರು ದೊಡ್ಡ ಪ್ರೊಡಕ್ಷನ್ ಹೌಸ್ ಜೊತೆಗೆ ಮೇ ತಿಂಗಳಲ್ಲಿ ಚಿತ್ರದ ಸಂಪೂರ್ಣ ವಿವರಗಳನ್ನ ಕೊಡಲಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದ್ರೆ ಉದ್ಯಮದ ದಿಗ್ಗಜರಿಬ್ಬರು ಈ ಚಿತ್ರವನ್ನ ಲಾಂಚ್ ಮಾಡಲಿದ್ದಾರೆ ಅನ್ನೋ ಮಾತು ಕೇಳಿ ಬರ್ತಿದೆ.

Read More

ಬೆಂಗಳೂರು: ಭಾರತದಲ್ಲಿ ಚಿನ್ನದ ಮೇಲಿನ ವ್ಯಾಮೋಹ ಎಂದಿಗೂ ಬದಲಾಗಲ್ಲ. ಇಲ್ಲಿ ಜನ ಕೇವಲ ಆಭರಣವಾಗಿ ನೋಡದೇ ಅದನ್ನು ಉಳಿತಾಯ, ಹೂಡಿಕೆಯಾಗಿ ನೋಡುತ್ತಾರೆ. ಹೀಗಾಗಿ ಚಿನ್ನ ದಿನೇ ದಿನೇ ತನ್ನ ಮೌಲ್ಯ ಹೆಚ್ಚಿಸಿಕೊಂಡು ಗಗನಕ್ಕೇರುತ್ತಿದೆ. ಬಹಳ ಹಿಂದೆ ಭಾರತೀಯರಿಗೆ ಈ ಚಿನ್ನ, ಬೆಳ್ಳಿ ವಸ್ತುಗಳನ್ನು ಹೆಚ್ಚು ಆಭರಣವಾಗಿ ಮಾತ್ರ ಹೆಚ್ಚು ಬಳಸುತ್ತಿದ್ದರು. ಆದರೆ ಈಗ ಚಿನ್ನ ಕೇವಲ ಅಲಂಕಾರಿಕ ವಸ್ತುವಾಗಿ ಉಳಿದಿಲ್ಲ. ಬದಲಿಗೆ ಬಂಗಾರವನ್ನು ಈಗ ಬಾಂಡ್‌ ರೂಪದಲ್ಲಿ, ಷೇರು ರೂಪದಲ್ಲಿ ಹೂಡಿಕೆ-ಉಳಿತಾಯವಾಗಿ ಇಡುತ್ತಿದ್ದಾರೆ. ಇದೇ ಕಾರಣಕ್ಕೆ ಗ್ರಾಹಕರು ಚಿನ್ನ-ಬೆಳ್ಳಿ ದರ ಎಷ್ಟೇ ಏರಿದ್ದರೂ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಇವುಗಳನ್ನು ಖರೀದಿ ಮಾಡುತ್ತಾರೆ. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ನಿನ್ನೆ 62 ರೂ ಕಡಿಮೆಯಾಗಿದ್ದ ಅದರ ಬೆಲೆ ಇವತ್ತು 40 ರೂನಷ್ಟು ಹೆಚ್ಚಳ ಆಗಿದೆ. 22 ಕ್ಯಾರಟ್​​ನ ಆಭರಣ ಚಿನ್ನದ ಬೆಲೆ 8,940 ರೂ ಇದ್ದದ್ದು 8,980 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,800 ರೂ ಸಮೀಪಕ್ಕೆ ದೌಡಾಯಿಸಿದೆ. ವಿದೇಶಗಳಲ್ಲಿ ಕೆಲವೆಡೆ ಅಲ್ಪಸ್ವಲ್ಪ ಬೆಲೆಯಲ್ಲಿ ಏರುಪೇರಾಗಿದೆ.…

Read More

ಏಪ್ರಿಲ್ 28 ರಂದು ನಡೆದ ಐಪಿಎಲ್ 2025 ರ 47ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 209 ರನ್‌ಗಳ ಬೃಹತ್ ಸ್ಕೋರ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ಕೇವಲ 2 ವಿಕೆಟ್ ಕಳೆದುಕೊಂಡು 15.5 ಓವರ್​ಗಳಲ್ಲಿ ಗೆಲುವಿನ ನಗೆ ಬೀರಿತು. ರಾ ಜಸ್ಥಾನ್ ಪರ ಸಿಡಿಲಬ್ಬರದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದು ಮಾತ್ರವಲ್ಲದೆ ಐಪಿಎಲ್ ಇತಿಹಾಸದಲ್ಲಿ ಎರಡನೇ ವೇಗದ ಶತಕ ಸಿಡಿಸಿದ ಹಾಗೂ ಐಪಿಎಲ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಗೆಲುವಿನ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ, ‘‘ಇದು ಅದ್ಭುತವೆನಿಸುತ್ತದೆ. ಐಪಿಎಲ್‌ನ ಮೂರು ಇನ್ನಿಂಗ್ಸ್‌ಗಳಲ್ಲಿ ಇದು ನನ್ನ ಮೊದಲ ಶತಕ. ಕಳೆದ ಮೂರು-ನಾಲ್ಕು ತಿಂಗಳುಗಳಿಂದ ನಾನು ಇದಕ್ಕಾಗಿ ಶ್ರಮಿಸುತ್ತಿದ್ದೆ ಮತ್ತು ಅದರ ಫಲಿತಾಂಶಗಳು…

Read More

ಬೆಂಗಳೂರು: ದೇಶದ ಬ್ಯಾಂಕಿಂಗ್ ನಿಯಂತ್ರಕ ಸಂಸ್ಥೆಯಾದ ಭಾರತೀಯ ರಿಸರ್ವ್ ಬ್ಯಾಂಕ್, 100 ಮತ್ತು 200 ರೂ. ನೋಟುಗಳಿಗೆ ಸಂಬಂಧಿಸಿದಂತೆ ಪ್ರಮುಖ ಆದೇಶವನ್ನು ಹೊರಡಿಸಿದೆ. ಎರಡು ನೋಟುಗಳ ಕುರಿತು ಆರ್‌ಬಿಐ ನೀಡಿರುವ ಸೂಚನೆಗಳನ್ನು ಸಾಧ್ಯವಾದಷ್ಟು ಬೇಗ ಜಾರಿಗೆ ತರುವಂತೆ ಬ್ಯಾಂಕುಗಳಿಗೆ ತಿಳಿಸಲಾಗಿದೆ. ಆರ್‌ಬಿಐ ಈ ಕುರಿತು ಎಲ್ಲಾ ಬ್ಯಾಂಕುಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ. 100 ಮತ್ತು 200 ರೂಪಾಯಿ ನೋಟುಗಳ ಕುರಿತು ಆರ್‌ಬಿಐ ಯಾವ ಸುತ್ತೋಲೆಯನ್ನು ಹೊರಡಿಸಿದೆ ಎಂಬುದನ್ನು ತಿಳಿದುಕೊಳ್ಳೋಣ. ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆಗಳು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಬ್ಯಾಂಕುಗಳಿಗೆ ಎಟಿಎಂಗಳು ರೂ. 100 ಮತ್ತು ರೂ. 200 ನೋಟುಗಳು. ಸಾರ್ವಜನಿಕರಿಗೆ ಈ ನೋಟುಗಳ ಲಭ್ಯತೆಯನ್ನು ಹೆಚ್ಚಿಸಲು ಹಾಗೆ ಮಾಡುವುದು ಅಗತ್ಯವಾಗಿದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಬ್ಯಾಂಕುಗಳು ಮತ್ತು ವೈಟ್ ಲೇಬಲ್ ಎಟಿಎಂ ನಿರ್ವಾಹಕರು (ಡಬ್ಲ್ಯುಎಲ್‌ಎಒಗಳು) ಈ ಆದೇಶಗಳನ್ನು ಹಂತ ಹಂತವಾಗಿ ಜಾರಿಗೊಳಿಸಬೇಕಾಗುತ್ತದೆ. ಬ್ಯಾಂಕೇತರ ಸಂಸ್ಥೆಗಳು ನಿರ್ವಹಿಸುವ ಎಟಿಎಂಗಳನ್ನು ‘ವೈಟ್ ಲೇಬಲ್ ಎಟಿಎಂಗಳು’ (ಡಬ್ಲ್ಯೂಎಲ್ಎ) ಎಂದು ಕರೆಯಲಾಗುತ್ತದೆ. ಈಗ ಎಲ್ಲಾ ಬ್ಯಾಂಕುಗಳು…

Read More