ಹಾಗಲಕಾಯಿ ಕಹಿಯಾದರೂ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ. ಇದನ್ನು ನಿಯಮಿತವಾಗಿ ಸೇವಿಸುವ ಮೂಲಕ, ಮಧುಮೇಹ ಮಾತ್ರವಲ್ಲದೆ, ವ್ಯಕ್ತಿಯು ಅನೇಕ ರೋಗಗಳಿಂದ ದೂರವಿರುತ್ತಾನೆ. ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದರೂ, ಹಾಗಲಕಾಯಿಯೊಂದಿಗೆ ಕೆಲವು ಆಹಾರಗಳನ್ನು ತಿನ್ನಲೇಬಾರದು ಎಂದು ನಿಮಗೆ ತಿಳಿದಿದ್ಯಾ? https://ainkannada.com/this-hair-pack-turns-white-hair-black-from-the-roots-knee-length-hair-guaranteed/ ಹಾಗಲಕಾಯಿ ಸೇವನೆಯೂ ಮಧುಮೇಹ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ. ಆದರೆ ಹಾಗಲಕಾಯಿ ಸೇವಿಸಿದ ನಂತರ ಕೆಲವೊಂದು ಪದಾರ್ಥಗಳನ್ನು ಸೇವಿಸುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಮೊಸರು: ಆಹಾರದ ಜೊತೆಗೆ ಮೊಸರನ್ನು ತಿನ್ನುವ ಅಭ್ಯಾಸ ಅನೇಕರಿಗೆ ಇರುತ್ತದೆ. ಆದರೆ ಕೆಲ ತರಕಾರಿಗಳೊಂದಿಗೆ ಮೊಸರು ಸೇವಿಸಿದರೆ ಹಲವು ರೋಗಗಳಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಾರೆ. ಮೂಲಂಗಿ: ಮೂಲಂಗಿ ಅಥವಾ ಮೂಲಂಗಿಯಿಂದ ಮಾಡಿದ ಯಾವುದನ್ನೂ ತಿನ್ನಬೇಡಿ. ಹೀಗೆ ಮಾಡುವುದರಿಂದ ದೇಹಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಮೂಲಂಗಿ ಮತ್ತು ಹಾಗಲಕಾಯಿ ಕಹಿ ಪರಿಣಾಮವು ವಿಭಿನ್ನವಾಗಿರುತ್ತದೆ. ಇದರಿಂದ ಗಂಟಲಿನ ಸಮಸ್ಯೆ, ಅಸಿಡಿಟಿ ಮತ್ತು ಕಫದಂತಹ ಸಮಸ್ಯೆಗಳು ನಿಮಗೆ ಬರಬಹುದು. ಹಾಗಾಗಿ ಹಾಗಲಕಾಯಿ ತಿಂದ ನಂತರ…
Author: Author AIN
ಉಳಿತಾಯದ ವಿಚಾರ ಬಂದಾಗ ಮೊದಲು ನೆನಪಾಗೋದೆ ಅಂಚೆ ಕಚೇರಿ. ಏಕೆಂದರೆ ಅಂಚೆ ಕಚೇರಿಯಲ್ಲಿ ಉಳಿತಾಯ ಮಾಡಿದ ಹಣ ಸುರಕ್ಷಿತವಾಗಿರುತ್ತದೆ ಎಂಬ ನಂಬಿಕೆ. ಇದೇ ಕಾರಣಕ್ಕೆ ಇಂದಿಗೂ ಭಾರತದ ಗ್ರಾಮೀಣ ಭಾಗದ ಜನರು ಹೂಡಿಕೆ ಹಾಗೂ ಉಳಿತಾಯಕ್ಕೆ ಅಂಚೆ ಕಚೇರಿಯನ್ನೇ ನೆಚ್ಚಿಕೊಂಡಿದ್ದಾರೆ. ಅಂಚೆ ಕಚೇರಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದ ಹಣ ಸುರಕ್ಷಿತವಾಗಿರುವ ಜೊತೆಗೆ ಉತ್ತಮ ರಿಟರ್ನ್ ಕೂಡ ಸಿಗುತ್ತದೆ. ಹಾಗೆಯೇ ಅಂಚೆ ಕಚೇರಿ ಉಳಿತಾಯ ಖಾತೆಯಲ್ಲಿ ಹೂಡಿಕೆ ಮಾಡಲು ಹೆಚ್ಚುವರಿ ಶುಲ್ಕ ಅಥವಾ ಕನಿಷ್ಠ ಬ್ಯಾಲೆನ್ಸ್ ಅಗತ್ಯವಿಲ್ಲ. 60 ವರ್ಷ ದಾಟಿದ ನಂತರವೂ ಆದಾಯಕ್ಕೆ ಯೋಜನೆ ರೂಪಿಸುವುದು ಬಹಳ ಮುಖ್ಯ. ನಿವೃತ್ತಿಯ ನಂತರ ಮಾಸಿಕ ಆದಾಯ ಪಡೆಯುವುದು ಸುಲಭವಲ್ಲದ ಕಾರಣ.. ಅವರೆಲ್ಲರಿಗೂ ಅನುಕೂಲವಾಗುವಂತೆ ಈ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯ ಹೆಸರು ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS). ಐದು ವರ್ಷಗಳ ಮುಕ್ತಾಯದೊಂದಿಗೆ SCSS ನಿವೃತ್ತಿಯ ಸಮಯದಲ್ಲಿ ಸ್ಥಿರ ಆದಾಯವನ್ನು ಒದಗಿಸಬಹುದು. ಇದು ನಿಮ್ಮ ನಿವೃತ್ತಿ ಯೋಜನೆಗೆ ಪರಿಹಾರವನ್ನು ಒದಗಿಸುವ…
ಬೆಂಗಳೂರು: ದಾಳಿ ನಂತರ ಪ್ರೆಸ್ಮೀಟ್ ಮಾಡಿಲ್ಲ ಪ್ರಧಾನಿ ಬಿಹಾರದಲ್ಲಿ ಪ್ರಚಾರ ಮಾಡಿದ್ರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮೊನ್ನೆ ಮೆರವಣಿಗೆ ಮಾಡಿದ್ರು. ನಿಮ್ಮದೇ ಆಡಳಿತ ಇದ್ದಾಗ ಹಿಂದೂಗಳು ಸುರಕ್ಷಿತವಾಗಿಲ್ಲ ಅಂತಾರೆ. ಪಹಲ್ಗಾಮ್ ಘಟನೆ ಆದ ಬಳಿಕ ಪ್ರಧಾನಿಗಳು ಕಾಶ್ಮೀರಕ್ಕೆ ಹೋಗಿ ಪ್ರೆಸ್ ಮೀಟ್ ಮಾಡಲಿಲ್ಲ. ಬದಲಾಗಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದರು. https://ainkannada.com/do-you-eat-mangoes-at-night-so-see-this-news-miss-modde/ ಈ ನಡುವೆ ಮಾಧ್ಯಮಗಳಲ್ಲಿ ಯುದ್ಧ ಶುರುವಾಗತ್ತೆ, ಫೈಟರ್ ಜೆಟ್ ರೆಡಿ ಇದೆ ಅಂತ ಸುದ್ದಿ ಆಗುತ್ತಿದೆ. ಪಾಕಿಸ್ತಾನಕ್ಕೆ ನೀರು ಹೋಗುತ್ತಿಲ್ಲ ಎಂದು ಯಾವುದೋ ಕೆರೆ ನೀರು ತೋರಿಸುತ್ತಿದ್ದಾರೆ. ಈಗ ಟೆರಿರಿಸ್ಟ್ ಮನೆ ಧ್ವಂಸ ಮಾಡ್ತಿದ್ದಾರೆ ಅಂತ ಸುದ್ದಿ ಆಗ್ತಿದೆ. ಟೆರರಿಸ್ಟ್ಗಳ ಮನೆಗಳ ಬಗ್ಗೆ ಮೊದಲು ಇದ್ದದ್ದು ಗೊತ್ತಿರಲಿಲ್ಲವೇ? ಎಂದು ಪ್ರಶ್ನಿಸಿದರು.
ತಿರುಪತಿ ಜಿಲ್ಲೆಯಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾಗ ಐದು ಜನರು ಸಾವನ್ನಪ್ಪಿದರು. ಕಾರು ನಿಯಂತ್ರಣ ತಪ್ಪಿ ಕಂಟೇನರ್ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಐದು ಜನರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡರು. ಚಂದ್ರಗಿರಿ ಕ್ಷೇತ್ರದ ಪಾಕಳ ಮಂಡಲದ ನೇಂದ್ರಕುಂಟ ಬಳಿಯ ಕೋನಪ್ಪರೆಡ್ಡಿಪಲ್ಲಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಏತನ್ಮಧ್ಯೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://ainkannada.com/do-you-eat-mangoes-at-night-so-see-this-news-miss-modde/ ಪಕಲಾ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ತಮಿಳುನಾಡು ಮೂಲದವರು ಎಂದು ಪೊಲೀಸರು ಗುರುತಿಸಿದ್ದಾರೆ. ತಿರುಮಲ ಶ್ರೀವಾರಿ ದರ್ಶನಕ್ಕೆ ಹೊರಟಿದ್ದ ಏಳು ಜನರು ಪಕಳದಲ್ಲಿ ಕಾರನ್ನು ಹಿಂದಿಕ್ಕಲು ಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ, ಎದುರುಗಡೆ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ,…
ಬೆಂಗಳೂರು: ಸಚಿವ ತಿಮ್ಮಾಪುರ ಪಹಲ್ಗಾಮ್ ಉಗ್ರರ ಸಂದರ್ಶನ ಮಾಡಿಕೊಂಡು ಬಂದಂತಿದೆ ಎಂದು ಬಿಜೆಪಿ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ತಿಮ್ಮಾಪುರ ಉಗ್ರರ ಸಂದರ್ಶನ ಮಾಡಿದ್ದಾರೆಯೇ ಅಥವಾ ಉಗ್ರರು ಮಾತಾಡಿರುವುದನ್ನು ಕೇಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು. ಇವರಿಗೆ ವೋಟು ಮುಖ್ಯವೇ ಹೊರತು ದೇಶವಲ್ಲ ಎಂದು ಹೇಳಿದರು. ಇನ್ನೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪಿಓಕೆ ವಶಪಡಿಸಿಕೊಳ್ಳಿ, ನಾವು ನಿಮ್ಮ ಬೆಂಬಲದಲ್ಲಿದ್ದೇವೆ ಎಂದು ಹೇಳಿದ್ದಾರೆ. https://ainkannada.com/do-you-eat-mangoes-at-night-so-see-this-news-miss-modde/ ಡಿಕೆ ಶಿವಕುಮಾರ್ ದೇಶ ಮೊದಲು ಎಂದು ಹೇಳಿದ್ರು. ಇವರಿಬ್ಬರೂ ಕಾಂಗ್ರೆಸ್ ನವರು, ಸಿಎಂ ಸಿದ್ದರಾಮಯ್ಯ ಅವರು ತೆಲಂಗಾಣ ಸಿಎಂ ಮತ್ತು ಡಿಕೆ ಶಿವಕುಮಾರ್ ಅವರಿಂದ ಪಾಠ ಕಲಿಯಬೇಕು ಎಂದು ಆರ್ ಅಶೋಕ್ ಮೊಟಕಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಪೊಲೀಸ್ ಅಧಿಕಾರಿ ಮೇಲೆ ಸಿಟ್ಟಾಗಿ ಅವರ ಮೇಲೆ ಕೈಮಾಡಲು ಮುಂದಾದ ಘಟನೆ ನಡೆದಿದೆ. ಇನ್ನೂ ವಿಚಾರವಾಗಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾವನಲೇ ಎಸ್ಪಿ ಅಂತ ಕರೆದಾಗ ಎಎಸ್ಪಿ ನಾರಾಯಣ್ ಅನ್ನೋರು ಬರುತ್ತಾರೆ. ಸಿಎಂ ಕರೆದು ಕಪಾಳಮೋಕ್ಷ ಮಾಡಲು ಮುಂದಾಗುತ್ತಾರೆ. ಆಗ ಹೆಚ್ಚುವರಿ ಎಸ್ಪಿ ಒಂದು ಹೆಜ್ಜೆ ಹಿಂದೆ ಹೋಗುತ್ತಾರೆ. ಇಲ್ಲದಿದ್ರೆ ಅವರಿಗೆ ಕಪಾಳಮೋಕ್ಷ ಆಗುತ್ತಿತ್ತು. ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ? https://ainkannada.com/do-you-eat-mangoes-at-night-so-see-this-news-miss-modde/ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಘೇರಾವ್ ಹಾಕುತ್ತಾರೆ ಅನ್ನೋದೇ ಗೊತ್ತಿಲ್ಲ. ಇದು ಇಂಟೆಲಿಜೆನ್ಸ್ ಫೇಲ್ಯೂರ್ ಅಲ್ವಾ? ಕದ್ದು ಮುಚ್ಚಿ ಬಂದ ಭಯೋತ್ಪಾದಕರು ಪಹಲ್ಗಾಮ್ನಲ್ಲಿ ಗುಂಡು ಹಾರಿಸಿದರು. ಅದನ್ನ ಇಂಟಲಿಜೆನ್ಸ್ ಫೇಲ್ಯೂರ್, ಮೋದಿ ಫೇಲ್ಯೂರ್ ಎನ್ನುತ್ತಾರೆ. ಮುತ್ತಿಗೆಯಂತಹ ಸಣ್ಣ ವಿಷಯವೇ ನಿಮಗೆ ಗೊತ್ತಾಗಿಲ್ಲ. ಇನ್ನು ಜನರನ್ನು ಕೊಲ್ಲೋ ವಿಚಾರ ಹೇಗೆ ಗೊತ್ತಾಗಲಿದೆ ಎಂದು ಹರಿಹಾಯ್ದರು. ಬೆಳಗಾವಿಯಲ್ಲಿ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು…
ವೇದಿಕೆ ಮೇಲೆ ಕರೆದು SPಗೆ ಹೊಡೆಯಲು ಹೋದ ಸಿಎಂ ಸಿದ್ದರಾಮಯ್ಯ https://www.youtube.com/watch?v=wXiLWmSc5U4
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರ ವಿರುದ್ಧವೇ ಗರಂ ಆದ ಘಟನೆ ನಡೆಯಿತು. ಸಿಟ್ಟಾದ ಸಿಎಂ ಸಮವಸ್ತ್ರದಲ್ಲಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಕೈ ಎತ್ತಿದ್ದಾರೆ. ವೇದಿಕೆ ಮೇಲೆಯೇ ತಾಳ್ಮೆ ಕಳೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ವಿಡಿಯೋ, ಫೋಟೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಕಾಂಗ್ರೆಸ್ ಇಂದು ಬೆಳಗಾವಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾವೇಶದಲ್ಲಿ ಸಿಎಂ ಭಾಷಣ ಮಾಡುವಾಗ, ಬಿಜೆಪಿಯ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ಮಾಡಿ ಅಡ್ಡಿಪಡಿಸಲಾಯಿತು. ಬಿಜೆಪಿ ಕಾರ್ಯಕರ್ತರು ವೇದಿಕೆ ಕೆಳಗೆ ಗಲಾಟೆ ಮಾಡುತ್ತಿದ್ದರು. ಅಲ್ಲ ಕಾರ್ಯಕರ್ತರು ಓಡಾಟ ಹೆಚ್ಚಿತ್ತು. ಈ ವೇಳೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಗರಂ ಆಗಿದ್ದಾರೆ. ಹೇ ಪೊಲೀಸ್ ಬಾರಯ್ಯ ಇಲ್ಲಿ ಯಾವನು ಅವನು ಬಾರಯ್ಯ ಇಲ್ಲಿ. ಯಾವನು…
ಹುಬ್ಬಳ್ಳಿ: ರಸ್ತೆ ಪಕ್ಕದಲ್ಲೇ ಇದ್ದ ಬಾಲಕಿಯ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ಟಿಪ್ಪರ್ ಹರಿದು ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಹಮೀದಾಬಾನು ಕಬಾಡೆ (06) ಮೃತ ಬಾಲಕಿಯಾಗಿದ್ದು, https://ainkannada.com/do-you-eat-mangoes-at-night-so-see-this-news-miss-modde/ ರಸ್ತೆ ಪಕ್ಕದಲ್ಲೇ ಇದ್ದ ಬಾಲಕಿಯ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ಟಿಪ್ಪರ್ ಹರಿದು ಹಮೀದಾಬಾನು ಮೃತಪಟ್ಟಿದ್ದಾಳೆ. ಟಿಪ್ಪರ್ ಚಾಲಕನ ನಿರ್ಲಕ್ಷ್ಯಕ್ಕೆ ಹಮೀದಾಬಾನು ಮೃತಪಟ್ಟಿದ್ದಾಳೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆ ಕೊಡಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆ ಕೊಡಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು. https://ainkannada.com/do-you-eat-mangoes-at-night-so-see-this-news-miss-modde/ ಇನ್ನೂ ಎಂಥ ದರಿದ್ರ ಪರಿಸ್ಥಿತಿಗೆ ಈ ಸರ್ಕಾರ ಇಳಿದಿದೆ ಎಂದರೆ ಈ ಸರ್ಕಾರ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಹಣ ಘೋಷಣೆ ಮಾಡಿದೆ. ಕನಿಷ್ಠ ಮಾನವೀಯತೆ ಇದ್ದರೆ 1 ಕೋಟಿ ರೂ. ಕೊಡಬೇಕಿತ್ತು. ಪಕ್ಕದ ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾದವರಿಗೆ ಈ ಸರ್ಕಾರ 15 ಲಕ್ಷ ಹಣ ನೀಡಿದೆ. ಅದಕ್ಕೆ ಸರಿ ಸಮಾನವಾಗಿ ಆದರೂ ಹಣ ಕೊಡಬೇಕಿತ್ತು ಎಂದು ವಾಗ್ದಾಳಿ ನಡೆಸಿದರು. ಮುಸ್ಲಿಮರ ಓಟಿಗೆ ತನ್ನನ್ನು ತಾನು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದಿಂದ ಇದಕ್ಕಿಂತ ಹೆಚ್ಚಿಗೆ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಕನಿಷ್ಠ ಮಾನವೀಯತೆ ಇದ್ದಿದ್ದರೆ ಸರ್ಕಾರ ಒಂದು…