ಟಾಲಿವುಡ್ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಮೊದಲ ಬಾರಿಗೆ ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಕೈಜೋಡಿಸಿದ್ದಾರೆ. ಬಾರಿ ನಿರೀಕ್ಷೆ ಮೂಡಿಸಿರುವ ಈ ಪ್ರಾಜೆಕ್ಟ್ ತಾರಾಬಳಗದ ಮೂಲಕವೇ ಸದ್ದು ಸುದ್ದಿ ಮಾಡುತ್ತಿದೆ. ಇತ್ತೀಚೆಗಷ್ಟೇ ಪುರಿ-ವಿಜಯ್ ಚಿತ್ರಕ್ಕೆ ಬಾಲಿವುಡ್ ಬೊಂಬೆ ಟಬು ಎಂಟ್ರಿ ಕೊಟ್ಟಿದ್ದರು. ಇದೀಗ ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ಕುಮಾರ್ ಅವರನ್ನು ನಿರ್ದೇಶಕರ ಪುರಿ ಜಗನ್ನಾಥ್ ತಮ್ಮ ಸಿನಿಮಾಗೆ ಸ್ವಾಗತಿಸಿದ್ದಾರೆ. ವೀರ ಸಿಂಹ ರೆಡ್ಡಿ ಸೂಪರ್ ಸಕ್ಸಸ್ ಬಳಿಕ ದುನಿಯಾ ವಿಜಯ್ ಪರಭಾಷೆಯಲ್ಲಿ ಭರ್ಜರಿ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿದ್ದಾರೆ. ಇತ್ತೀಚೆಗೆಷ್ಟೇ ತಮಿಳು ಸಿನಿಮಾರಂಗಕ್ಕೂ ಎಂಟ್ರಿ ಕೊಟ್ಟಿರುವ ಬ್ಲಾಕ್ ಕೋಬ್ರಾ ಈಗ ಮತ್ತೊಮ್ಮೆ ಟಾಲಿವುಡ್ ನೆಲದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಬಾಲಯ್ಯ ನಟನೆಯ ವೀರ ಸಿಂಹ ರೆಡ್ಡಿ ಚಿತ್ರದಲ್ಲಿ ಖಳನಾಯಕನಾಗಿ ತೊಡೆ ತಟ್ಟಿದ್ದ ವಿಜಯ್ ಈಗ ಮತ್ತೊಂದು ತೆಲುಗು ಸಿನಿಮಾಗೆ ಸೈ ಎಂದಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆಂದು ಚಿತ್ರತಂಡ ಹೇಳಿದೆ. ಒಂದು ವೇಳೆ ವಿಜಯ್ ಖಳನಾಯಕನಾಗಿ ಕಾಣಿಸಿಕೊಂಡ್ರೆ ವಿಜಯ್…
Author: Author AIN
ಶಿವಮೊಗ್ಗ: ಪ್ರಧಾನಿಯರಲ್ಲಿ ಬೇಡಿಕೊಳ್ಳುವುದೇನೆಂದರೆ ನಮಗೆ ಸಾಂತ್ವನ ಬೇಕಾಗಿಲ್ಲ ಪ್ರತೀಕಾರ ಬೇಕಾಗಿದೆ ಎಂದು ಹಿಂದೂ ಪರ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿನ್ನೆ ನಾನು ಮೃತ ಮಂಜುನಾಥ್ ಅವರ ಮನೆಗೆ ಭೇಟಿ ನೀಡಿದ್ದೆ. ಅವರ ತಾಯಿ, ಮಗ ಹಾಗೂ ಹೆಂಡತಿಯ ಧೈರ್ಯವನ್ನು ನೋಡಿದರೆ ಹೆಮ್ಮೆಯಾಗುತ್ತದೆ. https://ainkannada.com/do-you-eat-mangoes-at-night-so-see-this-news-miss-modde/ ಅವರಿಗೆ ನಾವು ಸಾಂತ್ವನ ಮಾತ್ರ ಕೊಡಲು ಸಾಧ್ಯ. ಪ್ರಧಾನಿಯರಲ್ಲಿ ಬೇಡಿಕೊಳ್ಳುವುದೇನೆಂದರೆ ನಮಗೆ ಸಾಂತ್ವನ ಬೇಕಾಗಿಲ್ಲ ಪ್ರತೀಕಾರ ಬೇಕಾಗಿದೆ. ಪ್ರತಿಕಾರ ಒಂದೇ ಈ ಲಾಜಿಕಲ್ ಎಂಡ್ ಮಾಡಲು ಸಾಧ್ಯವಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು. ಇದೇ ವೇಳೆ ಸಚಿವ ತಿಮ್ಮಾಪುರ ವಿವಾದತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಅವರ ಹೇಳಿಕೆಯನ್ನ ವಿವಾದಾತ್ಮಕ ಹೇಳಿಕೆ ಎಂದು ಕರೆಯುವುದೇ ತಪ್ಪು, ಅದು ಒಂದು ದೇಶ ದ್ರೋಹ. ತಿಮ್ಮಾಪುರ ಅವರು ಈ ದೇಶದ ದಾರಿಯನ್ನ ತಪ್ಪಿಸುವುದಕ್ಕೆ ನೋಡುತ್ತಿದ್ದಾರೆ. ಅವರು ದೇಶದ್ರೋಹದ ಜೊತೆಗೆ ಮಾನವೀಯತೆಗೆ ವಿರುದ್ಧ ಇದ್ದಾರೆ ಅದಕ್ಕೆ ಧಿಕ್ಕಾರವಿರಲಿ ಎಂದರು.
ಕೋಲಾರ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುಹೇಲ್ ಖಾನ್ ಹಾಗೂ ಇರ್ಫಾನ್ ಬಂಧಿತ ಆರೋಪಿಗಳಾಗಿದ್ದು, ಮುಳಬಾಗಿಲು ತಾಲ್ಲೂಕು ಲಿಂಗಾಪುರ ಗೇಟ್ ನಲ್ಲಿ ಬೆಟ್ಟಿಂಗ್ ನಲ್ಲಿ ತೊಡಗಿದ್ದರು. https://ainkannada.com/do-you-eat-mangoes-at-night-so-see-this-news-miss-modde/ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ: ವಿಜಯಪುರ ಪಟ್ಟಣಕ್ಕೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯ್ ಅಲಿಯಾಸ್ ಬಾಂದ್ರಾ (22) ಬಂಧಿತ ಆರೋಪಿಯಾಗಿದ್ದು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಗಾಂಜಾ ಸಾಗಾಣಿಕೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣಕ್ಕೆ ಮಾರಾಟ ಮಾಡುತ್ತಿದ್ದನು. https://ainkannada.com/do-you-eat-mangoes-at-night-so-see-this-news-miss-modde/ ಅನೇಕ ವರ್ಷಗಳಿಂದ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇನ್ಸ್ಪೆಕ್ಟರ್ ಪ್ರಶಾಂತ್ ನಾಯಕ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಒಂದು ಲಕ್ಷ ಮೌಲ್ಯದ 1 ಕೆ.ಜಿ 710 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ದೇವನಹಳ್ಳಿ ತಾಲೂಕು ವಿಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು: ಮೆಟ್ರೋ ದಲ್ಲಿ ಪ್ರಯಾಣಿಕರು ಮಾಡುವಂತಹ ಅವಾಂತರಗಳು, ಕಿತಾಪತಿಗಳಿಗೆ ಸಂಬಂಧಪಟ್ಟ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಹೌದು ಮೆಟ್ರೋ ರೈಲು ನಿಗಮವು ಕೋಚ್ ಗಳ ಒಳಗೆ ತಿನ್ನುವುದು ಮತ್ತು ಕುಡಿಯಬಾರದು ಎನ್ನುವ ನಿಯಮವೇ ಇದೆ. ಆದ್ರೆ ಇದೀಗ ನಮ್ಮ ಮೆಟ್ರೋದಲ್ಲಿ ಮಾದವರ ನಿಲ್ದಾಣದಿಂದ ಮಾಗಡಿ ರಸ್ತೆಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರೈಲಿನಲ್ಲಿ ಊಟ ಮಾಡಿ ನಿಯಮ ಉಲ್ಲಂಘಿಸಿದ ಹಿನ್ನೆಲೆ, 500ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಹೇಳಿದೆ. https://ainkannada.com/do-you-eat-mangoes-at-night-so-see-this-news-miss-modde/ ನೈಸ್ ರಸ್ತೆ ಜಂಕ್ಷನ್ನಲ್ಲಿರುವ ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿಯವರೆಗೂ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರು ಊಟ ಮಾಡುತ್ತಿರುವುದನ್ನುಈ ಮಹಿಳೆ ತಾನು ತಂದಿದ್ದ ಬಾಕ್ಸ್ನಿಂದ ಊಟ ಮಾಡುತ್ತಿದ್ದ ವಿಡಿಯೋ ಅನ್ನು ಸಹ ಪ್ರಯಣಿಕರೊಬ್ಬರು ವಿಡಿಯೋ ಮಾಡಿದ್ದಾರೆ. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ ಈ ಮಹಿಳೆ ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು.…
ಬೆಂಗಳೂರು: “ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, https://ainkannada.com/do-you-eat-mangoes-at-night-so-see-this-news-miss-modde/ ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು. ಬೆಲೆ ಏರಿಕೆಗೆ ಕೇಂದ್ರವೇ ಕಾರಣ “ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ…
ರಾಕಿಂಗ್ ಸ್ಟಾರ್ ಯಶ್ ಈ ಹೆಸರಿಗೆ ಇಂಟ್ರೂಡಕ್ಷನ್ ಅವಶ್ಯಕತೆ ಇಲ್ಲ. ಕನ್ನಡ ಚಿತ್ರರಂಗ ಕೀರ್ತಿ ಪತಾಕೆಯನ್ನು ಭಾರತೀಯ ಚಿತ್ರದ ತುಂಬೆಲ್ಲಾ ಹಬ್ಬಿರುವ ಅಣ್ತಮ್ಮಾ ತಮ್ಮದೇ ಮಾಸ್ಟರ್ ಮೈಂಡ್ ಎಂಬ ಪ್ರೊಡಕ್ಷನ್ ಶುರು ಮಾಡಿದ್ದಾರೆ. ಆ ಪ್ರೊಡಕ್ಷನ್ ನಡಿ ತಮ್ಮ ಅಪ್ ಕಮ್ಮಿಂಗ್ ಚಿತ್ರ ಟಾಕ್ಸಿಕ್ ಗೆ ಹಣ ಹಾಕಿದ್ದಾರೆ. ಅಲ್ಲದೇ ಈ ಪ್ರೊಡಕ್ಷನ್ ನಡಿ ರಾಮಾಯಣ ಸಿನಿಮಾ ಕೂಡ ತಯಾರಾಗುತ್ತಿದೆ. ಇದೀಗ ರಾಕಿಭಾಯ್ ರಿಯಲ್ ಮದರ್ ಕೂಡ ಹೊಸ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದ್ದಾರೆ. ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಸಿನಿಮಾ ಇಂಡಸ್ಟ್ರೀಗೆ ಹೆಜ್ಜೆ ಇಡುತ್ತಿದ್ದಾರೆ. ಅವರೇ PA ಪ್ರೊಡಕ್ಷನ್ ಶುರು ಮಾಡಿದ್ದು, ಈ ನಿರ್ಮಾಣ ಸಂಸ್ಥೆಯ ಮೊದಲ ಚಿತ್ರ ನಾಳೆ ಘೋಷಣೆಯಾಗುತ್ತಿದೆ ಪೃಥ್ವಿ ಅಂಬರ್ ಹಾಗೂ ಕಾವ್ಯಾ ಶೈವಾ ನಾಯಕ-ನಾಯಕಿಯರಾಗಿ ನಟಿಸಲಿರುವ ಚಿತ್ರಕ್ಕೆ ಶ್ರೀ ರಾಜ್ ಆಕ್ಷನ್ ಕಟ್ ಹೇಳಲಿದ್ದಾರೆ. ಕಾರ್ತಿಕ್ ಛಾಯಾಗ್ರಹಣ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿರಲಿದೆ. ಗೋಪಾಲ ಕೃಷ್ಣ ದೇಶಪಾಂಡೆ ಹಾಗೂ ರಾಜೇಶ್…
ನೀವು ಕೆಲಸ ಪಡೆಯಲು ಕಷ್ಟಪಟ್ಟು ಪ್ರಯತ್ನಿಸುತ್ತಿದ್ದರೆ. ಎಲ್ಲಿಯೂ ಕೆಲಸ ಸಿಗದಿದ್ದರೆ ಚಿಂತಿಸುವ ಅಗತ್ಯವಿಲ್ಲ. ವ್ಯವಹಾರ ಕೂಡ ಒಳ್ಳೆಯದೇ. ವ್ಯಾಪಾರ ಮಾಡಲು ಹಣ ಎಲ್ಲಿಂದ ಬರುತ್ತದೆ ಎಂದು ಕೆಲವರು ಕೇಳುತ್ತಾರೆ. ಅಂತಹ ವ್ಯವಹಾರದ ಬಗ್ಗೆ ತಿಳಿದುಕೊಳ್ಳೋಣ. ಇದಕ್ಕೆ ಹೆಚ್ಚಿನ ಹೂಡಿಕೆ ಅಗತ್ಯವಿಲ್ಲ. ನೀವು ಮನೆಯಲ್ಲಿ ಕುಳಿತು ಸುಲಭವಾಗಿ ಲಕ್ಷಾಂತರ ರೂಪಾಯಿಗಳನ್ನು ಗಳಿಸಬಹುದು. ಅಗರಬತ್ತಿ ತಯಾರಿಕೆಯ ವ್ಯವಹಾರದ ಬಗ್ಗೆ ನಿಮಗೆ ತಿಳಿದಿದೆಯೇ? ಅದರ ಬೇಡಿಕೆ ಜೀವಿತಾವಧಿಯವರೆಗೆ ಇರುತ್ತದೆ. ಮದುವೆಗಳು, ಧಾರ್ಮಿಕ ಸಮಾರಂಭಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಇದರ ಬೇಡಿಕೆ ಮತ್ತಷ್ಟು ಹೆಚ್ಚಾಗುತ್ತದೆ. https://ainkannada.com/do-you-eat-mangoes-at-night-so-see-this-news-miss-modde/ ಮಾಧ್ಯಮ ವರದಿಗಳ ಪ್ರಕಾರ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ಧೂಪದ್ರವ್ಯ ಕಡ್ಡಿ ತಯಾರಿಕಾ ವ್ಯವಹಾರದ ಕುರಿತು ಯೋಜನಾ ವರದಿಯನ್ನು ಸಿದ್ಧಪಡಿಸಿದೆ. ಈ ವರದಿಯ ಪ್ರಕಾರ, ಇದು ಹೆಚ್ಚಿನ ತಂತ್ರಜ್ಞಾನದ ಅಗತ್ಯವಿಲ್ಲದ ಮತ್ತು ಯಾವುದೇ ವಿಶೇಷ ರೀತಿಯ ಉಪಕರಣಗಳ ಅಗತ್ಯವಿಲ್ಲದ ವ್ಯವಹಾರವಾಗಿದೆ. ಅಲ್ಲದೆ, ಈ ವ್ಯವಹಾರವನ್ನು ಕಡಿಮೆ ಹಣದಿಂದ ಪ್ರಾರಂಭಿಸಬಹುದು. ಧೂಪದ್ರವ್ಯದ ಕಡ್ಡಿಗಳನ್ನು ತಯಾರಿಸಲು ವಿದ್ಯುತ್ ಅಗತ್ಯವಿಲ್ಲ. ಭಾರತವನ್ನು ಧೂಪದ್ರವ್ಯದ…
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 46ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು. 163 ರನ್ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ (51) ಹಾಗೂ ಕೃನಾಲ್ ಪಾಂಡ್ಯ (73) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕಗಳ ನೆರವಿನೊಂದಿಗೆ ಆರ್ಸಿಬಿ ತಂಡವು 18.3 ಓವರ್ಗಳಲ್ಲಿ 165 ರನ್ ಬಾರಿಸಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ. ಸೋಲಿನ ನಂತರ ದೆಹಲಿ ನಾಯಕ ಅಕ್ಷರ್ ಪಟೇಲ್ ಮಾತನಾಡಿ, ಬ್ಯಾಟಿಂಗ್ ನಲ್ಲಿ ನಾವು ಆರ್ ಸಿಬಿಗಿಂತ ಹಿಂದುಳಿದಿದ್ದೆವು. https://ainkannada.com/do-you-eat-mangoes-at-night-so-see-this-news-miss-modde/ ಆದಾಗ್ಯೂ, ಇದರ ಹೊರತಾಗಿ ಅವರು ಸೋಲಿಗೆ ಹಲವು ಕಾರಣಗಳನ್ನು ನೀಡಿದರು. ‘‘ನಾವು ಬ್ಯಾಟಿಂಗ್ನಲ್ಲಿ…
ಕನ್ನಡದ ಹುಡ್ಗಿ ಶ್ರೀಲೀಲಾ ಈಗ ಪಕ್ಕದ ಟಾಲಿವುಡ್, ಬಾಲಿವುಡ್ನಲ್ಲಿ ಮಿಂಚುತ್ತಿದ್ದಾಳೆ. ಸ್ಟಾರ್ ಹೀರೋ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವ ಶ್ರೀಲೀಲಾ ಸೋಷಿಯಲ್ ಮೀಡಿಯಾದಲ್ಲಿಯೂ ತುಂಬಾನೇ ಆಕ್ಟೀವ್. ಸದಾ ಚೆಂದದ ಫೋಟೋಗಳನ್ನು ಹಂಚಿಕೊಳ್ಳುವ ನಟಿ ಈಗ ಮನೆಗೆ ಹೊಸ ಸದಸ್ಯೆಯನ್ನು ಪ್ರೀತಿಯಿಂದ ಬರ ಮಾಡಿಕೊಂಡಿದ್ದಾರೆ. ಶ್ರೀಲೀಲಾ ಮಗುವನ್ನು ಪ್ರೀತಿಯಿಂದ ಅಪ್ಪಿಕೊಂಡು ಮುದ್ದಾಡುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ “ಮನೆಯಲ್ಲಿ ಹೊಸ ಸದಸ್ಯೆ, ಹೃದಯಗಳನ್ನು ಸೆರೆಹಿಡಿಯುತ್ತಿದ್ದಾರೆ” ಎಂದು ಶೀರ್ಷಿಕೆಯನ್ನು ಬರೆದ್ದಾರೆ. ಈ ಫೋಟೋಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶ್ರೀಲೀಲಾ ಮಕ್ಕಳನ್ನು ದತ್ತು ಪಡೆದಿದ್ದಾರೆ . ಕೇವಲ 21 ನೇ ವಯಸ್ಸಿನಲ್ಲಿ, ಅವರು ಅನಾಥಾಶ್ರಮದಿಂದ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದರು. ಬೈ ಟು ಲವ್ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಇಬ್ಬರು ಅನಾಥ ದಿವ್ಯಾಂಗ ಮಕ್ಕಳನ್ನು ಶ್ರೀಲೀಲಾ ದತ್ತು ಪಡೆದುಕೊಂಡಿದ್ದರು. ಆ ಮಕ್ಕಳ ಸಂಪೂರ್ಣ ಜವಾಬ್ದಾರಿ ಅವರು ವಹಿಸಿಕೊಂಡಿದ್ದರು. ಸಿನಿಮಾ ಜೊತೆಗೆ ಈ ರೀತಿ ಕಾಯಕಗಳ ಮೂಲಕ ಶ್ರೀಲೀಲಾ ಅಭಿಮಾನಿಗಳ ಹೃದಯ ಗೆಲ್ಲುತ್ತಿದ್ದಾರೆ. ಸದ್ಯ ಕಾರ್ತಿಕ್…