ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಅನ್ನು ಪ್ರಾರಂಭಿಸಿದ್ದು, ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಶೃತಿ ಕಿರಣ್ ಅವರೊಂದಿಗೆ ಕೈಜೋಡಿಸಿದ್ದಾರೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಟೀಸರ್ ಲಾಂಚ್ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ನಡೆಯಿತು. ಅಶ್ವಿನಿ ಪುನೀತ್ ರಾಜ್ ಕುಮಾರ್ ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಟೀಸರ್ ಲಾಂಚ್ ಟೀಸರ್ ಲಾಂಚ್ ಮಾಡಿದರು. ವಿಶೇಷ ಅತಿಥಿಯಾಗಿ ನಟಿ ಮಿಲನಾ ನಾಗರಾಜ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುನೀತಾ ಗೌಡ, ಸ್ಫೂರ್ತಿ ವಿಶ್ವಾಸ್ ಉಪಸ್ಥಿತರಿದ್ದರು. ಬಳಿಕ ಅಶ್ವಿನಿ ಪುನೀತ್ ರಾಜ್ಕುಮಾರ್ ಮಾತನಾಡಿ, ನಾವು ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ. ಈ ಕಲಿಕೆಯ ಗುರಿ ಜೊತೆಗೆ ಪ್ರತೀ ಮಗುವಿನ ಸಾಮರ್ಥ್ಯವನ್ನು ಪೋಷಿಸುವುದು ಮತ್ತು ನಾಯಕತ್ವವನ್ನೂ ನಿರ್ಮಿಸುವುದು ನಮ್ಮ ಉದ್ದೇಶ ಎಂದರು . ನಟಿ ಮಿಲನಾ…
Author: Author AIN
ಬೆಂಗಳೂರು: ಕಳೆದ 11 ವರ್ಷಗಳಿಂದ ದಿನಬೆಳಗಾದ್ರೆ ಹಿಂದೂ ಮುಸ್ಲಿಂ ವಿಚಾರ ಬಿಟ್ಟರೆ ಬೇರೇನಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ 11 ವರ್ಷಗಳಿಂದಲೂ ಕೇಂದ್ರ ಸರ್ಕಾರ ದಿನದ 24 ಗಂಟೆಯೂ ಮುಸ್ಲಿಂ.. ಮುಸ್ಲಿಂ.. ಮುಸ್ಲಿಂ.. ಅಂತ ಬೈಯೋದು ಬಿಟ್ರೆ ಬೇರೇನು ಮಾಡಿಲ್ಲ ಎಂದರು. ಸರ್ಜಿಕಲ್ ಸ್ಟ್ರೈಕ್ ಏನಾಯ್ತು? ಪುಲ್ವಾಮಾ ದಾಳಿ ಏನಾಯ್ತು? ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಯಾಕೆ ಮೆರವಣಿಗೆ ಮಾಡ್ತೀರ, ನೀವು ಹಿಂದೂಗಳನ್ನ ಕೊಂದಿರೋದು. 2014ರಿಂದ ಆಗಿರುವ ಹಿಂದೂಗಳ ಹತ್ಯೆಯ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು. 20 ರಾಜ್ಯಗಳಲ್ಲಿ ನಿಮ್ಮ ಪಕ್ಷದವರೇ ಸಿಎಂ, ನೀವೆ ಪಿಎಂ, ಬರೀ ಹಿಂದೂ ಮುಸ್ಲಿಂ ಬಿಟ್ರೆ ಬೇರೆ ಏನೂ ಇಲ್ಲ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಸರ್ಕಾರ ಬಂದು ಇವತ್ತು ವೈಫಲ್ಯ ಅಂತ ಹೇಳಿದೆ. ಇವರೇ ಆರ್ಟಿಕಲ್ 370 ರದ್ದು ಮಾಡಿದ್ರು, ಎಲ್ಲಾ ನಮ್ಮ ಕಂಟ್ರೋಲ್ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್ ಜನ ಬ್ಯೂಟಿಫುಲ್ ಆಗಿದ್ದಾರೆ. ಆದ್ರೆ…
ಬೆಂಗಳೂರು: ಪಾಕ್ ವಿದ್ಯಾರ್ಥಿಗಳಿಗೆ ವಿನಾಯ್ತಿ ಕೊಟ್ಟ ಹಾಗೆ ಕಾಣಿಸುತ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಎಸ್ಪಿಗಳು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಎಷ್ಟು ಮಂದಿ ಪಾಕ್ ಪ್ರಜೆಗಳಿದ್ದಾರೆ ಎಂದು ಪತ್ತೆಹಚ್ಚಲಾಗುತ್ತಿದೆ. ಪಾಕ್ ವಿದ್ಯಾರ್ಥಿಗಳಿದ್ದರೂ ವಾಪಸ್ ಕಳುಹಿಸಬೇಕಾಗುತ್ತದೆ. ಪಾಕ್ ವಿದ್ಯಾರ್ಥಿಗಳಿಗೆ ವಿನಾಯ್ತಿ ಕೊಟ್ಟ ಹಾಗೆ ಕಾಣಿಸುತ್ತಿಲ್ಲ ಎಂದರು. ಪಾಕ್ ಪ್ರಜೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಬೆಂಗಳೂರಿನಲ್ಲಿಯೂ ಸೀನಿಯರ್ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ದೀರ್ಘಾವಧಿ ವೀಸಾ ಇದ್ದವರಿಗೆ ಕ್ರಮ ತೆಗೆದುಕೊಂಡಿದ್ದೇವೆ. ಪ್ರತಿ ಜಿಲ್ಲೆಯ ಎಸ್ಪಿಗೆ ತಿಳಿಸಿದ್ದೇವೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಘಟನೆ ಆದಮೇಲೆ ಅಲರ್ಟ್ ಆಗಿದ್ದೇವೆ ಎಂದು ತಿಳಿಸಿದರು.
ಆನೇಕಲ್: ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಸುರೇಶ್ ಕೊಲೆಯಾದ ವ್ಯಕ್ತಿಯಾಗಿದ್ದು, ಕಾಂತರಾಜು ಹಾಗೂ ಆತನ ಗ್ಯಾಂಗ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ಶುಕ್ರವಾರ ರಾತ್ರಿ ಮದ್ಯ ಸೇವಿಸಲು ಸ್ನೇಹಿತರ ಜೊತೆ ಶ್ಯಾನುಭೋಗನಹಳ್ಳಿ ತರಂಗಿಣಿ ಬಾರ್ಗೆ ತೆರಳಿದ್ದ. ಅದೇ ಬಾರ್ನಲ್ಲಿ ಆರೋಪಿ ಕಾಂತರಾಜು ಹಾಗೂ ಆತನ ಗ್ಯಾಂಗ್ ಜೋರಾಗಿ ಮಾತನಾಡುತ್ತಾ ಮದ್ಯಸೇವನೆ ಮಾಡುತ್ತಿದ್ದರು. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಆಗ ಅಲ್ಲೇ ಮದ್ಯ ಸೇವಿಸುತ್ತಿದ್ದ ಸುರೇಶ್, ನಿಧಾನಕ್ಕೆ ಮಾತನಾಡಿ ಎಂದು ಹೇಳಿದ್ದ. ಆಗ ಕಾಂತರಾಜು ನೀನು ಯಾರು ಕೇಳೋಕೆ ಎಂದು ಹೇಳಿದ್ದ. ಈ ವೇಳೆ ಕಾಂತರಾಜು ಮತ್ತು ಸುರೇಶ್ ನಡುವೆ ನೂಕಾಟ-ತಳ್ಳಾಟ ನಡೆದಿದೆ. ಇದಾದ ಬಳಿಕ ಸುರೇಶ್ ಮನೆಗೆ ತೆರಳಿದ್ದ. ಕಾಂತರಾಜು ಹಾಗೂ ಆತನ ಗ್ಯಾಂಗ್ ಸುರೇಶ್ನನ್ನು ಹಿಂಬಾಲಿಸಿಕೊಂಡು ಬಂದಿದ್ದು, ಆತನ ಮನೆಗೆ ನುಗ್ಗಿ ಪತ್ನಿ ಮುಂದೆಯೇ ಹೊಟ್ಟೆ ಮತ್ತು ಎದೆ ಭಾಗಕ್ಕೆ ಚಾಕುವಿನಿಂದ…
ನವದೆಹಲಿ: ಇಂದು ಬೆಳಿಗ್ಗೆ ನಡೆದ ಭೀಕರ ಅಫಘಾತ ಸಂಭವಿಸಿದೆ. ನುಹ್ ಹರಿಯಾಣದ ಫಿರೋಜ್ಪುರ್ ಝಿರ್ಕಾದ ಇಬ್ರಾಹಿಂ ಬಾಸ್ ಗ್ರಾಮದ ಬಳಿ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯ ಪ್ರದೇಶವನ್ನು ಸ್ವಚ್ಛಗೊಳಿಸುತ್ತಿದ್ದಾಗ ವೇಗವಾಗಿ ಬಂದ ಪಿಕಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಕಾರ್ಮಿಕರು ಸಾವನ್ನಪ್ಪಿದ್ದು, ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಹೌದು ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಪಿಕಪ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಆರು ಮಹಿಳೆಯರು ಸಾವನ್ನಪ್ಪಿದ್ದು, ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸಾವನ್ನಪ್ಪಿದ ಕಾರ್ಮಿಕರಲ್ಲಿ ಐದು ಮಂದಿ ಖೇರಿ ಕಲಾನ್ ಗ್ರಾಮಕ್ಕೆ ಸೇರಿದವರು ಮತ್ತು ಒಬ್ಬರು ಜಿಮ್ರಾವತ್ ಗ್ರಾಮಕ್ಕೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಅದೆಷ್ಟೋ ಯುವ ಆಟಗಾರರಿಗೆ ಸ್ಪೂರ್ತಿ. ಕಿಂಗ್ ಕೊಹ್ಲಿ ಜೊತೆ ಫೋಟೋ ತೆಗೆದುಕೊಳ್ಳಬೇಕು. ಅವರಿಂದ ಆಟೋಗ್ರಾಫ್ ತೆಗೆದುಕೊಳ್ಳುಬೇಕು ಅನ್ನೋದು ಅದೆಷ್ಟೋ ಕ್ರಿಕೆಟ್ ಪ್ರೇಮಿಗಳ ಕನಸು. ಕೊಹ್ಲಿ ಕ್ರಿಕೆಟ್ ಲೋಕದಲ್ಲಿ ದಾಖಲೆಗಳ ದಂಡಯಾತ್ರೆ ಮಾಡುತ್ತಿದ್ದಾರೆ. ಇಂತಹ ಕೊಹ್ಲಿಯನ್ನು ನೆರಳಿನಂತೆ ಹಿಂಬಲಿಸುವ ಹುಡ್ಗನೊಬ್ಬ ಆರ್ಸಿಬಿ ಅಭಿಮಾನಿಗಳ ಹೃದಯ ಗೆದ್ದಿದ್ದಾನೆ. ಆರ್ಸಿಬಿ ಯಾವುದೇ ಪಂದ್ಯವಿರಲಿ, ಪ್ರಾಕ್ಟೀಸ್ ಇರಲಿ. ಅದರಲ್ಲಿಯೂ ಕೊಹ್ಲಿ ಎಲ್ಲೇ ಇರಲಿ ಅವರ ಹಿಂದೆ ನೆರಳಿನಂತೆ ಹಿಂಬಾಲಿಸುವ ಹುಡ್ಗ ಸ್ವಸ್ತಿಕ್ ಚಿಕಾರ. ಸ್ವಸ್ತಿಕ್ ಆರ್ಸಿಬಿ ಆಟಗಾರ. ಆದ್ರೆ ಈವರೆಗೂ ಈತ ರಾಯಲ್ ಚಾಲೆಂಜರ್ಸ್ ಪರ ಒಂದು ಮ್ಯಾಚನ್ನೂ ಆಡಿಲ್ಲ. ಆದರೂ ಕನ್ನಡಿಗರ ಹೃದಯ ಗೆದ್ದಿದ್ದಾನೆ. ಸದಾ ಕೊಹ್ಲಿ ಸುತ್ತಮುತ್ತ ಸುತ್ತುತ್ತ ಕ್ಯಾಮೆರಾ ಕಣ್ಣುಗಳನ್ನು ತನ್ನತ್ತ ಸೆಳೆಯುತ್ತಾನೆ. ಯಾರು ಸ್ವಸ್ತಿಕ್ ಚಿಕಾರ? 19 ವರ್ಷದ ಸ್ವಸ್ತಿಕ್ ಚಿಕಾರ ಉತ್ತರ ಪ್ರದೇಶದ ಗಾಜಿಯಾಬಾದ್ನವರು. ಈತ ಒಬ್ಬ ಪ್ರತಿಭಾನ್ವಿತ ಬ್ಯಾಟರ್. ಇವರು ಯುಪಿ ಟಿ20 ಲೀಗ್ನಲ್ಲಿ ಅತ್ಯತ್ತಮ…
ಬೆಂಗಳೂರು:- ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಚಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಭಾರತಕ್ಕೆ ಉಗ್ರಗಾಮಿಗಳಿಗಿಂತ ಕಾಂಗ್ರೆಸ್ಸಿಗರಿಂದಲೇ ಗಂಡಾಂತರ ಇದೆ. ಪಹಲ್ಗಾಮ್ ನಲ್ಲಿ ಉಗ್ರರು ಹಿಂದೂ ಮತ್ತು ಮುಸಲ್ಮಾನ ಪ್ರವಾಸಿಗರನ್ನು ಬೇರ್ಪಡಿಸಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡು ಗುಂಡಿಕ್ಕಿ ಕೊಂದಿದ್ದಾರೆ, ಆದರೆ ಕೆಲ ಕಾಂಗ್ರೆಸ್ ನಾಯಕರು ಈ ಅಂಶವನ್ನು ಅಲ್ಲಗಳೆಯುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರೇನಾದರೂ ಪಹಲ್ಗಾಮ್ ಘಟನೆಯನ್ನು ಕಣ್ಣಾರೆ ವೀಕ್ಷಿಸಿದ್ದಾರಾ? ತಮ್ಮ ತಂದೆ, ಚಿಕ್ಕಪ್ಪ, https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಮಾವ ಮುಂತಾದವರ ಮೇಲೆ ಉಗ್ರರು ದಾಳಿ ನಡೆಸಿ ಕೊಂದಿದ್ದನ್ನು ಕಣ್ಣಾರೆ ನೋಡಿರುವ ಮಕ್ಕಳು ಹಿಂದೂಗಳನ್ನೇ ಟಾರ್ಗೆಟ್ ಮಾಡಿದ್ದರು ಅಂತ ಹೇಳುತ್ತಿದ್ದಾರೆ, ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ, ಅದರ ನಾಯಕರ ಮಾತುಗಳನ್ನು ಕೇಳುತ್ತಿದ್ದರೆ ಭಾರತಕ್ಕೆ ಉಗ್ರಗಾಮಿಗಳಿಗಿಂತ ಅವರಿಂದಲೇ ಹೆಚ್ಚು ಗಂಡಾಂತರವಿದೆ ಅನಿಸುತ್ತದೆ ಎಂದು ಚಲವಾದಿ ಹೇಳಿದರು.
ಕ್ಯಾನ್ಸರ್ ಒಂದು ಗಂಭೀರ ಕಾಯಿಲೆಯಾಗಿದ್ದು ಅದು ದೇಹದಲ್ಲಿ ಮೌನವಾಗಿ ಬೆಳೆಯುತ್ತದೆ. ಕ್ಯಾನ್ಸರ್ ರೋಗವು ಮುಂದುವರಿದಾಗ ಮಾತ್ರ ಹೆಚ್ಚಾಗಿ ಪತ್ತೆಯಾಗುತ್ತದೆ. ಆದಾಗ್ಯೂ, ನಿಮ್ಮ ದೇಹವು ಕ್ಯಾನ್ಸರ್ನ ಆರಂಭಿಕ ಚಿಹ್ನೆಗಳನ್ನು ನೀಡುತ್ತದೆ. ಇವುಗಳನ್ನು ನಾವು ಹೆಚ್ಚಾಗಿ ಸಣ್ಣದಾಗಿ ಪರಿಗಣಿಸಿ ನಿರ್ಲಕ್ಷಿಸುತ್ತೇವೆ. ಈ ಮೂಕ ಚಿಹ್ನೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿದರೆ, ಚಿಕಿತ್ಸೆಯ ಸಾಧ್ಯತೆಗಳು ಹಲವು ಪಟ್ಟು ಹೆಚ್ಚಾಗುತ್ತವೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಕ್ಯಾನ್ಸರ್ ವಿರುದ್ಧದ ಹೋರಾಟವನ್ನು ಗೆಲ್ಲುವ ಮೊದಲ ಹೆಜ್ಜೆ ಅರಿವು ಮತ್ತು ಸಕಾಲಿಕ ರೋಗನಿರ್ಣಯ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಭಯಪಡುವ ಬದಲು, ಜಾಗರೂಕರಾಗಿರುವುದು ಅಗತ್ಯ. ಕ್ಯಾನ್ಸರ್ ಲಕ್ಷಣಗಳು ಕೆಲವು ಜನರಲ್ಲಿ ಬದಲಾಗಬಹುದು, ಆದರೆ ತಪ್ಪಾಗಿ ಸಹ ನಿರ್ಲಕ್ಷಿಸಬಾರದ ಕೆಲವು ಸಾಮಾನ್ಯ ಲಕ್ಷಣಗಳಿವೆ. ವೈದ್ಯರ ಪ್ರಕಾರ, ನೀವು ಈ ಲಕ್ಷಣಗಳನ್ನು ನಿರಂತರವಾಗಿ ಅನುಭವಿಸುತ್ತಿದ್ದರೆ, ತಕ್ಷಣವೇ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಈ ಸಣ್ಣ ಮುನ್ನೆಚ್ಚರಿಕೆಯು ನಿಮ್ಮ ಜೀವವನ್ನು ಉಳಿಸುವುದಲ್ಲದೆ ಚಿಕಿತ್ಸೆಯನ್ನು ಸುಲಭಗೊಳಿಸುತ್ತದೆ. ಇಲ್ಲದಿದ್ದರೆ… ಅದು ಗಂಭೀರವಾಗುತ್ತದೆ.. ಕ್ಯಾನ್ಸರ್ನ ಆ ಐದು…
ಬೆಂಗಳೂರು: ಸಿದ್ದರಾಮಯ್ಯನವರೇ ಸಲಹೆ ನೀಡುವ ಯಾವುದೇ ಅರ್ಹತೆಯೂ ತಮಗಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು” ಎಂದು ಹೇಳಿದ್ದಾರೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ”ಇದಕ್ಕಾಗಿಯೇ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ, ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿವೆ” ಎಂದಿದ್ದಾರೆ. ”ನಮ್ಮ ದೇಶದಲ್ಲಿ ವೃತ್ತಿಪರ ಸೇನಾಪಡೆಗಳಿವೆ. ಯಾವ ಸಂದರ್ಭದಲ್ಲಿ ಎಂತಹ ಕ್ರಮ ಕೈಗೊಳ್ಳಬೇಕು ಎನ್ನುವ ಪರಿಣಿತಿ,…
ರಾಮ್ ಚರಣ್ ತ್ರಿಬಲ್ ಆರ್ ಸಕ್ಸಸ್ ಬಳಿಕ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಚೆರ್ರಿ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ವಿಶೇಷ ಗೌರವ ಸಲ್ಲಿಸುತ್ತಿದೆ. ಲಂಡನ್ನಲ್ಲಿರುವ ಮೇಡಂ ಟುಸಾಡ್ಸ್ ಮ್ಯೂಸಿಯಂನಲ್ಲಿ ರಾಮ್ ಚರಣ್ ಅವರ ಮೇಣದ ಪ್ರತಿಮೆ ನಿರ್ಮಾಣವಾಗಿದ್ದು, ಅದನ್ನು ಮೇ 9ಕ್ಕೆ ಅವರು ಅನಾವರಣಗೊಳಿಸಲಿದ್ದಾರೆ. ಅದಕ್ಕಾಗಿ ರಾಮ್ ಲಂಡನ್ಗೆ ತೆರಳಲಿದ್ದಾರೆ. ಜಗತ್ತಿನಾದ್ಯಂತ ಬೇರೆ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂಗಳಲ್ಲಿ ಈಗಾಗಲೇ ತೆಲುಗಿನ ಬೇರೆ ಬೇರೆ ಕಲಾವಿದರ ಪ್ರತಿಮೆಗಳಿವೆ. ‘ಬಾಹುಬಲಿ’ ನಟ ಪ್ರಭಾಸ್, ಮಹೇಶ್ ಬಾಬು, ಕಾಜಲ್ ಅಗರ್ವಾಲ್, ತಮಿಳು ನಟ ಸತ್ಯರಾಜ್ ಮುಂತಾದವರ ಅವರ ಮೇಣದ ಪ್ರತಿಮೆಗಳು ಮೇಡಮ್ ಟುಸ್ಸಾಡ್ಸ್ನಲ್ಲಿವೆ. ಸಿಂಗಾಪುರದ ಮೇಡಮ್ ಟುಸ್ಸಾಡ್ಸ್ನಲ್ಲಿ ಕಾಜಲ್ ಅಗರ್ವಾಲ್ ಮತ್ತು ಮಹೇಶ್ ಬಾಬು ಅವರ ಪ್ರತಿಮೆಗಳು ಇದ್ದರೆ, ಬಾಹುಬಲಿ ಪಾತ್ರದಲ್ಲಿರುವ ಪ್ರಭಾಸ್ ಮತ್ತು ಕಟ್ಟಪ್ಪ ಪಾತ್ರದಲ್ಲಿರುವ ಸತ್ಯರಾಜ್ ಅವರ ಮೇಣದ ಪ್ರತಿಮೆಗಳು ಲಂಡನ್ನ ಮೇಡಮ್ ಟುಸ್ಸಾಡ್ಸ್ನಲ್ಲಿವೆ. ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಇದೆ. ಇದೀಗ ಈ ಪಟ್ಟಿಗೆ ರಾಮ್ ಚರಣ್…