ಕ್ಯಾನ್ಸರ್ ಒಂದು ಗಂಭೀರ ಕಾಯಿಲೆಯಾಗಿದ್ದು ಅದು ದೇಹದಲ್ಲಿ ಮೌನವಾಗಿ ಬೆಳೆಯುತ್ತದೆ. ಕ್ಯಾನ್ಸರ್ ರೋಗವು ಮುಂದುವರಿದಾಗ ಮಾತ್ರ ಹೆಚ್ಚಾಗಿ ಪತ್ತೆಯಾಗುತ್ತದೆ. ಆದಾಗ್ಯೂ, ನಿಮ್ಮ ದೇಹವು ಕ್ಯಾನ್ಸರ್ನ ಆರಂಭಿಕ ಚಿಹ್ನೆಗಳನ್ನು ನೀಡುತ್ತದೆ. ಇವುಗಳನ್ನು ನಾವು ಹೆಚ್ಚಾಗಿ ಸಣ್ಣದಾಗಿ ಪರಿಗಣಿಸಿ ನಿರ್ಲಕ್ಷಿಸುತ್ತೇವೆ. ಈ ಮೂಕ ಚಿಹ್ನೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿದರೆ, ಚಿಕಿತ್ಸೆಯ ಸಾಧ್ಯತೆಗಳು ಹಲವು ಪಟ್ಟು ಹೆಚ್ಚಾಗುತ್ತವೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಕ್ಯಾನ್ಸರ್ ವಿರುದ್ಧದ ಹೋರಾಟವನ್ನು ಗೆಲ್ಲುವ ಮೊದಲ ಹೆಜ್ಜೆ ಅರಿವು ಮತ್ತು ಸಕಾಲಿಕ ರೋಗನಿರ್ಣಯ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಭಯಪಡುವ ಬದಲು, ಜಾಗರೂಕರಾಗಿರುವುದು ಅಗತ್ಯ. ಕ್ಯಾನ್ಸರ್ ಲಕ್ಷಣಗಳು ಕೆಲವು ಜನರಲ್ಲಿ ಬದಲಾಗಬಹುದು, ಆದರೆ ತಪ್ಪಾಗಿ ಸಹ ನಿರ್ಲಕ್ಷಿಸಬಾರದ ಕೆಲವು ಸಾಮಾನ್ಯ ಲಕ್ಷಣಗಳಿವೆ. ವೈದ್ಯರ ಪ್ರಕಾರ, ನೀವು ಈ ಲಕ್ಷಣಗಳನ್ನು ನಿರಂತರವಾಗಿ ಅನುಭವಿಸುತ್ತಿದ್ದರೆ, ತಕ್ಷಣವೇ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಈ ಸಣ್ಣ ಮುನ್ನೆಚ್ಚರಿಕೆಯು ನಿಮ್ಮ ಜೀವವನ್ನು ಉಳಿಸುವುದಲ್ಲದೆ ಚಿಕಿತ್ಸೆಯನ್ನು ಸುಲಭಗೊಳಿಸುತ್ತದೆ. ಇಲ್ಲದಿದ್ದರೆ… ಅದು ಗಂಭೀರವಾಗುತ್ತದೆ.. ಕ್ಯಾನ್ಸರ್ನ ಆ ಐದು…
Author: Author AIN
ಬೆಂಗಳೂರು: ಸಿದ್ದರಾಮಯ್ಯನವರೇ ಸಲಹೆ ನೀಡುವ ಯಾವುದೇ ಅರ್ಹತೆಯೂ ತಮಗಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು” ಎಂದು ಹೇಳಿದ್ದಾರೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ”ಇದಕ್ಕಾಗಿಯೇ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ, ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿವೆ” ಎಂದಿದ್ದಾರೆ. ”ನಮ್ಮ ದೇಶದಲ್ಲಿ ವೃತ್ತಿಪರ ಸೇನಾಪಡೆಗಳಿವೆ. ಯಾವ ಸಂದರ್ಭದಲ್ಲಿ ಎಂತಹ ಕ್ರಮ ಕೈಗೊಳ್ಳಬೇಕು ಎನ್ನುವ ಪರಿಣಿತಿ,…
ರಾಮ್ ಚರಣ್ ತ್ರಿಬಲ್ ಆರ್ ಸಕ್ಸಸ್ ಬಳಿಕ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಚೆರ್ರಿ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ವಿಶೇಷ ಗೌರವ ಸಲ್ಲಿಸುತ್ತಿದೆ. ಲಂಡನ್ನಲ್ಲಿರುವ ಮೇಡಂ ಟುಸಾಡ್ಸ್ ಮ್ಯೂಸಿಯಂನಲ್ಲಿ ರಾಮ್ ಚರಣ್ ಅವರ ಮೇಣದ ಪ್ರತಿಮೆ ನಿರ್ಮಾಣವಾಗಿದ್ದು, ಅದನ್ನು ಮೇ 9ಕ್ಕೆ ಅವರು ಅನಾವರಣಗೊಳಿಸಲಿದ್ದಾರೆ. ಅದಕ್ಕಾಗಿ ರಾಮ್ ಲಂಡನ್ಗೆ ತೆರಳಲಿದ್ದಾರೆ. ಜಗತ್ತಿನಾದ್ಯಂತ ಬೇರೆ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂಗಳಲ್ಲಿ ಈಗಾಗಲೇ ತೆಲುಗಿನ ಬೇರೆ ಬೇರೆ ಕಲಾವಿದರ ಪ್ರತಿಮೆಗಳಿವೆ. ‘ಬಾಹುಬಲಿ’ ನಟ ಪ್ರಭಾಸ್, ಮಹೇಶ್ ಬಾಬು, ಕಾಜಲ್ ಅಗರ್ವಾಲ್, ತಮಿಳು ನಟ ಸತ್ಯರಾಜ್ ಮುಂತಾದವರ ಅವರ ಮೇಣದ ಪ್ರತಿಮೆಗಳು ಮೇಡಮ್ ಟುಸ್ಸಾಡ್ಸ್ನಲ್ಲಿವೆ. ಸಿಂಗಾಪುರದ ಮೇಡಮ್ ಟುಸ್ಸಾಡ್ಸ್ನಲ್ಲಿ ಕಾಜಲ್ ಅಗರ್ವಾಲ್ ಮತ್ತು ಮಹೇಶ್ ಬಾಬು ಅವರ ಪ್ರತಿಮೆಗಳು ಇದ್ದರೆ, ಬಾಹುಬಲಿ ಪಾತ್ರದಲ್ಲಿರುವ ಪ್ರಭಾಸ್ ಮತ್ತು ಕಟ್ಟಪ್ಪ ಪಾತ್ರದಲ್ಲಿರುವ ಸತ್ಯರಾಜ್ ಅವರ ಮೇಣದ ಪ್ರತಿಮೆಗಳು ಲಂಡನ್ನ ಮೇಡಮ್ ಟುಸ್ಸಾಡ್ಸ್ನಲ್ಲಿವೆ. ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಇದೆ. ಇದೀಗ ಈ ಪಟ್ಟಿಗೆ ರಾಮ್ ಚರಣ್…
ನವದೆಹಲಿ: ಪಹಲ್ಗಾಮ್ನಲ್ಲಿ ಪಾಕಿಸ್ತಾನ ಉಗ್ರರ ದಾಳಿ ಬಳಿಕ ಭಾರತ ಮತ್ತೊಂದು ಮಾಸ್ಟರ್ ಸ್ಟ್ರೋಕ್ ನೀಡಲು ಮುಂದಾಗಿದೆ. ಹಲವು ದಿಟ್ಟ ನಿರ್ಧಾರಗಳಲ್ಲಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ಗೇಟ್ ಪಾಸ್ ಕೊಡುವುದು ಬಹಳ ಮುಖ್ಯವಾಗಿದೆ. ದೇಶದಲ್ಲಿ ಅಡಗಿರುವ ಪಾಕ್ ನಾಗರಿಕರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲು ತಾಕೀತು ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನಗಳೆರಡರ ನಡುವಿನ ಸಂಬಂಧ ಹಳಸಿದೆ. ಇದೀಗ ಭಾರತದಲ್ಲಿ ಪಾಕಿಸ್ತಾನೀಯರ ವೀಸಾ ರದ್ದುಗೊಳಿಸಲು ಆದೇಶಿಸಲಾಗಿದೆ ಹಾಗೂ ಪಾಕಿಸ್ತಾನಿ ಪ್ರಜೆಗಳಿಗೆ ಭಾರತದೊಳಗೆ ಪ್ರವೇಶ ನಿಷೇಧಿಸಲಾಗಿದೆ. ಈಗಾಗಲೇ ಬೇರೆ ಬೇರೆ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಮಾಡಿ ವಾಪಾಸ್ ಕಳುಹಿಸಲು ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಭಾರತದಲ್ಲಿ ಪಾಕಿಸ್ತಾನದ 14,000 ಪ್ರಜೆಗಳು ಇರಬಹುದೆಂದು ಅಂದಾಜು ಮಾಡಲಾಗಿದೆ. ಭಾರತ ಸರ್ಕಾರ ವಾರ್ಷಿಕ 1.5-2 ಲಕ್ಷ ಪಾಕಿಸ್ತಾನ ಪ್ರಜೆಗಳಿಗೆ ವೀಸಾ ನೀಡುತ್ತದೆ. ವಿವಿಧ ಉದ್ದೇಶಗಳಿಗಾಗಿ ಪಾಕ್ ಪ್ರಜೆಗಳಿಗೆ ಭಾರತ ವೀಸಾ ನೀಡುತ್ತದೆ. ಕುಟುಂಬ ಸದಸ್ಯರು, ಸ್ನೇಹಿತರನ್ನು ಭೇಟಿಯಾಗಲು ವಿಸಿಟರ್ ವೀಸಾ ನೀಡಲಾಗುವುದು.…
ಇತ್ತೀಚಿನ ದಿನಗಳಲ್ಲಿ ರೆಫ್ರಿಜರೇಟರ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಗ್ರಾಮೀಣ ಭಾಗಗಳಲ್ಲೂ ಕೂಡ ಬಹುತೇಕ ಎಲ್ಲರ ಮನೆಯಲ್ಲಿಯೂ ಫ್ರಿಜ್ ಇದ್ದೇ ಇರುತ್ತದೆ. ಮನೆಯಲ್ಲಿ ಹಣ್ಣು ತರಕಾರಿಗಳನ್ನು, ಆಹಾರವನ್ನು ತಾಜಾವಾಗಿಡಲು ಫ್ರಿಡ್ಜ್ ತುಂಬಾ ಪ್ರಯೋಜನಕಾರಿ ಆಗಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಅದರಲ್ಲಿಯೂ ಡಬಲ್ ಡೋರ್ ಫ್ರಿಡ್ಜ್ ಕೊಳ್ಳುವವರಿಗಿಂತ ಸಿಂಗಲ್ ಡೋರ್ ಫ್ರಿಜ್ ಕೊಳ್ಳುವವರೇ ಹೆಚ್ಚು. ಆದರೆ ನೀರನ್ನು ಸ್ವಚ್ಛಗೊಳಿಸುವ ನೀರಿನ ಫಿಲ್ಟರ್ ಮುರಿದರೆ ಫ್ರಿಜ್ನಲ್ಲಿ ಐಸ್ ರೂಪುಗೊಳ್ಳುತ್ತದೆ. ಇದರಿಂದ ನೀವು ಫ್ರಿಜ್ನಲ್ಲಿ ಇಟ್ಟಿದ್ದ ವಸ್ತುಗಳೆಲ್ಲವೂ ಮಂಜುಗಡ್ಡೆಯಿಂದ ಮುಚ್ಚಲ್ಪಡುತ್ತದೆ. ಫ್ರೀಜರ್ ಅನ್ನು ಸರಿಯಾದ ತಾಪಮಾನಕ್ಕೆ ಹೊಂದಿಸಿನಿಮ್ಮ ಫ್ರೀಜರ್ನಲ್ಲಿ ಐಸ್ ನಿರ್ಮಾಣವಾಗುವುದನ್ನು ತಡೆಯಲು, ಫ್ರೀಜರ್ ತಾಪಮಾನವನ್ನು -18 ಡಿಗ್ರಿ ಫ್ಯಾರನ್ಹೀಟ್ಗೆ ಹೊಂದಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ. ನಿಮ್ಮ ಫ್ರೀಜರ್ ಈ ತಾಪಮಾನಕ್ಕಿಂತ ಹೆಚ್ಚಿದ್ದರೆ, ಅದನ್ನು ಕಡಿಮೆ ಮಾಡಿ. ಇಲ್ಲದಿದ್ದರೆ, ಹೆಚ್ಚಿನ ಐಸ್ ಫ್ರಿಡ್ಜ್ನಲ್ಲಿ ಘನೀಕರಿಸಲು ಪ್ರಾರಂಭಿಸುತ್ತದೆ. ಫ್ರೀಜರ್ ಅನ್ನು ಪೂರ್ಣವಾಗಿಸಿ ಫ್ರೀಜರ್ನಲ್ಲಿ ಮಂಜುಗಡ್ಡೆ ನಿರ್ಮಾಣವಾಗುವುದನ್ನು ತಡೆಯಲು, ಅದನ್ನು ಪೂರ್ಣವಾಗಿ ಇರಿಸಿಕೊಳ್ಳಿ. ಏಕೆಂದರೆ ಫ್ರೀಜರ್ನಲ್ಲಿ ಹೆಚ್ಚಿನ ಸ್ಥಳವಿದ್ದಾಗ,…
ಭಾರತದ ಸ್ಟಾರ್ ಬ್ಯಾಡ್ಮಿಟನ್ ಆಟಗಾರ್ತಿ ಪಿ.ವಿ.ಸಿಂಧು ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗಿನ ಸೌಂದರ್ಯಕ್ಕೆ ಮಾತ್ರವಲ್ಲ ನಮ್ಮ ಹೆಮ್ಮೆಯ ಕೆಂಪು ಸೈನ್ಯಕ್ಕೂ ಫಿದಾ ಆಗಿದ್ದಾರೆ. ಪಿವಿ ಸಿಂಧು ಮೂಲತಃ ತೆಲಂಗಾಣದ ರಾಜಧಾನಿ ಹೈದ್ರಾಬಾದ್ನವರು. ಕಳೆದ ಕೆಲ ವಾರಗಳಿಂದ ಮಡಿಕೇರಿಯಲ್ಲಿ ಪತಿ ಹಾಗೂ ಸ್ನೇಹಿತರೊಟ್ಟಿಗೆ ಸಮಯ ಕಳೆದಿದ್ದಾರೆ. ಕೊಡಗಿನ ಪ್ರಕೃತಿ ಸೌಂದರ್ಯಕ್ಕೆ ಮಾರು ಹೋಗಿರುವ ಅವರು ಅಲ್ಲಿಯೇ ಒಂದು ಎಸ್ಟೇಟ್ ಖರೀದಿಸುವ ಬಗ್ಗೆಯೂ ಆಶಯ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ನಡುವೆ ಸಿಂಧು ಮೊನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ ವರ್ಸಸ್ ಆರ್ ಆರ್ ಪಂದ್ಯಕ್ಕೆ ಹಾಜರಾತಿ ಹಾಕಿದ್ದಾರೆ. ಈ ವೇಳೆ ಆರ್ಸಿಬಿ ಬಾವುಟ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಸಿಂಧು ಮೂಲತಃ ಹೈದ್ರಾಬಾದ್ನವರು. ಆದ್ರೆ ತಮ್ಮದೇ ಹೈದ್ರಾಬಾದ್ ಸನ್ ರೈಸರ್ಸ್ ತಂಡದ ಬದಲು ಬೆಂಗಳೂರು ರಾಯಲ್ ಚಾಲೆಂಜರ್ಸ್ನ್ನು ತುಂಬಾ ಇಷ್ಟಪಟ್ಟಿದ್ದಾರೆ. ಅಲ್ಲದೇ ಈ ಬಾರಿ ಆರ್ಬಿಸಿ ಅಭಿಮಾನಿಗಳ ಧ್ಯೇಯ ವಾಕ್ಯದಂತಿರುವ ಈ ಸಲ ಕಪ್ ನಮ್ಮದೇ ಎಂದಿದ್ದಾರೆ. ಆರ್ಸಿಬಿ ಹೋಮ್ ಗ್ರೌಂಡ್ನಲ್ಲಿ ಹ್ಯಾಟ್ರಿಕ್…
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ, ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಪಟಾಕಿ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರನ್ಯಾ ರಾವ್ ಅವರನ್ನು ಬಂಧಿಸಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ರನ್ಯಾ ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಇನ್ನು ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರವಾಗಿಯೇ ಇರಲಿದೆ. ನ್ಯಾಯಮೂರ್ತಿ ವಿಶ್ವಜಿತ್ ಪೀಠ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದರು. ಆರೋಪಿ ರನ್ಯಾರಾವ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು. ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ರನ್ಯಾರಾವ್ ಪರಪ್ಪನ ಅಗ್ರಹಾರಕ್ಕೆ ಹೋಗಿ 50 ದಿನಗಳು ಆಗಿದೆ. ಮಾ. 3ರಂದು ಡಿಆರ್ಐ ಅಧಿಕಾರಿಗಳು ರನ್ಯಾರಾವ್ರನ್ನ ಬಂಧನ ಮಾಡಿ ಜೈಲಿಗೆ ಕಳಿಸಿದ್ದರು. ಇಲ್ಲಿಯವರೆಗೆ 2…
ಭಾರತೀಯ ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ರಜನಿಕಾಂತ್ ಕೆಲಮೊಮ್ಮೆ ಸರಳತೆಯಿಂದ ಗಮನಸೆಳೆಯುತ್ತಾರೆ. ನೂರಾರು ಕೋಟಿ ಒಡೆಯನಾಗಿರುವ ತಲೈವರ್ ತಮ್ಮದೇ 8 ಕೋಟಿ ಪ್ರೈವೇಟ್ ಜೆಟ್ ಹೊಂದಿದ್ದಾರೆ. ಆದರೂ ಎಕಾನಮಿ ಫ್ಲೈಟ್ ಏರಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೂಪರ್ ಸ್ಟಾರ್ ತಲೈವರ್ ತಮ್ಮದೇ ಖಾಸಗಿ ಜೆಟ್ ಹೊಂದಿದ್ದಾರೆ. ಅವರು ಮಾತ್ರವಲ್ಲ ಲೇಡಿ ಸೂಪರ್ ಸ್ಟಾರ್ ನಯನ್ ತಾರಾ, ರಾಮ್ ಚರಣ್, ಅಕ್ಕಿನೇನಿ ನಾಗಾರ್ಜುನ್, ಪವನ್, ಪ್ರಭಾಸ್ ಹೀಗೆ ಬಹುತೇಕರು ತಮ್ಮ ಖಾಸಗಿ ಜೆಟ್ ನಲ್ಲಿ ಪ್ರಯಾಣಿಸುವುದೇ ಸರ್ವೇ ಸಾಮಾನ್ಯ. ಆದ್ರೆ ರಜನಿಕಾಂತ್ ಕೇರಳದಲ್ಲಿ ಚೆನ್ನೈಗೆ ಎಕಾನಮಿ ಫ್ಲೈಟ್ ನಲ್ಲಿ ಪ್ರಯಾಣಿಸಿದ್ದಾರೆ. ರಜನಿ ಕಂಡು ಅಭಿಮಾನಿಗಳು ಚಕಿತರಾಗಿದ್ದು. ಈ ವೇಳೆ ತಲೈವರ್ ಕೈಬೀಸಿ ಅಭಿಮಾನಿಗಳಿಗೆ ವಿನ್ರಮವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕೇರಳದಲ್ಲಿ ಕಳೆದೊಂದು ವಾರದಿಂದ ಜೈಲರ್ 2 ಶೂಟಿಂಗ್ ನಡೆಯುತ್ತಿತ್ತು. ಚಿತ್ರೀಕರಣಕ್ಕಾಗಿ ಅಲಿಯೇ ಬೀಡು ಬಿಟ್ಟಿದ್ದರು. ಇದೀಗ ಚಿತ್ರೀಕರಣ ಮುಗಿಸಿಕೊಂಡು ಚೆನ್ನೈಗೆ ಎಕಾನಮಿ ಕ್ಲಾಸ್ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ರಜನಿ ಸರಳತೆ ಕಂಡು ಫ್ಯಾನ್ಸ್…
ಭಾರತದ ಯುವ ವೇಗಿ ಉಮ್ರಾನ್ ಮಲಿಕ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಋತುವಿನ ಮಧ್ಯದಲ್ಲಿ ಹೊಸ ಲುಕ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಸೇರಿಕೊಂಡಿದ್ದಾರೆ. ಆದಾಗ್ಯೂ, ಈ ಬಾರಿ ಅವರು ಆಟದ ಸದಸ್ಯರಾಗಿರಲಿಲ್ಲ, ಬದಲಿಗೆ “ಬ್ಯಾಕ್ ಟು ಕ್ರಿಕೆಟ್” ಪುನರ್ವಸತಿ ಕಾರ್ಯಕ್ರಮದಡಿಯಲ್ಲಿ ತಂಡದ ಭಾಗವಾಗಿದ್ದರು. ಈ ಹಿಂದೆ ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಭಾಗವಾಗಿದ್ದ ಉಮ್ರಾನ್ ಅವರನ್ನು 2025 ರ ಐಪಿಎಲ್ ಮೆಗಾ ಹರಾಜಿಗೆ ಮುಂಚಿತವಾಗಿ ಅವರು ಬಿಡುಗಡೆ ಮಾಡಿದರು ಮತ್ತು ನಂತರ ಕೆಕೆಆರ್ ಖರೀದಿಸಿತು. ಆದರೆ ಗಾಯದ ಕಾರಣ ಅವರು ಈ ಋತುವಿನಿಂದ ಹೊರಗುಳಿಯಬೇಕಾಯಿತು. ಅಂದಿನಿಂದ, ಅವರು ಮತ್ತೆ ದೈಹಿಕವಾಗಿ ಸಿದ್ಧರಾಗಲು ಶ್ರಮಿಸುತ್ತಿದ್ದಾರೆ, ಪೂರ್ಣವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕೆಕೆಆರ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಏಪ್ರಿಲ್ 25 ರಂದು ಇದನ್ನು ದೃಢಪಡಿಸಿತು. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಐಪಿಎಲ್ 2024 ರ ಕೊನೆಯ ಋತುವಿನಲ್ಲಿ ಉಮ್ರಾನ್ ಮಲಿಕ್ SRH ಪರ ಕೇವಲ ಒಂದು ಪಂದ್ಯವನ್ನು ಮಾತ್ರ ಆಡುವಲ್ಲಿ…
ಬೆಂಗಳೂರು: ರಾಪಿಡೊ, ಉಬರ್, ಓಲಾ ಮುಂತಾದ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಸ್ಪಷ್ಟ ನಿಯಮಗಳನ್ನು ರಚಿಸಲು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಇದೀಗ ಹೈಕೋರ್ಟ್ನ ಆದೇಶದ ಅನುಸಾರ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅವರ ಹಲವು ವರ್ಷಗಳ ಹೋರಾಟಕ್ಕೆ ಗೆಲುವಾಗಿದೆ. ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ…