ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ, ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಪಟಾಕಿ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರನ್ಯಾ ರಾವ್ ಅವರನ್ನು ಬಂಧಿಸಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ರನ್ಯಾ ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಇನ್ನು ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರವಾಗಿಯೇ ಇರಲಿದೆ. ನ್ಯಾಯಮೂರ್ತಿ ವಿಶ್ವಜಿತ್ ಪೀಠ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದರು. ಆರೋಪಿ ರನ್ಯಾರಾವ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಾಡಿದ್ದರು. ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ರನ್ಯಾರಾವ್ ಪರಪ್ಪನ ಅಗ್ರಹಾರಕ್ಕೆ ಹೋಗಿ 50 ದಿನಗಳು ಆಗಿದೆ. ಮಾ. 3ರಂದು ಡಿಆರ್ಐ ಅಧಿಕಾರಿಗಳು ರನ್ಯಾರಾವ್ರನ್ನ ಬಂಧನ ಮಾಡಿ ಜೈಲಿಗೆ ಕಳಿಸಿದ್ದರು. ಇಲ್ಲಿಯವರೆಗೆ 2…
Author: Author AIN
ಭಾರತೀಯ ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ರಜನಿಕಾಂತ್ ಕೆಲಮೊಮ್ಮೆ ಸರಳತೆಯಿಂದ ಗಮನಸೆಳೆಯುತ್ತಾರೆ. ನೂರಾರು ಕೋಟಿ ಒಡೆಯನಾಗಿರುವ ತಲೈವರ್ ತಮ್ಮದೇ 8 ಕೋಟಿ ಪ್ರೈವೇಟ್ ಜೆಟ್ ಹೊಂದಿದ್ದಾರೆ. ಆದರೂ ಎಕಾನಮಿ ಫ್ಲೈಟ್ ಏರಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೂಪರ್ ಸ್ಟಾರ್ ತಲೈವರ್ ತಮ್ಮದೇ ಖಾಸಗಿ ಜೆಟ್ ಹೊಂದಿದ್ದಾರೆ. ಅವರು ಮಾತ್ರವಲ್ಲ ಲೇಡಿ ಸೂಪರ್ ಸ್ಟಾರ್ ನಯನ್ ತಾರಾ, ರಾಮ್ ಚರಣ್, ಅಕ್ಕಿನೇನಿ ನಾಗಾರ್ಜುನ್, ಪವನ್, ಪ್ರಭಾಸ್ ಹೀಗೆ ಬಹುತೇಕರು ತಮ್ಮ ಖಾಸಗಿ ಜೆಟ್ ನಲ್ಲಿ ಪ್ರಯಾಣಿಸುವುದೇ ಸರ್ವೇ ಸಾಮಾನ್ಯ. ಆದ್ರೆ ರಜನಿಕಾಂತ್ ಕೇರಳದಲ್ಲಿ ಚೆನ್ನೈಗೆ ಎಕಾನಮಿ ಫ್ಲೈಟ್ ನಲ್ಲಿ ಪ್ರಯಾಣಿಸಿದ್ದಾರೆ. ರಜನಿ ಕಂಡು ಅಭಿಮಾನಿಗಳು ಚಕಿತರಾಗಿದ್ದು. ಈ ವೇಳೆ ತಲೈವರ್ ಕೈಬೀಸಿ ಅಭಿಮಾನಿಗಳಿಗೆ ವಿನ್ರಮವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕೇರಳದಲ್ಲಿ ಕಳೆದೊಂದು ವಾರದಿಂದ ಜೈಲರ್ 2 ಶೂಟಿಂಗ್ ನಡೆಯುತ್ತಿತ್ತು. ಚಿತ್ರೀಕರಣಕ್ಕಾಗಿ ಅಲಿಯೇ ಬೀಡು ಬಿಟ್ಟಿದ್ದರು. ಇದೀಗ ಚಿತ್ರೀಕರಣ ಮುಗಿಸಿಕೊಂಡು ಚೆನ್ನೈಗೆ ಎಕಾನಮಿ ಕ್ಲಾಸ್ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ರಜನಿ ಸರಳತೆ ಕಂಡು ಫ್ಯಾನ್ಸ್…
ಭಾರತದ ಯುವ ವೇಗಿ ಉಮ್ರಾನ್ ಮಲಿಕ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಋತುವಿನ ಮಧ್ಯದಲ್ಲಿ ಹೊಸ ಲುಕ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಸೇರಿಕೊಂಡಿದ್ದಾರೆ. ಆದಾಗ್ಯೂ, ಈ ಬಾರಿ ಅವರು ಆಟದ ಸದಸ್ಯರಾಗಿರಲಿಲ್ಲ, ಬದಲಿಗೆ “ಬ್ಯಾಕ್ ಟು ಕ್ರಿಕೆಟ್” ಪುನರ್ವಸತಿ ಕಾರ್ಯಕ್ರಮದಡಿಯಲ್ಲಿ ತಂಡದ ಭಾಗವಾಗಿದ್ದರು. ಈ ಹಿಂದೆ ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಭಾಗವಾಗಿದ್ದ ಉಮ್ರಾನ್ ಅವರನ್ನು 2025 ರ ಐಪಿಎಲ್ ಮೆಗಾ ಹರಾಜಿಗೆ ಮುಂಚಿತವಾಗಿ ಅವರು ಬಿಡುಗಡೆ ಮಾಡಿದರು ಮತ್ತು ನಂತರ ಕೆಕೆಆರ್ ಖರೀದಿಸಿತು. ಆದರೆ ಗಾಯದ ಕಾರಣ ಅವರು ಈ ಋತುವಿನಿಂದ ಹೊರಗುಳಿಯಬೇಕಾಯಿತು. ಅಂದಿನಿಂದ, ಅವರು ಮತ್ತೆ ದೈಹಿಕವಾಗಿ ಸಿದ್ಧರಾಗಲು ಶ್ರಮಿಸುತ್ತಿದ್ದಾರೆ, ಪೂರ್ಣವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕೆಕೆಆರ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಏಪ್ರಿಲ್ 25 ರಂದು ಇದನ್ನು ದೃಢಪಡಿಸಿತು. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಐಪಿಎಲ್ 2024 ರ ಕೊನೆಯ ಋತುವಿನಲ್ಲಿ ಉಮ್ರಾನ್ ಮಲಿಕ್ SRH ಪರ ಕೇವಲ ಒಂದು ಪಂದ್ಯವನ್ನು ಮಾತ್ರ ಆಡುವಲ್ಲಿ…
ಬೆಂಗಳೂರು: ರಾಪಿಡೊ, ಉಬರ್, ಓಲಾ ಮುಂತಾದ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಸ್ಪಷ್ಟ ನಿಯಮಗಳನ್ನು ರಚಿಸಲು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಇದೀಗ ಹೈಕೋರ್ಟ್ನ ಆದೇಶದ ಅನುಸಾರ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅವರ ಹಲವು ವರ್ಷಗಳ ಹೋರಾಟಕ್ಕೆ ಗೆಲುವಾಗಿದೆ. ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ…
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ರಾಮಾಯಣ ಸಿನಿಮಾ ಮುಂದಿನ ವರ್ಷದ ದೀಪಾವಳಿ 2026 ರಂದು ಬಿಡುಗಡೆಯಾಗಲಿದೆ. ದಂಗಲ್ ಮತ್ತು ಚಿಚೋರೆ ಖ್ಯಾತಿಯ ನಿರ್ದೇಶಕರ ನಿತೇಶ್ ತಿವಾರಿ ಸಾರಥ್ಯದಲ್ಲಿ ಈ ದೃಶ್ಯಕಾವ್ಯ ಮೂಡಿ ಬರುತ್ತಿದೆ. ಕಳೆದ ವರ್ಷ ನವೆಂಬರ್ನಲ್ಲಿ ಟೀಸರ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಆದ್ರೆ ಇಲ್ಲಿವರೆಗೂ ರಾಮಾಯಣ ಮೊದಲ ಭಾಗದ ಸಣ್ಣದೊಂದು ಅಪ್ಡೇಟ್ ಕೂಡ ಸಿಕ್ಕಿಲ್ಲ. ಇದೀಗ ಚಿತ್ರತಂಡ ಆ ವೇದಿಕೆಯಲ್ಲಿ ಪೋಸ್ಟರ್ ಅಥವಾ ವಿಡಿಯೋ ಬಿಡುಗಡೆ ಮಾಡಲು ಸಜ್ಜಾಗುತ್ತಿದೆಯಂತೆ. ಮೇರಿಂದ 1 4,ರವೆರೆಗೆ ನಡೆಯಲಿರುವ “ಮೊದಲ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ-ವೇವ್ಸ್” ವೇದಿಕೆಯಲ್ಲಿ ರಾಮಾಯಣದ ಮೊದಲ ಝಲಕ್ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆಯಂತೆ. ಚಿತ್ರರಂಗದ ವಿವಿಧ ತಾರೆಯರು ಈ ವೇದಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಇಲ್ಲಿ ಟೀಸರ್ ಅಥವಾ ಪೋಸ್ಟರ್ ಲಾಂಚ್ ಮಾಡಿದರೆ ಪ್ರೇಕ್ಷಕರಿಗೆ ತಲುಪಲಿದೆ ಎಂಬ ಐಡಿಯಾವನ್ನು ಚಿತ್ರತಂಡ ಹಾಕಿಕೊಂಡಿದೆಯಂತೆ. ರಾಮಾಯಣ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಸನ್ನಿ ಡಿಯೋಲ್ ಹನುಮಂತನ…
ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ನಂತರ ಬಿಬಿಎಂಪಿಗೆ ಚುನಾವಣೆ ನಡೆಸ್ತೇವೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಲ್ಲದಿರೋದನ್ನು ಇದೆ ಅಂತ ತೋರಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. ಗ್ರೇಟರ್ ಬೆಂಗಳೂರು ಕಾಯ್ದೆ ಮೂಲಕ ಬಿಬಿಎಂಪಿ ಚುನಾವಣೆ ಇನ್ನಷ್ಟು ವಿಳಂಬ ಮಾಡಲು ಹೊರಟಿದ್ದಾರೆ. ಇವರು ಬಂದ ನಂತರ ಕನಿಷ್ಠ ರಸ್ತೆ ಗುಂಡಿ ಮುಚ್ಚಿಲ್ಲ, ಅಭಿವೃದ್ಧಿ ಇಲ್ವೇ ಇಲ್ಲ. ಇದೆಲ್ಲ ಡಿಕೆಶಿ ನಿರ್ಧಾರಗಳು. ಅವರೇ ಈ ಕಾಯ್ದೆ ತರಲು ಹೊರಟಿರುವ ಬಾಸ್. ಮುಂದಿನ ಸಲ ಇವರು ಗೆಲ್ಲೋದಿಲ್ಲ, ಇವರ ನಂತರ ನಾವೇ ಮತ್ತೆ ಅಧಿಕಾರಕ್ಕೆ ಬರ್ತೇವೆ. ನಾವು ಬಂದ ನಂತರ ಈಗಿರುವ ಬಿಬಿಎಂಪಿಗೆ ಚುನಾವಣೆ ನಡೆಸ್ತೇವೆ” ಎಂದು ತಿಳಿಸಿದರು. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ರಡು ಏರ್ ಪೋರ್ಟ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ಅದರ ಬಗ್ಗೆ ಇನ್ನೊಮ್ಮೆ ಮಾತಾಡೋಣ. ದೆಹಲಿ ರಾಷ್ಟ್ರದ ರಾಜಧಾನಿ. ಅಲ್ಲಿಯ ಏರ್ಪೋರ್ಟ್ನಲ್ಲಿ ಎಲ್ಲ ಒಂದೇ ಕಡೆ ಇಲ್ವಾ?. ಟರ್ಮಿನಲ್ 1-2-3 ಎಲ್ಲಾ ಇಲ್ವಾ?. ಎಲ್ಲಾ ಒಂದೇ ಕಡೆ ಇದ್ದರೆ ಒಳ್ಳೆದಾಗುತ್ತದೆ. ನಾನು ಬೆಂಗಳೂರು…
ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿರುವ ಸ್ಲೀಪರ್ ಸೆಲ್ಗಳನ್ನು ಮಟ್ಟ ಹಾಕಬೇಕಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿರುವ ಸ್ಲೀಪರ್ ಸೆಲ್ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಜಾಮೀನು ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಸಹ ಬಿಡಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು ಎಂದು ಅಶೋಕ್ ಹೇಳಿದರು. ಜನತೆಯ ಮೇಲೆ ಕಾಂಗ್ರೆಸ್ ಸರ್ಕಾರ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಗುವುದು ಎಂದರು.
ಬೆಂಗಳೂರು: ಏರ್ಫೋರ್ಸ್ ಅಧಿಕಾರಿ, ವಿಂಗ್ ಕಮಾಂಡರ್ ಶಿಲಾದಿತ್ಯ ಹಾಗೂ ಟೆಕ್ಕಿ ವಿಕಾಸ್ ಕುಮಾರ್ ನಡುವಿನ ಗಲಾಟೆ ದೇಶಮಟ್ಟದಲ್ಲಿ ಸದ್ದು ಮಾಡಲಾರಂಭಿಸಿದೆ. ಅಲ್ಲದೇ ಈ ಪ್ರಕರಣ ಸಂಬಂಧ ಸಾಮಾಜಿಕ ಜತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕೊಲೆ ಯತ್ನ ಪ್ರಕರಣದಲ್ಲಿ ಭಾರತೀಯ ವಾಯುಸೇನೆಯ (ಐಎಎಫ್) ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ರಾಜ್ಯ ಪೊಲೀಸರಿಗೆ ಆದೇಶಿಸಿರುವ ಹೈಕೋರ್ಟ್, ಇದೇ ವೆಳೆ ತನಿಖೆಗೆ ಸಹಕರಿಸುವಂತೆ ಬೋಸ್ಗೆ ಸೂಚಿಸಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಆನಂತರದ ನ್ಯಾಯಿಕ ಪ್ರಕ್ರಿಯೆ ರದ್ದತಿ ಕೋರಿ ಪಶ್ಚಿಮ ಬಂಗಾಳದ ಐಎಎಫ್ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು. ಹಿರಿಯ ವಕೀಲ ಎಂ ಅರುಣ ಶ್ಯಾಮ್ ಅವರ ವಾದ ಆಲಿಸಿದ ಪೀಠವು ಬೈಯಪ್ಪನಹಳ್ಳಿ ಪೊಲೀಸರು ಶಿಲಾದಿತ್ಯ ಬೋಸ್ ವಿರುದ್ದ ಬಲವಂತದ ಕ್ರಮಕೈಗೊಳ್ಳಬಾರದು. ಕಾನೂನು ಪರಿಪಾಲಿಸದೇ ಅರ್ಜಿದಾರರಿಗೆ ವಿಚಾರಣೆಗೆ…
ಇಸ್ಲಾಮಾಬಾದ್: ಪಹಲ್ಗಾಮ್ ದಾಳಿಯ ನಂತರ ಭಾರತ ಸರ್ಕಾರ ಪಾಕಿಸ್ತಾನದ ಮೇಲೆ ಕಠಿಣ ನಿರ್ಧಾರ ತಾಳಿದೆ. ಉರಿ ಸೇನಾ ಕ್ಯಾಂಪ್, ಪುಲ್ವಾಮಾ ದಾಳಿ ಸಂದರ್ಭದಲ್ಲಿ ಭಾರತೀಯ ಸೇನೆ ದೊಡ್ಡ ಮೊಟ್ಟದಲ್ಲೇ ಪ್ರತೀಕಾರ ತೀರಿಸಿಕೊಂಡಿತ್ತು. ಇಷ್ಟಾದರೂ ಬುದ್ಧಿಕಲಿಯದ ಉಗ್ರ ಪೋಷಕನಿಗೆ ಸರಿಯಾದ ಪಾಠ ಕಲಿಸಲು ಭಾರತ ಮುಂದಾಗಿದೆ. ಈ ತಂತ್ರದ ಪ್ರಮುಖ ಅಂಶವೇ ಸಿಂಧೂ ಜಲ ಒಪ್ಪಂದ ತಾತ್ಕಾಲಿಕವಾಗಿ ಅಮಾನತು ಮಾಡೋದು. ಅಂತೆಯೇ ಸಭೆಯಲ್ಲಿ ತಾತ್ಕಾಲಿಕವಾಗಿ ಒಪ್ಪಂದವನ್ನು ಅಮಾನತಿನಲ್ಲಿಡಲು ನಿರ್ಧರಿಸಲಾಗಿದೆ. ಇದನ್ನು ಕೇಳಿರುವ ಪಾಕ್ ಬುಡಕ್ಕೆ ಬೆಂಕಿ ಬಿದ್ದಂತೆ ವರ್ತಿಸಲು ಶುರುಮಾಡಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಇದರ ಬೆನ್ನಲ್ಲೇ ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ನಾಲಿಗೆ ಹರಿಬಿಟ್ಟಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಭುಟ್ಟೋ, ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು…
ವಾಷಿಂಗ್ಟನ್: ಪಹಲ್ಗಾಮ್ನಲ್ಲಿ ರಕ್ತದೋಕುಳಿ ಹರಿಸಿರೋ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳೋದಕ್ಕೆ ಭಾರತೀಯ ಸೇನೆ ಮುಂದಾಗಿದೆ. ಉಗ್ರರನ್ನ ಸದೆಬಡೆಯೋದಕ್ಕೆ ಕೇಂದ್ರ ಸರ್ಕಾರ ತಂತ್ರ ರೂಪಿಸ್ತಿದೆ. ಇನ್ನು ಇದರ ನಡುವೆ ನಾನು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಕ್ಕೂ ಆಪ್ತನಾಗಿದ್ದೇನೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಈ ಎರಡೂ ದೇಶಗಳ ನಡುವೆ ದಶಕಗಳಿಂದಲೂ ಉದ್ವಿಗ್ನತೆ ಇದೆ. ಈ ಉದ್ವಿಗ್ನತೆಯನ್ನು ಒಂದಲ್ಲ ಒಂದು ರೀತಿಯಲ್ಲಿ ಅವರು ಬಗೆಹರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರು. ಪಹಲ್ಗಾಮ್ ಉಗ್ರರ ದಾಳಿಯ ವಿಚಾರವಾಗಿ, ಇದು ತುಂಬಾ ಭೀಕರ ದಾಳಿಯಾಗಿದೆ. ಇಂತಹ ಉದ್ವಿಗ್ನ ಪರಿಸ್ಥಿತಿ ಭಾರತ ಪಾಕ್ ನಡುವೆ ಹಲವಾರು ವರ್ಷಗಳಿಂದಲೂ ಇದೆ. ಎರಡೂ ದೇಶಗಳು ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳುತ್ತಾರೆ ಎಂದಿದ್ದಾರೆ. ಮಂಗಳವಾರ ಪಹಲ್ಗಾಮ್ ಬಳಿಯ ಬೈಸರನ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು…