Author: Author AIN

ಬೆಂಗಳೂರು: ರಾಪಿಡೊ, ಉಬರ್, ಓಲಾ ಮುಂತಾದ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಸ್ಪಷ್ಟ ನಿಯಮಗಳನ್ನು ರಚಿಸಲು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಇದೀಗ ಹೈಕೋರ್ಟ್‌ನ ಆದೇಶದ ಅನುಸಾರ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅವರ ಹಲವು ವರ್ಷಗಳ ಹೋರಾಟಕ್ಕೆ ಗೆಲುವಾಗಿದೆ. ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ.‌ https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ…

Read More

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ರಾಮಾಯಣ ಸಿನಿಮಾ ಮುಂದಿನ ವರ್ಷದ ದೀಪಾವಳಿ 2026 ರಂದು ಬಿಡುಗಡೆಯಾಗಲಿದೆ. ದಂಗಲ್ ಮತ್ತು ಚಿಚೋರೆ ಖ್ಯಾತಿಯ ನಿರ್ದೇಶಕರ ನಿತೇಶ್ ತಿವಾರಿ ಸಾರಥ್ಯದಲ್ಲಿ ಈ ದೃಶ್ಯಕಾವ್ಯ ಮೂಡಿ ಬರುತ್ತಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಟೀಸರ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಆದ್ರೆ ಇಲ್ಲಿವರೆಗೂ ರಾಮಾಯಣ ಮೊದಲ ಭಾಗದ ಸಣ್ಣದೊಂದು ಅಪ್ಡೇಟ್‌ ಕೂಡ ಸಿಕ್ಕಿಲ್ಲ. ಇದೀಗ ಚಿತ್ರತಂಡ ಆ ವೇದಿಕೆಯಲ್ಲಿ ಪೋಸ್ಟರ್‌ ಅಥವಾ ವಿಡಿಯೋ ಬಿಡುಗಡೆ ಮಾಡಲು ಸಜ್ಜಾಗುತ್ತಿದೆಯಂತೆ. ಮೇರಿಂದ 1 4,ರವೆರೆಗೆ ನಡೆಯಲಿರುವ “ಮೊದಲ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ-ವೇವ್ಸ್‌”  ವೇದಿಕೆಯಲ್ಲಿ ರಾಮಾಯಣದ ಮೊದಲ ಝಲಕ್‌ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆಯಂತೆ. ಚಿತ್ರರಂಗದ ವಿವಿಧ ತಾರೆಯರು ಈ ವೇದಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಇಲ್ಲಿ ಟೀಸರ್‌ ಅಥವಾ ಪೋಸ್ಟರ್‌ ಲಾಂಚ್‌ ಮಾಡಿದರೆ ಪ್ರೇಕ್ಷಕರಿಗೆ ತಲುಪಲಿದೆ ಎಂಬ ಐಡಿಯಾವನ್ನು ಚಿತ್ರತಂಡ ಹಾಕಿಕೊಂಡಿದೆಯಂತೆ. ರಾಮಾಯಣ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಸನ್ನಿ ಡಿಯೋಲ್ ಹನುಮಂತನ…

Read More

ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ನಂತರ ಬಿಬಿಎಂಪಿಗೆ ಚುನಾವಣೆ ನಡೆಸ್ತೇವೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಲ್ಲದಿರೋದನ್ನು ಇದೆ ಅಂತ ತೋರಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. ಗ್ರೇಟರ್​​ ಬೆಂಗಳೂರು ಕಾಯ್ದೆ ಮೂಲಕ ಬಿಬಿಎಂಪಿ ಚುನಾವಣೆ ಇನ್ನಷ್ಟು ವಿಳಂಬ ಮಾಡಲು ಹೊರಟಿದ್ದಾರೆ. ಇವರು ಬಂದ ನಂತರ ಕನಿಷ್ಠ ರಸ್ತೆ ಗುಂಡಿ ಮುಚ್ಚಿಲ್ಲ, ಅಭಿವೃದ್ಧಿ ಇಲ್ವೇ ಇಲ್ಲ. ಇದೆಲ್ಲ ಡಿಕೆಶಿ ನಿರ್ಧಾರಗಳು. ಅವರೇ ಈ ಕಾಯ್ದೆ ತರಲು ಹೊರಟಿರುವ ಬಾಸ್​​. ಮುಂದಿನ ಸಲ ಇವರು ಗೆಲ್ಲೋದಿಲ್ಲ, ಇವರ ನಂತರ ನಾವೇ ಮತ್ತೆ ಅಧಿಕಾರಕ್ಕೆ ಬರ್ತೇವೆ. ನಾವು ಬಂದ ನಂತರ ಈಗಿರುವ ಬಿಬಿಎಂಪಿಗೆ ಚುನಾವಣೆ ನಡೆಸ್ತೇವೆ” ಎಂದು ತಿಳಿಸಿದರು. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ರಡು ಏರ್ ಪೋರ್ಟ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ಅದರ ಬಗ್ಗೆ ಇನ್ನೊಮ್ಮೆ ಮಾತಾಡೋಣ. ದೆಹಲಿ ರಾಷ್ಟ್ರದ ರಾಜಧಾನಿ. ಅಲ್ಲಿಯ ಏರ್‌ಪೋರ್ಟ್‌ನಲ್ಲಿ ಎಲ್ಲ ಒಂದೇ ಕಡೆ ಇಲ್ವಾ?. ಟರ್ಮಿನಲ್ 1-2-3 ಎಲ್ಲಾ ಇಲ್ವಾ?. ಎಲ್ಲಾ ಒಂದೇ ಕಡೆ ಇದ್ದರೆ ಒಳ್ಳೆದಾಗುತ್ತದೆ. ನಾನು ಬೆಂಗಳೂರು…

Read More

ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಜಾಮೀನು ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಸಹ ಬಿಡಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ. ಕಾಂಗ್ರೆಸ್‌ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು ಎಂದು ಅಶೋಕ್‌ ಹೇಳಿದರು. ಜನತೆಯ ಮೇಲೆ ಕಾಂಗ್ರೆಸ್‌ ಸರ್ಕಾರ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಗುವುದು ಎಂದರು.

Read More

ಬೆಂಗಳೂರು: ಏರ್​ಫೋರ್ಸ್ ಅಧಿಕಾರಿ, ವಿಂಗ್ ಕಮಾಂಡರ್ ಶಿಲಾದಿತ್ಯ ಹಾಗೂ ಟೆಕ್ಕಿ ವಿಕಾಸ್ ಕುಮಾರ್ ನಡುವಿನ ಗಲಾಟೆ ದೇಶಮಟ್ಟದಲ್ಲಿ ಸದ್ದು ಮಾಡಲಾರಂಭಿಸಿದೆ. ಅಲ್ಲದೇ ಈ ಪ್ರಕರಣ ಸಂಬಂಧ ಸಾಮಾಜಿಕ ಜತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕೊಲೆ ಯತ್ನ ಪ್ರಕರಣದಲ್ಲಿ ಭಾರತೀಯ ವಾಯುಸೇನೆಯ (ಐಎಎಫ್‌) ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್‌ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ರಾಜ್ಯ ಪೊಲೀಸರಿಗೆ ಆದೇಶಿಸಿರುವ ಹೈಕೋರ್ಟ್, ಇದೇ ವೆಳೆ ತನಿಖೆಗೆ ಸಹಕರಿಸುವಂತೆ ಬೋಸ್‌ಗೆ ಸೂಚಿಸಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಆನಂತರದ ನ್ಯಾಯಿಕ ಪ್ರಕ್ರಿಯೆ ರದ್ದತಿ ಕೋರಿ ಪಶ್ಚಿಮ ಬಂಗಾಳದ ಐಎಎಫ್‌ ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು. ಹಿರಿಯ ವಕೀಲ ಎಂ ಅರುಣ ಶ್ಯಾಮ್‌ ಅವರ ವಾದ ಆಲಿಸಿದ ಪೀಠವು ಬೈಯಪ್ಪನಹಳ್ಳಿ ಪೊಲೀಸರು ಶಿಲಾದಿತ್ಯ ಬೋಸ್‌ ವಿರುದ್ದ ಬಲವಂತದ ಕ್ರಮಕೈಗೊಳ್ಳಬಾರದು. ಕಾನೂನು ಪರಿಪಾಲಿಸದೇ ಅರ್ಜಿದಾರರಿಗೆ ವಿಚಾರಣೆಗೆ…

Read More

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿಯ ನಂತರ ಭಾರತ ಸರ್ಕಾರ ಪಾಕಿಸ್ತಾನದ ಮೇಲೆ ಕಠಿಣ ನಿರ್ಧಾರ ತಾಳಿದೆ. ಉರಿ ಸೇನಾ ಕ್ಯಾಂಪ್, ಪುಲ್ವಾಮಾ ದಾಳಿ ಸಂದರ್ಭದಲ್ಲಿ ಭಾರತೀಯ ಸೇನೆ ದೊಡ್ಡ ಮೊಟ್ಟದಲ್ಲೇ ಪ್ರತೀಕಾರ ತೀರಿಸಿಕೊಂಡಿತ್ತು. ಇಷ್ಟಾದರೂ ಬುದ್ಧಿಕಲಿಯದ ಉಗ್ರ ಪೋಷಕನಿಗೆ ಸರಿಯಾದ ಪಾಠ ಕಲಿಸಲು ಭಾರತ ಮುಂದಾಗಿದೆ. ಈ ತಂತ್ರದ ಪ್ರಮುಖ ಅಂಶವೇ ಸಿಂಧೂ ಜಲ ಒಪ್ಪಂದ ತಾತ್ಕಾಲಿಕವಾಗಿ ಅಮಾನತು ಮಾಡೋದು. ಅಂತೆಯೇ ಸಭೆಯಲ್ಲಿ ತಾತ್ಕಾಲಿಕವಾಗಿ ಒಪ್ಪಂದವನ್ನು ಅಮಾನತಿನಲ್ಲಿಡಲು ನಿರ್ಧರಿಸಲಾಗಿದೆ. ಇದನ್ನು ಕೇಳಿರುವ ಪಾಕ್​ ಬುಡಕ್ಕೆ ಬೆಂಕಿ ಬಿದ್ದಂತೆ ವರ್ತಿಸಲು ಶುರುಮಾಡಿದೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಇದರ ಬೆನ್ನಲ್ಲೇ ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ ನಾಲಿಗೆ ಹರಿಬಿಟ್ಟಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಭುಟ್ಟೋ, ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು…

Read More

ವಾಷಿಂಗ್ಟನ್‌: ಪಹಲ್ಗಾಮ್​ನಲ್ಲಿ ರಕ್ತದೋಕುಳಿ ಹರಿಸಿರೋ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳೋದಕ್ಕೆ ಭಾರತೀಯ ಸೇನೆ ಮುಂದಾಗಿದೆ. ಉಗ್ರರನ್ನ ಸದೆಬಡೆಯೋದಕ್ಕೆ ಕೇಂದ್ರ ಸರ್ಕಾರ ತಂತ್ರ ರೂಪಿಸ್ತಿದೆ. ಇನ್ನು  ಇದರ ನಡುವೆ ನಾನು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಕ್ಕೂ ಆಪ್ತನಾಗಿದ್ದೇನೆ. https://ainkannada.com/should-almonds-be-peeled-and-eaten-or-eaten-raw-which-is-better-here-is-the-answer/ ಈ ಎರಡೂ ದೇಶಗಳ ನಡುವೆ ದಶಕಗಳಿಂದಲೂ ಉದ್ವಿಗ್ನತೆ ಇದೆ. ಈ ಉದ್ವಿಗ್ನತೆಯನ್ನು ಒಂದಲ್ಲ ಒಂದು ರೀತಿಯಲ್ಲಿ ಅವರು ಬಗೆಹರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರು. ಪಹಲ್ಗಾಮ್ ಉಗ್ರರ ದಾಳಿಯ ವಿಚಾರವಾಗಿ, ಇದು ತುಂಬಾ ಭೀಕರ ದಾಳಿಯಾಗಿದೆ. ಇಂತಹ ಉದ್ವಿಗ್ನ ಪರಿಸ್ಥಿತಿ ಭಾರತ ಪಾಕ್‌ ನಡುವೆ ಹಲವಾರು ವರ್ಷಗಳಿಂದಲೂ ಇದೆ. ಎರಡೂ ದೇಶಗಳು ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳುತ್ತಾರೆ ಎಂದಿದ್ದಾರೆ. ಮಂಗಳವಾರ ಪಹಲ್ಗಾಮ್ ಬಳಿಯ ಬೈಸರನ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು…

Read More

ಪ್ರಪಂಚದಾದ್ಯಂತ ಅನೇಕ ಜನರು Google Gmail ಅಪ್ಲಿಕೇಶನ್ ಬಳಸುತ್ತಾರೆ. ಜಿಮೇಲ್ ಆಪ್ ಸುರಕ್ಷಿತವೆಂದು ಪರಿಗಣಿಸಲಾಗಿದ್ದರೂ, ಸಾಂದರ್ಭಿಕ ವಂಚನೆಗಳು ಹೆಚ್ಚಾಗಿ ನಡೆಯುತ್ತಿವೆ. ಆ ನಿಟ್ಟಿನಲ್ಲಿ, ಜಿಮೇಲ್ ಅಪ್ಲಿಕೇಶನ್‌ನಲ್ಲಿ ಪ್ರಸ್ತುತ ಹೊಸ ರೀತಿಯ ವಂಚನೆ ನಡೆಯುತ್ತಿದೆ. ಮಾಹಿತಿ ಕದಿಯಲ್ಪಡುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ, Gmail ಅಪ್ಲಿಕೇಶನ್‌ನಲ್ಲಿ ನಡೆಯುತ್ತಿರುವ ಈ ಹೊಸ ಹಗರಣದ ಬಗ್ಗೆ ತಿಳಿದುಕೊಳ್ಳೋಣ. Gmail ಲಕ್ಷಾಂತರ ಜನರು ಬಳಸುವ ಅಪ್ಲಿಕೇಶನ್ ಆಗಿದೆ. ಗೂಗಲ್‌ನಲ್ಲಿ ಹಲವು ರೀತಿಯ ಅಪ್ಲಿಕೇಶನ್‌ಗಳು ಬಳಕೆಯಲ್ಲಿವೆ. ಗೂಗಲ್ ಕ್ರೋಮ್ ನಲ್ಲಿ ಗೂಗಲ್ ನಕ್ಷೆಗಳು, ಗೂಗಲ್ ಫೋಟೋಗಳು ಮುಂತಾದ ಹಲವು ವೈಶಿಷ್ಟ್ಯಗಳಿವೆ. ಅವುಗಳಲ್ಲಿ ಒಂದು ಈ ಜಿಮೇಲ್ ಅಪ್ಲಿಕೇಶನ್. ಸಂವಹನಕ್ಕಾಗಿ ಬಳಸಲಾಗುವ ಮುಖ್ಯ ಅಪ್ಲಿಕೇಶನ್ ಗೂಗಲ್ ಜಿಮೇಲ್ ಅಪ್ಲಿಕೇಶನ್ ಆಗಿದೆ. ಮಾಹಿತಿಯನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ವಿನಿಮಯ ಮಾಡಿಕೊಳ್ಳಲು ಅನೇಕ ಜನರು ಇದನ್ನು ಆಯ್ಕೆ ಮಾಡುತ್ತಾರೆ. ವ್ಯಕ್ತಿಗಳು ಮಾತ್ರವಲ್ಲ, ಕೆಲವು ಕಂಪನಿಗಳು ಸಹ ತಮ್ಮ ಉದ್ಯೋಗಿಗಳೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಜಿಮೇಲ್ ಅಪ್ಲಿಕೇಶನ್ ಅನ್ನು ಬಳಸುತ್ತವೆ.…

Read More

ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ಹಿಡಿದು ಬ್ಯಾಂಕ್ ಖಾತೆ ತೆರೆಯುವುದು, KYC ಇತ್ಯಾದಿಗಳವರೆಗೆ ಹಲವು ಹಣಕಾಸಿನ ಅಗತ್ಯಗಳಿಗೆ ಪ್ಯಾನ್ ಕಾರ್ಡ್ ಅಗತ್ಯವಿದೆ. ಇದನ್ನು ಕಾನೂನುಬದ್ಧ ಗುರುತಿನ ಚೀಟಿ ಎಂದೂ ಪರಿಗಣಿಸಲಾಗುತ್ತದೆ. ನಿಮ್ಮ ಹಣಕಾಸಿನ ಇತಿಹಾಸದ ಮಾಹಿತಿಯನ್ನು ಟ್ರ್ಯಾಕ್ ಮಾಡಲು ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಟ್ರ್ಯಾಕ್ ಮಾಡಲಾಗುತ್ತದೆ. ಆದರೆ ಪ್ಯಾನ್ ಕಾರ್ಡ್ ಕೂಡ ಅವಧಿ ಮೀರುತ್ತದೆಯೇ ಎಂಬ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಬರುತ್ತಿದೆಯೇ? ಅದರ ಬಗ್ಗೆ ತಿಳಿದುಕೊಳ್ಳೋಣ. ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಇದ್ದರೆ ಏನು ಮಾಡಬೇಕು? ನೀವು ಎಂದಾದರೂ ನಿಮ್ಮ ಪ್ಯಾನ್ ಕಾರ್ಡ್‌ನ ಸಿಂಧುತ್ವವನ್ನು ಪರಿಶೀಲಿಸಿದ್ದೀರಾ? ನೀವು ಇದರ ಬಗ್ಗೆ ತಿಳಿದುಕೊಳ್ಳಲೇಬೇಕು. ಪ್ಯಾನ್ ಕಾರ್ಡ್ ಅನ್ನು ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಲಿಮಿಟೆಡ್ ನೀಡುತ್ತದೆ. ದಯವಿಟ್ಟು ಗಮನಿಸಿ, ಒಬ್ಬ ವ್ಯಕ್ತಿ ಸಾಯುವವರೆಗೂ ಪ್ಯಾನ್ ಕಾರ್ಡ್‌ನ ಸಿಂಧುತ್ವವು ಎಂದಿಗೂ ಮುಕ್ತಾಯಗೊಳ್ಳುವುದಿಲ್ಲ. ವ್ಯಕ್ತಿಯ ಮರಣದ ನಂತರವೇ ಪ್ಯಾನ್ ಕಾರ್ಡ್ ರದ್ದಾಗುತ್ತದೆ. ಮರಣ ಪ್ರಮಾಣಪತ್ರದ…

Read More

ಐಪಿಎಲ್ 2025 ರಲ್ಲಿ ಆರ್‌ಸಿಬಿ ತವರಿನಲ್ಲಿ ಸತತ ಸೋಲಿಗೆ ಬ್ರೇಕ್ ಹಾಕಿತು. ಈ ಋತುವಿನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋತಿದ್ದ ಆರ್‌ಸಿಬಿ ಗುರುವಾರ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸೂಪರ್ ಗೆಲುವು ಸಾಧಿಸಿತು. ಕೊನೆಯ ಎರಡು ಓವರ್‌ಗಳಲ್ಲಿ 18 ರನ್‌ಗಳನ್ನು ರಕ್ಷಿಸಿಕೊಂಡ ಅವರು ಅದ್ಭುತವಾಗಿ ಕಾಣುತ್ತಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡವು ಸೂಪರ್‌ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರೊಂದಿಗೆ ಅದ್ಭುತ ಆರಂಭವನ್ನು ನೀಡಿತು. ಅವರು 42 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 70 ರನ್ ಗಳಿಸಿದರು. ಕೊಹ್ಲಿ ಜೊತೆಗೂಡಿ ದೇವದತ್ ಪಡಿಕ್ಕಲ್ ಕೇವಲ 27 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 50 ರನ್ ಗಳಿಸಿದರು. ಟಿಮ್ ಡೇವಿಡ್ 23 ರನ್ ಮತ್ತು ಜಿತೇಶ್ ಶರ್ಮಾ 10 ಎಸೆತಗಳಲ್ಲಿ 20 ರನ್ ಗಳಿಸಿ ಉತ್ತಮ ಫಿನಿಶಿಂಗ್ ನೀಡಿದರು. ಇದರೊಂದಿಗೆ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 205…

Read More