ಬೆಂಗಳೂರು: ಜಾತಿ ಜನಗಣತಿ ಸರ್ವೇ ಸರಿಯಾಗಿ ಆಗಿಲ್ಲ ಎಂದು ನಾನು ಹೇಳಿಲ್ಲ ಎಂದು ಕಾಂಗ್ರೆಸ್ ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಸರ್ವೇ ಸರಿಯಾಗಿ ಆಗಿಲ್ಲ ಎಂದು ನಾನು ಹೇಳಿಲ್ಲ, ಆದರೆ ಜನರಿಗೆ ಜಾಗೃತಿ ಇರಲಿಲ್ಲ. ಹಾಗಾಗಿ ಜನರು ಸ್ವಇಚ್ಛೆಯಿಂದ ನೋಂದಣಿ ಮಾಡಿಲ್ಲ. ಈಗ ಜಾಗೃತಿ ಉಂಟಾಗಿದೆ, ಇದರ ಬಗ್ಗೆ ಸಂಪೂರ್ಣ ಅರಿವು ಇರುವುದರಿಂದ ಎಲ್ಲರೂ ಈಗ ನೋಂದಣಿ ಮಾಡಿಸಿಕೊಳ್ಳುತ್ತಾರೆ. ಜನಸಂಖ್ಯೆ ಎಷ್ಟಿದೆ ಎನ್ನುವ ಸತ್ಯಾಂಶ ಈಗ ಹೊರಗಡೆ ಬರುತ್ತದೆ. ಹೀಗಾಗಿ ಮರು ಸಮೀಕ್ಷೆ ಮಾಡಬೇಕು ಎಂದು ತಿಳಿಸಿದರು. https://ainkannada.com/do-you-want-to-always-look-young-then-follow-these-tips/ ನಮ್ಮ ಹೈಕಮಾಂಡ್, ನಮ್ಮ ನಾಯಕರು, ಜನಾಂಗದ ನಾಯಕರು ಇದ್ದಾರೆ, ಅವರು ತೀರ್ಮಾನ ಮಾಡುತ್ತಾರೆ. ನಾವು ಈಗಾಗಲೇ ನಮ್ಮ ಅಭಿಪ್ರಾಯವನ್ನು ನಾವು ಹೇಳಿದ್ದೀವಿ. ಸರ್ವೇ ಬಗ್ಗೆ ಕ್ಷೇತ್ರಗಳಲ್ಲಿ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಆ ವಿರೋಧಿಗಳನ್ನು ಬಾಯಿ ಮುಚ್ಚಿಸಬೇಕಾದರೆ ಮರು ಸರ್ವೆ ಆಗಬೇಕು ಎಂದರು. ಇದೇ ವೇಳೆ ಅಶೋಕ್ಗೆ ತಿರುಗೇಟು ನೀಡಿದ ಅವರು, ಸಿದ್ದರಾಮಯ್ಯ ಮನೆಯಲ್ಲಿ…
Author: Author AIN
ಯುವ ರಾಜ್ಕುಮಾರ್ ನಟನೆಯ ಎರಡನೇ ಸಿನಿಮಾ ಎಕ್ಕ ಶೂಟಿಂಗ್ ಭರದಿಂದ ಸಾಗುತ್ತಿದ್ದು, ನಾಳೆ ಯುವ ಹುಟ್ಟುಹಬ್ಬ ಇರೋ ಕಾರಣದಿಂದ ಎಕ್ಕ ಸಿನಿಮಾದ ಟೀಸರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. ನಾಳೆ ಯುವ ಬರ್ತ್ ಡೇ, ನಾಳಿದ್ದು ಅಣ್ಣಾವ್ರ ಬರ್ತ್ ಡೇ ಇರೋದ್ರಿಂದ ದೊಡ್ಮನೆ ಅಭಿಮಾನಿಗಳಿಗೆ ಡಬಲ್ ಧಮಾಕ ಸಿಕ್ಕಂತಾಗಿದೆ.. ಯುವ ತುಂಬಾ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ತಿದ್ದು, ಈಗಾಗಲೇ ಎಕ್ಕ ಟ್ರೆಂಡ್ ಸೆಟ್ಟರ್ ಆಗಿ ಜನರ ಕುತೂಹಲ ಕೆರಳಿಸುತ್ತಿದೆ. ಎಕ್ಕ ಸಿನಿಮಾ ಜೂನ್ 6ಕ್ಕೆ ಬಿಡುಗಡೆ ಆಗಲಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ಸ್, ಪ್ರಮೋಷನ್ ಹಾಗೂ ರಿಲೀಸ್ ಪ್ಲ್ಯಾನ್ ನಡೀತಿದೆ. ಪಿಆರ್ಕೆ ಪ್ರೊಡಕ್ಷನ್ಸ್, ಕೆಆರ್ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ ‘ಎಕ್ಕ’ ಚಿತ್ರ ನಿರ್ಮಾಣ ಮಾಡುತ್ತಿವೆ. ಬಹಳ ಅದ್ಧೂರಿಯಾಗಿಯೇ ಈ ಆಕ್ಷನ್ ಥ್ರಿಲ್ಲರ್ ಪ್ರೇಕ್ಷಕರ ಮುಂದೆ ಬರಲಿದೆ. ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಎಕ್ಕ’ ಸಿನಿಮಾದಲ್ಲಿ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ.…
ಬೆಂಗಳೂರು: “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು.ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸುರೇಶ್ ಅವರು ಮಂಗಳವಾರ ಮಾತನಾಡಿದರು. “ನಗರ ಪ್ರದೇಶದಲ್ಲಿ ಸರಿಯಾದ ಮಾಹಿತಿ ಸಿಕ್ಕಿಲ್ಲ ಎಂದು ಆಯೋಗ ಹೇಳಿದ್ದು, ಕಳೆದ 15 ವರ್ಷಗಳಲ್ಲಿ ಸಾಕಷ್ಟು ಜನ ನಗರ ಪ್ರದೇಶಗಳಿಗೆ ವಲಸೆ ಬಂದಿದ್ದಾರೆ. ಇವರನ್ನು ವರದಿಯಲ್ಲಿ ಸೇರಿಸಲಾಗಿದೆಯೇ ಇಲ್ಲವೇ ಎಂಬ ಗೊಂದಲವಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿದ್ದು, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದು, ಎಲ್ಲಾ ಸಮುದಾಯಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ನಂಬಿಕೆ ಇದೆ. ಎಲ್ಲರಿಗೂ ಸರಿಯಾದ ರೀತಿ ನ್ಯಾಯ ಒದಗಿಸುವುದು ಅವರ ಜವಾಬ್ದಾರಿಯೂ ಆಗಿದೆ. ಈ ಪ್ರಕ್ರಿಯೆಯಲ್ಲಿ ಅನುಮಾನಗಳನ್ನು ನಿವಾರಿಸುವುದು ಮೊದಲ ಕೆಲಸವಾಗಬೇಕು” ಎಂದು ಅಭಿಪ್ರಾಯಪಟ್ಟರು. ಕಾಂತರಾಜು ಆಯೋಗ…
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC 2024) ಅಖಿಲ ಭಾರತ ಸೇವೆಗಳ ನೇಮಕಾತಿಗಾಗಿ ನಡೆಸಿದ ನಾಗರಿಕ ಸೇವೆಗಳ 2024 ಪರೀಕ್ಷೆಯ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿದೆ. ಇಂದು ಮಧ್ಯಾಹ್ನ ಯುಪಿಎಸ್ಸಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಈ ಫಲಿತಾಂಶಗಳಲ್ಲಿ, ಇತರ ಹಲವು ರಾಜ್ಯಗಳ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯಗಳ ಅನೇಕ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಒಟ್ಟು 1,009 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, 20178ರಿಂದ ಯುಪಿಎಸ್ಸಿ ತಯಾರಿ ನಡೆಸುತ್ತಿದ್ದ ಪ್ರಯಾಗ್ರಾಜ್ನ ಶಕ್ತಿ ದುಬೆ ಪ್ರಥಮ ರ್ಯಾಂಕ್ನೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಹರ್ಷಿತಾ ಗೋಯಲ್ 2ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. https://ainkannada.com/do-you-want-to-always-look-young-then-follow-these-tips/ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 1,129 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪೈಕಿ ಭಾರತೀಯ ಆಡಳಿತ ಸೇವೆ (IAS) ನ 180 ಹುದ್ದೆಗಳು, ಭಾರತೀಯ ವಿದೇಶಾಂಗ ಸೇವೆ (IFS) ನ 55 ಹುದ್ದೆಗಳು ಮತ್ತು ಭಾರತೀಯ ಪೊಲೀಸ್ ಸೇವೆ (IPS) ನ 147 ಹುದ್ದೆಗಳು ಸೇರಿವೆ. ಫಲಿತಾಂಶದಲ್ಲಿ ಉತ್ತರ ಪ್ರದೇಶ (Uttar Pradesh) ಪ್ರಯಾಗ್ರಾಜ್ ಮೂಲದ ಶಕ್ತಿ…
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ್ ಅವರು ಚುನಾವಣಾ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅವರು, ಜನರೆತೆ ಹಲವಾರು ಗ್ಯಾರಂಟಿಗಳ ಆಮಿಷವನ್ನು ಒಡ್ಡುವ ಮೂಲಕ ಸಿದ್ದರಾಮಯ್ಯನವರು 2023ರ ಚುನಾವಣೆಯಲ್ಲಿ ಗೆದ್ದಿದ್ದಾರೆ. https://ainkannada.com/do-you-want-to-always-look-young-then-follow-these-tips/ ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾದದ್ದು. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಅವರು ಮನವಿಯಲ್ಲಿ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಅರ್ಜಿಯನ್ನು ಸ್ವೀಕರಿಸಿದ್ದ ನ್ಯಾಯಾಲಯದ ಸಿದ್ದರಾಮಯ್ಯನವರಿಗೆ ಈ ಬಗ್ಗೆ ತಮ್ಮ ವಾದ ಮಂಡಿಸಲು ಅವಕಾಶ ಕಲ್ಪಿಸಿತ್ತು. ಅದರಂತೆ, ಹಿರಿಯ ವಕೀಲರಾದ ಪ್ರೊ. ರವಿವರ್ಮ ಕುಮಾರ್ ಅವರ ಮೂಲಕ ತಮ್ಮ ತಕರಾರು ಸಲ್ಲಿಸಿದ್ದ ಸಿದ್ದರಾಮಯ್ಯನವರು, ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳಿಂದ ಆಶ್ವಾಸನೆಗಳನ್ನು ನೀಡುವುದಕ್ಕೆ ಅವಕಾಶವಿದೆ ಎಂದು ವಾದ ಮಂಡಿಸಿದ್ದರು. ವಾದ – ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್…
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್ಗೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ ಅವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರದಲ್ಲಿ ದರ್ಶನ್ ರೆಗ್ಯುಲರ್ ಬೇಲ್ ಪಡೆದು ಹೊರಗೆ ಬಂದಿದ್ದರು. ಸುಪ್ರಿಂನಲ್ಲಿ ನಟ ದರ್ಶನ್ ಸೇರಿ ಏಳು ಮಂದಿಯ ವಿಚಾರಣೆ ಇವತ್ತು ಸುಪ್ರೀಂ ಕೋರ್ಟ್ ನಲ್ಲಿ ನಡೆದಿದೆ. ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ನಡೆದಿತ್ತು. ವಕೀಲರ ವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್ 13 ರಂದು ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಜಾಮೀನು ನೀಡಿತ್ತು. ಆ ಬಳಿಕ ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರಾಗಿತ್ತು. https://ainkannada.com/do-you-want-to-always-look-young-then-follow-these-tips/ ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದರು. ಏಪ್ರಿಲ್ 2 ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಏಪ್ರಿಲ್ 22 ಕ್ಕೆ ಮುಂದೂಡಿತ್ತು. ಸದ್ಯ ಮಂಗಳವಾರ…
ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ”ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ ಶಿವಕುಮಾರ್ ಸಹ ನಿರ್ಮಾಣವಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ರಾಮೋಹಳ್ಳಿ ಶ್ರೀಗಳು ಸಾನಿಧ್ಯ ವಹಿಸಿದ್ದರು. ಸಾ.ರಾ.ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್, ಕಾರ್ಯದರ್ಶಿ ಪ್ರವೀಣ್ ಕುಮಾರ್, ನಿರ್ದೇಶಕ ಸಾಯಿಪ್ರಕಾಶ್, ನಿರ್ದೇಶಕಿ, ನಟಿ ರೂಪ ಅಯ್ಯರ್, ನಟ ಸುಂದರರಾಜ್, ಸಂಗೀತ ನಿರ್ದೇಶಕ ವಿ.ಮನೋಹರ್, ಸಂಗಮೇಶ್ ಉಪಾಸೆ, ನಿರ್ಮಲ ಸಿ ಎಲಿಗಾರ್, ಮಾಜಿ ಶಾಸಕ ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಅನಾವರಣ ಮಾಡಿದರು. ಈ ಚಿತ್ರದಲ್ಲಿ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ. ಬಾಲ್ಯದಲ್ಲಿ ಡಿ.ವಿ.ಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರಮಾವ…
ಇತ್ತೀಚಿನ ದಿನಗಳಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯವಾಗಿದೆ. ಅನೇಕ ಜನರು ಹೆಲ್ಮೆಟ್ ಇಲ್ಲದೆ ತಮ್ಮ ವಾಹನಗಳನ್ನು ಓಡಿಸಿದರೂ, ನಿಯಮಗಳ ಪ್ರಕಾರ ಒಂದನ್ನು ಧರಿಸುವುದು ಕಡ್ಡಾಯವಾಗಿದೆ. ಆದರೆ, ಹೆಲ್ಮೆಟ್ ಖರೀದಿಸುವಾಗ ಕೆಲವು ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. https://ainkannada.com/do-you-want-to-always-look-young-then-follow-these-tips/ ನಿಮಗೆ ಸರಿಯಾಗಿ ಹೊಂದಿಕೊಳ್ಳುವ ಹೆಲ್ಮೆಟ್ ಧರಿಸಿದರೆ ನೀವು ನಿಮ್ಮ ಸವಾರಿಯನ್ನು ಹೆಚ್ಚು ಆನಂದಿಸಬಹುದು. ನೀವು ಧರಿಸುವ ಹೆಲ್ಮೆಟ್ ಆರಾಮದಾಯಕವಾಗಿಲ್ಲದಿದ್ದರೆ, ಬೈಕ್ ಸವಾರಿ ಮಾಡುವುದು ನಿರಾಶಾದಾಯಕ ಅನುಭವವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಹೆಲ್ಮೆಟ್ ಖರೀದಿಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳನ್ನು ನೋಡೋಣ. ವಾತಾಯನ ಭಾರತದಂತಹ ದೇಶದಲ್ಲಿ ವಿಪರೀತ ತಾಪಮಾನ ಸಾಮಾನ್ಯ. ಈ ಸಂದರ್ಭದಲ್ಲಿ, ಸರಿಯಾದ ಗಾಳಿ ಸಂಚಾರಕ್ಕೆ ಸಹಾಯ ಮಾಡುವ ಹೆಲ್ಮೆಟ್ ಖರೀದಿಸುವುದು ಅತ್ಯಗತ್ಯ. ವಿಶೇಷವಾಗಿ ಬೇಸಿಗೆಯಲ್ಲಿ ಹೆಲ್ಮೆಟ್ನಲ್ಲಿ ಗಾಳಿ ವ್ಯವಸ್ಥೆ ಇಲ್ಲದಿದ್ದರೆ ಅದು ಇನ್ನಷ್ಟು ಕಿರಿಕಿರಿ ಉಂಟುಮಾಡುತ್ತದೆ. ಗಾಢ ಬಣ್ಣಗಳು ಹೆಚ್ಚು ಶಾಖವನ್ನು ಹೀರಿಕೊಳ್ಳುವುದರಿಂದ, ಕಪ್ಪು ಹೆಲ್ಮೆಟ್ಗಳನ್ನು ಖರೀದಿಸುವುದನ್ನು ತಪ್ಪಿಸಲು ತಜ್ಞರು ಜನರಿಗೆ ಸಲಹೆ ನೀಡುತ್ತಾರೆ. ಆಕಾರ, ಗಾತ್ರ ಪ್ರತಿಯೊಬ್ಬ ವ್ಯಕ್ತಿಯು ವಿಶಿಷ್ಟವಾದ ತಲೆಯ…
ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಪ್ರತಿಭೆಗಳ ಅಬ್ಬರ ಜೋರಾಗಿ ನಡೆಯುತ್ತಿದೆ. ಎಲ್ಲಾ ಕಾಲಘಟ್ಟಕ್ಕೂ ಒಪ್ಪುವಂತಹ ಕಥಾನಕ ಬಂದರೆ ಖಂಡಿತ ಪ್ರೇಕ್ಷಕರ ಗಮನ ಸೆಳೆಯಬಹುದು ಎಂಬ ನಿಟ್ಟಿನಲ್ಲಿ ಪ್ರೇಕ್ಷಕರ ಮುಂದೆ ಬಂದಂತಹ ತುಳುವಿನ ಚಿತ್ರ “ದಸ್ಕತ್”. ಈಗ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡು ಮೇ 9ರಂದು ರಾಜ್ಯಾದ್ಯಂತ ತೆರೆಯ ಮೇಲೆ ತರಲು ಪ್ಲಾನ್ ಮಾಡಿಕೊಂಡಿದೆ. ಈ ವಿಚಾರವಾಗಿ ಚಿತ್ರತಂಡ ಕನ್ನಡದ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿತ್ತು. ಈ ಚಿತ್ರದ ಕುರಿತು ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಮಾತನಾಡುತ್ತಾ ನಾನು 2015 ರ ಝೀ ಕಾಮಿಡಿ ರಿಯಾಲಿಟಿ ಶೋ ನಲ್ಲಿ ಬಂದಂತಹ ಪ್ರತಿಭೆ. ನನ್ನದೇ ಒಂದಷ್ಟು ಗೆಳೆಯರ ಬಳಗ ಸೇರಿಕೊಂಡು ಕಿರುಚಿತ್ರ ಹಾಗೂ ವೆಬ್ ಸೀರೀಸ್ ಆನ್ನ ಮಾಡಿದ್ವಿ. ತದನಂತರ ಚಿತ್ರ ಮಾಡಬೇಕೆಂಬ ಉದ್ದೇಶದಿಂದ ಬಹಳಷ್ಟು ಪೂರ್ವ ತಯಾರಿಯನ್ನು ಮಾಡಿಕೊಂಡು ಈ ದಸ್ಕತ್ ಎಂಬ ಶೀರ್ಷಿಕೆ ಇಟ್ಟುಕೊಂಡು ಚಿತ್ರ ಶುರು ಮಾಡಿದ್ವಿ, ದಸ್ಕತ್ ಅಂದರೆ…
ಪ್ರತಿಯೊಬ್ಬರ ಜೀವನದಲ್ಲೂ ಮದುವೆಗೆ ಇರುವ ಮಹತ್ವವನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಜೀವನದ ಎರಡನೇ ಇನ್ನಿಂಗ್ಸ್ ಎಂದು ಹೇಳಲಾಗುವ ಮದುವೆಯ ವಿಷಯದಲ್ಲಿ ಮಹಿಳೆಯರ ಜೊತೆಗೆ ಪುರುಷರಲ್ಲೂ ಭಯಗಳಿರುತ್ತವೆ. ಮದುವೆ ನಂತರ ವ್ಯಕ್ತಿಯ ಜೀವನದಲ್ಲಿ ಸಂಪೂರ್ಣ ಬದಲಾವಣೆಗಳಾಗುತ್ತವೆ. ಮುಖ್ಯವಾಗಿ ಮಹಿಳೆಯರಲ್ಲಿ ಈ ಬದಲಾವಣೆಗಳು ಹೆಚ್ಚಾಗಿ ಕಂಡುಬರುತ್ತವೆ. ಅಂತಹ ಬದಲಾವಣೆಗಳಲ್ಲಿ ತೂಕ ಹೆಚ್ಚುವುದು ಒಂದು. ಮಹಿಳೆಯರು ದಪ್ಪ ಆಗಲು ಶುರುವಾದರೆ ಮೊದಲು ಅವರ ಹೊಟ್ಟೆಯ ಭಾಗ, ತೊಡೆಯ ಭಾಗದಲ್ಲಿ ಕೊಬ್ಬು ಸಂಗ್ರಹಗೊಳ್ಳುತ್ತಾ ಹೋಗುತ್ತದೆ. ಅದೇ ಪುರುಷರಲ್ಲಿ ಕಿಬ್ಬೊಟ್ಟೆಯ ಸುತ್ತಲೂ ಬೊಜ್ಜು ಬರುತ್ತದೆ. ಮಹಿಳೆಯರ ದೇಹದ ತೂಕದ ವಿಷಯಕ್ಕೆ ಬಂದಾಗ, ಜೈವಿಕ, ಹಾರ್ಮೋನುಗಳು ಮತ್ತು ಸಾಮಾಜಿಕ-ಸಾಂಸ್ಕೃತಿಕ ಅಂಶಗಳು ಪ್ರಮುಖವಾಗಿ ಕಾರಣವಾಗುತ್ತವೆ. ಮಹಿಳೆಯರಲ್ಲಿ, ಋತುಬಂಧದ ಜೈವಿಕ ಅಂಶವು ಕೊಬ್ಬಿನ ವಿತರಣೆಯ ಮೇಲೆ ಪರಿಣಾಮ ಬೀರುತ್ತದೆ, ಅಪಾಯವನ್ನು ಹೆಚ್ಚಿಸುತ್ತದೆ ಅಥವಾ ಆರೋಗ್ಯದ ಮೇಲೆ ಬೊಜ್ಜಿನ ಋಣಾತ್ಮಕ ಪರಿಣಾಮಗಳನ್ನು ಉಲ್ಬಣಗೊಳಿಸುತ್ತದೆ. ಇನ್ನು ಋತುಬಂಧದ ಮುಕ್ತಾಯದ ಸಮಯದಲ್ಲಿ ಈಸ್ಟ್ರೊಜೆನ್ ಮಟ್ಟದಲ್ಲಿನ ಇಳಿಕೆಯು ದೇಹದಲ್ಲಿನ ಕೊಬ್ಬಿನ ವಿತರಣೆಯನ್ನು ಬದಲಾಯಿಸುವ ಮೂಲಕ ತೂಕ ಹೆಚ್ಚಾಗಲು ಕಾರಣವಾಗುತ್ತದೆ https://ainkannada.com/do-you-want-to-always-look-young-then-follow-these-tips/…