Author: Author AIN

ಮೈಸೂರು: ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಪಹಲ್ಗಾಮ್‌ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. https://ainkannada.com/did-you-know-mango-prevents-weight-gain/ ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದರು.

Read More

ಕೋಲಾರ – ಪರಿಶಿಷ್ಟ ಜಾತಿಯ ಒಳ ಮಿಸಲಾತಿ ಕುರಿತಂತೆ ಮೇ 5 ರಿಂದ 17 ರವರೆಗೆ 12 ದಿನಗಳ ಕಾಲ ಜಿಲ್ಲೆಯಾದ್ಯಂತ ಶಿಕ್ಷಕ ಗಣತಿದಾರರ ಮೂಲಕ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದ್ದು ಪರಿಶಿಷ್ಟ ಜಾತಿ ಸಮುದಾಯದವರು ಸ್ವಯಂ ಪ್ರೇರಿತವಾಗಿ ಮಾಹಿತಿ ಹಾಗೂ ವಿವರವನ್ನು ಗಣತಿದಾರರರಿಗೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದರು.‌ ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ನೆಡೆದ ಪರಿಶಿಷ್ಟ ಜಾತಿಯ ಒಳಮಿಸಲಾತಿ ಸಮೀಕ್ಷೆಯ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರದಿಂದ ನೇಮಕವಾಗಿರುವ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹ ಮಾಡಿ ಶೇಖರಿಸುವ ಸಂಬಂಧ ರಾಜ್ಯದಾದ್ಯಂತ ಸಮೀಕ್ಷೆ ನಡೆಸಲು ತೀರ್ಮಾನಿಸಿರುತ್ತದೆ, https://ainkannada.com/did-you-know-mango-prevents-weight-gain/ ಅದಂತೆ ಕೋಲಾರ ಜಿಲ್ಲೆಯಾದ್ಯಂತ ಮೇ 5 ರಿಂದ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆಯನ್ನು ಜಿಲ್ಲೆಯಲ್ಲಿರುವ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಕ ಮಾಡಲಾಗುತ್ತದೆ. ಈ ಗಣತಿದಾರರನ್ನಾಗಿ ಕೇವಲ ಪ್ರೌಢಶಾಲಾ…

Read More

ಆಧುನಿಕ ಜೀವನಶೈಲಿಯಲ್ಲಿ ಸಕ್ಕರೆ ಸೇವನೆ ಗಣನೀಯವಾಗಿ ಹೆಚ್ಚಾಗಿದೆ. ರುಚಿಕರವಾದ ಆಹಾರಗಳು, ಪಾನೀಯಗಳು ಮತ್ತು ಸಿಹಿತಿಂಡಿಗಳಲ್ಲಿ ಸೇರಿಸಲಾದ ಸಕ್ಕರೆ ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಅತಿಯಾದ ಸಕ್ಕರೆ ಸೇವನೆಯು ಬೊಜ್ಜು, ಮಧುಮೇಹ ಮತ್ತು ಹೃದ್ರೋಗದಂತಹ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದರೆ, ದಿನಕ್ಕೆ ಎಷ್ಟು ಸಕ್ಕರೆ ಸೇವಿಸುವುದು ಸುರಕ್ಷಿತ? ಹೆಚ್ಚಿನ ಸಕ್ಕರೆ ಅಂಶ, ಅದರ ಪ್ರಮಾಣ ಮತ್ತು ಆರೋಗ್ಯಕರ ಜೀವನಶೈಲಿಗಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ಹೆಚ್ಚುವರಿ ಸಕ್ಕರೆ ಎಂದರೇನು? ಸೇರಿಸಿದ ಸಕ್ಕರೆ ಎಂದರೆ ಆಹಾರ ಅಥವಾ ಪಾನೀಯಗಳಿಗೆ ಸೇರಿಸಲಾದ ಸಕ್ಕರೆ ಅಥವಾ ಸಿರಪ್‌ಗಳು. ಇವು ಆಹಾರದಲ್ಲಿ ನೈಸರ್ಗಿಕವಾಗಿ ಕಂಡುಬರುವ ಸಕ್ಕರೆಗಳಿಗಿಂತ ಭಿನ್ನವಾಗಿವೆ (ಉದಾ. ಹಣ್ಣಿನಲ್ಲಿ ಫ್ರಕ್ಟೋಸ್, ಹಾಲಿನಲ್ಲಿ ಲ್ಯಾಕ್ಟೋಸ್). ಸಾಮಾನ್ಯವಾಗಿ, ತಂಪು ಪಾನೀಯಗಳು, ಕೇಕ್‌ಗಳು, ಬಿಸ್ಕತ್ತುಗಳು, ಚಾಕೊಲೇಟ್‌ಗಳು ಮತ್ತು ಸಂಸ್ಕರಿಸಿದ ಆಹಾರಗಳಲ್ಲಿ ಸಕ್ಕರೆ ಅಧಿಕವಾಗಿರುತ್ತದೆ. ನೀವು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬೇಕು? ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ​​(AHA) ನಂತಹ ಸಂಸ್ಥೆಗಳು…

Read More

ಭಾರತದಲ್ಲಿ ಚಿನ್ನದ ಮೇಲಿನ ವ್ಯಾಮೋಹ ಎಂದಿಗೂ ಬದಲಾಗಲ್ಲ. ಇಲ್ಲಿ ಜನ ಕೇವಲ ಆಭರಣವಾಗಿ ನೋಡದೇ ಅದನ್ನು ಉಳಿತಾಯ, ಹೂಡಿಕೆಯಾಗಿ ನೋಡುತ್ತಾರೆ. ಹೀಗಾಗಿ ಚಿನ್ನ ದಿನೇ ದಿನೇ ತನ್ನ ಮೌಲ್ಯ ಹೆಚ್ಚಿಸಿಕೊಂಡು ಗಗನಕ್ಕೇರುತ್ತಿದೆ. ಬಹಳ ಹಿಂದೆ ಭಾರತೀಯರಿಗೆ ಈ ಚಿನ್ನ, ಬೆಳ್ಳಿ ವಸ್ತುಗಳನ್ನು ಹೆಚ್ಚು ಆಭರಣವಾಗಿ ಮಾತ್ರ ಹೆಚ್ಚು ಬಳಸುತ್ತಿದ್ದರು. https://ainkannada.com/did-you-know-mango-prevents-weight-gain/ ಆದರೆ ಈಗ ಚಿನ್ನ ಕೇವಲ ಅಲಂಕಾರಿಕ ವಸ್ತುವಾಗಿ ಉಳಿದಿಲ್ಲ. ಬದಲಿಗೆ ಬಂಗಾರವನ್ನು ಈಗ ಬಾಂಡ್‌ ರೂಪದಲ್ಲಿ, ಷೇರು ರೂಪದಲ್ಲಿ ಹೂಡಿಕೆ-ಉಳಿತಾಯವಾಗಿ ಇಡುತ್ತಿದ್ದಾರೆ. ಇದೇ ಕಾರಣಕ್ಕೆ ಗ್ರಾಹಕರು ಚಿನ್ನ-ಬೆಳ್ಳಿ ದರ ಎಷ್ಟೇ ಏರಿದ್ದರೂ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಇವುಗಳನ್ನು ಖರೀದಿ ಮಾಡುತ್ತಾರೆ. ಭಾರತದಲ್ಲಿ ಸ್ವರ್ಣ ಬೆಲೆಯಲ್ಲಿ ಯಾವ ವ್ಯತ್ಯಯ ಆಗಿಲ್ಲ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 9,005ರೂನಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರುಪೇರು ಆಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿಯೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿದ್ದ ಪಾಕ್‌ ನಟನಿಗೆ ಯೂಟ್ಯೂಬ್‌ ಇಂಡಿಯಾ ಶಾಕ್‌ ಕೊಟ್ಟಿದೆ. ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರದಾಳಿ ಬೆನ್ನಲ್ಲೇ ಪಾಕಿಸ್ತಾನದ ನಟ ಫಾವದ್‌ ಖಾನ್‌ ಅಭಿರ್ ಗುಲಾಲ್ ಚಿತ್ರವನ್ನು ಬಾಯ್ಕಾಟ್‌ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಈ ಚಿತ್ರಕ್ಕೆ ಭಾರತದಲ್ಲಿ ನಿಷೇಧ ಮಾಡಬೇಕೆಂಬ ವ್ಯಾಪಕ ಆಕ್ರೋಶದ ನಡುವೆ ಈಗ ಏಕಾಏಕಿ ಅಭಿರ್ ಗುಲಾಲ್ ಸಿನಿಮಾದ ಹಾಡುಗಳನ್ನು ಯೂಟ್ಯೂಬ್‌ ನಿಂದ ಅಳಿಸಿ ಹಾಕಲಾಗಿದ್ದು, ಯೂಟ್ಯೂಬ್ ಇಂಡಿಯಾ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ಪಾಕ್‌ ನಟನಿಗೆ ಯೂಟ್ಯೂಬ್‌ ಶಾಕ್‌ ಕೊಟ್ಟಿದೆ. ‘ಅಭಿರ್ ಗುಲಾಲ್’ ಸಿನಿಮಾಕ್ಕೆ ಆರತಿ ಎಸ್ ಬಾಗ್ಡಿ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಫಹಾದ್ ಖಾನ್ ನಾಯಕಿಯಾಗಿ ವಾಣಿ ಕಪೂರ್ ಅಭಿನಯಿಸಿದ್ದಾರೆ. ಮೇ 9ಕ್ಕೆ ಈ ತೆರೆಗೆ ಬರಲಿದೆ. ಈ ಫಹಾದ್ ಖಾನ್ ಹೊರತುಪಡಿಸಿ ಈ ಸಿನಿಮಾದಲ್ಲಿ ಕೆಲಸ ಮಾಡಿರುವ ಎಲ್ಲರೂ ಭಾರತೀಯರೇ ಆಗಿದ್ದಾರೆ. ಆಗಿದ್ದರೂ ಪಾಕ್‌ ನಟನಿದ್ದಾನೆ ಎಂಬ  ನಟಿಸಿರುವ ಕಾರಣಕ್ಕೆ ಚಿತ್ರವನ್ನು ಬ್ಯಾನ್‌ ಮಾಡಬೇಕೆಂಬ ಕೂಗು ಇದೆ. ಕೇಂದ್ರದ ಮಾಹಿತಿ…

Read More

ಬೆಂಗಳೂರು: 9 ಕೋಟಿ ರೂಪಾಯಿ ಮೌಲ್ಯದ ಚಿನ್ನದ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯ ಗೌಡ ಅವರ ಬೆಂಗಳೂರು ಮತ್ತು ಮಂಡ್ಯದಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್‌ ಮೇಲೆ ಇಡಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. https://ainkannada.com/did-you-know-mango-prevents-weight-gain/ ಇನ್ನು, ಇಡಿ ಅಧಿಕಾರಿಗಳು ಬೆಂಗಳೂರಿನ ಆರ್.ಆರ್.ನಗರದ ಕಾಂಗ್ರೆಸ್ ಮುಖಂಡ ತಿಬ್ಬೇಗೌಡ ನಿವಾಸದ ಮೇಲೂ ದಾಳಿ ನಡೆಸಿದ್ದರು. ತಿಬ್ಬೇಗೌಡ ಅವರ ಬ್ಯಾಂಕ್ ಅಕೌಂಟ್ಸ್ ಡೀಟೆಲ್ಸ್‌, ದಾಖಲೆಗಳನ್ನು ಇಡಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ.

Read More

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಗಾಂಧಿನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವುಳ್ಳ ಶ್ರೀ ಗಜಾನನ ಶ್ರೀ ವೀರಭದ್ರೇಶ್ವರ ದೇವಸ್ಥಾನಗಳು ಭಕ್ತರ ಆರಾಧ್ಯ ಕೇಂದ್ರ ಆಗಿವೆ.‌ ಒಂದೇ ಆವರಣದಲ್ಲಿ ಈ ದೇವಸ್ಥಾನಗಳಿದ್ದು ಬೇಡಿದವರಿಗೆ ಬೇಡಿದನ್ನ ಕೊಡುವ ದೈವಿ ಪುರುಷರಾಗಿದ್ದರೆ.ಇಂದು ಈ ದೇವಸ್ಥಾನದ‌ ಸಕಲ ಭಕ್ತರ ಆರಾಧ್ಯ ಕೇಂದ್ರ ಆಗಿದೆ.‌ ಆರಂಭದಲ್ಲಿಗಾಂಧಿನಗರದಲ್ಲಿ ಖಾಲಿ ಜಾಗೆ ಇತ್ತುಸ್ಥಳೀಯರು ಸೇರಿಕೊಂಡು ಮಹಿಳಾ ಸಂಘ ಹಾಗೂ ಗುರುಹಿರಿಯರು ಜೊತೆಯಲ್ಲಿ ಸಾಮಾಜ ಮುಖಿಯಾಗಿ ಚಟುವಟಿಕೆಗಳನ್ನ ನಡೆಸಿಕೊಂಡು ಹೋಗತಾ ಇದ್ದರು. ನಂತರ ಇದೇ ಜಾಗೆಯಲ್ಲಿ ಒಂದು ಧಾರ್ಮಿಕ ಕೇಂದ್ರ ಆಗಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲಾಯಿತು. ಕೇಲವರ ವಿರೋಧದ ನಡುವೆ ದೊಡ್ಡ ಮಟ್ಟದ ಧಾರ್ಮಿಕ ಕೇಂದ್ರ ನಿರ್ಮಾಣದ ನಿರ್ಧಾರ ತೆಗೆದುಕೊಳ್ಳಲಾಯಿತು. https://ainkannada.com/did-you-know-mango-prevents-weight-gain/ ಸ್ಥಳೀಯ ನಾಯಕರು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಶ್ರೀ ಗಣಪತಿ ದೇವಸ್ಥಾನ ನಿರ್ಮಾಣದ ಸಂಕಲ್ಪದೊಂದಿಗೆ ಆರಂಭ ಆಯಿತು. ಕೇವಲ ಗಾಂಧಿನಗರ ಅಷ್ಟೇ ಅಲ್ಲ ಹುಬ್ಬಳ್ಳಿ ಧಾರವಾಡ ಸೇರಿದಂತೆ ಸುತ್ತಲಿನ ಭಕ್ತರು ಆಗಮಿಸಲು ಆರಂಭಿಸಿದರು. ‌1996 ರಲ್ಲಿ ಶ್ರಿ ಬಲಮುರಿ ಗಣಪತಿ ದೇವಸ್ಥಾನ…

Read More

ಕೆಜಿಎಫ್‌ ಸರಣಿ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಗೆ ಜೋಡಿಯಾಗಿ ಮಿಂಚಿದ್ದವರು ಶ್ರೀನಿಧಿ ಶೆಟ್ಟಿ. ಆ ಬಳಿಕ ಅವರು ಕನ್ನಡದ ಜೊತೆಗೆ ತೆಲುಗು, ತಮಿಳು ಚಿತ್ರಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ರಾಕಿಭಾಯ್‌ ಮನದರಸಿ ರೀನಾ ಪಾತ್ರದಲ್ಲಿ ಶ್ರೀನಿಧಿ ಶೆಟ್ಟಿ ಅಮೋಘವಾಗಿ ನಟಿಸಿದ್ದರು. ಇವರಿಬ್ಬರ ಕಾಂಬೋ ಪ್ರೇಕ್ಷಕರಿಗೂ ಇಷ್ಟವಾಗಿತ್ತು. ಈ ಜೋಡಿಯನ್ನು ಮತ್ತೊಮ್ಮೆ ನೋಡಲು ಕಾಯುತ್ತಿದ್ದವರಿಗೆ ಶ್ರೀನಿಧಿ ಶೆಟ್ಟಿ ಇಂಟ್ರೆಸ್ಟಿಂಗ್‌ ವಿಚಾರವೊಂದನ್ನು ರಿವೀಲ್‌ ಮಾಡಿದ್ದಾರೆ. ಹಿಟ್‌ 3 ಸಿನಿಮಾ ಪ್ರಚಾರದ ವೇಳೆ ಶ್ರೀನಿಧಿ ತಮಗೆ ರಾಮಾಯಣ ಸಿನಿಮಾದಿಂದ ಆಫರ್‌ ಬಂದಿರುವುದಾಗಿ ಹೇಳಿದ್ದಾರೆ. ರಾಮಾಯಣ ಚಿತ್ರಕ್ಕೆ ಸ್ಕ್ರೀನ್ ಟೆಸ್ಟ್ ನೀಡಿ ಬಂದಿದ್ದರಂತೆ. ಈ ಬಗ್ಗೆ ಮಾತನಾಡಿರುವ ಅವರು, “ಹೌದು, ನಾನು ಸ್ಕ್ರೀನ್ ಟೆಸ್ಟ್ ನೀಡಿದ್ದೇನೆ. ಮೂರು ದೃಶ್ಯಗಳನ್ನು ಮಾಡಿ ತೋರಿಸಿದ್ದೆ. ಆ ವೇಳೆ, ಯಶ್ ಕೂಡ ಈ ಸಿನಿಮಾದ ಭಾಗವಾಗ್ತಾರೆ ಎಂದು ಕೇಳಿಪಟ್ಟಿದ್ದೆ, ಅದೇ ಸಮಯದಲ್ಲೇ ‘ಕೆಜಿಎಫ್ 2’ ರಿಲೀಸ್ ಆಗಿತ್ತು. ನನ್ನ ಮತ್ತು ಯಶ್ ಜೋಡಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಎರಡೂ ತಿಂಗಳಲ್ಲಿ, ರಾಮಾಯಣ ಆಡಿಷನ್ ಆಗಿತ್ತು.…

Read More

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ. ಭದ್ರತಾ ಪಡೆಗಳು ಪ್ರಸ್ತುತ ಬಿಜ್‌ಬೆಹರಾ ಮತ್ತು ಟ್ರಾಲ್ ಪ್ರದೇಶಗಳನ್ನು ಶೋಧಿಸುತ್ತಿವೆ. ಇದರ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯ ಭಯೋತ್ಪಾದಕರ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಈ ಎನ್‌ಕೌಂಟರ್ ನಡೆದಿದೆ. ಭಯೋತ್ಪಾದಕರು ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಕುಲ್ನಾರ್‌ನ ಬಾಜಿಪುರದಲ್ಲಿ ಕಾರ್ಡನ್ ಶೋಧ ಕಾರ್ಯಾಚರಣೆ ನಡೆಸಲಾಯಿತು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಮೊಂಗಮಾ ಪ್ರದೇಶದಲ್ಲಿ ಸೇನೆಯು ಭಯೋತ್ಪಾದಕನ ಮನೆಯನ್ನು ಗುರುತಿಸಿದೆ. ಪಡೆಗಳು ಐಇಡಿ ಬಾಂಬ್‌ಗಳಿಂದ ಭಯೋತ್ಪಾದಕನ ಮನೆಯನ್ನು ಸ್ಫೋಟಿಸಿದವು. ಅಧಿಕಾರಿಗಳು ಆ ಮನೆಯನ್ನು ಆಸಿಫ್ ಶೇಖ್ ಎಂಬ ಭಯೋತ್ಪಾದಕನಿಗೆ ಸೇರಿದ್ದು ಎಂದು ಗುರುತಿಸಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ 26 ಅಮಾಯಕರ ಜೀವವನ್ನು ಬಲಿ ಪಡೆದ ಭಯೋತ್ಪಾದಕರಲ್ಲಿ ಆಸಿಫ್ ಶೇಖ್ ಹೆಸರು ಕೂಡ ಒಂದು ಎಂದು ತಿಳಿದುಬಂದಿದೆ. ಇದರಿಂದಾಗಿ…

Read More

ಇಂಗ್ಲೆಂಡ್ ಕ್ರಿಕೆಟ್ ದಂತಕಥೆ ಆಂಡ್ರ್ಯೂ ಫ್ಲಿಂಟಾಫ್ 2022 ರಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತವನ್ನು ನೆನಪಿಸಿಕೊಳ್ಳುತ್ತಾ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಸರ್ರೆಯ ಡನ್ಸ್‌ಫೋಲ್ಡ್ ಪಾರ್ಕ್ ಏರೋಡ್ರೋಮ್‌ನಲ್ಲಿ ಬಿಬಿಸಿಯ ಜನಪ್ರಿಯ ಆಟೋಮೊಬೈಲ್ ಶೋ “ಟಾಪ್ ಗೇರ್” ಚಿತ್ರೀಕರಣ ಮಾಡುತ್ತಿದ್ದಾಗ, ಫ್ಲಿಂಟಾಫ್ ಚಲಾಯಿಸುತ್ತಿದ್ದ ತ್ರಿಚಕ್ರ ವಾಹನ (ಮಾರ್ಗನ್ ಸೂಪರ್ 3) ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಉರುಳಿತು. ಅಪಘಾತದಲ್ಲಿ ಅವರ ಮುಖ ಮತ್ತು ಪಕ್ಕೆಲುಬುಗಳಿಗೆ ಗಂಭೀರ ಗಾಯಗಳಾಗಿವೆ. ಫ್ಲಿಂಟಾಫ್ ಅವರ ಕಾಲಿನಲ್ಲಿ ಸೀಳಿದಂತೆ ಕಂಡುಬಂದ ಗಾಯಗಳಿಂದಾಗಿ ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಾಯಿತು. ಈ ಘಟನೆಯ ನಂತರ, ಬಿಬಿಸಿ ಕಾರ್ಯಕ್ರಮದ ನಿರ್ಮಾಣವನ್ನು ಸ್ಥಗಿತಗೊಳಿಸಿತು ಮತ್ತು ಹಿಂದಿನ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ £9 ಮಿಲಿಯನ್ ಪರಿಹಾರವನ್ನು ನೀಡಿತು. https://ainkannada.com/did-you-know-mango-prevents-weight-gain/ ಈಗ ಡಿಸ್ನಿ+ ಸಾಕ್ಷ್ಯಚಿತ್ರದಲ್ಲಿ ಮಾತನಾಡುತ್ತಾ, ಘಟನೆಯ ಬಗ್ಗೆ ಮಾತನಾಡುವಾಗ ಫ್ಲಿಂಟಾಫ್ ಭಾವುಕರಾದರು. “ನಾನು ಸತ್ತಿದ್ದೇನೆ ಎಂದು ನಾನು ಭಾವಿಸಿದೆ. ನನಗೆ ಪ್ರಜ್ಞೆ ಇತ್ತು ಆದರೆ ನನಗೆ ಏನೂ ಕಾಣಲಿಲ್ಲ. ನನ್ನ ಜೀವನ ಇಷ್ಟೇನಾ? ನನ್ನ ಉಳಿದ ದಿನಗಳಲ್ಲಿ ನಾನು…

Read More