Author: Author AIN

ಕಿಚ್ಚ ಸುದೀಪ್ ನಟನೆಯ ಬಿಲ್ಲಾ ರಂಗ ಬಾಷಾ ಸಿನಿಮಾದ ಶೂಟಿಂಗ್, ನಗರದ ಕಂಠೀರವ ಸ್ಟುಡಿಯೋದಲ್ಲಿ ನಡೀತಿದ್ದು, ಪ್ರೀತಿಯ ಕಿಚ್ಚನನ್ನು ನೋಡೋಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸ್ಟುಡಿಯೋ ಕಡೆ ಆಗಮಿಸ್ತಿದ್ದಾರೆ. ಆದ್ರೆ ಚಿತ್ರತಂಡ ಬಿಗಿ ಬಂದೋಬಸ್ತ್ ಹಾಕಿದ್ದು, ಸಿನಿಮಾದ ಶೂಟಿಂಗ್ ಸಂಬಂಧಿಸಿದಂತೆ ಯಾವುದೇ ದೃಶ್ಯಗಳು ಲೀಕ್ ಆಗದಂತೆ ಎಚ್ಚರಿಕೆ ವಹಿಸಿದೆ.. ಕಳೆದ ನಾಲ್ಕೈದು ದಿನಗಳಿಂದ ನಾನ್ ಸ್ಟಾಪ್ ಶೂಟಿಂಗ್ ನಡೀತಿದೆ. ‘ಬಿಲ್ಲ ರಂಗ ಬಾಷಾ’ ಚಿತ್ರದ ಶೇ. 70ರಷ್ಟು ಶೂಟ್ ಸೆಟ್ನಲ್ಲೇ ಸಾಗಲಿದೆ. ಈ ಹಿಂದೆ ಕಿಚ್ಚನ ಜೊತೆ ವಿಕ್ರಾಂತ್‌ ರೋಣ ಸಿನಿಮಾ ಮಾಡಿದ್ದ ಅನೂಪ್ ಭಂಡಾರಿ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಈ ಸಿನಿಮಾವನ್ನು ಚೈತನ್ಯ ರೆಡ್ಡಿ ಹಾಗೂ ನಿರಂಜನ ರೆಡ್ಡಿ ನಿರ್ಮಿಸುತ್ತಿದ್ದಾರೆ. ಇದು ಕ್ರಿ.ಶ 2209ರ ಕಾಲಘಟ್ಟದಲ್ಲಿ ನಡೆಯುವ ಕಥೆ. ವೈಜ್ಞಾನಿಕತೆ ಬೆರೆಸಿದ ಫ್ಯಾಂಟಸಿ ಕಥೆಯನ್ನು ಅನೂಪ್‌ ಭಂಡಾರಿ ಈ ಸಿನಿಮಾದಲ್ಲಿ ನಿರೂಪಿಸಲಿದ್ದಾರೆ. ಬಿಲ್ಲ ರಂಗ ಬಾಷಾ ಎರಡು ಚಾಪ್ಟರ್‌ಗಳಲ್ಲಿ ಸಿನಿಮಾ ತೆರೆಗೆ ಬರಲಿದೆ ಎಂಬ ಗುಲ್ಲಿದೆ. ಮೊದಲ…

Read More

ಬ್ಯಾಂಕುಗಳಿಂದ ಸಾಲ ಪಡೆಯುವ ಮೊದಲು ನಿಮ್ಮ CIBIL ಸ್ಕೋರ್ ಅನ್ನು ತಿಳಿದುಕೊಳ್ಳುವುದು ಮುಖ್ಯ. CIBIL ಸ್ಕೋರ್ 300 ರಿಂದ 900 ಅಂಕಗಳವರೆಗೆ ಇರುತ್ತದೆ. ಮಧ್ಯದಲ್ಲಿರುವ ಸಂಖ್ಯೆಯು ನೀವು ಹಣವನ್ನು ಎರವಲು ಪಡೆಯಲು ಸೂಕ್ತ ವ್ಯಕ್ತಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ನಿಮ್ಮ ಹಳೆಯ ಸಾಲಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ಆಧರಿಸಿ ಈ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. https://ainkannada.com/did-you-know-mango-prevents-weight-gain/ ನೀವು ನಿಮ್ಮ ಕಾರ್ಡ್ ಮತ್ತು ಸಾಲದ ಮೊತ್ತವನ್ನು ಸಮಯಕ್ಕೆ ಸರಿಯಾಗಿ ಪಾವತಿಸಿದರೆ, ನಿಮ್ಮ CIBIL ಸ್ಕೋರ್ ಉತ್ತಮವಾಗಿರುತ್ತದೆ. ಇದರಲ್ಲಿ ಯಾವುದೇ ತಪ್ಪು ಸಂಭವಿಸಿದರೆ ಅದು CIBIL ಸ್ಕೋರ್ ಮೇಲೆ ನೇರ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ನಿಮ್ಮ CIBIL ಸ್ಕೋರ್‌ಗೆ ಹಾನಿಯಾಗದಂತೆ 7 ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ, ನೀವು ತೊಂದರೆಗಳನ್ನು ಎದುರಿಸಬಹುದು. ನೀವು ಸಾಲ ಪಡೆದು ಆ ಸಾಲದ ಕಂತು (ಇಎಂಐ) ಪಾವತಿಸದಿದ್ದರೆ, ಅದು ಸಿಐಬಿಐಎಲ್ ಮೇಲೆ ನೇರ ಪರಿಣಾಮ ಬೀರುತ್ತದೆ. ಇದು CIBIL ಸ್ಕೋರ್ ಅನ್ನು ಕಡಿಮೆ ಮಾಡುತ್ತದೆ. ಆದಾಗ್ಯೂ,…

Read More

ಪರಭಾಷೆಗಳಲ್ಲಿ ಹೋಲಿಸಿಕೊಂಡರೆ ಕನ್ನಡದಲ್ಲಿ ವೆಬ್‌ ಸೀರಿಸ್‌ ಗಳು ಕಡಿಮೆ ಎಂಬ ಮಾತಿದೆ. . ಹೀಗಾಗಿ ಜನರು ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ವೆಬ್‌ ಸಿರೀಸ್‌ಗಳತ್ತ ಮುಖ ಮಾಡಿದ್ದಾರೆ. ಇದೀಗ ಕನ್ನಡದಲ್ಲಿಯೂ ಮಿನಿ ವೆಬ್‌ ಸರಣಿ ಬಿಡುಗಡೆಯಾಗಿದ್ದು, ನೋಡಿದವರಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ರೋಚಕತೆ ಜೊತೆಗೆ ಭಯ, ನಂಬಿಕೆ ಹಾಗೂ ಫ್ಯಾಮಿಲಿಯ ಕಥೆಯನ್ನು ಒಳಗೊಂಡಿರುವ ‘ಅಯ್ಯನ ಮನೆ’ ವೆಬ್ ಸೀರಿಸ್ ಜೀ5ನಲ್ಲಿ ಬಿಡುಗಡೆಯಾಗಿದೆ. ಈ ವೆಬ್ ಸರಣಿಗೆ ರಮೇಶ್ ಇಂದಿರಾ ನಿರ್ದೇಶನ ಮಾಡಿದ್ದಾರೆ. ಈ ಸೀರಿಸ್‌ನಲ್ಲಿ ಖುಷಿ ರವಿ, ಮಾನಸಿ ಸುಧೀರ್, ಅಕ್ಷಯ್ ನಾಯಕ್, ಹಿತಾ ಚಂದ್ರಶೇಖರ್, ಅನಿರುದ್ಧ್ ಆಚಾರ್ಯ, ಅರ್ಚನಾ ಕೊಟ್ಟಿಗೆ, ಶೋಭರಾಜ್ ಪಾವೂರ್ ಮುಂತಾದವರು ನಟಿಸಿದ್ದಾರೆ. ಎಲ್.ವಿ ಮುತ್ತು ಗಣೇಶ್ ಸಂಗೀತ, ರಾಹುಲ್ ರಾಯ್ ಛಾಯಾಗ್ರಹಣ ಹಾಗೂ ರಾಜೇಂದ್ರ ಅರಸ್ ಸಂಕಲನ ಈ ವೆಬ್ ಸೀರಿಸ್‌ಗೆ ಇದೆ. ಅಯ್ಯನ ಮನೆಯನ್ನು ಶ್ರುತಿ ನಾಯ್ಡು ನಿರ್ಮಾಣ ಮಾಡಿದ್ದಾರೆ. ಅಯ್ಯನ ಮನೆ ವೆಬ್ ಸೀರಿಸ್‌ನಲ್ಲಿ ಏಳು ಎಪಿಸೋಡ್‌ಗಳು ಇವೆ. ವೆಬ್‌ಸಿರೀಸ್ ಪ್ರೇಮಿಗಳಿಗೆ ಈ…

Read More

ಮೈಸೂರು: ರಾಮನಗರ ಹೆಸರು ಬದಲಾವಣೆಯನ್ನು ಮಾಡೇ ಮಾಡುತ್ತೇನೆ ಎಂದು ಡಿಸಿಎಂ  ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ರಾಮನಗರದ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕು ಎಂಬುದು ನನಗೆ ಗೊತ್ತಿದೆ. ನಾನು ಮಾಡಿಯೇ ಸಿದ್ದ. ಇದು ಬೆಂಗಳೂರು ದಕ್ಷಿಣವೇ. ನಾವು ಯಾರೂ ಸಹ ಹೊರಗಡೆಯಿಂದ ಬಂದು ಹೆಸರು ಕೊಡಿ ಎಂದು ಕೇಳುತ್ತಿಲ್ಲ. ಇದು ನಮ್ಮ‌ ಹಕ್ಕು. ನಮ್ಮ ತಂದೆ ತಾಯಿ, ಹುಟ್ಟು ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಆಗುತ್ತದೆಯೇ? ಎಂದು ಹೇಳಿದರು. https://ainkannada.com/did-you-know-mango-prevents-weight-gain/ ಇನ್ನೂ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಭದ್ರತಾ ವೈಫಲ್ಯ ಕಾರಣನಾ ಎನ್ನುವ ವಿಚಾರಕ್ಕೆ ಕೇಂದ್ರ ಸರ್ಕಾರದ ಪರ ಡಿಸಿಎಂ ಡಿಕೆ ಶಿವಕುಮಾರ್ ಸಾಫ್ಟ್ ಕಾರ್ನರ್ ತೋರಿದ್ದಾರೆ. ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ, ಯಾರ ವಿರುದ್ದವೂ ಮಾತನಾಡುವುದಿಲ್ಲ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ, ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು. ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಅವರನ್ನು ಮುಗಿಸುವ ಕೆಲಸ ಆಗಬೇಕು.…

Read More

ಇಸ್ಲಾಮಾಬಾದ್: ಸೇನಾ ಸಮವಸ್ತ್ರದಲ್ಲಿ ಭಾರತದೊಳಗೆ ನುಗ್ಗಿದ್ದ ಉಗ್ರರು ಪಹಲ್ಗಾಮ್‌ನಲ್ಲಿ ಕಂಡು ಕೇಳದ ನರಮೇಧ ನಡೆಸಿದ್ದಾರೆ. ಪ್ರೇಮ ಕಾಶ್ಮೀರದಲ್ಲಿ ಹನಿಮೂನ್‌ಗೆ ಹೋದವರ ಮಾರಣಹೋಮವೇ ನಡೆದು ಹೋಗಿದೆ. ಪ್ರವಾಸಿಗರು ಕೈ ಮುಗಿದು ಬೇಡಿಕೊಂಡರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.. ಇದರ ಬೆನ್ನಲ್ಲೇ ನಾವು ಭಯೋತ್ಪಾದನಾ ಸಂಘಟನೆಯನ್ನು ಬೆಂಬಲಿಸಿದ್ದೇವೆ ಎಂದು ಪಾಕಿಸ್ತಾನ ಅಧಿಕೃತವಾಗಿ ಹೇಳಿದೆ. https://ainkannada.com/did-you-know-mango-prevents-weight-gain/ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸುವುದು ಮತ್ತು ಬೆಂಬಲಿಸುವುದು ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಭಾಗಿಯಾಗಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ನಾವು ಸುಮಾರು 3 ದಶಕಗಳಿಂದ ಅಮೆರಿಕ ಮತ್ತು ಬ್ರಿಟನ್ ಸೇರಿದಂತೆ ಪಶ್ಚಿಮ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು. ನಾವು ತಪ್ಪು ಮಾಡಿದ್ದೇವೆ. ಈ ಕೆಲಸದಿಂದ ನಾವು ಸಂಕಷ್ಟ ಅನುಭವಿಸಿದ್ದೇವೆ. ನಾವು ಸೋವಿಯತ್ ಒಕ್ಕೂಟದ ವಿರುದ್ಧದ ಯುದ್ಧದಲ್ಲಿ ಮತ್ತು ನಂತರ 9/11 ರ ನಂತರದ ಯುದ್ಧದಲ್ಲಿ ಸೇರದಿದ್ದರೆ ಪಾಕಿಸ್ತಾನದ ಮೇಲೆ ಈ ಆರೋಪ ಬರುತ್ತಿರಲಿಲ್ಲ ಎಂದು ತಿಳಿಸಿದರು. ಅಷ್ಟೇ ಅಲ್ಲದೇ ಪಹಲ್ಗಾಮ್‌…

Read More

ಭಾರತೀಯ ಚಿತ್ರರಂಗದಲ್ಲಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಪಟ್ಟಿಗಳಲ್ಲಿ ಕನ್ನಡದ ಕಾಂತಾರ ಪ್ರೀಕ್ವೆಲ್‌ ಕೂಡ ಒಂದಾಗಿದೆ. ಕಾಂತಾರ ಸೀಕ್ವೆಲ್‌ ಕಮಲ್ ಮಾಡಿದ್ಮೇಲೆಂತೂ ಅಖಂಡ ಸಿನಿಮಾಪ್ರೇಮಿಗಳು ಕಾಂತಾರ 1 ಕಣ್ತುಂಬಿಕೊಳ್ಳೊದಿಕ್ಕೆ ಕಾತರರಾಗಿದ್ದಾರೆ. ಕಾಂತಾರ ಪ್ರೀಕ್ವೆಲ್‌ ಮೂಲಕ ರಿಷಬ್‌ ಶೆಟ್ಟಿ ಅದ್ಯಾವ ಕಥೆಯನ್ನು ಹರವಿಡಲಿದ್ದಾರೆ ಅನ್ನೋದನ್ನು ಕ್ಯೂರಿಯಾಸಿಟಿ ದುಪ್ಪಟ್ಟಿದೆ. ವಿಶೇಷ ಎನ್ನುವಂತೆ ಡಿವೈನ್‌ ಸ್ಟಾರ್‌ ಸೂಪರ್‌ ಸ್ಟಾರ್‌ ರಜನಿಕಾಂತ್‌, ಕಮಲ್‌ ಹಾಸನ್‌, ಪ್ರಭಾಸ್‌, ಹೃತಿಕ್‌ ರೋಷನ್‌ ಸಿನಿಮಾಗಳಿಗೆ ಟಕ್ಕರ್‌ ಕೊಟ್ಟು ನಂಬರ್‌ 1 ಸ್ಥಾನ ಪಡೆದಿದ್ದಾರೆ. 2025ರ ಅತಿ ನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿಯನ್ನು ಐಎಂಡಿಬಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ನಂಬರ್‌ 1 ಸ್ಥಾನ ಕಾಂತಾರ ಪ್ರೀಕ್ವೆಲ್‌ ಪಾಲಾಗಿದೆ. ಕಾಂತಾರ 1 ಸಿನಿಮಾವನ್ನು ಸಿನಿಮಾಪ್ರೇಮಿಗಳು ಅದೆಷ್ಟು ನಿರೀಕ್ಷೆಯಿಂದ ಕಾಯುತ್ತಿದ್ದಾರೆ ಅನ್ನೋದಕ್ಕೆ ಐಎಂಡಿಬಿ ಪಟ್ಟಿಯೇ ಉದಾಹರಣೆಯಾಗಿದೆ. ಐಎಂಡಿಬಿ ಪಟ್ಟಿಯಲ್ಲಿ ಕಾಂತಾರ ಪ್ರೀಕ್ವೆಲ್‌ 1 ಸ್ಥಾನದಲ್ಲಿದ್ದರೆ, ಸೂರ್ಯ ‘ರೆಟ್ರೋ’ ಸಿನಿಮಾ ಮೂರನೇ ಸ್ಥಾನ ಪಡೆದುಕೊಂಡಿದೆ. ಅಜಯ್ ದೇವಗನ್ ಅಭಿನಯದ ‘ರೇಡ್ 2’ ಚಿತ್ರ ನಾಲ್ಕು, ರಜನಿಯ ‘ಕೂಲಿ’…

Read More

ವಿಜಯಪುರ: 22 ವರ್ಷದ ಯುವಕನೊಬ್ಬ ತಂದೆಯ ಪಿಸ್ತೂಲ್’​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ ಮಿರ್ಜಿ (22) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಯುವಕನ ತಂದೆ ಹಾಗೂ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್ ಅನ್ನು ತೆಗೆದುಕೊಂಡು ಬೆಡ್ ರೂಂಗೆ ಹೋಗಿ ತಲೆಗೆ ಹೊಡೆದುಕೊಂಡ ಯುವಕ ಸಾವನ್ನಪ್ಪಿದ್ದಾನೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಈ ಘಟನೆ ನಡೆದಿದ್ದು, https://ainkannada.com/did-you-know-mango-prevents-weight-gain/ ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್​ ರೂಂ ಬಾಗಿಲು ತೆರೆದಿದ್ದಾರೆ. ತಕ್ಷಣ ಅಶನಂ ನನ್ನು ಬಿಎಲ್​ಇಡಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರ ಮಾಡಿದ್ದಾರೆ. ಆದರೆ ಅಶನಂ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಪಹಲ್ಗಾಮ್​ನಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಯ ಪ್ರಮುಖ ಆರೋಪಿಗಳಿಗಾಗಿ ಭಾರತೀಯ ಸೇನೆಯು ಹಗಲು-ರಾತ್ರಿ ಹುಡುಕಾಟ ನಡೆಸುತ್ತಿದೆ. ಇದರ ಬೆನ್ನಲ್ಲೇ ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಟಾಪ್‌ ಕಮಾಂಡರ್‌ನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಅಲ್ತಾಫ್ ಲಲ್ಲಿ ಟಾಪ್‌ ಕಮಾಂಡರ್‌ ಆಗಿದ್ದು ಉಗ್ರ ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ. ಅರಣ್ಯದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ಬೆಳಗ್ಗೆ ಜಂಟಿ ಕಾರ್ಯಾಚರಣೆ ನಡೆಯಿತು. ಈ ಎನ್‌ಕೌಂಟರ್‌ನಲ್ಲಿ ಅಲ್ತಾಫ್‌ ಲಲ್ಲಿ ಹತ್ಯೆಯಾಗಿದ್ದಾನೆ. https://ainkannada.com/did-you-know-mango-prevents-weight-gain/ ಈ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶ್ರೀನಗರಕ್ಕೆ ಇಂದು ಆಗಮಿಸಿದ್ದು ಅವರಿಗೆ ಕಾರ್ಯಾಚರಣೆಯ ವಿವರ ನೀಡಲಾಯಿತು.

Read More

ಡಾರ್ಲಿಂಗ್‌ ಪ್ರಭಾಸ್‌ ಹಾಗೂ ಸ್ವೀಟಿ ಅನುಷ್ಕಾ ಶೆಟ್ಟಿ ತೆಲುಗು ಸಿನಿಪ್ರೇಮಿಗಳು ಅಚ್ಚುಮೆಚ್ಚಿನ ಜೋಡಿ. ಬಾಹುಬಲಿ ಸರಣಿ ಸಿನಿಮಾ ಬಂದ್ಮೇಲೆ ಈ ಜೋಡಿಯನ್ನು ಅಭಿಮಾನಿಗಳು ಮತ್ತೊಮ್ಮೆ ತೆರೆಯಲ್ಲಿ ಒಟ್ಟಿಗೆ ನೋಡಲು ಕಾಯುತ್ತಿದ್ದಾರೆ. ಆದ್ರೆ ಇಲ್ಲಿವರೆಗೂ ಅನುಷ್ಕಾ ಪ್ರಭಾಸ್‌ ಮತ್ತೊಮ್ಮೆ ತೆರೆಹಂಚಿಕೊಂಡಿಲ್ಲ. ಇವರಿಬ್ಬರನ್ನು ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮಗದೊಮ್ಮೆ ಒಂದುಗೂಡಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಜಿಎಫ್, ಸಲಾರ್‌ ಸಿನಿಮಾಗಳನ್ನು ನಿರ್ಮಿಸಿರುವ ಹೊಂಬಾಳೆ ಈಗಾಗಲೇ ಪ್ರಭಾಸ್‌ ಜೊತೆ ಮೂರ್ನಾಲ್ಕು ಪ್ರಾಜೆಕ್ಟ್‌ ಮಾಡೋದಾಗಿ ಘೋಷಣೆ ಮಾಡಿದೆ. ಸದ್ಯ ಪ್ರಭಾಸ್‌ ಬೇರೆ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಹೊಂಬಾಳೆ ಕೂಡ ಬೇರೆ ಸಿನಿಮಾಗಳ ನಿರ್ಮಾಣದಲ್ಲಿ ಬ್ಯುಸಿಯಾಗಿದೆ. ಈ ನಡುವೆ ಪ್ರಭಾಸ್‌ ಒಪ್ಪಿಕೊಂಡಿರುವ ಮೂರ್ನಾಲ್ಕು ಪ್ರಾಜೆಕ್ಟ್‌ ಗಳ ಪೈಕಿ ಒಂದರಲ್ಲಿ ನಾಯಕಿಯಾಗಿ ಅನುಷ್ಕಾ ಶೆಟ್ಟಿ ನಟಿಸಲಿದ್ದಾರೆ ಎಂಬ ಹೊಸ ಸಮಾಚಾ ಹೊರಬಿದ್ದಿದೆ. ಹೊಂಬಾಳೆ ನಿರ್ಮಾಣದಲ್ಲಿ ಬಾಹುಬಲಿ ಜೋಡಿ ಮತ್ತೊಮ್ಮೆ ತೆರೆಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅನುಷ್ಕಾ-ಪ್ರಭಾಸ್‌ ಜೋಡಿಯಾಗಿ ನಟಿಸಿರುವ ‘ಬಿಲ್ಲಾ’, ‘ಮಿರ್ಚಿ’ ಹಾಗೂ ‘ಬಾಹುಬಲಿ’ ಸರಣಿ ಸಿನಿಮಾಗಳು ಸೂಪರ್‌ ಹಿಟ್‌ ಕಂಡಿವೆ. ಹೀಗಾಗಿ ಸಹಜವಾಗಿ…

Read More

ಬೆಂಗಳೂರು: ಕೇಂದ್ರ ಸರ್ಕಾರದ ಕೆಲವೊಂದು ಕ್ರಮಗಳ ಭಾಗವಾಗಿ ಕರ್ನಾಟಕದಲ್ಲಿರುವ ಪಾಕಿಸ್ತಾನಿಗಳನ್ನು ವಾಪಸ್ ಕಲುಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಧಿಕೃತವಾಗಿ ಇರುವವರು, ಅನಧಿಕೃತವಾಗಿ ಇರುವವರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಹಿಂದೆ ಅಧಿವೇಶನದಲ್ಲಿ ಪ್ರಶ್ನೆ ಕೇಳಿದಾಗ ಉತ್ತರ ನೀಡಿದ್ದೇವೆ. ಅದರಲ್ಲಿ ಪಾಕಿಸ್ತಾನಿ ಪ್ರಜೆಗಳು ಯಾರಿದ್ದಾರೆ, ಅಧಿಕೃತವಾಗಿ ಯಾರಿದ್ದಾರೆ ಎಂದು ತಿಳಿದು ಅವರನ್ನೆಲ್ಲ ವಾಪಸ್ ಕಳುಹಿಸಲೇಬೇಕಾಗುತ್ತದೆ” ಎಂದರು. https://ainkannada.com/did-you-know-mango-prevents-weight-gain/ “ಕೇಂದ್ರ ಸರ್ಕಾರ ವಾಪಸ್ ಕಳಿಸುವ ತೀರ್ಮಾನ ತೆಗೆದುಕೊಂಡಿದೆ. ಅನಧಿಕೃತವಾಗಿ ಇರುವುದರ ಬಗ್ಗೆ ಪರಿಶೀಲಿಸಬೇಕು. ಅಧಿಕೃತವಾಗಿ ಇರೋರನ್ನು ಕಳಿಸುವುದಕ್ಕೆ ತಕರಾರಿಲ್ಲ. ಈಗಾಗಲೇ ವೀಸಾ ಕ್ಯಾನ್ಸಲೇಷನ್ ಮಾಡಲಾಗಿದೆ, ವಾಪಸ್ ಹೋಗಿ ಅಂತ ಹೇಳಿ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಾಪಸ್ ಹೋಗಿ ಅಂತ ಹೇಳೋದಷ್ಟೇ ನಮ್ಮ ಕೆಲಸ. ಅನಧಿಕೃತವಾಗಿ ಇಲ್ಲಿ ಇರುವವರನ್ನು ಪೊಲೀಸರು ಹುಡುಕ್ತಿದ್ದಾರೆ” ಎಂದು ಹೇಳಿದರು.  

Read More