ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇನ್ನೂ ದಾಳಿ ನಡೆಸಿದ ಐವರ ಪೈಕಿ ಓರ್ವ ಉಗ್ರನ ಫೋಟೋ ಹೊರಬಂದಿದೆ. ಪ್ರವಾಸಿಗರೊಬ್ಬರು AK 47 ಗನ್ ಹಿಡಿದ ಉಗ್ರನ ಫೋಟೋವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದುಕೊಂಡಿದ್ದು, ಸದ್ಯ ಬೆಳಕಿಗೆ ಬಂದಿದೆ. ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ನಡೆದ ದಾಳಿಯಲ್ಲಿ 26 ಪ್ರವಾಸಿಗರು ಮೃತರಾಗಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದಾಳಿಕೋರರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ಮುಂದಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿರುವ ಪ್ರವಾಸಿಗರ ಸ್ಥಳಾಂತರಕ್ಕೆ ಹೆಚ್ಚುವರಿ ವಿಮಾನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
Author: Author AIN
ಹುಬ್ಬಳ್ಳಿ; ಕಾಶ್ಮೀರದ ಪಹಲ್ಗಾಮ್ ನಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ವೈಮಾನಿಕ ಕಂಪನಿಗಳು ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಈಗಾಗಲೇ ಕಾಶ್ಮೀರದ ಪ್ರವಾಸಿ ತಾಣಗಳಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ. ಮೃತರ ಶವಗಳನ್ನು ತರಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಟಿಕೆಟ್ ದರ ಹೆಚ್ಚಿಸದಿರಲು ಸೂಚನೆ: ಭಯೋತ್ಪಾದನಾ ಕೃತ್ಯ ನಡೆದ ಸ್ಥಳದಿಂದ ಹಾಗೂ ಕಾಶ್ಮೀರದ ಇತರೆ ಪ್ರವಾಸಿ ತಾಣಗಳಿಂದ ಪ್ರವಾಸಿಗರ ರಕ್ಷಣಾ ಕಾರ್ಯ ನಡೆದಿದೆ. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಹೆಚ್ಚಿನ ಟಿಕೆಟ್ ದರ ವಿಧಿಸದಿರುವಂತೆ ವೈಮಾನಿಕ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು. ವಿಮಾನಯಾನ ಸಚಿವರೊಂದಿಗೆ ಚರ್ಚೆ: ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ನಾಗರೀಕ ವಿಮಾನಯಾನ ಸಚಿವರೊಂದಿಗೂ ಮಾತನಾಡಿದ್ದೇನೆ. ಏರ್ ಲೈನ್ ಟಿಕೆಟ್ ದರದ ಕುರಿತು ಗಮನಹರಿಸಲು ಡಿಜಿಸಿಎಗೂ ಸೂಚನೆ ನೀಡಿದ್ದೇನೆ ಎಂದು…
ಪಹಲ್ಗಾಂಮ್ ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಪಹಲ್ಗಾಮ್ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ. ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ. “ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಲಾಡ್ ಅವರು ತಿಳಿಸಿದ್ದಾರೆ. ಇಬ್ಬರ ಗುರುತು ಪತ್ತೆ ಉಗ್ರರ…
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳದು ಕೋಪ ಅತಿರೇಕಕ್ಕೆ ಹೋಗಿ ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಹೊಸೂರಲ್ಲಿ ನಡೆದಿದೆ. https://ainkannada.com/fine-for-not-wearing-a-helmet-these-tips-are-mandatory-when-buying/ ಹೊಸೂರ ನಿವಾಸಿ ವಿಜಯ ಎಂಬಾತನೃ ಚಾಕು ಇರಿತಕ್ಕೆ ಒಳಗಾದ ಯುವಕ, ಸಂದೀಪ ಎಂಬಾತ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದಾನೆ. ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ವಿಜಯ ಎಂಬ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇನ್ನೂ ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೇ ನೀಡಿದ್ದಾರೆ. ಟ್ವೀಟ್ ಮಾಡಿದ ಅವರು, ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ ಶರ್ಮ ಅವರ ಕುಟುಂಬಸ್ಥರ ಬಳಿ ಮಾತನಾಡಿದ್ದು, ಪಾರ್ಥಿವ ಶರೀರವನ್ನು ಕರೆತರಲು ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. https://ainkannada.com/fine-for-not-wearing-a-helmet-these-tips-are-mandatory-when-buying/ ಮಂಜುನಾಥ ಶರ್ಮರ ಪತ್ನಿ ಪಲ್ಲವಿ ಹಾಗೂ ಅವರ ಪುತ್ರನನ್ನು ತವರಿಗೆ ಕರೆತರಲು ವ್ಯವಸ್ಥೆ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ‘‘ಈ ಸಮಯದಲ್ಲಿ ಶ್ರೀಮತಿ ಪಲ್ಲವಿ ಅವರೊಂದಿಗೆ ಹಾಗೂ ಶಿವಮೊಗ್ಗದಲ್ಲಿರುವ ಅವರ ತಾಯಿಯವರ ಜೊತೆ ಮಾತನಾಡಿದ್ದೇನೆ. ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರದಾಳಿಯಲ್ಲಿ ಅಸುನೀಗಿರುವ ಪಲ್ಲವಿ ಅವರ ಪತಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಮಂಜುನಾಥ ಶರ್ಮರವರ ಆತ್ಮಕ್ಕೆ ಶಾಂತಿ ಕೋರಿ, ಸಾಂತ್ವನ ಹೇಳಿದ್ದೇನೆ.…
ಏಪ್ರಿಲ್ 24 ವರನಟ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸುಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಶ್ರಿತಿಕ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಸಾಗರ್, ಕೃಷ್ಣಕುಮಾರ್ ಹಾಗೂ ಸೂರಜ್ ಶರ್ಮ ಈ ನೂತನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಾಲಾಜಿ ಮಾಧವನ್ ನಿರ್ದೇಶನ ಮಾಡಲಿದ್ದಾರೆ. ಕನ್ನಡದಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುತ್ತಿರುವ ಬಾಲಾಜಿ ಮಾಧವನ್, ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರಿಯ ಪುತ್ರ. ಇತ್ತೀಚೆಗೆ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿದ ನಿರ್ದೇಶಕ ಬಾಲಾಜಿ ಮಾಧವನ್ ಹಾಗೂ ನಿರ್ಮಾಪಕರಾದ ಸಾಗರ್ , ಕೃಷ್ಣಕುಮಾರ್ ಮತ್ತು ಸೂರಜ್ ಶರ್ಮ ನೂತನ ಚಿತ್ರದ ಕುರಿತು ಮಾತನಾಡಿದ್ದಾರೆ. ಚಿತ್ರದ ಕಥೆ ಕೇಳಿ ಶಿವಣ್ಣ ಸಂತಸಗೊಂಡಿದ್ದಾರೆ. ಸದ್ಯದಲ್ಲೇ ಶೀರ್ಷಿಕೆಯನ್ನು ಅದ್ದೂರಿಯಾಗಿ ಅನಾವರಣಗೊಳಿಸುವ ಸಿದ್ದತೆ ನಡೆಸಿರುವ ನಿರ್ಮಾಪಕರು ಆ ಸಮಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಶೀರ್ಷಿಕೆ ಏನೆಂದು ಜನರೆ ಊಹಿಸಲಿ ಎಂದು ಶಿವರಾಜಕುಮಾರ್ ಚಿತ್ರತಂಡಕ್ಕೆ…
ಕೆಲವರಿಗೆ ಕೆಲವು ವಿಷಯಗಳನ್ನು ಮರೆತುಬಿಡುವ ಅಭ್ಯಾಸವಿರುತ್ತದೆ, ಮತ್ತೊಂದೆಡೆ, ಕೆಲವರು ಆತುರದಲ್ಲಿದ್ದು ಮನೆಯಲ್ಲಿನ ಪ್ರಮುಖ ದಾಖಲೆಗಳನ್ನು ಮರೆತುಬಿಡುತ್ತಾರೆ. ಚಾಲನಾ ಪರವಾನಗಿ ಮತ್ತು ಆರ್ಸಿಯಂತಹ ಅಗತ್ಯ ದಾಖಲೆಗಳಿಲ್ಲದೆ ವಾಹನ ಚಲಾಯಿಸುವುದರಿಂದ ನಿಮಗೆ ತೊಂದರೆಯಾಗಬಹುದು ಎಂಬುದು ನಿಮಗೆ ಚೆನ್ನಾಗಿ ತಿಳಿದಿರಬೇಕು. ನೀವು ನಿಮ್ಮ ದಾಖಲೆಗಳನ್ನು ಮನೆಯಲ್ಲಿ ಮರೆತರೆ ಮತ್ತು ಪೊಲೀಸ್ ತಪಾಸಣೆಯ ಸಮಯದಲ್ಲಿ ನಿಲ್ಲಿಸಿದರೆ ನಿಮಗೆ ಸಂಚಾರ ಚಲನ್ ನೀಡಬಹುದು. ಆದರೆ ಚಲನ್ ತಪ್ಪಿಸಲು, ನೀವು ತಡಮಾಡದೆ ನಿಮ್ಮ ಫೋನ್ನಲ್ಲಿ ಎರಡು ಪ್ರಮುಖ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಮೊದಲ ಅಪ್ಲಿಕೇಶನ್ನ ಹೆಸರು ಡಿಜಿಲಾಕರ್. ಎರಡನೇ ಅಪ್ಲಿಕೇಶನ್ ಅನ್ನು mParivahan ಎಂದು ಕರೆಯಲಾಗುತ್ತದೆ. ಈ ಎರಡು ಅಪ್ಲಿಕೇಶನ್ಗಳು ಕಷ್ಟದ ಸಮಯದಲ್ಲಿ ನಿಮಗೆ ಸಹಾಯ ಮಾಡುತ್ತವೆ. ಈ ಅಪ್ಲಿಕೇಶನ್ಗಳು ನಿಮ್ಮನ್ನು ಚಲನ್ ಪಡೆಯುವುದರಿಂದ ಹೇಗೆ ರಕ್ಷಿಸುತ್ತವೆ ಎಂಬುದನ್ನು ಕಂಡುಹಿಡಿಯೋಣ. ಡಿಜಿಲಾಕರ್ ಆಪ್ ಹೇಗೆ ಸಹಾಯ ಮಾಡುತ್ತದೆ? ಈ ಸರ್ಕಾರಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿದ ನಂತರ, ನೀವು ಈ ಅಪ್ಲಿಕೇಶನ್ನಲ್ಲಿ ಚಾಲನಾ ಪರವಾನಗಿ, ವಾಹನ ಆರ್ಸಿ ಮತ್ತು ವಿಮೆಯಂತಹ ನಿಮ್ಮ…
ಉದಯ ವಾಹಿನಿಯಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ’ಹಾಸ್ಯ ಲಾಸ್ಯ’ ಕಾಮಿಡಿ ಧಾರವಾಹಿಗಳನ್ನು ನೀಡಿ ವೀಕ್ಷಕರನ್ನು ರಂಜಿಸಿದ್ದ ಹೆಸರಾಂತ ಜೋಡಿಗಳಾದ ಡಾ.ಮುತ್ತುರಾಜ್.ಎಂ.ಎಸ್ ಮತ್ತು ಶ್ರೀಕಂಠ.ಬಿ.ಎ ಪ್ರೀತಿ ಪ್ರೇಮ ಪಂಗನಾಮ ಚಿತ್ರ ಮಾಡುವುದರೊಂದಿಗೆ ಬಹುಕಾಲದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಸಿನಿಮಾವು ತೆರೆಗೆ ಬರಲು ಸನ್ನಿಹಿತವಾಗಿರುವುದರಿಂದ ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ರಿಯಲ್ದಲ್ಲಿ ಕ್ವೌರಿಕ. ರೀಲ್ದಲ್ಲಿ ಅದೇ ಪಾತ್ರ ನಿರ್ವಹಿಸಿರುವ ಡಾ.ಮುತ್ತುರಾಜ್.ಎಂ.ಎಸ್ ಮಾತನಾಡಿ ಮೂರು ದಶಕದ ಗೆಳೆಯ ಶ್ರೀಕಂಠ ಡೈರಕ್ಷನ್ ಮಾಡಲು ಆಸೆ ಪಟ್ಟದ್ದರು. ಅದರಂತೆ ನಾನು ಬಂಡವಾಳ ಹೂಡಿದ್ದೇನೆ ಎಂದರು. ಕಥೆ,ಚಿತ್ರಕತೆ ಬರೆದು ನಿರ್ದೇಶನ ಮಾಡಿರುವ ಶ್ರೀಕಂಠ.ಬಿ.ಎ ಹೇಳುವಂತೆ ಇಂದು ಆರು,ಮೂರು, ಎರಡು, ಒಂದು ತಿಂಗಳು. ಕೊನೆಗೆ ಮೂರೇ ದಿವಸಕ್ಕೆ ದುಡ್ಡು ಇಲ್ಲವೆ ಕೊಲೆಯಲ್ಲಿ ಅಂತ್ಯ ಕಾಣುತ್ತದೆ. ಬಟ್ಟೆ ಇಸ್ತ್ರೀ ಮಾಡುವ ರೋಲ್ಗೆ ಬಣ್ಣ ಹಚ್ಚಿದ್ದೇನೆ. ನಾವುಗಳು ಬಡತನದಿಂದ ಬಂದಿದ್ದರೂ, ನಮ್ಮ ಮಕ್ಕಳು ಹಾಗಾಗಬಾರದು. ಅವರನ್ನು ಶ್ರೀಮಂತರನ್ನಾಗಿ ಮಾಡಲು ಹೋದಾಗ ಹೇಗೆ…
ನಟ ದರ್ಶನ್ ಗೆ ಪ್ರಾಣಿ ಪಕ್ಷಿಗಳು ಅಂದ್ರೆ ಬಲು ಇಷ್ಟ. ಹೀಗಾಗಿ ಅವರ ಮೈಸೂರಿನ ವಿನೀಶ್ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳು ಹಾಗೂ ಪಕ್ಷಿಗಳನ್ನು ಸಾಕಿದ್ದಾರೆ. ಅವುಗಳ ಲಾಲನೆ ಪಾಲನೆಯನ್ನೂ ಮಾಡುತ್ತಾ ಬಂದಿದ್ದಾರೆ. ಅಲ್ಲದೇ ದಾಸನ ಬಳಿ ಐಶಾರಾಮಿ ಕಾರುಗಳ ಸಂಗ್ರಹವೇ ಇದೆ. ಆದರೆ ಅವರು ಆಗಾಗ್ಗೆ ಟ್ರಾಕ್ಟರ್ , ಎತ್ತಿನ ಬಂಡಿ ಏರುವುದುಂಟು. ಈಗ ತಮ್ಮ ಫಾರ್ಮ್ ಹೌಸ್ ನಲ್ಲಿ ಬಂಡಿ ಏರಿ ಸವಾರಿ ಮಾಡಿದ್ದಾರೆ. ದರ್ಶನ್ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಡಿ ಏರಿರುವ ವಿಡಿಯೋ ವೈರಲ್ ಆಗುತ್ತಿದೆ. ಬಿಸಿಲಿ ತಾಪ ತಪ್ಪಿಸಿಕೊಳ್ಳಲು ಕ್ಯಾಪ್ ತೊಟ್ಟು ಸ್ವತಃ ತಾವೇ ಬಂಡಿ ಓಡಿಸಿ ದಾಸ ಖುಷಿ ಪಟ್ಟಿದ್ದಾರೆ. ಡೆವಿಲ್ ಶೂಟಿಂಗ್ ಬ್ಯುಸಿ ನಡುವೆ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ದರ್ಶನ್ ಸದ್ಯ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕನೇ ಹಂತದ ಶೂಟಿಂಗ್ ನಡೆಯುತ್ತಿದೆ. ಮಿಲನಾ ಪ್ರಕಾಶ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರುತ್ತಿದ್ದು, ಈ ವರ್ಷವೇ ಡೆವಿಲ್…
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಅಟ್ಟಹಾಸ ಅಟ್ಟಹಾಸಕ್ಕೆ ನೂರಾರು ಜೀವಗಳ ಉಸಿರು ಚೆಲ್ಲಿವೆ. ಈವರೆಗೆ 28 ಜನರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ನಾಟಕದ ಬೆಂಗಳೂರು ಮೂಲದ ಭರತ್ ಭೂಷಣ್ ಹಾಗೂ ಶಿವಮೊಗ್ಗದ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಉಗ್ರರು ನಡೆಸಿರುವ ಈ ಕೃತ್ಯವನ್ನು ಎಲ್ಲರೂ ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜಕಾರಣಿಗಳಿಂದ ಹಿಡಿದು ಸಿನಿಮಾತಾರೆಯರು ಆಕ್ರೋಶ ಹೊರಹಾಕುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ಉಗ್ರರ ದಾಳಿಯನ್ನು ಕಠುವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಶಿವಣ್ಣ, “ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ…