Author: Author AIN

ಅಲ್ಲು ಅರ್ಜುನ್, ಸಲ್ಮಾನ್ ಖಾನ್ ಹಾಗೂ´ ಶಾರುಖ್ ಖಾನ್..ಈ ಮೂವರು ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ಸ್. ಈ ಬಿಗೆಸ್ಟ್ ಸ್ಟಾರ್ಸ್ ತಮ್ಮ ಚಿತ್ರಗಳಿಗೆ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ಆದ್ರೆ ಅವರೆಲ್ಲರೂ ಮೀರಿಸಿ ಅಧಿಕ ಮೊತ್ತವನ್ನು ಜೇಬಿಗಿಳಿಸಿಕೊಳ್ಳೋದು ಆ ಸ್ಟಾರ್ ಡೈರೆಕ್ಟರ್.ಭಾರತೀಯ ಚಿತ್ರರಂಗದಲ್ಲಿ ಸೋಲೇ ಕಾಣದ ನಿರ್ದೇಶಕ ಎನಿಸಿಕೊಂಡಿರುವ ರಾಜಮೌಳಿ ಸಂಭಾವನೆ ವಿಷಯವಾಗಿ ಈಗ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ಸ್ ಗಳನ್ನೇ ಸಂಭಾವನೆ ವಿಚಾರದಲ್ಲಿ ಜಕ್ಕಣ್ಣ ಬೀಟ್ ಮಾಡಿದ್ದಾರೆ. ಒಂದು ಸಿನಿಮಾಗೆ ಮೌಳಿ ಬರೋಬ್ಬರಿ 200 ಕೋಟಿ ಹಣವನ್ನು ಜೇಬಿಗಿಳಿಸಿಕೊಳ್ಳುತ್ತಾರಂತೆ. ಸಿನಿಮಾದ ಶೇರ್, ಸಿನಿಮಾದ ರೈಟ್ಸ್ ಹೀಗೆ ಎಲ್ಲದರಲ್ಲಿಯೂ ಹಣ ಪಡೆಯುತ್ತಾರಂತೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಒಂದು ಸಿನಿಮಾಗೆ 150ರಿಂದ 180 ಕೋಟಿ ಹಣ ಪಡೆಯುತ್ತಾರೆ. ಆದರೆ ರಾಜಮೌಳಿ 200 ಕೋಟಿ ಸಂಭಾವನೆ ಪಡೆಯುತ್ತಾರಂತೆ. ರಾಜಮೌಳಿ ಬಳಿಕ ಸಂದೀಪ್ ರೆಡ್ಡಿ ವಂಗಾ, ಪ್ರಶಾಂತ್ ನೀಲ್ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರ ಪಟ್ಟಿಯಲ್ಲಿದ್ದಾರೆ. ಸದ್ಯ‌ ಮಹೇಶ್ ಬಾಬು ಜೊತೆ ರಾಜಮೌಳಿ…

Read More

ಬೆಂಗಳೂರು: ಬಿಡದಿ ಫಾರ್ಮ್‌ ಹೌಸ್‌ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದೀಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಇದರ ನಡುವೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ವಿದೇಶಕ್ಕೆ ತೆರಳಿರುವುದು ಬೆಳಕಿಗೆ ಬಂದಿದೆ. ರಿಕ್ಕಿ ರೈ ಮೇಲಿನ ಶೂಟೌಟ್ ಪ್ರಕರಣ ಸಂಬಂಧ ಅವರ ಕಾರು ಚಾಲಕ ಬಸವರಾಜು ನೀಡಿದ ದೂರಿನ ಮೇರೆಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ಮೇಲೂ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅನುರಾಧಾ ರೈ ಸಿಮ್ ಕಾರ್ಡ್ ವಿಳಾಸ ಆಧರಿಸಿ ನೋಟಿಸ್ ನೀಡಲು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ಅವರ ಮನೆಗೆ ತೆರಳಿದ್ದರು. https://ainkannada.com/do-you-want-to-always-look-young-then-follow-these-tips/ ಆದರೆ, ಅನುರಾಧಾ ರೈ ಆ ಮನೆಯನ್ನು…

Read More

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಇದರ ನಡುವೆ ರಿಕ್ಕಿ ರೈ ಮೇಲೆ ನಡೆದಿದ್ದ ಗುಂಡಿನ ದಾಳಿ ಕೇಸ್‌ ಫೇಕ್‌ ಎನ್ನುವ ಶಂಕೆ ವ್ಯಕ್ತವಾಗಿದೆ. ರಿಕ್ಕಿ ರೈಗೆ ಒಂದು ಕಾಲದಲ್ಲಿ ಗನ್ ಮ್ಯಾನ್ ಆಗಿದ್ದ ವಿಠ್ಠಲ ಎಂಬಾತ ಕಾರಿನ ಮೇಲೆ ಫೈರಿಂಗ್ ಮಾಡಿದ್ದಾನೆ. ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಗನ್ ಮ್ಯಾನ್ ವಿಠ್ಠಲನನ್ನು ಬಿಡದಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. https://ainkannada.com/do-you-want-to-always-look-young-then-follow-these-tips/ ವಿಠ್ಠಲ ಬಹುಕಾಲದವರೆಗೆ ರಿಕ್ಕಿ ರೈನ ಗನ್ ಮ್ಯಾನ್ ಆಗಿದ್ದ. ಅನಾರೋಗ್ಯ ಹಿನ್ನೆಲೆ ರಿಕ್ಕಿ ಫಾರ್ಮ್ ಹೌಸ್ ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದಾನೆ. ಶೂಟೌಟ್ ರಾತ್ರಿ ವಿಠ್ಠಲ, ರಿಕ್ಕಿ ಜೊತೆಗೆ ಪರ್ಸನಲ್ ಆಗಿ ಮಾತನಾಡಿದ್ದಾನೆ ಎನ್ನಲಾಗಿದೆ. ರಿಕ್ಕಿ ಕಾರು ಹೊರಡುವ ಸ್ವಲ್ಪ ಸಮಯದ ಮುನ್ನ ವಿಠ್ಠಲ ಫಾರ್ಮ್‌ ಹೌಸ್‌ನಿಂದ ಹೊರಗೆ ಹೋಗಿದ್ದಾನೆ. ಶೂಟೌಟ್ ನಡೆದು ರಿಕ್ಕಿ ಆಸ್ಪತ್ರೆ ಸೇರಿದ ಬಳಿಕ ವಿಠ್ಠಲ ಫಾರ್ಮ್…

Read More

ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ವಿಂಗ್ ಕಮಾಂಡರ್‌ ಬೋಸ್ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ಭಾರೀ ಸದ್ದು ಮಾಡಿದೆ. ಇದೀಗ ವಿಂಗ್ ಕಮಾಂಡರ್  ಮೇಲೆ ಯುವಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಯುವಕ ವಿಕಾಸ್ ತಾಯಿ ಪ್ರಕರಣದಲ್ಲಿ ಮಗನದ್ದು ಯಾವುದೇ ತಪ್ಪು ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೈಕಿನ ಸೈಲೆನ್ಸರ್‌ಗೆ ಕಾರು ಟಚ್ ಆಗಿದೆ. ಈ ವೇಳೆ ಹಿಂದಿಯಲ್ಲಿ ಬೈದಿದ್ದಾರೆ. ಹಿಂದಿಯಲ್ಲಿ ಹೇಳಿದ್ದು ಅರ್ಥ ಆಗಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಮಹಿಳೆ ಬಳಿ ಕೇಳಬಾರದೆಂದು ಗಂಡನ ಬಳಿ ಕೇಳಿದ್ದಾನೆ. https://ainkannada.com/do-you-want-to-always-look-young-then-follow-these-tips/ ವಿಂಗ್ ಕಮಾಂಡರ್‌ನನ್ನು ಕೇಳಿದ್ದಕ್ಕೆ ಮಗನನ್ನು ತಳ್ಳಿದ್ದಾರೆ. ಕೈ ಕಚ್ಚಿ, ಮೈ ಪರಚಿದ್ದಾರೆ. ಬೈಕ್ ಅನ್ನು ಎತ್ತಿಹಾಕಿ ಕಾಲಿಂದ ಒದ್ದಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ. ಇದು ಎಷ್ಟು ನ್ಯಾಯ ಎಂದು ಯುವಕನ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.‌  ಈ…

Read More

ಪ್ರಪಂಚದಾದ್ಯಂತದ ಗೂಗಲ್ ಕಂಪನಿಗಳಲ್ಲಿ ವಜಾಗೊಳಿಸುವಿಕೆ ಮುಂದುವರೆದಿದೆ. ಭಾರತವು ಪ್ರಸ್ತುತ ಮತ್ತೊಂದು ಸುತ್ತಿನ ವಜಾಗೊಳಿಸುವಿಕೆಗೆ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಉದ್ಯೋಗ ಕಡಿತವು ಭಾರಿ ಪ್ರಮಾಣದಲ್ಲಿರಲಿದೆ ಎಂದು ವರದಿಯಾಗಿದೆ. ಈ ವಜಾಗೊಳಿಸುವಿಕೆಗಳು ಮುಖ್ಯವಾಗಿ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿರುವ ಗೂಗಲ್ ಕಚೇರಿಗಳಲ್ಲಿ ನಡೆಯಲಿವೆ ಎಂದು ತೋರುತ್ತದೆ. ಆದಾಗ್ಯೂ, ಗೂಗಲ್ ಭಾರತದಲ್ಲಿ ತನ್ನ ವಜಾಗೊಳಿಸುವಿಕೆಯನ್ನು ಅಧಿಕೃತವಾಗಿ ದೃಢಪಡಿಸದಿದ್ದರೂ, ಬಿಸಿನೆಸ್ ಸ್ಟ್ಯಾಂಡರ್ಡ್ ವರದಿಯ ಪ್ರಕಾರ ಮುಂದಿನ ವಾರದ ಆರಂಭದಲ್ಲಿ ವಜಾಗೊಳಿಸುವ ಪ್ರಕ್ರಿಯೆಯು ಪ್ರಾರಂಭವಾಗಬಹುದು. ಗೂಗಲ್‌ನ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಧನಗಳ ವಿಭಾಗದ ಇತ್ತೀಚಿನ ಪುನರ್ರಚನೆಯ ನಂತರ ಇತ್ತೀಚಿನ ಸುದ್ದಿ ಬಂದಿದೆ. ಪರಿಣಾಮವಾಗಿ, ಪ್ರಪಂಚದಾದ್ಯಂತದ ಗೂಗಲ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ನೂರಾರು ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು. ಆಂಡ್ರಾಯ್ಡ್, ಪಿಕ್ಸೆಲ್ ಮತ್ತು ಕ್ರೋಮ್ ಬ್ರೌಸರ್ ಅನ್ನು ನಿರ್ವಹಿಸುವ ತನ್ನ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಧನಗಳ ಘಟಕದಿಂದ ನೂರಾರು ಜನರನ್ನು ವಜಾಗೊಳಿಸಲು ಅದು ಸಿದ್ಧತೆ ನಡೆಸುತ್ತಿದೆ. https://ainkannada.com/do-you-want-to-always-look-young-then-follow-these-tips/ ಆದಾಗ್ಯೂ, ಭಾರತದಲ್ಲಿ ಈ ವಿಷಯದ ಬಗ್ಗೆ ಗೂಗಲ್ ಸ್ವಲ್ಪ ಹೆಚ್ಚು ಗಮನಹರಿಸುತ್ತಿದೆ ಎಂದು ವರದಿ ಬಹಿರಂಗಪಡಿಸಿದೆ. ಇದು…

Read More

ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) 2025 ರ ಸಂದರ್ಭದಲ್ಲಿ ಲಾಹೋರ್ ಖಲಂದರ್ಸ್‌ ತಂಡದ ನಾಯಕಿ ಶಾಹೀನ್ ಅಫ್ರಿದಿ ತಮ್ಮ ತಂಡದ ಪರವಾಗಿ ವಿಶೇಷ ಉಡುಗೊರೆಯನ್ನು ಪಡೆದರು. ಲೀಗ್‌ನಲ್ಲಿನ ಪಂದ್ಯಗಳ ನಂತರ ಕರಾಚಿ ಕಿಂಗ್ಸ್ ತಮ್ಮ ಆಟಗಾರರಿಗೆ ವಿಶೇಷ ಉಡುಗೊರೆಗಳೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ ಎಂದು ತಿಳಿದಿದೆ. ಆದಾಗ್ಯೂ, ಲಾಹೋರ್ ಖಲಂದರ್ಸ್ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ನಾಯಕಿ ಶಾಹೀನ್ ಅಫ್ರಿದಿಗೆ ಅದ್ಭುತ ಉಡುಗೊರೆಯನ್ನು ನೀಡಿದರು. ಎಡಗೈ ವೇಗಿಯು ಕಸ್ಟಮೈಸ್ ಮಾಡಿದ 24 ಕ್ಯಾರೆಟ್ ಚಿನ್ನದ ಲೇಪಿತ ಐಫೋನ್ 16 ಪ್ರೊ ಅನ್ನು ಪಡೆದರು. ಆದಾಗ್ಯೂ, ಇದು ಅನೇಕ ಜನರನ್ನು ಆಶ್ಚರ್ಯಗೊಳಿಸಿತು. https://ainkannada.com/do-you-want-to-always-look-young-then-follow-these-tips/ ಈ ವಿಡಿಯೋವನ್ನು ಲಾಹೋರ್ ಖಲಂದರ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಕೊನೆಯಲ್ಲಿ, ಸಹ ಆಟಗಾರನು ಈ ಬಹುಮಾನದೊಂದಿಗೆ ಮೈದಾನದಿಂದ ಹೊರನಡೆಯುವುದನ್ನು ಮತ್ತು “ಯೇ ಹೇ ಹೈ (ಇದು ಭಾರವಾಗಿದೆ)” ಎಂದು ಹೇಳುವುದನ್ನು ಕಾಣಬಹುದು. ಅಲ್ಲೇ ಇದ್ದ ಹ್ಯಾರಿಸ್ ರೌಫ್ ತಮ್ಮ ಅಸೂಯೆ ವ್ಯಕ್ತಪಡಿಸುತ್ತಾ “ಇಲ್ಲ ಸಹೋದರ,…

Read More

ಸೌದಿ ಅರೇಬಿಯಾ ಸಾಮ್ರಾಜ್ಯದ ರಾಜ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾದ ಸ್ನೇಹವನ್ನು ಬಲಪಡಿಸುವ ಮತ್ತು ವ್ಯಾಪಾರ, ರಕ್ಷಣೆ, ಹೂಡಿಕೆ, ಇಂಧನ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 2023ರ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಹಾಗೂ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಲು ಸೌದಿ ಅರೇಬಿಯಾ ಪ್ರಧಾನಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ನವದೆಹಲಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ಪ್ರಧಾನಿ ಮೋದಿ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ. https://ainkannada.com/do-you-want-to-always-look-young-then-follow-these-tips/ ಸದ್ಯ ಈ ಭೇಟಿಯಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಜೊತೆಗೆ ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು…

Read More

ಗಾಯಕಿ ಪೃಥ್ವಿ ಭಟ್ ಮದುವೆ ವಿಷಯವಾಗಿ ದೊಡ್ಡ ಸುದ್ದಿಯಾಗಿದೆ. ಮನೆ ಬಿಟ್ಟು ಹೋಗಿ ಮಗಳು ಮದುವೆಯಾಗಿದ್ದಾಳೆ. ಅವಳನ್ನು ವಶೀಕರಣ ಮಾಡಲಾಗಿದೆ ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದರು. ಇದೀಗ ಪೃಥ್ವಿ ಭಟ್ ಅವರೇ ಮಾನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗುತ್ತಿದೆ. ಪೃಥ್ವಿ ಭಟ್ ಮದುವೆಗೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ತಮ್ಮ‌ ಮದುವೆ ಬಗ್ಗೆ ಮಾತನಾಡಿರುವ ಅವರು, ತಪ್ಪಾಯ್ತು ಅಪ್ಪ. ನೀವು ಕಳೆದ ಎರಡು ದಿನಗಳಿಂದ ಹವ್ಯಕ ಗ್ರೂಪ್‌ ಸೇರಿದಂತೆ ಮತ್ತೆ ಬೇರೆ ಬೇರೆ ಗ್ರೂಪ್‌ಗಳಲ್ಲಿ ನರಹರಿ ದೀಕ್ಷಿತ್ ಸರ್ ಬಗ್ಗೆ ಮತ್ತೆ ನನ್ನ ಬಗ್ಗೆ ಆಡಿಯೋ ಮೆಸೇಜ್ ಕಳುಹಿಸುತ್ತಿದ್ದೀರಿ. ಈ ವಿಷಯದಲ್ಲಿ ನರಹರಿ ದೀಕ್ಷಿತ್ ಸರ್‌ ಅವರ ತಪ್ಪು ಏನಿಲ್ಲ. ಮಾರ್ಚ್ 7ಕ್ಕೆ ದೀಕ್ಷಿತ್ ಸರ್ ಮನೆಗೆ ಬಂದಿದ್ದು, ಈ ವಿಷಯ ಬಗ್ಗೆ ಮಾತನಾಡಿದರು. ಆಗ ನಾನು ಅವರ ಎದುರು ಹಾಗೂ ನಿಮ್ಮ ಎದುರು ಅಭಿ ಇಷ್ಟ ಅಂತನೇ ಹೇಳಿದ್ದು. ಅವತ್ತು ನಿಮ್ಮ ಮೇಲಿನ ಭಯಕ್ಕೆ ನಾನು ಸುಮ್ಮನಾದೆ,…

Read More

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಏಪ್ರಿಲ್ 22 ರಂದು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಹೆಚ್ಚಿನ ದೇಶಗಳಲ್ಲಿ ಪರಿಸರ ಪ್ರೇಮಿಗಳು ಮತ್ತು ಸ್ವಯಂ ಸೇವಕರು ಮರಗಳನ್ನು ನೆಡುತ್ತಾರೆ, ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ. ಮತ್ತು ಹವಾಮಾನದಲ್ಲಿನ ತೀವ್ರವಾದ ಬದಲಾವಣೆಯನ್ನು ತಡೆಗಟ್ಟಲು ಸರ್ಕಾರವು ಸರಿಯಾದ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಾರೆ. ಭೂಮಿಯನ್ನು ವಿನಾಶದಿಂದ ಕಾಪಾಡಲು ಮತ್ತು ಭೂಮಿಯ ಮಹತ್ವವನ್ನು ತಿಳಿಸಲು ಈ ದಿನ ಹಲವಾರು ಕಾರ್ಯಕ್ರಮಗಳು ಪ್ರಪಂಚದಾದ್ಯಂತ ನಡೆಯುತ್ತವೆ. ಮತ್ತು ಭೂ ಗ್ರಹವನ್ನು ಕಲುಷಿತಗೊಳ್ಳದಂತೆ ನೋಡಿಕೊಳ್ಳುವುದು ಪ್ರತಿಯೊಂದು ರಾಷ್ಟ್ರದ ಕರ್ತವ್ಯವಾಗಿದೆ. https://ainkannada.com/do-you-want-to-always-look-young-then-follow-these-tips/ ಭೂಮಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಎಲ್ಲರನ್ನೂ ಜಾಗ್ರತಗೊಳಿಸಲು ಪ್ರತಿವರ್ಷ ಏಪ್ರಿಲ್ 22ರಂದು ಭೂ ದಿನವನ್ನು ಆಚರಿಸಲಾಗುತ್ತದೆ. ಭೂಮಿಯನ್ನು ಸಹಜ ಸ್ಥಿತಿಗೆ ಮರಳಿಸುವುದು ಖಂಡಿತ ಮನುಷ್ಯನಿಂದಾಗ ಕೆಲಸ. ಆದರೆ, ಅದರ ಬಗ್ಗೆ ಪ್ರಯತ್ನವನ್ನಾದರೂ ಮಾಡಬಹುದು. ಇದೇ ವಿಶ್ವ ಭೂಮಿ ದಿನವನ್ನು ಆಚರಿಸುವ ಮುಖ್ಯ ಉದ್ದೇಶ. ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ, ಮಾಲಿನ್ಯ ಮತ್ತು ಜೀವವೈವಿಧ್ಯತೆಯ ನಾಶ…

Read More

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ. https://ainkannada.com/do-you-want-to-always-look-young-then-follow-these-tips/ ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ…

Read More