ದುನಿಯಾ ಸೂರಿ ಗರಡಿಯಲ್ಲಿ ಪಳಗಿರುವ ಅಭಿ ನಿರ್ದೇಶನದ ಚೊಚ್ಚಲ ಸಿನಿಮಾ ಸೋಮು ಸೌಂಡ್ ಇಂಜಿನಿಯರ್ ಸದ್ದಿಲ್ಲದೇ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಕಳೆದ ವರ್ಷ ಮಾರ್ಚ್ 15ಕ್ಕೆ ಬಿಡುಗಡೆ ಕಂಡಿದ್ದ ಚಿತ್ರವೀಗ ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟಿದೆ. ಆದ್ರೆ ಅಲ್ಲೊಂದು ಟ್ವಿಸ್ಟ್ ಇದೆ. ಉತ್ತರ ಕರ್ನಾಟಕ ಮಣ್ಣಿನ ಸೊಗಡಿನ ಕಥಾಹಂದರವನ್ನು ನೀವು ಮನೆ ಮಂದಿ ಕುಳಿತು ನೋಡ್ಬೇಕು ಅಂದರೆ 99 ರೂಪಾಯಿ ಪಾವತಿಸಬೇಕು. ಅಂದರೆ ಅಮೇಜಾನ್ ಪ್ರೈಮ್ ಚಂದಾದಾರರಾದರೆ ಈ ಸಿನಿಮಾವನ್ನು ವೀಕ್ಷಿಸುವುದಕ್ಕೆ ಸಾಧ್ಯವಿಲ್ಲ. ಈ ಸಿನಿಮಾ ನೋಡಬೇಕು ಎಂದರೆ ನೀವು ಹೆಚ್ಚುವರಿಯಾಗಿ 99 ರೂಪಾಯಿ ಹಣ ಪಾವತಿಸಿಯೇ ʼಸೋಮು ಸೌಂಡ್ ಇಂಜಿನಿಯರ್ʼ ನೋಡಬಹುದು. ʼಸೋಮು ಸೌಂಡ್ ಇಂಜಿನಿಯರ್ʼ ಗಟ್ಟಿಕಥೆಯ ಸಿನಿಮಾ. ಅಪ್ಪ ಮಗನ ಬಾಂಧವ್ಯದ ಜೊತೆಗೆ ಈ ಚಿತ್ರ ಬದುಕಿನ ಪಾಠವನ್ನು ಹೇಳುತ್ತದೆ. ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ, ಭಾಷೆ, ಉತ್ತರ ಕರ್ನಾಟಕದ ಜವಾರಿ ಸಂಗೀತ, ಸ್ಥಳೀಯ ಹಾಡುಗಳು ಜತೆಗೆ ಸ್ಥಳೀಯರನ್ನೇ ಬಳಸಿಕೊಂಡು ಸಿನಿಮಾ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಗಂಜಿನಾಳ ಗ್ರಾಮದಲ್ಲಿ ಇಡೀ…
Author: Author AIN
ಬೆಂಗಳೂರು: ನಿವೃತ್ತ ಐಪಿಎಸ್ ಓಂ ಪ್ರಕಾಶ್ ಪ್ರಕರಣದ ತನಿಖೆಯಲ್ಲಿ ಭಾರೀ ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಓಂ ಪ್ರಕಾಶ್ ನಿನ್ನೆ ಹತ್ಯೆಯಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಪುತ್ರ ಕಾರ್ತೀಕೇಶ್ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ (Pallavi), ಸಹೋದರಿ ಕೃತಿ (Kruthi) ವಿರುದ್ಧ ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 103(ಕೊಲೆ) 3(ಒಂದೇ ಉದ್ದೇಶಕ್ಕಾಗಿ ಒಟ್ಟಾಗಿ ಎಸಗಿದ ಅಪರಾಧ) ಅಡಿ ಪ್ರಕರಣ ದಾಖಲಾಗಿದೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಪತ್ನಿ ಪಲ್ಲವಿ ಮತ್ತು ಕೃತಿಯನ್ನು ಪೊಲೀಸರು ಬಂಧಿಸಿದ್ದಾರೆ. ದೂರಿನಲ್ಲಿ ಏನಿದೆ? ಕಳೆದ ಒಂದು ವಾರದಿಂದ ತಾಯಿ ಪಲ್ಲವಿ ಕೊಲೆ ಬೆದರಿಕೆ ಹಾಕುತ್ತಿದ್ದರು. ಕೊಲೆ ಬೆದರಿಕೆ ಹಾಕುತ್ತಿದ್ದರಿಂದ ಅವರ ಸಹೋದರಿ ಸರಿತಾ ಮನೆಗೆ ತಂದೆ ಹೋಗಿದ್ದರು. ಎರಡು ದಿನಗಳ ಹಿಂದೆ ಕೃತಿ ಸರಿತಾ ಅವರ ಮನೆಗ ಹೋಗಿ ಪೀಡಿಸಿ ಕರೆ…
ಬೆಂಗಳೂರು: ಚಿನ್ನ ಮಾಡಿಸಿಕೊಳ್ಳಬೇಕು ಎಂದಾದರೆ ಬೆಲೆ ಇಳಿಕೆಯಾಗುವುದು ಮುಖ್ಯವಾಗಿದೆ. ಆದರೂ ಒಮ್ಮೊಮ್ಮೆ ಪರಿಸ್ಥಿತಿಗೆ ಕಟ್ಟುಬಿದ್ದು ಬೆಲೆ ಏರಿಕೆಯ ಸಮಯದಲ್ಲೇ ಸಾಕಷ್ಟು ಗ್ರಾಹಕರು ಚಿನ್ನ ಖರೀದಿಸುತ್ತಾರೆ. ಬೆಲೆ ತಗ್ಗಿದರೆ ನಮಗೊಂದಿಷ್ಟು ಲಾಭವಿತ್ತೆಂದು ಸಾಕಷ್ಟು ಜನ ಈ ಸಮಯದಲ್ಲಿ ಭಾವಿಸುತ್ತಾರೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಚಿನ್ನದ ಮಾರುಕಟ್ಟೆಯೇ ಹಾಗೆ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಚಿನ್ನ ಖರೀದಿಗೂ ಮುನ್ನ ಇಂದಿನ ರೇಟ್ ಹೇಗಿದೆ ಎಂಬುದನ್ನು ತಿಳ್ಕೊಳ್ಳೋಣ.. ಚಿನ್ನದ ಬೆಲೆ ಮೊದಲ ಬಾರಿಗೆ 9,000 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆಯೂ ಮೊದಲ ಬಾರಿಗೆ 9,800 ರೂ ಗಡಿ ದಾಟಿದೆ. ಇಂದು ಗ್ರಾಮ್ಗೆ 70 ರೂನಷ್ಟು ಹೆಚ್ಚಾಗಿದೆ. ಆಭರಣ ಚಿನ್ನದ ಬೆಲೆ 9,015 ರೂ ಆಗಿದೆ. ಬೇರೆ ಕೆಲ ದೇಶಗಳಲ್ಲೂ ಚಿನ್ನದ ಬೆಲೆ ಇಂದು ಸೋಮವಾರ ಹೆಚ್ಚಿದೆ. ಬೆಳ್ಳಿ ಬೆಲೆ ಬಹಳ ದಿನಗಳ ನಂತರ ಏರಿಕೆ ಕಂಡಿದೆ. ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಬೆಲೆ 101 ರೂ ಆಗಿದೆ. ಭಾರತದಲ್ಲಿ ಸದ್ಯ 10…
ಬೆಂಗಳೂರು: ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ; ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ ? ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ…
ಬೆಂಗಳೂರು: ರಾಷ್ಟ್ರೀಯ ನಾಗರಿಕ ಸೇವೆಗಳ ದಿನಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಭಾರತದಲ್ಲಿ ಆಚರಣೆ ಮಾಡಲಾಗುತ್ತದೆ. ಪೌರಕಾರ್ಮಿಕರು ಮತ್ತು ಆಡಳಿತ ಯಂತ್ರವು ಸುಗಮವಾಗಿ ಕಾರ್ಯನಿರ್ವಹಿಸಲು ಅವಿರತವಾಗಿ ಕೆಲಸ ಮಾಡುವವರನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳನ್ನು ಗುರುತಿಸಿ ಪ್ರಧಾನ ಮಂತ್ರಿಯಿಂದ ಪ್ರಶಸ್ತಿ ನೀಡಲಾಗುತ್ತದೆ. ರಾಷ್ಟ್ರೀಯ ನಾಗರಿಕ ಸೇವೆಗಳ ದಿನ: ಮಹತ್ವ ರಾಷ್ಟ್ರೀಯ ನಾಗರಿಕ ಸೇವಾ ದಿನವು ರಾಷ್ಟ್ರದ ಸೇವೆಗಾಗಿ ನಾಗರಿಕ ಸೇವಾ ವರ್ಗದ ಅಧಿಕಾರಿಗಳ ಸಮರ್ಪಣೆ ಮತ್ತು ಬದ್ಧತೆಯನ್ನು ಗುರುತಿಸುವ ವಿಶೇಷ ದಿನವಾಗಿದೆ. ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಅವರ ದಣಿವರಿಯದ ಪ್ರಯತ್ನಗಳನ್ನು ಸ್ಮರಿಸುವ ದಿನಾವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಸಾಮಾಜಿಕ ನ್ಯಾಯವನ್ನು ಉತ್ತೇಜಿಸುವಲ್ಲಿ ಮತ್ತು ಉತ್ತಮ ಆಡಳಿತವನ್ನು ನೀಡುವಲ್ಲಿ ಅವರ ಅವಿರತ ಪರಿಶ್ರಮವನ್ನು ಪ್ರಶಂಸಿಸಲು ಇದು ಒಂದು ಅವಕಾಶವಾಗಿದೆ.…
ಪ್ರೇಮಲೋಕ ನಮ್ಮ ಮನೆ ಈಗ..ಇಲ್ಲಿ ನಾನು ನನ್ನ ಗಂಡ ಮಗನೇ ಪ್ರಪಂಚ ಅಂತಾ ದರ್ಶನ್ ಹಾಗೂ ವಿಜಯಲಕ್ಷ್ಮಿ ಜೋಡಿ ಖುಷಿ ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ. ಪತಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ನೆರಳಿನಂತೆ ಹಿಂಬಲಿಸುತ್ತಿದ್ದಾರೆ. ಟ್ರಿಪ್-ಟೂರ್ ಹೊರತಾಗಿ ದಚ್ಚು ಶೂಟಿಂಗ್ ಹೋದ್ರೆ ಅಲ್ಲಿಯೂ ವಿಜಯಲಕ್ಷ್ಮಿ ಹಾಜರಾತಿ ಇದ್ದೇ ಇರುತ್ತೇ. ಅಷ್ಟು ಚೆನ್ನಾಗಿ ಈ ಜೋಡಿ ಹೊಂದಿಕೊಂಡು ಹೋಗುತ್ತಿದ್ದಾರೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ದರ್ಶನ್ ಹಾಗೂ ವಿಜಯಲಕ್ಷ್ಮಿ ಒಟ್ಟಿಗೆ ಕಾಣಿಸಿಕೊಡಿದ್ದಾರೆ. ಯಜಮಾನ ಸಿನಿಮಾ ನಿರ್ಮಾಪಕಿ ಶೈಲಜಾ ನಾಗ್ ಬಿ ಸುರೇಶ್ ದಂಪತಿ ಪುತ್ರಿ ಚಂದನಾ ನಾಗ್ ಭರತನಾಟ್ಯ ಕಾರ್ಯ್ರಕಮದಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದೆ. ಅಣ್ಣ ಅತ್ತಿಗೆಯನ್ನು ಒಟ್ಟಿಗೆ ನೋಡಿ ಅಭಿಮಾನಿಗಳು ಖುಷಿಯಾಗಿದ್ದು, ಈ ಜೋಡಿ ಮೇಲೆ ಯಾರ ಕಣ್ಣು ಬೀಳದೆ ಇರಲಿದೆ ಎಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ದರ್ಶನ್ ನ್ನು ಹೊರ ತರಲು ವಿಜಯಲಕ್ಷ್ಮಿ ಶತಗತಾಯ ಪ್ರಯತ್ನ ಮಾಡಿದ್ದರು. ಕೊಲ್ಲೂರಿಂದ ಹಿಡಿದು ಅಸ್ಸಾಂನ ಕಾಮಾಕ್ಯ ದೇವಸ್ಥಾನದವರೆಗೆ ಸುತ್ತಾಡಿ…
ಮದುವೆಯು ಒಂದು ಪವಿತ್ರ ಬಂಧವಾಗಿದೆ ಮತ್ತು ಹಲವಾರು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರೂಪುಗೊಂಡ ಅನೇಕ ಸಂಪ್ರದಾಯಗಳಿವೆ. ಇವುಗಳಂತೆಯೇ. ಮೊದಲ ರಾತ್ರಿ ಆನಂದಮಯ ವೈವಾಹಿಕ ಜೀವನಕ್ಕೆ ಅಡಿಪಾಯ ಎಂದು ನಂಬಲಾಗಿದೆ. ಸಂಪ್ರದಾಯಗಳ ಪ್ರಕಾರ, ಒಂದು ಲೋಟ ಕೇಸರಿ ಹಾಲಿನೊಂದಿಗೆ ವೈವಾಹಿಕ ಜೀವನವನ್ನು ಪ್ರಾರಂಭಿಸುವುದು ಸಂಬಂಧಕ್ಕೆ ಮಾಧುರ್ಯವನ್ನು ನೀಡುತ್ತದೆ ಎಂದು ನಂಬಲಾಗುತ್ತದೆ. https://ainkannada.com/attention-people-are-you-swallowing-dolo-650-pills-for-fever-and-headache-do-you-know-how-dangerous-this-is/ ದರೆ ಈ ಸಂಪ್ರದಾಯವನ್ನು ಏಕೆ ಪಾಲಿಸಲಾಗುತ್ತದೆ ಅದರ ಹಿಂದಿನ ಕಾರಣವೇನು ಎಂಬುದು ಅನೇಕರಿಗೆ ತಿಳಿದಿಲ್ಲ. ಹಾಗಿದ್ದರೆ ಮದುವೆಯ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿ ಒಂದು ಲೋಟ ಹಾಲನ್ನು ಕೊಟ್ಟು ಪ್ರಸ್ಥದ ಕೋಣೆಗೆ ಕಳುಹಿಸುವ ಪದ್ಧತಿಯ ಹಿಂದಿನ ಹಿನ್ನೆಲೆ ಏನೆಂಬುದನ್ನು ನೋಡೋಣ. ಮೊದಲ ರಾತ್ರಿಯಲ್ಲಿ ಒಂದು ಲೋಟ ಹಾಲನ್ನು ಏಕೆ ನೀಡಲಾಗುತ್ತದೆ: ಮದುವೆಯು ಒಂದು ಪವಿತ್ರ ಕಾರ್ಯವಾಗಿದೆ. ಅನೇಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರೂಪುಗೊಂಡ ಅನೇಕ ಸಂಪ್ರದಾಯಗಳಿವೆ. ಅವುಗಳಲ್ಲಿ ಮೊದಲ ರಾತ್ರಿಯೂ ಒಂದು. ಮೊದಲ ರಾತ್ರಿ ಆನಂದಮಯ ವೈವಾಹಿಕ ಜೀವನಕ್ಕೆ ಅಡಿಪಾಯ ಎಂದು ನಂಬಲಾಗಿದೆ. ಸಂಪ್ರದಾಯಗಳ ಪ್ರಕಾರ, ಒಂದು ಲೋಟ ಹಾಲಿನೊಂದಿಗೆ ವೈವಾಹಿಕ ಜೀವನವನ್ನು…
ಪೋಷಕರು ತಮ್ಮ ಮಗಳ ಮದುವೆಯ ಆರ್ಥಿಕ ಅಂಶಗಳ ಮೇಲೆ ಮಾತ್ರ ಗಮನ ಹರಿಸುತ್ತಾರೆ. ಆದಾಗ್ಯೂ, ಪೋಷಕರು ತಮ್ಮ ಹೆಣ್ಣುಮಕ್ಕಳಿಗಾಗಿ ಆರ್ಥಿಕವಾಗಿ ಮುಂಚಿತವಾಗಿ ಯೋಜಿಸುವುದು ಬಹಳ ಮುಖ್ಯ. ಅವರು ತಮ್ಮ ಶಿಕ್ಷಣ ಮತ್ತು ಮದುವೆಯ ವೆಚ್ಚಗಳಿಗಾಗಿ ಮುಂಚಿತವಾಗಿಯೇ ಉಳಿತಾಯ ಮಾಡಿದರೆ, ಅವರ ವಿವಾಹದವರೆಗೂ ಅವರಿಗೆ ಯಾವುದೇ ಖರ್ಚು ಸಮಸ್ಯೆ ಇರುವುದಿಲ್ಲ. ನೀವು ಲಕ್ಷಾಂತರ ರೂಪಾಯಿಗಳನ್ನು ಉಳಿಸಬಹುದು. ಈಗ ಅವರು ಶಿಕ್ಷಣ ಮತ್ತು ವೃತ್ತಿಜೀವನಕ್ಕೆ ಆದ್ಯತೆ ನೀಡುತ್ತಾರೆ. ಆದರೆ ಮದುವೆಯ ವೆಚ್ಚಗಳು ಒಂದು ಪ್ರಮುಖ ಕಾಳಜಿಯಾಗಿ ಉಳಿದಿವೆ. ಇದು ಅವರನ್ನು ವಿಭಿನ್ನ ಹೂಡಿಕೆ ಆಯ್ಕೆಗಳನ್ನು ಅನ್ವೇಷಿಸಲು ಒತ್ತಾಯಿಸುತ್ತದೆ. ಇದಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಯೋಜನೆಯನ್ನು ಜಾರಿಗೆ ತರುತ್ತಿದೆ. ಸುಕನ್ಯಾ ಸಮೃದ್ಧಿ ಯೋಜನೆಯು ಮಗಳ ಭವಿಷ್ಯಕ್ಕಾಗಿ ಸುರಕ್ಷಿತ, ಸರ್ಕಾರಿ ಬೆಂಬಲಿತ ಹೂಡಿಕೆಯಾಗಿದೆ. ಪ್ರಸ್ತುತ 8.2% ಬಡ್ಡಿದರದಲ್ಲಿ, ಮಾಸಿಕ ಪಾವತಿಗಳು ರೂ. 21 ವರ್ಷಗಳಲ್ಲಿ 1000. ರೂ. ಹೂಡಿಕೆಯೊಂದಿಗೆ. 10,000. ೫೫,೪೨,೦೬೨ ಆದಾಯ ಸಿಗಲಿದೆ. ಸುಕನ್ಯಾ ಸಮೃದ್ಧಿ ಯೋಜನೆಯು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಿಗಾಗಿ ವಿನ್ಯಾಸಗೊಳಿಸಲಾದ…
ರಾಕಿಂಗ್ ಸ್ಟಾರ್ ಯಶ್ ಲಂಕಾಧಿಪತಿ ರಾವಣನಾಗುವ ಮೊದಲು ಮಹತ್ತರ ಕಾರ್ಯವೊಂದನ್ನು ಮಾಡಿದ್ದಾರೆ. ನಾಳೆಯಿಂದ ರಾಮಾಯಾಣ 2 ಸಿನಿಮಾದ ಶೂಟಿಂಗ್ ಆರಂಭಗೊಳ್ಳಲಿದೆ. ಹೀಗಾಗಿ ಶೂಟಿಂಗ್ ಆರಂಭಕ್ಕೂ ಮುನ್ನ ಯಶ್ ಉಜ್ಜನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. https://youtu.be/T0D4qB2iMXU ಇದೇ ವೇಳೆ ಯಶ್, ಶಿವನ ಆಶೀರ್ವಾದ ಪಡೆಯಲು ಬಂದೆ. ಬಹಳ ಖುಷಿ ಆಗುತ್ತಿದೆ. ನಾನು ಚಿಕ್ಕಂದಿನಿಂದ ಶಿವನ ದೊಡ್ಡ ಭಕ್ತ. ನಾವು ಮನೆದೇವರು ಎಂದು ಕರೆಯುತ್ತೇನೆ. ಕುಲದೇವರು ಶಿವ. ಇಲ್ಲಿಗೆ ಬಂದಿರುವುದು ಸಂತಸ ತಂದಿದೆ. ದೇವರ ಸನ್ನಿಧಿಯಲ್ಲಿ ಧ್ಯಾನ ಮಾಡುತ್ತಾ ಕುಳಿತಾಗ ಸಮಯ ಕಳೆದಿದ್ದೇ ಗೊತ್ತಾಗಲಿಲ್ಲ. ಅದ್ಭುತ ಅನುಭವ ಸಿಕ್ಕಿದೆ” ಎಂದು ಹೇಳಿದ್ದಾರೆ. ರಾಕಿಭಾಯ್ ತಮ್ಮ ಬ್ಯಾನರ್, ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ಮಲ್ಹೋಟಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಜೊತೆಗೆ ರಾಮಾಯಣ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರ ನಿರ್ಮಾಣದ ಜೊತೆಗೆ ರಾವಣಾಸುರನಾಗಿ ಗಹಗಹಿಸಲಿದ್ದಾರೆ. ಅದಕ್ಕೂ ಮುನ್ನ ಶಿವನಿಗೆ ನಮಿಸಿದ್ದಾರೆ. ಪ್ರತಿ ಸಿನಿಮಾ ಆರಂಭಕ್ಕೂ ಮುನ್ನ ಯಶ್ ಟೆಂಪಲ್ ರನ್ ಮಾಡೋದು…
ಸಿನಿಮಾ ಹಾಗೂ ಕ್ರಿಕೆಟ್ ಗೂ ಅವಿನಾಭಾವ ನಂಟಿದೆ. ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕಿಂಗ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಸಿನಿಮಾ ರಂಗದವರೇ. ಕ್ರಿಕೆಟಿಗರಿಗೆ ನಟಿಯರ ಮೇಲೆ ಲವ್ ಆಗೋದು ಹೊಸತೇನಲ್ಲ. ಈಗ ಕನ್ನಡದ ನಟಿಯೊಬ್ಬರು ಕ್ರಿಕೆಟಿಗನ್ನು ವರಿಸುತ್ತಿದ್ದಾರೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ಡಿಯರ್ ಸತ್ಯ, ಫಾರೆಸ್ಟ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟಿ ಅರ್ಚನಾ ಕೊಟ್ಟಿಗೆ ಹೊಸ ಬಾಳಿಗೆ ಹೆಜ್ಜೆ ಇಡಲು ಹೊರಟ್ಟಿದ್ದಾರೆ. ಕ್ರಿಕೆಟಿಗ ಶರತ್ ಬಿ.ಆರ್ ಜೊತೆ ಅರ್ಚನಾ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕರ್ನಾಟಕ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾಗಿರುವ ಶರತ್ ಬಿ.ಆರ್ ರಂಜಿ ಟ್ರೋಫಿಗಾಗಿ ಆಡಿದ್ದಾರೆ. ಅಲ್ಲದೇ ಕಳೆದ ವರ್ಷ ಗುಜರಾತ್ ಟೈಟಾನ್ ಮೂಲಕ ಐಪಿಎಲ್ ಗೂ ಪಾದಾರ್ಪಣೆ ಕೂಡ ಮಾಡಿದ್ದಾರೆ. ಇದೀಗ ಅವರು ಇದೇ ತಿಂಗಳ ಏಪ್ರಿಲ್ 23ರಂದು ಅರ್ಚನಾ ಜೊತೆ ಏಳು ಹೆಜ್ಜೆ ಇಡಲಿದ್ದಾರೆ. ಶರತ್-ಅರ್ಚನಾ ಪ್ರೀತಿಸಿ ಮದುವೆಯಾಗುತ್ತಿದ್ದಾರೆ. ಇಬ್ಬರು ಒಂದೇ ಕಾಲೇಜಿನಲ್ಲಿ ಓದುತ್ತಿರುವಾಗ ಸ್ನೇಹಿತರಾಗಿದ್ದರು . ಆ ಸ್ನೇಹ ಪ್ರೀತಿಗೆ ತಿರುಗಿ…