ಐಪಿಎಲ್ 2025 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬೃಹತ್ ದಾಖಲೆ ನಿರ್ಮಿಸಿದರು. ರೋಹಿತ್ ಶರ್ಮಾ ಇಲ್ಲಿಯವರೆಗೆ ನಿರಂತರವಾಗಿ ವಿಫಲರಾಗುತ್ತಿದ್ದಾರೆ. ರೋಹಿತ್ ಮೊದಲು ಬಿರುಗಾಳಿಯ ಇನ್ನಿಂಗ್ಸ್ ಆಡಿದರು ಮತ್ತು ನಂತರ ಪೆವಿಲಿಯನ್ ಸೇರಿದರು. ಆದಾಗ್ಯೂ, ಈ ಪಂದ್ಯದಲ್ಲಿ ಅವರು ಕೆಲವು ಅದ್ಭುತ ಹೊಡೆತಗಳನ್ನು ಆಡಿದರು ಮತ್ತು ಬೃಹತ್ ದಾಖಲೆಯನ್ನು ಸ್ಥಾಪಿಸಿದರು. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ಹಳೆಯ ಶೈಲಿಯನ್ನು ಮೆರೆದರು. ಅವರು ಪುಲ್ ಶಾಟ್ ಮೂಲಕ ಎರಡು ಬೃಹತ್ ಸಿಕ್ಸರ್ಗಳನ್ನು ಬಾರಿಸಿದರು. ಮೊಹಮ್ಮದ್ ಶಮಿ ಮತ್ತು ಪ್ಯಾಟ್ ಕಮ್ಮಿನ್ಸ್ ತಮ್ಮ ಓವರ್ಗಳಲ್ಲಿ ಸಿಕ್ಸರ್ಗಳನ್ನು ಬಾರಿಸಿದರು. ರೋಹಿತ್ ಅದ್ಭುತ ಇನ್ನಿಂಗ್ಸ್ ಆಡಿದರು, ಕೇವಲ 16 ಎಸೆತಗಳಲ್ಲಿ 3 ಸಿಕ್ಸರ್ಗಳೊಂದಿಗೆ 26 ರನ್ ಗಳಿಸಿದರು. ಈ ಮೂರು ಸಿಕ್ಸರ್ಗಳೊಂದಿಗೆ ರೋಹಿತ್ ಶರ್ಮಾ ಐಪಿಎಲ್ನಲ್ಲಿ ದೊಡ್ಡ ದಾಖಲೆಯನ್ನು ಸೃಷ್ಟಿಸಿದರು. https://ainkannada.com/do-you-have-the-habit-of-keeping-hot-rice-in-a-plastic-box-you-will-definitely-get-cancer-soon/…
Author: Author AIN
ಕನ್ನಡ ಚಿತ್ರರಂಗದಲ್ಲಿ ಸಕ್ಸಸ್ ಫುಲ್ ಜೋಡಿಗಳಲ್ಲೊಂದು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ನಟರಾಕ್ಷಸ ಡಾಲಿ ಧನಂಜಯ್. ಟಗರು ಸಿನಿಮಾದಲ್ಲಿ ಶಿವಣ್ಣ-ಡಾಲಿ ಜುಗಲ್ಬಂಧಿ ಸಖತ್ ಕ್ಲಿಕ್ ಆಗಿತ್ತು. ಆ ಬಳಿಕ ಇಬರಿಬ್ಬರ ಕಾಂಬೋದಲ್ಲಿ ಉತ್ತರಕಾಂಡ ಚಿತ್ರ ಅನೌನ್ಸ್ ಆಗಿದೆ. ಧನಂಜಯ್ ಹೀರೋ ಆಗಿ ನಟಿಸುತ್ತಿರುವ ಉತ್ತರಕಾಂಡದಲ್ಲಿ ಶಿವಣ್ಣ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಟಗರು ಜೋಡಿ ಮತ್ತೊಮ್ಮೆ ಕೈ ಜೋಡಿಸಿದೆ. ಕವಲುದಾರಿ, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಸಪ್ತ ಸಾಗರದಾಚೆ ಎಲ್ಲೋ ಚಿತ್ರಗಳ ಸಾರಥಿ ಹೇಮಂತ್ ರಾವ್ ಶಿವಣ್ಣನಿಗೆ ಹೊಸ ಚಿತ್ರ ಅನೌನ್ಸ್ ಮಾಡಿದ್ದರು. ಭೈರವನ ಕೊನೆಯ ಪಾಠ ಎಂಬ ಕ್ಯಾಚಿ ಟೈಟಲ್ ನಲ್ಲಿ ಚಿತ್ರ ಘೋಷಣೆಯಾಗಿತ್ತು. ಈ ಚಿತ್ರೀಕರಣ ಮುಂದೂಡಲಾಗಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್ಗಳು ಮತ್ತು ಭಾರದ ಕಾಸ್ಟ್ಯೂಮ್ಗಳು ಇರುವುದರಿಂದ ಅದಕ್ಕೆ ಶಿವಣ್ಣ ಸಿದ್ಧರಾಗಲು ಸ್ವಲ್ಪ ಸಮಯ ಬೇಕಾಗಿರುವುದರಿಂದ ಈ ಸಿನಿಮಾ ಚಿತ್ರೀಕರಣ ಮುಂದಕ್ಕೆ ಹೋಗಿದೆ ಎನ್ನಲಾಗಿದೆ. ಭೈರವನ ಕೊನೆಯ ಪಾಠ…
ಐಪಿಎಲ್ 2025 ರಲ್ಲಿ ಇಂದು ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವೆ ಪ್ರಮುಖ ಪಂದ್ಯ ನಡೆಯಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ತಮ್ಮ ಬಲ ಪ್ರದರ್ಶಿಸುವ ಉದ್ದೇಶದಿಂದ ಎರಡೂ ತಂಡಗಳು ಕಣಕ್ಕೆ ಇಳಿಯಲಿವೆ. ಆದ್ದರಿಂದ ಈ ಪಂದ್ಯ ಎರಡೂ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಈ ಋತುವಿನಲ್ಲಿ ಆರ್ಸಿಬಿ ನಿರಂತರವಾಗಿ ವಿದೇಶ ಪಂದ್ಯಗಳನ್ನು ಗೆದ್ದಿದೆ. https://ainkannada.com/do-you-have-the-habit-of-keeping-hot-rice-in-a-plastic-box-you-will-definitely-get-cancer-soon/ ಆದಾಗ್ಯೂ, ಅವರು ತವರಿನಲ್ಲಿ ಆಡಿದ ಎರಡೂ ಪಂದ್ಯಗಳನ್ನು ಸೋತರು. ಪಂಜಾಬ್ನೊಂದಿಗೆ, ಅದು ತನ್ನ ತವರು ನೆಲದಲ್ಲಿ ಹ್ಯಾಟ್ರಿಕ್ ಸೋಲುಗಳನ್ನು ತಪ್ಪಿಸಲು ನೋಡುತ್ತಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ತಂಡವು ಅತಿ ಕಡಿಮೆ ಸ್ಕೋರ್ ಅನ್ನು ರಕ್ಷಿಸಿದ ದಾಖಲೆಯನ್ನು ನಿರ್ಮಿಸಿತು ಎಂದು ತಿಳಿದಿದೆ. ಈಗ ಎರಡೂ ತಂಡಗಳ ಸಂಭಾವ್ಯ ಆಡುವ 11 ರಲ್ಲಿ ಯಾರು ಇರಬಹುದೆಂದು ಕಂಡುಹಿಡಿಯೋಣ. RCB vs PBKS ಸಂಭಾವ್ಯ ಪ್ಲೇಯಿಂಗ್ 11.. ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರಂಭಿಕ ಜೋಡಿ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ನಿರಂತರವಾಗಿ ಉತ್ತಮ…
ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಈ ವಿಚಾರವಾಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ. https://ainkannada.com/do-you-have-the-habit-of-keeping-hot-rice-in-a-plastic-box-you-will-definitely-get-cancer-soon/ ಈ ಬಗ್ಗೆ ನಿರ್ದೇಶನ ಕೊಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸುವೆ. ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚನೆ ನೀಡುತ್ತೇವೆ. ವಿದ್ಯಾರ್ಥಿಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಗುಂಡ ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆ ಇಟ್ಟುಕೊಂಡು ನಿರ್ಮಿಸಿದ್ದ ‘ನಾನು ಮತ್ತು ಗುಂಡ’ ಚಿತ್ರ ಎರಡೂವರೆ ವರ್ಷಗಳ ಹಿಂದೆ ತೆರೆಕಂಡು ಜನಮನ ಸೂರೆಗೊಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾದ “ನಾನು ಮತ್ತು ಗುಂಡ -2” ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ಕೆಜಿಎಫ್ ಖ್ಯಾತಿಯ ನಿರ್ಮಸಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ನಾನು ಮತ್ತು ಗುಂಡ ಭಾವನಾತ್ಮಕವಾಗಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದರ ಮುಂದುವರಿದ ಭಾಗವನ್ನು ರಘು ಹಾಸನ್ ಮಾಡಿದ್ದಾರೆ. ಈ ಸಿನಿಮಾ ಅದಕ್ಕಿಂತ ಹೆಚ್ಚು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಮೊದಲಭಾಗದಲ್ಲಿ ನಟಿಸಿದ್ದ ಶಿವರಾಜ್ ಕೆ.ಆರ್.ಪೇಟೆ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಈ ಚಿತ್ರದಲ್ಲಿ ರಾಕೇಶ್ ಆಡಿಗ ನಾಯಕನಾಗಿದ್ದು, ರಚನಾ ಇಂದರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ, ನಿರ್ದೇಶಕ ರಘು ಹಾಸನ್…
ನವದೆಹಲಿ: 2029ರ ವೇಳೆಗೆ 3 ಲಕ್ಷ ಕೋಟಿ ರೂ.ಗಳ ರಕ್ಷಣಾ ಉಪಕರಣಗಳನ್ನು ಉತ್ಪಾದಿಸುವುದು ನಮ್ಮ ಗುರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ನಮ್ಮ ಮಿಲಿಟರಿ ಶಕ್ತಿಯು ವಿಶ್ವದಲ್ಲಿಯೇ ನಂಬರ್ ಒನ್ ಆಗಿ ಹೊರಹೊಮ್ಮುವ ದಿನ ದೂರವಿಲ್ಲ” ಎಂದು ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಈ ವರ್ಷ, ರಕ್ಷಣಾ ಉತ್ಪಾದನೆಯು 1.60 ಲಕ್ಷ ಕೋಟಿ ರೂ.ಗಳನ್ನು ದಾಟಬೇಕು. 2029ರ ವೇಳೆಗೆ 3 ಲಕ್ಷ ಕೋಟಿ ರೂ.ಗಳ ರಕ್ಷಣಾ ಉಪಕರಣಗಳನ್ನು ಉತ್ಪಾದಿಸುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದ್ದಾರೆ. https://ainkannada.com/do-you-have-the-habit-of-keeping-hot-rice-in-a-plastic-box-you-will-definitely-get-cancer-soon/ ಭಾರತದ ಬೆಳೆಯುತ್ತಿರುವ ರಕ್ಷಣಾ ಸಾಮರ್ಥ್ಯವು ಸಂಘರ್ಷವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿಲ್ಲ. ಭಾರತವು ತನ್ನ ರಕ್ಷಣಾ ಅಗತ್ಯಗಳನ್ನು ಪೂರೈಸಲು ಸರಳವಾಗಿ ಆಮದು ಮಾಡಿಕೊಳ್ಳುವ ಮನಸ್ಥಿತಿಯನ್ನು ಬದಲಾಯಿಸುವುದು ಸರ್ಕಾರದ ಮೊದಲ ಮತ್ತು ಪ್ರಮುಖ ಸವಾಲಾಗಿತ್ತು ಎಂದು ಅವರು ನೆನಪಿಸಿಕೊಂಡರು. “ಇಂದು, ಭಾರತದ ರಕ್ಷಣಾ ವಲಯವು ಸ್ವಾವಲಂಬನೆಯ ಹಾದಿಯಲ್ಲಿ ಮುಂದುವರಿಯುತ್ತಿರುವಾಗ ಜಾಗತಿಕ ಪೂರೈಕೆ ಸರಪಳಿಗಳನ್ನು ಸ್ಥಿತಿಸ್ಥಾಪಕವಾಗಿಸುವಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಲು ಸಿದ್ಧವಾಗಿದೆ” ಎಂದು…
ಇಂಟರ್ನೆಟ್ ಮತ್ತು ಸ್ಮಾರ್ಟ್ಫೋನ್ಗಳ ಬಳಕೆಯ ಹೆಚ್ಚಳವು ಇಂದು ಹಣದ ವಹಿವಾಟಿನಲ್ಲಿ ಭಾರಿ ಬದಲಾವಣೆಯನ್ನು ತಂದಿದೆ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಡಿಜಿಟಲ್ ಪಾವತಿಗಳು ವೇಗವಾಗಿ ಬೆಳೆಯುತ್ತಿವೆ. ಸಣ್ಣ ಪಾವತಿಗಳಿಂದ ಹಿಡಿದು ಶುಲ್ಕ ಪಾವತಿಗಳವರೆಗೆ ಎಲ್ಲವೂ ಆನ್ಲೈನ್ನಲ್ಲಿ ಮಾಡಲಾಗುತ್ತದೆ. ಡಿಜಿಟಲ್ ಪಾವತಿ ಸೌಲಭ್ಯಗಳನ್ನು ನೀಡುವ ವೇದಿಕೆಗಳು ಹಣಕಾಸಿನ ವಹಿವಾಟುಗಳನ್ನು ಸುಗಮಗೊಳಿಸಲು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿವೆ. ಲಕ್ಷಾಂತರ ಬಳಕೆದಾರರಿಗೆ ಅನುಕೂಲವಾಗುವಂತಹ ವೈಶಿಷ್ಟ್ಯವನ್ನು ಫೋನ್ಪೇ ಪರಿಚಯಿಸಿದೆ. https://ainkannada.com/do-you-have-the-habit-of-keeping-hot-rice-in-a-plastic-box-you-will-definitely-get-cancer-soon/ ಅಗತ್ಯವಿರುವ ಸಮಯದಲ್ಲಿ ತನ್ನ ಬಳಕೆದಾರರಿಗೆ ಸಹಾಯ ಮಾಡಲು ಫೋನ್ಪೇ ಯುಪಿಐ ಸರ್ಕಲ್ ವೈಶಿಷ್ಟ್ಯವನ್ನು ಪರಿಚಯಿಸಿದೆ. ಈ ವೈಶಿಷ್ಟ್ಯದ ಸಹಾಯದಿಂದ, ಬಳಕೆದಾರರು ತಮ್ಮ ಕುಟುಂಬ ಸದಸ್ಯರು ಅಥವಾ ಸ್ನೇಹಿತರಿಗೆ UPI ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ. ಬ್ಯಾಂಕ್ ಖಾತೆ ಇಲ್ಲದವರಿಗೆ ಅಥವಾ ಆನ್ಲೈನ್ ಬ್ಯಾಂಕಿಂಗ್ ಬಳಸದವರಿಗೆ ಈ ವೈಶಿಷ್ಟ್ಯವು ವಿಶೇಷವಾಗಿ ಉಪಯುಕ್ತವಾಗಿದೆ. ಅಂತಹ ಬಳಕೆದಾರರು UPI ಬಳಸುವ ತಮ್ಮ ಸ್ನೇಹಿತರಿಗೆ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ. NPCI ಒಂದು ದೊಡ್ಡ ಸಮಸ್ಯೆಯನ್ನು ಪರಿಹರಿಸಿದೆ: ಈ ವೈಶಿಷ್ಟ್ಯವನ್ನು NPCI ಪ್ರಾರಂಭಿಸಿದೆ. NPCI ಈ…
ಮಾಲಿವುಡ್ ಚಿತ್ರರಂಗದ ಈ ವರ್ಷದ ಸೂಪರ್ ಹಿಟ್ ಜೊತೆಗೆ ವಿವಾದಗಳಿಂದ ಸುದ್ದಿಯಾದ ಸಿನಿಮಾ ಎಂಪುರಾನ್. ಲೂಸಿಫರ್ ಚಿತ್ರದ ಮುಂದುವರೆದ ಭಾಗವಾಗಿರುವ ಎಂಪುರಾನ್ ನಲ್ಲಿ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಪೃಥ್ವಿರಾಜ್ ಸುಕುಮಾರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಮಾರ್ಚ್ 27ರಂದು ತೆರೆಕಂಡ ಚಿತ್ರ 300ಕ್ಕೂ ಅಧಿಕ ಕೋಟಿ ಕಲೆಕ್ಷನ್ ಮಾಡಿತ್ತು ಎನ್ನಲಾಗಿತ್ತು. ಆದರೆ ಈ ಚಿತ್ರ ಸಾಕಷ್ಟು ವಿವಾದಗಳಿಂದ ಸುದ್ದಿಯಾಗಿತ್ತು.ಬಿಡುಗಡೆ ನಂತರ ಎಂಪುರಾನ್ ಸಿನಿಮಾ ಸಾಕಷ್ಟು ವಿವಾದ ಎದುರಿಸಿದೆ. ಚಿತ್ರದ ಕೆಲ ದೃಶ್ಯಗಳಿಗೆ ಕತ್ತರಿ ಹಾಕಲಾಗಿತ್ತು. ಬಿಜೆಪಿ ಹಾಗೂ ಸಂಘ ಪರಿವಾರದವರು ಈ ಚಿತ್ರವನ್ನು ತೀವ್ರವಾಗಿ ವಿರೋಧಿಸಿದ್ದರು. ಹಿಂದೂ ವಿರೋಧಿ ಮತ್ತು ಅಪಪ್ರಚಾರ ಹರಡಿದ ಆರೋಪದಡಿ ಕೆಲ ದೃಶ್ಯಗಳಿಗೆ ಬಳಿಕ ಕತ್ತರಿ ಹಾಕಲಾಗಿತ್ತು. ಆಶೀರ್ವಾದ್ ಸಿನಿಮಾಸ್, ಲೈಕಾ ಪ್ರೊಡಕ್ಷನ್ಸ್ ಹಾಗೂ ಶ್ರೀ ಗೋಕುಲಂ ಮೂವೀಸ್ ಸಂಸ್ಥೆಗಳು ಒಟ್ಟಿಗೆ ಸೇರಿದ್ದ ‘ಎಂಪುರಾನ್’ ಸಿನಿಮಾವೀಗ ಒಟಿಟಿಗೆ ಸಜ್ಜಾಗಿದೆ. ಜೀಯೋ ಹಾಟ್ ಸ್ಟಾರ್ ನಲ್ಲಿ ಏಪ್ರಿಲ್ 24ಕ್ಕೆ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. ಹೀಗಾಗಿ…
ಬೆಂಗಳೂರು: ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದೆ. ಕೊನೆಯ ದಿನವಾದ ನಿನ್ನೆ, ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಸೂಚಿಸಿರೋದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇನ್ನೂ ಈ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, https://ainkannada.com/do-you-have-the-habit-of-keeping-hot-rice-in-a-plastic-box-you-will-definitely-get-cancer-soon/ ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ…
ಬೆಂಗಳೂರು, ವೈಟ್ಫೀಲ್ಡ್: ಮೆಡಿಕವರ್ ಆಸ್ಪತ್ರೆ ತನ್ನ ಆರ್ಥೋಪೆಡಿಕ್ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ, ಅತ್ಯಾಧುನಿಕ ಆರ್ಥೊ ರೊಬೋಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಯಶಸ್ವಿಯಾಗಿ ಆರಂಭಿಸಿದೆ. ಈ ತಂತ್ರಜ್ಞಾನದ ಮೂಲಕ ರೋಗಿಗಳಿಗೆ ಹೆಚ್ಚು ನಿಖರ ಹಾಗೂ ಅನುಕೂಲಕರ ಶಸ್ತ್ರಚಿಕಿತ್ಸೆಯನ್ನು ನೀಡುವುದು ಸಾಧ್ಯವಾಗಲಿದೆ. https://ainkannada.com/do-you-have-the-habit-of-keeping-hot-rice-in-a-plastic-box-you-will-definitely-get-cancer-soon/ ಈ ಹೊಸ ಉಪಕ್ರಮದಿಂದ ಮೂಳೆ ಮತ್ತು ಜೋಡಣೆ ಸಂಬಂಧಿತ ಜಟಿಲ ಸಮಸ್ಯೆಗಳಿಗೆ ಹೆಚ್ಚು ನಿಖರವಾದ ಮತ್ತು ಪರಿಣಾಮಕಾರಿ ಚಿಕಿತ್ಸೆ ದೊರೆಯಲಿದ್ದು, ವಿಶೇಷವಾಗಿ ಮಂಡಿ ಮತ್ತು ಹಿಪ್ ಜೋಡಣೆಯ ಬದಲಾವಣಾ ಶಸ್ತ್ರಚಿಕಿತ್ಸೆಗಳಲ್ಲಿ ರೊಬೋಟಿಕ್ ತಂತ್ರಜ್ಞಾನವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಈ ತಂತ್ರಜ್ಞಾನದ ಅನುಷ್ಠಾನದಲ್ಲಿ ಮೆಡಿಕವರ್ ಆಸ್ಪತ್ರೆಯ ಹಿರಿಯ ಮೂಳೆ ತಜ್ಞರು –ಡಾ. ಆರ್. ಡಿ. ಚಕ್ರವರ್ತಿ, ಡಾ. ರವೀಂದ್ರ ಪುಟ್ಟಸ್ವಾಮಯ್ಯ, ಡಾ. ಸಂಜಯ್ ಹೆಗಡೆ, ಡಾ. ಕೃಷ್ಣಕುಮಾರ್ ಮತ್ತು ಡಾ. ರಾಘವೇಂದ್ರ ರವರು ಪ್ರಮುಖ ಪಾತ್ರವಹಿಸಿದ್ದಾರೆ. ಈ ತಜ್ಞರು ರೊಬೋಟಿಕ್ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ವಿಶ್ವಮಟ್ಟದ ಚಿಕಿತ್ಸೆ ನೀಡಲು ಸದಾ ಸಿದ್ಧರಾಗಿದ್ದಾರೆ. ಈ ಶಸ್ತ್ರಚಿಕಿತ್ಸಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ…