ಲಕ್ನೋ: ಎಲ್ಲಿ ಮಹಿಳೆಯನ್ನು ಪೂಜಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸುತ್ತಾರೆ ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ವಾಸ್ತವದಲ್ಲಿ ಭಾರತದ ಮಹಿಳೆಯರು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದಾರೆ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು. ಹೌದು ಇದೀಗ ಉತ್ತರ ಪ್ರದೇಶದ ರಾಂಪುರ್ನಲ್ಲಿ ಕಿವಿ ಕೇಳಿಸದ, ಮಾತು ಸಹ ಬಾರದ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಗಳಿಗೆ ಸಿಗರೇಟ್ನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ನಡೆದಿದೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿದ ಹಾಗೂ ಖಾಸಗಿ ಭಾಗಗಳಿಗೆ ಸಿಗರೇಟ್ನಿಂದ ಸುಟ್ಟ ಗುರತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವ ಶಂಕಿತನನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. https://ainkannada.com/you-should-never-keep-a-broom-in-this-direction-at-home-for-any-reason/ ವೈದ್ಯಕೀಯ ಪರೀಕ್ಷೆ ನಡೆಸಿದ ಡಾ. ಅಂಜು ಸಿಂಗ್ ಅವರು, ಇದು ಒಂದಕ್ಕಿಂತ ಹೆಚ್ಚಿನ ವ್ಯಕ್ತಿಗಳು ನಡೆಸಿದ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಖಾಸಗಿ ಭಾಗಗಳಲ್ಲಿ ಗಾಯದ…
Author: Author AIN
ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಟಿ ನಜ್ರಿಯಾ ನಜಿಮ್. ಇವರ ಪತಿ ಕೂಡ ಖ್ಯಾತ ನಟ. ಇತ್ತೀಚೆಗೆ ಸೂಪರ್ ಹಿಟ್ ಕಂಡ ಸಿನಿಮಾ ಆವೇಶಂ ನಟ, ಪುಷ್ಪದ ವಿಲನ್ ಫಹಾದ್ ಫಾಸಿಲ್ ನಜ್ರಿಯಾ ಗಂಡ. ಒಂದಷ್ಟು ದಿನಗಳಿಂದ ನಜ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿಲ್ಲ. ತಮ್ಮ ಚಿತ್ರ ಸೂಪರ್ ಹಿಟ್ ಆದರೂ ನಟಿ ಯಾವುದೇ ಪೋಸ್ಟ್ ಮಾಡಿರಲಿಲ್ಲ. ಹೀಗಾಗಿ ನಜ್ರಿಯಾ ಫಹಾದ್ ನಡುವೆ ಸರಿ ಇಲ್ಲ ಅನ್ನೋ ಸುದ್ದಿ ಓಡಾಡಿತ್ತು. ಇದೀಗ ತಮ್ಮ ಅನುಪಸ್ಥಿಗೆ ನಜ್ರಿಯಾ ಕಾರಣ ಬಿಚ್ಚಿಟ್ಟಿದ್ದಾರೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುತ್ತಿದ್ದ ನಜ್ರಿಯಾ ಏಕಾಏಕಿ ಸೈಲೆಂಟ್ ಆಗಿದ್ದೇಕೆ ಅನ್ನೋದಕ್ಕೆ ಪತ್ರದ ಮೂಲಕ ಉತ್ತರ ಕೊಟ್ಟಿದ್ದಾರೆ. ‘ಎಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ನಾನು ಸ್ವಲ್ಪ ಸಮಯದಿಂದ ಎಲ್ಲರಿಂದ ದೂರ ಇದ್ದೆ. ನನಗೆ ಸ್ವಲ್ಪ ಸಮಯ ಬೇಕಿತ್ತು. ನಿಮ್ಮಲ್ಲಿ ಹಲವರಿಗೆ ತಿಳಿದಿರುವಂತೆ, ನಾನು ಯಾವಾಗಲೂ ತುಂಬಾ ಆಕ್ಟೀವ್. ಕಳೆದ ಕೆಲವು ತಿಂಗಳುಗಳಿಂದ ನಾನು ನನ್ನ ವೈಯಕ್ತಿಕ ಸವಾಲುಗಳೊಂದಿಗೆ ಹೋರಾಡುತ್ತಿದ್ದೇನೆ ಎಂದಿದ್ದಾರೆ…
ಬೆಂಗಳೂರು: ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಹಾಗೂ ಎಲ್ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಾಸಕರು, ಸಚಿವರು, ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಭಾಗದಿಂದಲೂ ಕಾರ್ಯಕರ್ತರು ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು. https://ainkannada.com/you-should-never-keep-a-broom-in-this-direction-at-home-for-any-reason/ ಸಿಲಿಂಡರ್ ದರ ಏರಿಕೆ ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿ ಕಾಂಗ್ರೆಸ್ನ ಘಟಾನುಘಟಿಗಳು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಐಪಿಎಲ್ 2025 ಸೀಸನ್ ದಿನದಿಂದ ದಿನಕ್ಕೆ ಹೆಚ್ಚು ರೋಮಾಂಚನಕಾರಿಯಾಗುತ್ತಿದ್ದಂತೆ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ 32 ನೇ ಪಂದ್ಯದಲ್ಲಿ ಒಂದು ಕುತೂಹಲಕಾರಿ ಘಟನೆ ನಡೆಯಿತು. ದೆಹಲಿಯಲ್ಲಿ ನಡೆದ ಈ ಕುತೂಹಲದಿಂದ ಕಾಯುತ್ತಿದ್ದ ಪಂದ್ಯದಲ್ಲಿ, ಬ್ಯಾಟಿಂಗ್, ಬೌಲಿಂಗ್ ಮತ್ತು ಕ್ಷೇತ್ರರಕ್ಷಣೆಯ ವಿಷಯದಲ್ಲಿ ಹಲವು ರೋಮಾಂಚಕಾರಿ ಘಟನೆಗಳು ನಡೆದವು. ಆದರೆ, ಈ ಪಂದ್ಯದಲ್ಲಿ ಹೆಚ್ಚು ಗಮನ ಸೆಳೆದದ್ದು ರಾಜಸ್ಥಾನ ರಾಯಲ್ಸ್ ಬೌಲರ್ ಸಂದೀಪ್ ಶರ್ಮಾ ಎಸೆದ ವಿಚಿತ್ರ ಓವರ್. ಕೊನೆಯ ಓವರ್ ನಲ್ಲಿ ಒಟ್ಟು 11 ಎಸೆತಗಳನ್ನು ಎಸೆದ ಸಂದೀಪ್, ಐಪಿಎಲ್ ಇತಿಹಾಸದಲ್ಲಿ ಒಂದೇ ಓವರ್ ನಲ್ಲಿ ಅತಿ ಹೆಚ್ಚು ಎಸೆತಗಳನ್ನು ಎಸೆದ ಭಾರತೀಯ ಬೌಲರ್ ಗಳ ಅಪರೂಪದ ಪಟ್ಟಿಗೆ ಸೇರಿದರು. ಈ ಪಟ್ಟಿಯಲ್ಲಿ ಈಗಾಗಲೇ ಮೊಹಮ್ಮದ್ ಸಿರಾಜ್, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಸೇರಿದ್ದಾರೆ. https://ainkannada.com/you-should-never-keep-a-broom-in-this-direction-at-home-for-any-reason/ ಪಂದ್ಯದ ಆರಂಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಡಿಮೆ ಸ್ಕೋರ್ಗೆ ಸೀಮಿತವಾಗಲಿದೆ ಎಂಬಂತೆ ಕಾಣುತ್ತಿತ್ತು. ಮೆಕ್ಗರ್ಕ್ 9 ರನ್ಗಳಿಗೆ ಔಟಾದರೆ, ಕರುಣ್ ನಾಯರ್…
ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದ ನಂತರ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮೊದಲ ಬಾರಿಗೆ ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು. ಅವರು ಕೆಕೆಆರ್ ವಿರುದ್ಧ 4 ವಿಕೆಟ್ಗಳೊಂದಿಗೆ ಅದ್ಭುತ ಪ್ರದರ್ಶನ ನೀಡಿದರು. ಆದಾಗ್ಯೂ, ಈ ಪುನರಾಗಮನಕ್ಕೆ ಆರ್ಜೆ ಮಹಾವಾಶ್ ಕಾರಣ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವಿವಿಧ ಪೋಸ್ಟ್ಗಳು ಕಾಣಿಸಿಕೊಳ್ಳುತ್ತಿವೆ. ಆರ್ ಜೆ ಮಹ್ವಾಶ್ ಐಪಿಎಲ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ. ಇದು ಯುಜ್ವೇಂದ್ರ ಚಾಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡವನ್ನು ಸಹ ಬೆಂಬಲಿಸುತ್ತದೆ. ಚಂಡೀಗಢದ ಮುಲ್ಲನ್ಪುರ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್ ಯುಜ್ವೇಂದ್ರ ಚಾಹಲ್ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡುಬಂದಿದೆ. https://ainkannada.com/you-should-never-keep-a-broom-in-this-direction-at-home-for-any-reason/ ಮಂಗಳವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಜೆ ಮಹಾವಾಶ್ ಕೂಡ ಕಾಣಿಸಿಕೊಂಡಿದ್ದರು. ಅಲ್ಲದೆ, ಪಂದ್ಯದ ನಂತರ, ಮಹ್ವಾಶ್ ಚಾಹಲ್ ಜೊತೆಗಿನ ಸೆಲ್ಫಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. “ಎಂತಹ ಪ್ರತಿಭಾನ್ವಿತ ವ್ಯಕ್ತಿ.. ಇದಕ್ಕಾಗಿಯೇ ಅವರು ಐಪಿಎಲ್ನಲ್ಲಿ ಅತಿ ಹೆಚ್ಚು…
ನಟನೆ, ನಿರ್ಮಾಣ, ನಿರ್ದೇಶನ, ರಂಗಭೂಮಿ ಹೀಗೆ ಹಲವು ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ಬಿ ಸುರೇಶ ಮತ್ತು ನಟಿ, ನಿರ್ಮಾಪಕಿ ಶೈಲಜಾ ನಾಗ್ ಅವರ ಪುತ್ರಿ ಚಂದನಾ ಎಸ್ ನಾಗ್ ಈಗ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ. ಸ್ನೇಹಾ ಕಪ್ಪಣ್ಣ ಅವರ ಭ್ರಮರಿ ನಾಟ್ಯಶಾಲೆಯಲ್ಲಿ ಕಲಿಯುತ್ತಿರುವ ಚಂದನಾ ಎಸ್. ನಾಗ್, ಇದೇ ಏಪ್ರಿಲ್ 20ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ADA ರಂಗಮಂದಿರದಲ್ಲಿ, ಸಂಜೆ 5:30ಕ್ಕೆ ರಂಗಪ್ರವೇಶ ಮಾಡಲಿದ್ದಾರೆ.ಈ ವಿಶೇಷ ಕಾರ್ಯಕ್ರಮಕ್ಕೆ ನೂಪುರ ಸ್ಕೂಲ್ ಆಫ್ ಭರತನಾಟ್ಯಂನ ನಿರ್ದೇಶಕಿ ಗುರು ಡಾ. ಲಲಿತಾ ಶ್ರೀನಿವಾಸನ್, ಪದ್ಮಶ್ರೀ ಶ್ರೀಮತಿ ಪ್ರತಿಭಾ ಪ್ರಹ್ಲಾದ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಗುರು ಶ್ರೀಮತಿ ಶುಭಾ ಧನಂಜಯ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ನಟಿಯಾಗಿ, ಬರಹಗಾರ್ತಿಯಾಗಿ, ನೃತ್ಯಗಾರ್ತಿಯಾಗಿ ನಿರ್ದೇಶಕಿಯಾಗಿಯೂ ಗುರುತಿಸಿಕೊಂಡಿರುವ ಚಂದನಾ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ವಿಷುಯಲ್ ಕಮ್ಯೂನಿಕೇಷನ್ ವಿಷಯದಲ್ಲಿ ಪದವಿಯನ್ನು ಪಡೆದಿದ್ದಾರೆ. ಅಜ್ಜಿಯಂದಿರಾದ ಕಮಲಾ ರಾಧಾಕೃಷ್ಣ ಮತ್ತು ವಿಜಯಾ ಅವರ ಮಾರ್ಗದರ್ಶನದಲ್ಲಿ ಬದುಕಿನ ಪಟ್ಟುಗಳನ್ನು ಕಲಿತ ಚಂದನಾ, ಅಪ್ಪ ಅಮ್ಮನಂತೆ ಸಿನಿಮಾ…
ಕೇಂದ್ರ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಪಿಎಂ ಕಿಸಾನ್ ಯೋಜನೆ ರೈತರಿಗೆ ನೀಡಲಾಗುವ ಯೋಜನೆಗಳಲ್ಲಿ ಒಂದಾಗಿದೆ. ಫಲಾನುಭವಿಗಳು ಈಗ 20 ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರು ಪ್ರತಿ ರೈತನಿಗೆ ರೂ.ಗಳ ಆರ್ಥಿಕ ಸಹಾಯವನ್ನು ಪಡೆಯುತ್ತಾರೆ. https://ainkannada.com/you-should-never-keep-a-broom-in-this-direction-at-home-for-any-reason/ ಪ್ರತಿ ವರ್ಷ 6000 ರೂ. ಈ ಹಣವನ್ನು ರೈತರಿಗೆ ಮೂರು ಪ್ರತ್ಯೇಕ ಕಂತುಗಳಲ್ಲಿ ಒದಗಿಸಲಾಗುವುದು. ಈ ಯೋಜನೆಯನ್ನು ಪ್ರಧಾನಿ ಮೋದಿ 2019 ರಲ್ಲಿ ಪ್ರಾರಂಭಿಸಿದರು. ರೈತರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಕೆಲವು ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಮುಖ್ಯ. ಇಲ್ಲದಿದ್ದರೆ, ನಿಮ್ಮ ಹಣವು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಮುಂದೂಡಿಕೆ ಯಾವಾಗ ನಿಲ್ಲಬಹುದು? ಒಬ್ಬ ರೈತ ಯೋಜನೆಗೆ ಸಂಬಂಧಿಸಿದ ಇ-ಕೆವೈಸಿಯನ್ನು ಪೂರ್ಣಗೊಳಿಸದಿದ್ದರೆ, ಕಂತು ಪಾವತಿಯನ್ನು ನಿಲ್ಲಿಸಬಹುದು. ಇದರ ಜೊತೆಗೆ, ನೋಂದಾಯಿತ ಬ್ಯಾಂಕ್ ಖಾತೆ ಸಕ್ರಿಯವಾಗಿರಬೇಕು. ಈ ಯೋಜನೆಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಸಹ ಅಗತ್ಯವಾಗಿದೆ. ಭೂಮಿಯ ಬಗ್ಗೆ ತಪ್ಪು ವಿವರಗಳನ್ನು ನೀಡುವುದರಿಂದ ಕಂತುಗಳು…
ಬೆಂಗಳೂರು: ಚಿನ್ನ ಮಾಡಿಸಿಕೊಳ್ಳಬೇಕು ಎಂದಾದರೆ ಬೆಲೆ ಇಳಿಕೆಯಾಗುವುದು ಮುಖ್ಯವಾಗಿದೆ. ಆದರೂ ಒಮ್ಮೊಮ್ಮೆ ಪರಿಸ್ಥಿತಿಗೆ ಕಟ್ಟುಬಿದ್ದು ಬೆಲೆ ಏರಿಕೆಯ ಸಮಯದಲ್ಲೇ ಸಾಕಷ್ಟು ಗ್ರಾಹಕರು ಚಿನ್ನ ಖರೀದಿಸುತ್ತಾರೆ. ಬೆಲೆ ತಗ್ಗಿದರೆ ನಮಗೊಂದಿಷ್ಟು ಲಾಭವಿತ್ತೆಂದು ಸಾಕಷ್ಟು ಜನ ಈ ಸಮಯದಲ್ಲಿ ಭಾವಿಸುತ್ತಾರೆ. ಚಿನ್ನದ ಮಾರುಕಟ್ಟೆಯೇ ಹಾಗೆ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಚಿನ್ನ ಖರೀದಿಗೂ ಮುನ್ನ ಇಂದಿನ ರೇಟ್ ಹೇಗಿದೆ ಎಂಬುದನ್ನು ತಿಳ್ಕೊಳ್ಳೋಣ.. https://ainkannada.com/you-should-never-keep-a-broom-in-this-direction-at-home-for-any-reason/ ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200…
ಸೌರಭ್ ಮಾದರಿಯಲ್ಲಿಯೇ ಮತ್ತೊಂದು ಹತ್ಯೆ ನಡೆದಿದೆ. ಹೌದು ಪರಪುರುಷನ ಜೊತೆ ಸರಸ ಸಲ್ಲಾಪಕ್ಕಾಗಿ ಮದುವೆಯಾಗಿದ್ದ ಗಂಡನನ್ನೇ ಮಹಿಳೆಯೊಬ್ಬಳು ದುಪ್ಪಟ್ಟಾದಿಂದ ತನ್ನ ಪತಿಯ ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಇಬ್ಬರ ಕಳ್ಳಸಂಬಂಧ ಪತ್ತೆಹಚ್ಚಿದ ಬಳಿಕ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಮುಗಿಸಿದ್ದಾಳೆ ಪತ್ನಿ. ರವೀನಾ (32) ಮತ್ತು ಸುರೇಶ್ ಕೊಲೆ ಆರೋಪಿಗಳಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಆಂಟಿಗೆ ಲವ್ ಹುಟ್ಟಿದ್ದು ಹೇಗೆ? 32 ವರ್ಷದ ರವೀನಾ ಮತ್ತು ರೀಲ್ಸ್ ಸ್ಟಾರ್ ಸುರೇಶ್ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್ನಲ್ಲಿ (Instagram) ಪರಿಚಯವಾಗಿದ್ದರು. ಹರಿಯಾಣದ ಪ್ರೇಮ್ನಗರಲ್ಲಿ ಇಬ್ಬರು ಒಟ್ಟಿಗೇ ವಿಡಿಯೋ ಮಾಡಲು ಪ್ರಾರಂಭಿಸಿದ್ದರು. ಇದಕ್ಕೆ ರವೀನಾಳ ಪತಿ ಪ್ರವೀಣ್ ಮತ್ತು ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ರು. ಆದಾಗ್ಯೂ ಸುಮಾರು ಒಂದೂವರೆ ವರ್ಷಗಳ ಕಾಲ ಇಬ್ಬರು ಕಂಟೆಂಟ್ ಕ್ರಿಯೇಟ್ ಮಾಡುತ್ತಿದ್ದರು. ಇದರಿಂದ ಫಾಲೋವರ್ಸ್ಗಳ ಸಂಖ್ಯೆ 34,000ಕ್ಕೆ ತಲುಪಿತ್ತು. https://ainkannada.com/you-should-never-keep-a-broom-in-this-direction-at-home-for-any-reason/ ಬಳಿಕ ಇತರ ಕಲಾವಿದರನ್ನೂ ಸೇರಿಸಿಕೊಂಡು ರೀಲ್ಸ್ ಮಾಡುತ್ತಿದ್ದರು. ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಿತ್ತು. ರೀಲ್ಸ್ ಮಾಡುತ್ತಲೇ ರವೀನಾ ಮತ್ತು…
ನವದೆಹಲಿ: ಮಹಾರಾಷ್ಟ್ರದ ಮುನ್ಸಿಪಲ್ ಕೌನ್ಸಿಲ್ನ ಸೈನ್ಬೋರ್ಡ್ಗಳಲ್ಲಿ ಉರ್ದು ಭಾಷೆಯನ್ನು ಬಳಸುವ ಪರವಾಗಿ ಭಾರತದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಉರ್ದು ಮತ್ತು ಮರಾಠಿ ಎರಡೂ ಸಮಾನ ಸಾಂವಿಧಾನಿಕ ಸ್ಥಾನಮಾನವನ್ನು ಹೊಂದಿವೆ ಎಂದು ಹೇಳಿದೆ. ಉರ್ದು ಭಾರತೀಯ ಭಾಷೆಯಾಗಿದ್ದು, ಅದನ್ನು ಯಾವುದೇ ಒಂದು ಧರ್ಮಕ್ಕೆ ಲಿಂಕ್ ಮಾಡಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಅಕೋಲಾ ಜಿಲ್ಲೆಯ ಪಾತೂರ್ ಪಟ್ಟಣದ ಮಾಜಿ ಕೌನ್ಸಿಲರ್ ವರ್ಷತಾಯಿ ಸಂಜಯ್ ಬಗಾಡೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುತ್ತಾ ಈ ತೀರ್ಪು ನೀಡಿದೆ. ಹೊಸ ಕಟ್ಟಡದ ನಾಮಫಲಕವು ರಾಜ್ಯದ ಅಧಿಕೃತ ಭಾಷೆಯಾಗಿರುವುದರಿಂದ ಅದರ ಮೇಲೆ ಮರಾಠಿಯನ್ನು ಮಾತ್ರ ಬಳಸಬೇಕೆಂದು ಬಗಾಡೆ ವಾದಿಸಿದ್ದರು. ಆದರೆ ನ್ಯಾಯಾಲಯ ಇದಕ್ಕೆ ಒಪ್ಪಲಿಲ್ಲ. “ಮರಾಠಿ ಅಧಿಕೃತ ಭಾಷೆಯಾಗಿದೆ, ಆದರೆ ಸಂವಿಧಾನದ ಎಂಟನೇ ವೇಳಾಪಟ್ಟಿಯಲ್ಲಿ ಪಟ್ಟಿ ಮಾಡಲಾದ ಉರ್ದುವಿನಂತಹ ಇತರ ಭಾಷೆಗಳನ್ನು ಬಳಸಲಾಗುವುದಿಲ್ಲ ಎಂದು ಅರ್ಥವಲ್ಲ” ಎಂದು ಪೀಠ ಹೇಳಿದೆ. https://ainkannada.com/you-should-never-keep-a-broom-in-this-direction-at-home-for-any-reason/ ಉರ್ದು ವಿದೇಶಿ…