ಬೆಂಗಳೂರು: ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಷಡ್ಯಂತ್ರ್ಯವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಜಾತಿಗಣತಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ನಮ್ಮೆಲ್ಲರನ್ನು ಒಡೆದು ಆಳುವ ನೀತಿ. ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಷಡ್ಯಂತ್ರ್ಯವನ್ನು ಸಿದ್ದರಾಮಯ್ಯ ಮಾಡಿದ್ದಾರೆ. https://ainkannada.com/according-to-chanakya-parents-should-not-make-these-mistakes-with-their-children/ ಜಾತಿ ಜನಗಣತಿ ಮಾಡೋಕೆ ರಾಜ್ಯ ಸರ್ಕಾರಕ್ಕೆ ಅಧಿಕಾರನೇ ಇಲ್ಲ. ಅದನ್ನು ಕೇಂದ್ರ ಸರ್ಕಾರ ಮಾಡಬೇಕು. ಇದರ ಹೊರತಾಗಿಯೂ ಜಾತಿ ಸಮೀಕ್ಷೆ ಮಾಡಿ ಕೆಲ ಜಾತಿಗಳನ್ನು ಕಡಿಮೆ ತೋರಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಲಿಂಗಾಯತರು, ಒಕ್ಕಲಿಗರು ಸೇರಿ ಬೇರೆಬೇರೆ ಜಾತಿಯವರು ವಿರೋಧ ಮಾಡುತ್ತಿದ್ದಾರೆ. ನಾವು ಅತ್ಯಂತ ಉಗ್ರವಾಗಿ ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ತಕ್ಷಣವೇ ಈ ಜಾತಿ ವರದಿಯನ್ನು ಬರ್ಕಾಸ್ತ್ ಮಾಡಬೇಕು ಎಂದು ಆಗ್ರಹಿಸಿದರು.
Author: Author AIN
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದರು. ಇದೀಗ ರಜತ್ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. https://ainkannada.com/according-to-chanakya-parents-should-not-make-these-mistakes-with-their-children/ ರೀಲ್ಸ್ ಕೇಸ್ಗೆ ಸಂಬಂಧ ವಿಚಾರಣೆಗೆ ರಜತ್ಗೆ 2 ಬಾರಿ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗುತ್ತದೆ. ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್…
ನೀವು ಕ್ರೆಡಿಟ್ ಕಾರ್ಡ್ ಬಳಸುತ್ತೀರಾ? ನೀವು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದರೆ, ಅದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ತಿಳಿದಿದೆಯೇ? ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ಗಳ ಬಳಕೆ ಬಹಳ ಹೆಚ್ಚಾಗಿದೆ. ಅನೇಕ ಜನರು ಪಾವತಿಗಳನ್ನು ಮಾಡಲು ಕ್ರೆಡಿಟ್ ಕಾರ್ಡ್ಗಳನ್ನು ಬಳಸುತ್ತಾರೆ. ಇದಕ್ಕೆ ದೊಡ್ಡ ಕಾರಣವೆಂದರೆ ಕ್ರೆಡಿಟ್ ಕಾರ್ಡ್ಗಳ ಪ್ರಯೋಜನಗಳು. ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸುವುದರಿಂದ ಹಲವು ಪ್ರಯೋಜನಗಳಿವೆ. ಇದು ರಿಯಾಯಿತಿ ಕೊಡುಗೆಗಳು, ರಿವಾರ್ಡ್ ಪಾಯಿಂಟ್ಗಳು ಇತ್ಯಾದಿಗಳಂತಹ ಹಲವು ಪ್ರಯೋಜನಗಳನ್ನು ಒಳಗೊಂಡಿದೆ. https://ainkannada.com/according-to-chanakya-parents-should-not-make-these-mistakes-with-their-children/ ಕ್ರೆಡಿಟ್ ಕಾರ್ಡ್ ಬಳಸುವಾಗ, ಅನೇಕ ಜನರು ಕ್ರೆಡಿಟ್ ಕಾರ್ಡ್ ಒಂದು ರೀತಿಯ ಸಾಲ ಎಂಬುದನ್ನು ಮರೆತುಬಿಡುತ್ತಾರೆ. ಒಂದು ನಿರ್ದಿಷ್ಟ ಅವಧಿಯ ನಂತರ ನೀವು ಈ ಸಾಲವನ್ನು ಬಡ್ಡಿಯೊಂದಿಗೆ ಮರುಪಾವತಿಸಬೇಕು. ಅದೇ ಸಮಯದಲ್ಲಿ, ಹಲವು ಶುಲ್ಕಗಳನ್ನು ಸಹ ಪಾವತಿಸಬೇಕಾಗುತ್ತದೆ. ಕ್ರೆಡಿಟ್ ಕಾರ್ಡ್ಗಳಿಂದ ವಿಧಿಸಲಾಗುವ ಶುಲ್ಕಗಳ ಬಗ್ಗೆ ಬಹಳ ಕಡಿಮೆ ಜನರಿಗೆ ತಿಳಿದಿದೆ. ವಾಸ್ತವವಾಗಿ, ಕ್ರೆಡಿಟ್ ಕಾರ್ಡ್ ಬಳಸುವಾಗ ನೀವು ವಿವಿಧ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ. ವಾರ್ಷಿಕ ಶುಲ್ಕ: ಕ್ರೆಡಿಟ್ ಕಾರ್ಡ್ಗಳಲ್ಲಿ ವಾರ್ಷಿಕ…
ಸೂಪರ್ ಸ್ಟಾರ್ ರಜನಿಕಾಂತ್ ಸಿನಿಕರಿಯರ್ನ ಮಾಸ್ಟರ್ ಪೀಸ್ ಸಿನಿಮಾಗಳಲ್ಲೊಂದು ಜೈಲರ್. ಸೋಲಿನ ಸುಳಿಯಲ್ಲಿದ್ದ ತಲೈವರನ್ನು ಗೆಲುವಿನ ಟ್ರ್ಯಾಕ್ ಗೆ ಕಂಬ್ಯಾಕ್ ಆಗುವಂತೆ ಮಾಡಿದ್ದು ಇದೇ ಚಿತ್ರ. ಮುತ್ತುವೇಲ್ ಪಾಂಡಿಯನ್ ಆಗಿ ರಜನಿ ಕಮಾಲ್ ಮಾಡಿದ್ದರು. ಕನ್ನಡದ ಸೂಪರ್ ಸ್ಟಾರ್ ಶಿವಣ್ಣ, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಹಾಗೂ ಬಾಲಿವುಡ್ ಜಾಕಿ ಶ್ರಾಫ್ ಅತಿಥಿ ಪಾತ್ರದಲ್ಲಿ ಗಮನಸೆಳೆದಿದ್ದರು. ಅದರಲ್ಲಿಯೂ ಶಿವಣ್ಣನ ನರಸಿಂಹನ ಪಾತ್ರಕ್ಕಂತೂ ತಮಿಳುಸಿನಿಪ್ರೇಕ್ಷಕ ಫಿದಾ ಆಗಿದ್ದ. ಶಿವಣ್ಣ ಅಮೋಘ ಅಭಿನಯಕ್ಕೆ ರಜನಿಗಿಂತಲೂ ಆಡಿಯನ್ಸ್ ಶಿವಣ್ಣನಿಗೆ ಚಪ್ಪಾಳೆ ತಟ್ಟಿದ್ದೇ ಹೆಚ್ಚು. ಸದ್ಯ ಜೈಲರ್-2 ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಕೇರಳದಲ್ಲಿ ಚಿತ್ರೀಕರಣ ನಡೆಯುತ್ತಿದ್ದ ತಲೈವರ್, ರಮ್ಯಾ ಕೃಷ್ಣ ಹಾಗೂ ಯೋಗಿಬಾಬು ಭಾಗಿಯಾಗಿದ್ದಾರೆ. ಶಿವಣ್ಣ ಕೂಡ ಜೈಲರ್-2ನಲ್ಲಿ ಇರಲಿದ್ದಾರೆ. ಮೋಹನ್ ಲಾಲ್, ಜಾಕಿ ಶ್ರಾಫ್ ಇರ್ತಾರೋ ಇರೋಲ್ವೋ ಗೊತ್ತಿಲ್ಲ. ವಿಶೇಷ ಅಂದರೆ ತೆಲುಗಿನ ಸೂಪರ್ ಸ್ಟಾರ್ ಒಬ್ಬರು ಜೈಲರ್ ಸೀಕ್ವೆಲ್ ನಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಇದೆ. ಅವರೇ ನಂದಮೂರಿ ಬಾಲಕೃಷ್ಣ. 45…
ಕಲ್ಬುರ್ಗಿ ಏ 16: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. https://ainkannada.com/according-to-chanakya-parents-should-not-make-these-mistakes-with-their-children/ ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ…
ಭಾರತದಲ್ಲಿರುವ ಚೀನೀ ರಾಯಭಾರ ಕಚೇರಿಯು ಜನವರಿ 1 ರಿಂದ ಏಪ್ರಿಲ್ 9, 2025 ರವರೆಗೆ ಭಾರತೀಯ ನಾಗರಿಕರಿಗೆ 85,000 ಕ್ಕೂ ಹೆಚ್ಚು ವೀಸಾಗಳನ್ನು ನೀಡಿದೆ, ಇದು ನಂಬಿಕೆಯನ್ನು ಪುನರ್ನಿರ್ಮಿಸಲು ಮತ್ತು ಜನರಿಂದ ಜನರಿಗೆ ಸಂಬಂಧಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ವಿಶೇಷವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದ ಬೆದರಿಕೆಗಳಿಂದಾಗಿ ಜಾಗತಿಕ ಉದ್ವಿಗ್ನತೆಗಳು ಹೆಚ್ಚುತ್ತಿರುವ ಸಮಯದಲ್ಲಿ ಇದು ಬಂದಿದೆ. https://ainkannada.com/according-to-chanakya-parents-should-not-make-these-mistakes-with-their-children/ 2025 ರ ಏ.9 ರ ಹೊತ್ತಿಗೆ ಭಾರತದಲ್ಲಿನ ಚೀನೀ ರಾಯಭಾರ ಕಚೇರಿ ಮತ್ತು ದೂತಾವಾಸಗಳು ಈ ವರ್ಷ ಚೀನಾಕ್ಕೆ (China) ಪ್ರಯಾಣಿಸುವ ಭಾರತೀಯ ನಾಗರಿಕರಿಗೆ 85,000 ಕ್ಕೂ ಹೆಚ್ಚು ವೀಸಾಗಳನ್ನು ನೀಡಿವೆ. ಹೆಚ್ಚಿನ ಭಾರತೀಯ ಸ್ನೇಹಿತರು ಚೀನಾಕ್ಕೆ ಭೇಟಿ ನೀಡಲು, ಸುರಕ್ಷಿತ, ರೋಮಾಂಚಕ, ಪ್ರಾಮಾಣಿಕ ಮತ್ತು ಸ್ನೇಹಪರ ಚೀನಾಗೆ ಸ್ವಾಗತ ಎಂದು ಚೀನಾದ ರಾಯಭಾರಿ ಕ್ಸು ಫೀಹಾಂಗ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಸುಗಮ ಪ್ರಯಾಣಕ್ಕೆ ಅನುಕೂಲವಾಗುವಂತೆ ಚೀನಾ ಸರ್ಕಾರ ಹಲವಾರು ಸಡಿಲಿಕೆಗಳನ್ನು ಪರಿಚಯಿಸಿದೆ. ಆನ್ಲೈನ್…
ಅತಿಲೋಕ ಸುಂದರಿ ಶ್ರೀದೇವಿ ಜೀವನಗಾಥೆಯನ್ನು ಸಿನಿಮಾ ರೂಪಕ್ಕೆ ತರುವ ಪ್ರಯತ್ನ ನಡೆಯುತ್ತಲೆ ಇದೆ. ಭಾರತೀಯ ಚಿತ್ರರಂಗ ಕಂಡಿರುವ ಈ ಅಪರೂಪ ನಟಿ ವರ್ಣರಂಜಿತ ಬದುಕವನ್ನು ಬೆಳ್ಳಿತೆರೆಯಲ್ಲಿ ಅನಾವರಣ ಮಾಡಲು ನಿರ್ದೇಶಕರೊಬ್ಬರು ರೆಡಿಯಾಗಿದ್ದಾರಂತೆ. ಜೀವನದಲ್ಲಿ ಏಳು ಬೀಳು ಕಂಡು ಇಡೀ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ಶ್ರೀದೇವಿ ಪಾತ್ರಕ್ಕೆ ಬಣ್ಣ ಹಚ್ಚೋದಿಕ್ಕೆ ಸಾಕಷ್ಟು ನಟಿಯರು ತಯಾರಾಗಿದ್ದಾರೆ. ಕರಾವಳಿ ಮೂಲಕ ಪೂಜೆ ಹೆಗ್ಡೆ ಶ್ರೀದೇವಿ ಬಯೋಪಿಗೆ ಜೀವ ತುಂಬಲು ರೆಡಿ ಎಂದಿದ್ದಾರೆ. ಮೂಲತಃ ಕನ್ನಡದವರಾದ ಪೂಜಾ, ತೆಲುಗು, ಹಿಂದಿ, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರೀಗ ಶ್ರೀದೇವಿಯಾಗಿ ತಾವು ನಟಿಸಲು ಸಿದ್ಧ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಪೂಜಾ, ನಾನು ಶ್ರೀದೇವಿ ಅವರ ದೊಡ್ಡ ಅಭಿಮಾನಿ, ‘ನಾನು ಈಗಾಗಲೇ ಅವರ ಸಿನಿಮಾದ ಹಾಡಿಗೆ ಡ್ಯಾನ್ಸ್ ಮಾಡಿದ್ದೇನೆ. ಶ್ರೀದೇವಿ ಪಾತ್ರದಲ್ಲಿ ನಟಿಸಲು ಅವಕಾಶ ಸಿಕ್ಕರೆ ಖಂಡಿತ ಮಿಸ್ ಮಾಡಿಕೊಳ್ಳುವುದಿಲ್ಲ’ ಎಂದಿದ್ದಾರೆ. ಪೂಜಾ ಹೆಗ್ಡೆ ಸದ್ಯ ವಿಜಯ್ ದಳಪತಿ ನಟನೆಯ ಕೊನೆಯ ಸಿನಿಮಾ ಜನನಾಯಗನ್ ಹಾಗೂ…
ನವದೆಹಲಿ: ಪಾಕಿಸ್ತಾನವೇ ಉತ್ತೇಜಿಸಿದ ಭಯೋತ್ಪಾದನಾ ವ್ಯವಸ್ಥೆ ಈಗ ಆ ದೇಶವನ್ನೇ ಕಚ್ಚಲು ಹೊರಟಿದೆ ಎಂದುವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಗುಜರಾತ್ನ ಚರೋತರ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಡಬಲ್ ಗೇಮ್ ಆಡುತ್ತಿದೆ. ಆದರೆ, ಅಫ್ಘಾನಿಸ್ತಾನದಿಂದ ಅಮೆರಿಕನ್ನರು ಹೊರಟುಹೋದಾಗ, ಡಬಲ್ ಗೇಮ್ ಆಟ ಮುಂದುವರಿಸಲು ಪಾಕಿಸ್ತಾನಗೆ ಸಾಧ್ಯವಾಗುತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. https://ainkannada.com/according-to-chanakya-parents-should-not-make-these-mistakes-with-their-children/ ಅಫ್ಘಾನಿಸ್ತಾನದಲ್ಲಿ ಸಂಪೂರ್ಣವಾಗಿ ಭಯೋತ್ಪಾದನೆ ಸೃಷ್ಟಿಸಿದ್ದು ಪಾಕಿಸ್ತಾನ. ಡಬಲ್ ಗೇಮ್ನಿಂದ ಅವರು ಪಡೆಯುತ್ತಿದ್ದ ಪ್ರಯೋಜನ ಈಗ ಇಲ್ಲವಾಗಿದೆ. ಪಾಕಿಸ್ತಾನವೇ ಉತ್ತೇಜಿಸಿದ ಭಯೋತ್ಪಾದನಾ ವ್ಯವಸ್ಥೆ ಈಗ ಆ ದೇಶವನ್ನೇ ಕಚ್ಚಲು ಹೊರಟಿದೆ ಎಂದು ಹೇಳಿದ್ದಾರೆ. ನೆರೆಯ ದೇಶದಿಂದ ಇಂತಹ ನಡವಳಿಕೆಯನ್ನು ಇನ್ಮುಂದೆ ಸಹಿಸಲಾಗುವುದಿಲ್ಲ ಎಂದು ಭಾರತೀಯರು ಸಾಮೂಹಿಕವಾಗಿ ಭಾವಿಸಿದ್ದಾರೆ. ಆ ಭಾವನೆ ಭಾರತೀಯ ಸಮಾಜದಲ್ಲಿ ಬಹಳ ಪ್ರಬಲವಾಗಿತ್ತು. ಆದರೆ ಆ ಸಮಯದಲ್ಲಿ ಸರ್ಕಾರವು ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿಲ್ಲದಿರಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರು: ಒಂದನೇ ತರಗತಿ ಮಕ್ಕಳಿಗೆ ಜೂನ್ 1ಕ್ಕೆ 6 ವರ್ಷ ಕಡ್ಡಾಯವಾಗಿರಬೇಕು. ರಾಜ್ಯದಲ್ಲಿ ಲಕ್ಷಾಂತರ ಪೋಷಕರು ತಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸೋ ತವಕದಲ್ಲಿದ್ರೂ ಈ ವಯೋಮಿತಿ ಗೊಂದಲದಿಂದ ಪರದಾಡುತ್ತಿದ್ದರು. ಇದೀಗ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬುಧವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು. https://ainkannada.com/according-to-chanakya-parents-should-not-make-these-mistakes-with-their-children/ ಎಲ್ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ…
ಪೊರಕೆ… ಇದು ಮನೆ ಸ್ವಚ್ಛಗೊಳಿಸಲು ಮಾತ್ರ ಎಂದು ಜನರು ಭಾವಿಸುತ್ತಾರೆ… ನಮ್ಮ ವಾಸ್ತು ಶಾಸ್ತ್ರದಲ್ಲೂ ಇದಕ್ಕೆ ವಿಶೇಷ ಪ್ರಾಮುಖ್ಯತೆ ಇದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ… ಪೊರಕೆ ಲಕ್ಷ್ಮಿ ದೇವಿಗೆ ಸಮಾನ ಎಂದು ಹೇಳಲಾಗುತ್ತದೆ. ಪೊರಕೆಯನ್ನು ಸಾಮಾನ್ಯವಾಗಿ ಲಕ್ಷ್ಮಿ ದೇವಿಗೆ ಸಮಾನವೆಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ ಮನೆಯಲ್ಲಿ ಪೊರಕೆ ಇಡಬೇಕು. ಇಲ್ಲದಿದ್ದರೆ, ಆರ್ಥಿಕ ಬಿಕ್ಕಟ್ಟು ಅನಿವಾರ್ಯ ಎಂದು ವಾಸ್ತು ಮತ್ತು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ಮನೆಯಲ್ಲಿ ಪೊರಕೆಯನ್ನು ಎಲ್ಲಿ ಮತ್ತು ಯಾವ ದಿಕ್ಕಿನಲ್ಲಿ ಇಡಬೇಕೆಂದು ಇಲ್ಲಿ ತಿಳಿದುಕೊಳ್ಳೋಣ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಮನೆಯಲ್ಲಿ ಪೊರಕೆ ಇಡುವಾಗ ಕೆಲವು ನಿಯಮಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ, ಪರಿಣಾಮಗಳು ತೀವ್ರವಾಗಿರುತ್ತವೆ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ. ಮನೆಯಲ್ಲಿ ಪೊರಕೆಯನ್ನು ಇಟ್ಟುಕೊಳ್ಳುವಾಗ, ಆಕಸ್ಮಿಕವಾಗಿ ಅದನ್ನು ಮಲಗುವ ಕೋಣೆ ಅಥವಾ ಅಡುಗೆಮನೆಯಲ್ಲಿ ಇಡಬಾರದು ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೊರಕೆಯನ್ನು ಮನೆಯ ನೈಋತ್ಯ ಅಥವಾ ಪಶ್ಚಿಮ ದಿಕ್ಕಿನಲ್ಲಿ ಇಡಬೇಕು. ಯಾವುದೇ ಸಂದರ್ಭದಲ್ಲೂ ಈಶಾನ್ಯ ಮೂಲೆಯಲ್ಲಿ ಪೊರಕೆ ಇಡಬಾರದು ಎಂದು ತಜ್ಞರು ಎಚ್ಚರಿಸುತ್ತಾರೆ.…